Homeಮುಖಪುಟಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ...

ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಮಾರಾಟ ಮಾಡುತ್ತಿರುವ, ದೇಶಕ್ಕಾಗಿ 28 ಚಿನ್ನದ ಪದಕ ಗೆದ್ದ ಅಂತರರಾಷ್ಟ್ರೀಯ ಮಹಿಳಾ ಕ್ರೀಡಾಪಟು!

- Advertisement -
- Advertisement -

ಅಂದು ಭಾರತದ ಮೊದಲ ಮಹಿಳಾ ಪ್ಯಾರಾ ಶೂಟರ್ ಆಗಿ, ದೇಶಕ್ಕಾಗಿ ಅಂತರರಾಷ್ಟ್ರೀಯ ಮಟ್ಟದಲ್ಲಿ 8 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದು ತಂದಿದ್ದ ಕ್ರೀಡಾಪಟು, ಇಂದು ಕುಟುಂಬವನ್ನು ನಿರ್ವಹಿಸಲು, ಹೊಟ್ಟೆ ತುಂಬಿಸಿಕೊಳ್ಳಲು ಬೀದಿಬದಿಯಲ್ಲಿ ಚಿಪ್ಸ್, ಬಿಸ್ಕತ್ ಸೇರಿದಂತೆ ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದಾರೆ.

ಹೌದು, ಉತ್ತರಾಖಂಡದ 38 ವರ್ಷದ ದಿಲ್‌ರಾಜ್ ಕೌರ್, ತಮ್ಮ 17 ವರ್ಷಗಳ ವೃತ್ತಿಜೀವನದಲ್ಲಿ 28 ಚಿನ್ನ, 5 ಬೆಳ್ಳಿ ಮತ್ತು 6 ಕಂಚಿನ ಪದಕಗಳನ್ನು ಗೆದ್ದಿದ್ದಾರೆ, ಇದರಲ್ಲಿ 2007 ರಲ್ಲಿ ತೈವಾನ್‌ನಲ್ಲಿ ನಡೆದ ವಿಶ್ವ ಕ್ರೀಡಾಕೂಟ ಮತ್ತು 2015 ಬೆಂಗಳೂರಿನಲ್ಲಿ ನಡೆದ ಕ್ರೀಡಾಕೂಡಗಳು ಸೇರಿವೆ.

ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟು ದಿಲ್‌ರಾಜ್ ಕೌರ್ ಮತ್ತು ಆಕೆಯ ತಾಯಿ ಪ್ರತಿದಿನ ಡೆಹ್ರಾಡೂನ್‌ನ ಗಾಂಧಿ ಪಾರ್ಕ್‌ನ ಹೊರಗಡೆ ಬಿಸ್ಕತ್ತು, ಚಿಪ್ಸ್ ಸೇರಿದಂತೆ ಇತರೆ ಕುರುಕಲು ತಿಂಡಿಗಳನ್ನು ಮಾರಾಟ ಮಾಡುತ್ತಾರೆ.

“ನಾವು ನನ್ನ ತಂದೆ, ಸಹೋದರ, ನನ್ನ ವೃತ್ತಿಜೀವನ ಎಲ್ಲವನ್ನೂ ಕಳೆದುಕೊಂಡಿದ್ದೇವೆ. ಆದರೆ ನನ್ನ ಕುಟುಂಬ ಯಾವತ್ತೂ ಛಲದಿಂದ ಬದುಕುವುದನ್ನು ಬಿಟ್ಟುಕೊಡುವುದಿಲ್ಲ. ಯಾವ ಕೆಲಸವು ಚಿಕ್ಕದಲ್ಲ ಎಂದು ನಾವು ನಂಬಿರುವುದರಿಂದ ಬೀದಿಗಳಲ್ಲಿ ಈ ವಸ್ತುಗಳನ್ನು ಮಾರಾಟ ಮಾಡಲು ನನಗೆ ಮುಜುಗರವಿಲ್ಲ” ಎಂದು ದಿಲ್‌ರಾಜ್ ಕೌರ್‌ ಹೇಳುತ್ತಾರೆ.

ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ದಿಲ್‌ರಾಜ್ ಕೌರ್‌ 2019 ರಲ್ಲಿ ತನ್ನ ತಂದೆಯನ್ನು ಮತ್ತು ಆಕೆಯ ಸಹೋದರನನ್ನು ಕಳೆದುಕೊಂಡಿದ್ದಾರೆ. ಆಕೆಯ ತಾಯಿ ಗುರುದೀಪ್ ಕೌರ್,  ಉತ್ತರಾಖಂಡದ ರಾಜ್ಯತ್ವಕ್ಕಾಗಿ ನಡೆದ ಚಳವಳಿಯಲ್ಲಿ ಸಕ್ರಿಯ ಹೋರಾಟಗಾರರಾಗಿದ್ದರು.

PC: Express

ಸಹೋದರ ಮತ್ತು ತಂದೆಯ ಚಿಕಿತ್ಸೆಗಾಗಿ ದಿಲ್‌ರಾಜ್ ಕೌರ್‌ ತಮ್ಮ ಮನೆಯನ್ನು ಮಾರಾಟ ಮಾಡಿದ್ದು, ಸದ್ಯ  ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ಕೋವಿಡ್ ಸಾಂಕ್ರಾಮಿಕ ಮತ್ತು ಲಾಕ್‌ಡೌನ್ ನಮ್ಮವರನ್ನು, ನಮ್ಮ ಕೆಲಸಗಳನ್ನು ಕಸಿದುಕೊಂಡಿದೆ ಎಂದು ಆಕೆ ತಮ್ಮ ಅಸಹಾಯಕತೆ ವ್ಯಕ್ತಪಡಿಸುತ್ತಾರೆ. ಇನ್ನು ಪತಿಯ ಮಾದಕ ವ್ಯಸನದಿಂದಾಗಿ ದಿಲ್‌ರಾಜ್ ಕೌರ್‌  ವೈವಾಹಿಕ ಜೀವನ ಮುರಿದು ಬಿದ್ದಿದೆ.

ಸಾಮಾಜಿಕ ಜಾಲತಾಣಗಳಲ್ಲಿ ದಿಲ್‌ರಾಜ್ ಕೌರ್‌ ಅವರ ಸಹಾಯಕ್ಕೆ ನಿಲ್ಲಿ ಎಂಬ ಪೋಸ್ಟ್‌ಗಳು ಹರಿದಾಡುತ್ತಿವೆ.

ತಮ್ಮ ಕೆಲಸವನ್ನು, ಸಾಧನೆಯನ್ನು ಗುರುತಿಸಿ ಸರ್ಕಾರ ಉದ್ಯೋಗ ನೀಡುತ್ತದೆ ಎಂದು ಹಲವು ಬಾರಿ ಪ್ರಯತ್ನಿಸಿದರೂ ಕೆಲಸ ಸಿಕ್ಕಿಲ್ಲ. ಅನಿವಾರ್ಯವಾಗಿ ರಸ್ತೆ ಬದಿಯಲ್ಲಿ ಚಿಪ್ಸ್, ಬಿಸ್ಕತ್, ಕುರುಕಲು ತಿಂಡಿ ಮಾರಾಟ ಮಾಡುತ್ತಿದ್ದೇನೆ ಎಂದು ದಿಲ್‌ರಾಜ್ ಕೌರ್‌ ತಿಳಿಸಿದ್ದಾರೆ.


ಇದನ್ನೂ ಓದಿ: ಅಬಕಾರಿ ಸಚಿವ ಗೋಪಾಲಯ್ಯ ವಿರುದ್ಧ ಎಸಿಬಿಯಲ್ಲಿ ದೂರು ದಾಖಲು: ವಲಸೆ ಸಚಿವರಿಗೆ ನಡುಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಯಾವ ಕ್ರೀಡಾಪಟುವಿಗೂ ಇಂತಹ ಸ್ಥಿತಿ ‌ಬರಬಾರದು. ಸರ್ಕಾರಗಳು ಕೂಡಲೇ ಇವರಿಗೆ ನೆರವು ನೀಡಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...