Homeಮುಖಪುಟಪಿಯು ಪರೀಕ್ಷೆ ವೇಳೆ ಒಬ್ಬ ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ

ಪಿಯು ಪರೀಕ್ಷೆ ವೇಳೆ ಒಬ್ಬ ವಿದ್ಯಾರ್ಥಿ ಕೊರೊನಾಗೆ ಬಲಿಯಾದರೂ ನೀವೇ ಹೊಣೆ: ಆಂಧ್ರಕ್ಕೆ ಸುಪ್ರೀಂ ಎಚ್ಚರಿಕೆ

"ವಿದ್ಯಾರ್ಥಿಗಳು ಕೊರೊನಾಗೆ ಬಲಿಯಾದರೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕಾಗುತ್ತದೆ"

- Advertisement -
- Advertisement -

ಕೊರೊನಾ 2ನೇ ಅಲೆಯಿಂದ ಎಚ್ಚೆತ್ತಿರುವ ಹಲವು ರಾಜ್ಯ ಸರ್ಕಾರಗಳು, ಕೊರೊನಾ ನಿಯಂತ್ರಣ ಮತ್ತು ವಿದ್ಯಾರ್ಥಿಗಳ ಹಿತದೃಷ್ಟಿಯಿಂದ 12ನೇ ತರಗತಿ ಪರೀಕ್ಷೆ ರದ್ದುಗೊಳಿಸಿವೆ. ಆದರೆ, 12ನೇ ತರಗತಿ ಪರೀಕ್ಷೆ ನಡೆಸುತ್ತೇವೆ ಎನ್ನುತ್ತಿರುವ ಆಂಧ್ರ ಪ್ರದೇಶದ ನಿರ್ಧಾರಕ್ಕೆ ಕಿಡಿಕಾರಿರುವ ಸುಪ್ರೀಂ ಕೋರ್ಟ್ ಕಠಿಣ ಎಚ್ಚರಿಕೆ ನೀಡಿದೆ.

“12ನೇ ತರಗತಿ ಪರೀಕ್ಷೆ ಸಂದರ್ಭದಲ್ಲಿ ಒಬ್ಬ ವಿದ್ಯಾರ್ಥಿ ಕೊರೊನಾ ಸೋಂಕಿಗೆ ಬಲಿಯಾದರೂ ಸಹ ಆಂಧ್ರಪ್ರದೇಶ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲಾಗುವುದು, ಅಲ್ಲದೆ ಮೃತ ವಿದ್ಯಾರ್ಥಿಯ ಕುಟುಂಬಕ್ಕೆ 1 ಕೋಟಿ ರೂಪಾಯಿ ಪರಿಹಾರ ನೀಡಬೇಕಾಗುತ್ತದೆ” ಎಂದು ಸುಪ್ರೀಂ ಕೋರ್ಟ್​ ಆಂಧ್ರ ಪ್ರದೇಶ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ.

ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್​ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಸಲ್ಲಿಸಲಾಗಿತ್ತು. ಅರ್ಜಿಯ ವಿಚಾರಣೆ ಮಾಡಿದ ನ್ಯಾಯಮೂರ್ತಿಗಳಾದ ಎ.ಎಂ. ಖಾನ್ವಿಲ್ಕರ್ ಮತ್ತು ದಿನೇಶ್ ಮಹೇಶ್ವರಿ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಎಚ್ಚರಿಕೆ ನೀಡಿವೆ.

ಕೊರೊನಾ 2ನೇ ಅಲೆ ನಡುವೆಯೇ ದೇಶದಲ್ಲಿ ಡೆಲ್ಟಾ ಪ್ಲಸ್ ರೂಪಾಂತರಿ ಸೋಂಕು ಭಯದ ವಾತಾವರಣ ನಿರ್ಮಾಣ ಮಾಡಿದೆ. ಈ ಸೋಂಕು ನಮ್ಮ ಮೇಲೆ ಹೇಗೆ ಪರಿಣಾಮ ಬೀರುತ್ತದೆ? ಎಂಬುದು ಯಾರಿಗೂ ಸ್ಪಷ್ಟವಾಗಿಲ್ಲ. ಇಂತಹ ಸಂದರ್ಭದಲ್ಲಿ 12ನೇ ತರಗತಿ ಪರೀಕ್ಷೆಗಳನ್ನು ನಡೆಸುವ ನಿರ್ಧಾರವನ್ನು ಯಾವ ಆಧಾರದಲ್ಲಿ ತೆಗೆದುಕೊಳ್ಳಲಾಗಿದೆ? ” ಎಂದು ನ್ಯಾಯಾಧೀಶರು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಡೆಲ್ಟಾ ಪ್ಲಸ್ 3ನೇ ಅಲೆ ಸೃಷ್ಟಿಸುತ್ತೆ ಎನ್ನಲು ಆಧಾರವಿಲ್ಲ- ಐಜಿಐಬಿ ನಿರ್ದೇಶಕ

12ನೇ ತರಗತಿ ಪರೀಕ್ಷೆ ನಡೆಸುವ ಬಗ್ಗೆ ಆಂಧ್ರಪ್ರದೇಶ ಸರ್ಕಾರ ಹೈದ್ರಾಬಾದ್ ಉಚ್ಛ ನ್ಯಾಯಾಲಯಕ್ಕೆ ಮೊದಲೇ ಅಫಿಡವಿಟ್​ ಸಲ್ಲಿಸಿತ್ತು. “ಆಂತರಿಕ ಅಂಕಗಳ ಮೇಲೆ ರಾಜ್ಯ ಶಿಕ್ಷಣ ಮಂಡಳಿಗೆ ಯಾವುದೇ ನಿಯಂತ್ರಣವಿಲ್ಲ. ಇತರ ರಾಜ್ಯಗಳು ಪರ್ಯಾಯ ಮೌಲ್ಯಮಾಪನ ವ್ಯವಸ್ಥೆಯನ್ನು ಆಧಾರವಾಗಿ ತೆಗೆದುಕೊಂಡಿವೆ. ಬೇರೆ ಯಾವುದೇ ಪರ್ಯಾಯ ವ್ಯವಸ್ಥೆ ಇಲ್ಲದ ಕಾರಣ ಸರ್ಕಾರ 12ನೇ ತರಗತಿ ಅಂತಿಮ ಪರೀಕ್ಷೆಗಳನ್ನು ನಡೆಸಲು ಮುಂದಾಗಿದ್ದೇವೆ. ಕೋವಿಡ್ ಪರಿಸ್ಥಿತಿಯನ್ನು ಗಮನದಲ್ಲಿಟ್ಟುಕೊಂಡು ಪರೀಕ್ಷೆಗಳನ್ನು ನಡೆಸಲಾಗುವುದು” ಎಂದು ಅಫಿಡವಿಟ್​ನಲ್ಲಿ ತಿಳಿಸಲಾಗಿತ್ತು.

ಅಫಿಡವಿಟ್‌ನಲ್ಲಿ ಪರೀಕ್ಷೆಗಳನ್ನು ನಡೆಸಲು ಎಷ್ಟು ಕೊಠಡಿಗಳಿವೆ. ಒಂದು ಕೊಠಡಿಗೆ 15 ರಿಂದ 18 ವಿದ್ಯಾರ್ಥಿಗಳನ್ನು ಕೂರಿಸಲಾಗುವುದು ಎಂಬ ವಿವರಗಳನ್ನು ಹೈದ್ರಾಬಾದ್ ಉಚ್ಛ ನ್ಯಾಯಾಲಯಕ್ಕೆ ಸಲ್ಲಿಸಿರುವ ಅಫಿಡವಿಟ್​ನಲ್ಲಿ ತಿಳಿಸಲಾಗಿತ್ತು.

ರಾಜ್ಯದಲ್ಲಿಯೂ ಕೊರೊನಾ ಪರಿಸ್ಥಿತಿಗಳನ್ನು ಗಮನದಲ್ಲಿಟ್ಟುಕೊಂಡು ದ್ವಿತೀಯ ಪಿಯುಸಿ ಪರೀಕ್ಷಗಳನ್ನು ರದ್ದು ಪಡಿಸಲಾಗಿದೆ. ಆದರೆ, ಫಲಿತಾಂಶ ಪ್ರಕಟಗೊಳಿಸಲು ಹೊರಟಿದ್ದ ಇಲಾಖೆಗೆ, ಪುನರಾವರ್ತಿತ ವಿದ್ಯಾರ್ಥಿಗಳು ನಮಗೆ ಅನ್ಯಾಯ ಆಗಿದೆ ಎಂದು ನ್ಯಾಯಾಲಯದಲ್ಲಿ ಅರ್ಜಿ ಸಲ್ಲಿಸಿರುವುದು ಸದ್ಯ ಫಲಿತಾಂಶ ತಡೆಗೆ ಕಾರಣವಾಗಿದೆ.


ಇದನ್ನೂ ಓದಿ: ಕೊರೊನಾ ಭಯ: ಕರ್ನೂಲ್‌ನಲ್ಲಿ ವಿಷ ಸೇವಿಸಿ ಸಾವನ್ನಪ್ಪಿದ ಒಂದೆ ಕುಟುಂಬದ ನಾಲ್ವರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...