Homeಚಳವಳಿಸ್ವಾರ್ಥಪರ ಯೋಗಿ - ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಸ್ವಾರ್ಥಪರ ಯೋಗಿ – ಭೋಗಿಗಳಿಂದ ಐತಿಹಾಸಿಕ ಎನ್‌ಟಿಎಂ ಶಾಲೆ ಉಳಿಸಬೇಕು

ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ.

- Advertisement -
- Advertisement -

ಮೈಸೂರಿನ ಮಹಾರಾಜ 10ನೇ ಚಾಮರಾಜ ಒಡೆಯರ ಆಳ್ವಿಕೆ ಸಮಯದಲ್ಲಿ 1890ನೇ ಇಸವಿಯಲ್ಲಿ ವೀರ ಸಂತ ವಿವೇಕಾನಂದರು ಮೈಸೂರಿಗೆ ನೀಡಿದ್ದ ಭೇಟಿ ಐತಿಹಾಸಿಕವಾದುದು. ವಾಸ್ತವವಾಗಿ ಅವರು ಚಿಕಾಗೋ ಧಾರ್ಮಿಕ ಸಮ್ಮೇಳನಕ್ಕೆ ಭಾರತದ ಪ್ರತಿನಿಧಿಯಾಗಿ ತೆರಳುವ ಸಲುವಾಗಿ ಮಹಾರಾಜರಿಂದ ಆರ್ಥಿಕ ನೆರವು ಯಾಚಿಸಿದರು. ಅಂದು ಶ್ರೇಷ್ಟ ಸಂತರು ಮತ್ತು ಸಾಧಕರಿಗೆ ರಾಜಾಶ್ರಯ ಭಾರತದ ಎಲ್ಲೆಡೆ ಲಭಿಸಿತ್ತು. ಮೈಸೂರಿನ ರಾಜಮನೆತನ ಅನೇಕ ಜ್ಞಾನಿಗಳು ಮತ್ತು ಅನುಭಾವಿಗಳಿಗೆ ಎಲ್ಲ ರೀತಿಯಲ್ಲೂ ಪ್ರೋತ್ಸಾಹಿಸಿದ ಉದಾಹರಣೆಗಳು ಬಹಳಷ್ಟಿವೆ. ವಿವೇಕಾನಂದರು ಮೈಸೂರಿಗೆ ಭೇಟಿ ಕೊಟ್ಟ ಸಂದರ್ಭದಲ್ಲಿ ಆಗಿನ ದಿವಾನ್ ಶೇಷಾದ್ರಿ ಅಯ್ಯರ್ ಭವನದಲ್ಲಿ ತಂಗಿದ್ದು ಎನ್‌ಟಿಎಂ ಶಾಲೆಯ ಪಕ್ಕದಲ್ಲಿರುವ ನಿರಂಜನ ಮಠ ಮತ್ತು ಸದ್ವಿದ್ಯಾ ಶಾಲೆಗಳಲ್ಲಿ ಉಪನ್ಯಾಸಗಳನ್ನು ಮಾಡಿರುವುದಕ್ಕೆ ಐತಿಹಾಸಿಕ ದಾಖಲೆಗಳಿವೆ.

ಮೈಸೂರು ನಗರ ಹಲವಾರು ಪಾರಂಪರಿಕ ಕಟ್ಟಡಗಳನ್ನು ಹೊಂದಿದ್ದು ಪ್ರತಿ ವರ್ಷ ಲಕ್ಷಾಂತರ ದೇಶ ವಿದೇಶಗಳ ಪ್ರವಾಸಿಗರನ್ನು ಆಕರ್ಷಿಸುತ್ತದೆ. ವಿಶೇಷವಾಗಿ ಐತಿಹಾಸಿಕ ಮೈಸೂರು ದಸರಾ ಸಂದರ್ಭದಲ್ಲಿ ಪ್ರವಾಸಿಗರು ಹೆಚ್ಚಿನ ಸಂಖ್ಯೆಯಲ್ಲಿ ಭೇಟಿ ಕೊಟ್ಟು ಮೈಸೂರಿನ ಸಾಂಸ್ಕೃತಿಕ ವೈಭವಕ್ಕೆ ಸಾಕ್ಷಿಯಾಗಿದ್ದಾರೆ. ಸುಮಾರು 140 ವರ್ಷಗಳ ಹಿಂದೆ ಸ್ವಾಮಿ ವಿವೇಕಾನಂದರು ಹೆಣ್ಣುಮಕ್ಕಳ ಶಿಕ್ಷಣಕ್ಕಾಗಿ ಪ್ರತ್ಯೇಕ ಶಾಲೆಯನ್ನು ತೆರೆಯಬೇಕೆಂದು ಚಾಮರಾಜ ಒಡೆಯರಿಗೆ ಅತ್ಯಂತ ಕಳಕಳಿಯಿಂದ ಮನವಿ ಮಾಡಿದ್ದರು. ಇವರ ಮಾನವೀಯ ಕಳಕಳಿಯಿಂದ ಪ್ರಭಾವಿತರಾದ ಮಹಾರಾಣಿ ವಾಣಿವಿಲಾಸ ಅಮ್ಮಣ್ಣಿಯವರು ತಮ್ಮ ಮುಂದಾಲೋಚನೆಯಿಂದ ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಮೈಸೂರು ನಗರದಲ್ಲಿ ಮರಿಮಲ್ಲಪ್ಪ ಕಾಲೇಜಿಗೆ ಹೊಂದಿಕೊಂಡಂತಿರುವ ಸ್ಥಳದಲ್ಲಿ ಎನ್‌ಟಿಎಂ ಶಾಲೆಯನ್ನು ಆರಂಭಿಸಿದರು. ಇದು ಭಾರತ ದೇಶದಲ್ಲಿ ಹೆಣ್ಣುಮಕ್ಕಳ ಪ್ರಪ್ರಥಮ ಶಾಲೆಯೆಂಬ ಹೆಗ್ಗಳಿಕೆಯನ್ನು ಹೊಂದಿದೆ. ಇಂತಹ ಐತಿಹಾಸಿಕ ಶಾಲೆಯನ್ನು ಉಳಿಸಿಕೊಳ್ಳುವುದು ಮೈಸೂರು ನಗರದ ಪ್ರಜ್ಞಾವಂತರ ಬಹುದೊಡ್ಡ ಸಾಮಾಜಿಕ ಜವಾಬ್ದಾರಿಯಾಗಿದೆ.

ಏಕೆಂದರೆ ಇತ್ತೀಚೆಗೆ ಮೈಸೂರಿನ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಐತಿಹಾಸಿಕ ಎನ್‌ಟಿಎಂ ಶಾಲೆಯ ಆವರಣದಲ್ಲೇ ಸ್ವಾಮಿ ವಿವೇಕಾನಂದರ ಸ್ಮಾರಕವನ್ನು ನಿರ್ಮಿಸಬೇಕೆಂದು ಪಟ್ಟು ಹಿಡಿದಿರುವುದು ಇತಿಹಾಸ ಮತ್ತು ಲಿಂಗ ಸಮಾನತೆಗಳಿಗೆ ಬಗೆದಿರುವ ಅಪಚಾರವೇ ಆಗಿದೆ. ಈಗಾದಾಗ ಆ ಶಾಲೆಯನ್ನು ಮುಚ್ಚಬೇಕಾಗುತ್ತದೆ. ಎನ್‌ಟಿಎಂ ಶಾಲೆಯನ್ನು ಆರಂಭಿಸಲು ವಿವೇಕಾನಂದರು ಪ್ರೇರಣೆ ನೀಡಿದರೇ ಹೊರತು ಶಾಲೆಯ ಆವರಣದಲ್ಲಿ ಎಂದಿಗೂ ತಂಗಿರಲಿಲ್ಲ. ಅವರು ಉಳಿದುಕೊಂಡಿದ್ದ ದಿವಾನ್ ಶೇಷಾದ್ರಿ ಅಯ್ಯರ್ ಭವನ ಹಾಗೂ ನಿರಂಜನ ಮಠಗಳೊಂದಿಗೆ ಎನ್‌ಟಿಎಂ ಶಾಲೆ ಯಾವುದೇ ವಿಧದ ಸಂಬಂಧ ಹೊಂದಿಲ್ಲ. ಆದಾಗ್ಯೂ ರಾಮಕೃಷ್ಣ ಆಶ್ರಮದ ಸ್ವಾಮೀಜಿಗಳು ಶಾಲೆಯ ಆವರಣದಲ್ಲೇ ವಿವೇಕಾನಂದರ ಸ್ಮಾರಕ ನಿರ್ಮಿಸಿ ಶಾಲೆಯನ್ನು ಬೇರೊಂದು ಸಮೀಪದ ಸರ್ಕಾರಿ ಶಾಲೆಯೊಂದಿಗೆ ವಿಲೀನಗೊಳಿಸಬೇಕೆಂದು ಪಟ್ಟು ಹಿಡಿದಿರುವುದು ಅರ್ಥಹೀನವಾಗಿದೆ.

ಇದನ್ನೂ ಓದಿ: ಪಟ್ಟಭದ್ರರ ವಿರುದ್ಧ ದಿಟ್ಟ ಹೋರಾಟಕ್ಕೆ ಉಳಿದ ಮೈಸೂರಿನ ಸರ್ಕಾರಿ ಶಾಲೆ!

1970ರ ದಶಕದಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮೈಸೂರು ನಗರದ ಕೇಂದ್ರ ಭಾಗದಲ್ಲಿರುವ ಯಾದವಗಿರಿಯಲ್ಲಿ ಸುಮಾರು 60 ಎಕರೆಯಷ್ಟು ಕೋಟ್ಯಾಂತರ ಬೆಲೆ ಬಾಳುವ ಅಮೂಲ್ಯ ಭೂಮಿಯನ್ನು ರಾಮಕೃಷ್ಣ ಆಶ್ರಮದ ಸಾಂಸ್ಕೃತಿಕ-ಸಾಮಾಜಿಕ ಕಾರ್ಯಚಟುವಟಿಕೆಗಳನ್ನು ಹಮ್ಮಿಕೊಳ್ಳಲು ಮಂಜೂರು ಮಾಡಿತ್ತು. ಸುಮಾರು 2-3 ಎಕರೆ ಪ್ರದೇಶದಲ್ಲಿ ಧ್ಯಾನಕೇಂದ್ರ, ಗ್ರಂಥಾಲಯ, ಸಭಾಂಗಣ ಮೊದಲಾದ ಸೌಕರ್ಯಗಳನ್ನು ಒದಗಿಸಲಾಗಿದೆ. ಸುಮಾರು 57 ಎಕರೆಯಷ್ಟು ಅಮೂಲ್ಯ ಭೂಮಿ ಖಾಲಿ ಬಿದ್ದಿದ್ದು ಸರ್ಕಾರದ ನೆರವು ಪೂರ್ಣ ಪ್ರಮಾಣದಲ್ಲಿ ಬಳಕೆಯಾಗಿಲ್ಲದಿರುವ ಹಿನ್ನೆಲೆಯಲ್ಲಿ ವಿವೇಕಾನಂದ ಸ್ಮಾರಕವನ್ನು ಅಲ್ಲಿಯೇ ನಿರ್ಮಿಸುವುದು ಸೂಕ್ತವಾಗಿದೆ.

ಕಳೆದ ವರ್ಷ ಮೈಸೂರಿನ 106 ಮಂದಿ ಪ್ರಗತಿಪರ ಚಿಂತಕರು ಮತ್ತು ಎನ್‌ಟಿಎಂ ಶಾಲೆ ಹಿತೈಷಿಗಳು ಯಾವುದೇ ಕಾರಣಕ್ಕೂ ಪಟ್ಟಭದ್ರ ಹಿತಾಸಕ್ತಿಗಳ ಒತ್ತಾಯದಿಂದಾಗಿ ಎನ್‌ಟಿಎಂ ಶಾಲೆಯನ್ನು ಮುಚ್ಚಬಾರದೆಂದು ಸತ್ಯಾಗ್ರಹ ನಡೆಸಿ ಕರ್ನಾಟಕ ರಾಜ್ಯ ಸರ್ಕಾರದ ಗಮನ ಸೆಳೆದರು. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರು ಅತ್ಯಂತ ಪ್ರೀತಿ ಮತ್ತು ಕಾಳಜಿಯಿಂದ ಎನ್‌ಟಿಎಂ ಶಾಲೆ ತಳ ಸಮುದಾಯಗಳ ಜ್ಞಾನ ದಾಸೋಹ ಕೇಂದ್ರವಾಗಿರುವ ಹಿನ್ನೆಲೆಯಲ್ಲಿ ಅಲ್ಲಿಯೇ ಮುಂದುವರೆಯಲಿ, ಸ್ವಾಮಿ ವಿವೇಕಾನಂದರ ಸ್ಮಾರಕ ಶಾಲೆಯ ಹೊರಗೆ ನಿರ್ಮಾಣವಾಗಲೆಂಬ ತೀರ್ಮಾನಕ್ಕೆ ಬಂದರು. ಆದಾಗ್ಯೂ ಮೇಲ್ಕಂಡ ಐತಿಹಾಸಿಕ – ಸಾಂಸ್ಕೃತಿಕ ವಿಚಾರಗಳಿಗೆ ಯಾವುದೇ ರೀತಿಯಲ್ಲೂ ಸಂಬಂಧವಿಲ್ಲದ ಎನ್‌ಟಿಎಂ ಶಾಲೆಯ ಆವರಣದಲ್ಲೇ ವಿವೇಕಾನಂದ ಸ್ಮಾರಕ ನಿರ್ಮಿಸಲು ರಾಮಕೃಷ್ಣ ಆಶ್ರಮದವರು ಒತ್ತಾಯಿಸುತ್ತಿರುವುದು ಅರ್ಥಹೀನ ಸಂಗತಿಯಾಗಿದೆ.

2019ರಲ್ಲಿ ಶಾಲೆ ಉಳಿಸಲು ಹೋರಾಟ

ಈ ಪ್ರಕರಣ ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ವಿಚಾರಣೆಗೆ ಒಳಗಾಗಿದ್ದು ಶಾಲೆಯಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಾಣವಾಗಬೇಕೆಂಬ ನಿಲುವನ್ನು ಹೊಂದಿರುವುದು ನೈಜ ಇತಿಹಾಸ ಮತ್ತು ಸಾಂವಿಧಾನಿಕ ಲಿಂಗ ಸಮಾನತೆ ಆಶಯಗಳಿಗೆ ವಿರುದ್ಧವಾಗಿದೆ. ಇಂತಹ ಅಪ್ರಸ್ತುತ ತೀರ್ಮಾನವನ್ನು ದೇಶದ ಸರ್ವೋಚ್ಛ ನ್ಯಾಯಾಲಯದಲ್ಲಿ ಪ್ರಶ್ನಿಸುವ ಅಧಿಕಾರ ನಮಗಿದೆ. ಇತ್ತೀಚೆಗೆ ಮೈಸೂರಿನ ಜಿಲ್ಲಾಧಿಕಾರಿಗಳು ಕರ್ನಾಟಕ ರಾಜ್ಯ ಸರ್ಕಾರಕ್ಕೆ ಪತ್ರ ಬರೆದು ಎನ್‌ಟಿಎಂ ಶಾಲೆ ಹಾಗೂ ಸ್ವಾಮಿ ವಿವೇಕಾನಂದ ಸ್ಮಾರಕ ಒಟ್ಟಿಗೆ ಇರುವುದರಿಂದ ಯಾವುದೇ ಸಮಸ್ಯೆ ಉಂಟಾಗುವುದಿಲ್ಲವೆಂದು ತಿಳಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ಗೌರವಾನ್ವಿತ ಮುಖ್ಯಮಂತ್ರಿಗಳು ಈ ವಿಚಾರವನ್ನು ಸಂಪುಟ ಸಭೆಯಲ್ಲಿ ಚರ್ಚಿಸಿ ಕರ್ನಾಟಕ ಉಚ್ಛನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿ ಶಾಲೆಯನ್ನು ಉಳಿಸುವುದು ಅತ್ಯಂತ ಸೂಕ್ತ ಕ್ರಮವಾಗಿದೆ.

ರಾಮಕೃಷ್ಣ ಆಶ್ರಮದವರಿಗೆ ವಿವೇಕಾನಂದರ ಸ್ಮಾರಕ, ಶಾಪಿಂಗ್‌ಮಾಲ್, ವಾಣಿಜ್ಯ ಸಂಕೀರ್ಣ ಮೊದಲಾದವುಗಳನ್ನು ನಿರ್ಮಿಸಿ ಆರ್ಥಿಕವಾಗಿ ಲಾಭ ಗಳಿಸಬೇಕೆಂಬ ಧೋರಣೆ ಇರುವುದು ಖಂಡನೀಯ. ಐತಿಹಾಸಿಕ ಬಾಲಕಿಯರ ಶಾಲೆಯನ್ನು ಮುಚ್ಚಿಸಿ ವಿವೇಕಾನಂದರ ಸ್ಮಾರಕ ನಿರ್ಮಿಸಬೇಕೆಂದು ಇವರ ಜೊತೆಗೂಡಿ ಮೈಸೂರು ನಗರದ ಕೆಲವು ಸ್ಥಾಪಿತ ಹಿತಾಸಕ್ತಿಗಳು ವಾದಿಸುತ್ತಿರುವುದು ಅರ್ಥಹೀನ. ಆಶ್ರಮದ ಉಸ್ತುವಾರಿ ವಹಿಸಿರುವ ಧಾರ್ಮಿಕ ಮುಖಂಡರಿಗೆ ‘ಸ್ಥಾವರಕ್ಕೆ ಅಳಿವುಂಟು, ಜಂಗಮಕ್ಕೆ ಅಳಿವಿಲ್ಲ’ ಎಂಬ ಸತ್ಯದರ್ಶನ ಆಗಿಲ್ಲದಿರುವುದು ಬಹುದೊಡ್ಡ ವಿಪರ್ಯಾಸವಾಗಿದೆ. ಅಂದು ಆಶ್ರಮದ ಸ್ವಾಮೀಜಿಗಳೇ ಬರೆದಿರುವ ಪುಸ್ತಕದಲ್ಲಿ ‘ಬಡವರಿಗಾಗಿ ಶಾಲೆಯನ್ನು ತೆರೆಯಬೇಕೆಂದು ವಿವೇಕಾನಂದರು ಪತ್ರ ಬರೆದಿರುವುದು’ ನೆನಪಾಗುತ್ತಿಲ್ಲದಿರುವುದು ವಿಷಾದನೀಯ ಸಂಗತಿಯಾಗಿದೆ.

ಶಾಲೆ ಉಳಿವಿಗಾಗಿ ರೈತ ಸಂಘದಿಂದ ಹೋರಾಟ

ಶ್ರೀ ರಾಮಕೃಷ್ಣ ಆಶ್ರಮದವರು ಶಾಲೆಯನ್ನು ಉಳಿಸಿ ಸ್ಮಾರಕ ನಿರ್ಮಿಸಲು ಮುಂದಾಗಲಿ ಎಂಬುದು ಪ್ರಜ್ಞಾವಂತರ ನ್ಯಾಯೋಚಿತ ಆಶಯವಾಗಿದೆ. ಬಡಹೆಣ್ಣುಮಕ್ಕಳ ಶಾಲೆಯನ್ನು ನಾಶಗೊಳಿಸಿ ಸ್ಮಾರಕ ನಿರ್ಮಿಸುವ ಯೋಜನೆಗೆ ಸ್ವಾಮಿ ವಿವೇಕಾನಂದರ ಆತ್ಮ ಖಂಡಿತ ಸಮ್ಮತಿ ನೀಡುವುದಿಲ್ಲ. ಎನ್‌ಟಿಎಂ ಶಾಲೆ ಉಳಿಯಲಿ ಎಂಬ ನ್ಯಾಯೋಚಿತ ಬೇಡಿಕೆಗೆ ಸರ್ಕಾರ ಮತ್ತು ಆಶ್ರಮದವರು ಸಕಾರಾತ್ಮಕವಾಗಿ ಸ್ಪಂದಿಸದಿದ್ದಲ್ಲಿ ಶ್ರೀ ರಾಮಕೃಷ್ಣ ಆಶ್ರಮದ ಆವರಣದಲ್ಲಿ ಸದ್ಬಳಕೆಯಾಗದೇ ಉಳಿದಿರುವ ಸುಮಾರು 57 ಎಕರೆ ಭೂಮಿಯನ್ನು ಸರ್ಕಾರ ಹಿಂಪಡೆಯಲಿ ಎಂದು ಕರ್ನಾಟಕ ಉಚ್ಛನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯನ್ನು ಹೂಡುವುದು ಅನಿವಾರ್ಯವಾಗುತ್ತದೆ. ದೀನ ದುರ್ಬಲ ವರ್ಗಗಳಿಗೆ ಸೇರಿದ ಬಾಲಕಿಯರ ಶಾಲೆಯ ಗೋರಿಯ ಮೇಲೆ ವಿವೇಕಾನಂದರ ಭವ್ಯ ಸ್ಮಾರಕ ನಿರ್ಮಿಸಿ ವಾಣಿಜ್ಯ ಉದ್ದೇಶಗಳನ್ನು ಆಧ್ಯಾತ್ಮದ ಹೆಸರಿನಲ್ಲಿ ಈಡೇರಿಸುವ ಪ್ರಯತ್ನಗಳನ್ನು ಕಾನೂನುಬದ್ಧವಾಗಿ ನಿಷ್ಕ್ರಿಯಗೊಳಿಸಲು ಮೈಸೂರು ನಗರದ ಪ್ರಜ್ಞಾವಂತರು ಬದ್ಧರಾಗಿದ್ದಾರೆ.

  • ಪ್ರೊ.ಬಿ.ಪಿ.ಮಹೇಶ ಚಂದ್ರ ಗುರು

ಇದನ್ನೂ ಓದಿ: ಮೈಸೂರಿನಲ್ಲಿ ವಿವೇಕ ಸ್ಮಾರಕ ನಿರ್ಮಾಣ ಯಾರ ಉದ್ಧಾರಕ್ಕಾಗಿ? : ಡಾ.ಬಿ.ಪಿ ಮಹೇಶ ಚಂದ್ರ ಗುರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಹೆಣ್ಣು ಮಕ್ಕಳ ಶಾಲೆಯನ್ನು ನಾಶಪಡಿಸಿ, ಅಲ್ಲಿ ಸ್ವಾಮಿ ವಿವೇಕಾನಂದರ ಸ್ಮಾರಕ ನಿರ್ಮಿಸುವುದು ಕಂಡನಾರ್ಹ. ಪ್ರಜ್ಞಾವಂತರೆಲ್ಲರೂ ಇದನ್ನು ವಿರೋಧಿಸಬೇಕು.

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...