Homeಮುಖಪುಟಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆಯೆ?: ಸಿದ್ದರಾಮಯ್ಯ

ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು ಎಂದು ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಎರಡನೇ ಅಲೆ ಮುಗಿಯುವ ಮೊದಲೇ ಡೆಲ್ಟಾ ಪ್ಲಸ್ ಎಂಬ ಕೊರೋನಾದ ರೂಪಾಂತರಿ ವೈರಸ್ಸು ದೇಶದಲ್ಲಿ ವೇಗವಾಗಿ ಹರಡುವ ಭೀತಿ ಸೃಷ್ಟಿಯಾಗಿದ್ದು, ಇದನ್ನು ನಿಭಾಯಿಸಲು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕೂಡಲೇ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಗುರವಾರ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದಾರೆ.

“ದೇಶದ 80% ರಷ್ಟು ಜನರಿಗೆ ಲಸಿಕೆ ನೀಡುವವರೆಗೆ ಅಂತರರಾಷ್ಟ್ರೀಯ ವಿಮಾನಗಳನ್ನು ನಿರ್ಬಂಧಿಸುವುದು ಸೂಕ್ತ. ದೇಶದ ಯಾವ ಯಾವ ಸ್ಥಳಗಳಲ್ಲಿ ಕೊರೊನಾ ವೈರಸ್ಸಿನ ಡೆಲ್ಟಾ ಪ್ಲಸ್ ಪ್ರಬೇಧ ಪತ್ತೆಯಾಗಿದೆಯೊ ಆ ಸ್ಥಳಗಳ ಕುರಿತು ತೀವ್ರ ನಿಗಾ ವಹಿಸಿ ಇತರರಿಗೆ ಹರಡದಂತೆ ನೋಡಿಕೊಳ್ಳಬೇಕು” ಎಂದು ಅವರು ಹೇಳಿದ್ದಾರೆ.

“ಹೊಸ ಹೊಸ ತಳಿಗಳಾಗಿ ಅತ್ಯಂತ ವೇಗವಾಗಿ ರೂಪಾಂತರ ಹೊಂದುತ್ತಿದೆ. ಪರಿಸ್ಥಿತಿ ಹೀಗಿರುವಾಗ ಸರ್ಕಾರಗಳು ವ್ಯಾಪಕವಾಗಿ ಮತ್ತು ಉಚಿತವಾಗಿ ಸಾರ್ವಜನಿಕ ಆಂದೋಲನಗಳ ಮೂಲಕ ಲಸಿಕೆಗಳನ್ನು ನೀಡಬೇಕು. ಈಗ ರಾಜ್ಯಗಳ ಬಳಿ 2.5 ಕೋಟಿ ಡೋಸ್ ಲಸಿಕೆಗಳಿವೆ ಎಂದು ಹೇಳುತ್ತಿದ್ದಾರೆ. ಖಾಸಗಿ ಆಸ್ಪತ್ರೆಗಳ ಬಳಿ ಎಷ್ಟಿವೆ ಎಂದು ಹೇಳುತ್ತಿಲ್ಲ. ಲಸಿಕೆ ಉತ್ಪಾದಕ ಕಂಪೆನಿಗಳು ಪ್ರತಿ ದಿನ ಸರ್ಕಾರಕ್ಕೆ ಮತ್ತು ಖಾಸಗಿಯವರಿಗೆ ನೀಡಿದ ಲಸಿಕೆಗಳ ಕುರಿತು ಪ್ರಕಟಣೆಗಳನ್ನು ಹೊರಡಿಸಬೇಕು” ಎಂದು ಆಗ್ರಹಸಿದ್ದಾರೆ.

ಇದನ್ನೂ ಓದಿ: ಬಿಜೆಪಿಯಲ್ಲಿ ಪರ್ಯಾಯ ನಾಯಕರಿಲ್ಲ, ನಾಯಕತ್ವ ದಿವಾಳಿಯಾಗಿದೆ: ಸಿದ್ದರಾಮಯ್ಯ

“ಮೂರನೆ ಅಲೆಯ ಕುರಿತು ತಜ್ಞರು ಮಾಡಿರುವ ಶಿಫಾರಸ್ಸುಗಳಂತೆ, ಖಾಸಗಿ ಆಸ್ಪತ್ರೆಗಳು ಕಂಪೆನಿಗಳಿಂದ ಲಸಿಕೆಗಳನ್ನು ಸ್ವೀಕರಿಸಿ ಗರಿಷ್ಠ 10 ದಿನಗಳ ಕಾಲ ಮಾತ್ರ ದಾಸ್ತಾನಿರಿಸಿಕೊಳ್ಳಬೇಕೆಂಬ ಕುರಿತು ಆದೇಶ ಹೊರಡಿಸುವಂತೆ ತಿಳಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತುರ್ತಾಗಿ ಮಾಡಬೇಕಾದ ಕೆಲಸ ಇದು” ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

‘ದೇಶದ ಸಮಸ್ತ ಜನರಿಗೆ ಮುಂದಿನ ಮೂರು – ನಾಲ್ಕು ತಿಂಗಳಲ್ಲಿ ಲಸಿಕೆ ಹಾಕುವಷ್ಟು ಪ್ರಮಾಣದಲ್ಲಿ ಉತ್ಪಾದಿಸಲು ಲಸಿಕೆಗಳ ಮೇಲಿನ ಪೇಟೆಂಟುಗಳನ್ನು ಮೊದಲು ಕಿತ್ತು ಹಾಕಬೇಕು. ಸರ್ಕಾರ ಕಾರ್ಪೊರೇಟ್ ಕಂಪೆನಿಗಳ ಓಲೈಕೆ ಮನಸ್ಥಿತಿಯಿಂದ ಹೊರಬಂದು, ಅವುಗಳ ಮೇಲೆ ಪ್ರಬಲ ಹಿಡಿತ ಸಾಧಿಸಬೇಕು. ಕೊರೊನಾ ಲಸಿಕೆಗಳನ್ನು ‘ಜೆನೆರಿಕ್ ಡ್ರಗ್’ಗಳ ವ್ಯಾಪ್ತಿಗೆ ತಂದು ಸರ್ಕಾರಗಳೆ ಉತ್ಪಾದನೆ ಮತ್ತು ವಿತರಣೆಗಳನ್ನು ನಿಯಂತ್ರಿಸಬೇಕು. ಹೀಗಾದರೆ ಗರಿಷ್ಠ 50 ರೂಪಾಯಿಗಳಿಗೆ ಲಸಿಕೆ ದೊರೆಯುತ್ತದೆ” ಎಂದು ಹೇಳಿದ್ದಾರೆ.

“ಮೋದಿಯವರು ಜೂನ್ 30 ರಂದು ‘ಕೋವಿನ್ ಗ್ಲೋಬಲ್ ಕಾನ್‍ಕ್ಲೇವ್’ ನಡೆಸಲು ಉದ್ದೇಶಿಸಿದ್ದಾರೆಂಬ ಮಾಹಿತಿ ಇದೆ. ಈ ಸಮಾವೇಶದಲ್ಲಿ ಭಾರತವು ಕೊರೋನವನ್ನು ಎದುರಿಸಿದ ರೀತಿಗಳನ್ನು ತಿಳಿಸುವುದಾಗಿ ಹೇಳಿದ್ದಾರೆ. ಇದಂತೂ ಅತ್ಯಂತ ನಾಚಿಕೆಗೇಡಿನ ಮತ್ತು ಅಸೂಕ್ಷ್ಮವಾದ ವಿಷಯ. ಕಳೆದ ಮಾರ್ಚ್ ತಿಂಗಳಿಂದ ದೇಶದಲ್ಲಿ ಏನೇನಾಯಿತು ಎಂದು ಜನರು ಮರೆತು ಬಿಟ್ಟಿದ್ದಾರೆಯೆ? ಹೃದಯವಿರುವ ಮನುಷ್ಯನಿಗೆ ಭೀಕರ ಪಶ್ಚಾತ್ತಾಪ, ಪಾಪಪ್ರಜ್ಞೆಗಳು ಕಾಡಬೇಕಾಗಿತ್ತು. ಅದರ ಬದಲಾಗಿ ಕೊರೋನಾದ ವಿರುದ್ಧ ವಿಜಯ ಸಾಧಿಸಿ ಬಿಟ್ಟಿದ್ದೇವೆ ಎಂಬಂತೆ ವಿಶ್ವದ ಜನರಿಗೆ ತಿಳಿಸಲು ಹೊರಟಿರುವುದನ್ನು ಏನೆನ್ನಬೇಕು? ಇದನ್ನು ನೋಡಿದರೆ ನಮ್ಮ ಪ್ರಧಾನಮಂತ್ರಿಗಳ ಹೃದಯದಲ್ಲಿ ಮಾನವೀಯತೆ ಇದೆ ಎನ್ನಿಸುತ್ತದೆಯೆ?” ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ಮೋದಿ, ಅದಾನಿಯೆದರು ತೆಲೆಯೆತ್ತಲು ಬಿಎಸ್‌ವೈಗೆ ಧೈರ್ಯವಿಲ್ಲ: ವಿದ್ಯುತ್ ದರ ಏರಿಕೆಗೆ ಸಿದ್ದರಾಮಯ್ಯ ಖಂಡನೆ

“ಮೋದಿಯವರು ತಮ್ಮ ಸಾಧನೆಗಳ ಜಾಗತಿಕ ಸಮಾವೇಶ ನಡೆಸುವ ಬದಲು ವಿಶ್ವದ ನಾಯಕರುಗಳನ್ನು ಒತ್ತಾಯಿಸಿ ಕೊರೊನಾ ಲಸಿಕೆಯ ಮೇಲಿನ ಪೇಟೆಂಟುಗಳನ್ನು ತೆಗೆದು ಹಾಕಬೇಕೆಂದು ಒತ್ತಾಯಿಸಬೇಕು.
ವಿಶ್ವದ ಜನ ಸಮುದಾಯಗಳ ಆರೋಗ್ಯವು ತುರ್ತುಪರಿಸ್ಥಿತಿಯಲ್ಲಿರುವಾಗ, ಕೊರೊನಾದ ನಿರ್ವಹಣೆಯನ್ನು ಆಯಾ ದೇಶಗಳಿಗೆ ಬಿಡುವುದು ಹಾಗೂ ಔಷಧ ಕಂಪೆನಿಗಳ ಲೂಟಿಗೆ ಅವಕಾಶ ಮಾಡಿಕೊಡುವುದು ಅತ್ಯಂತ ಅಪಾಯಕಾರಿಯಾದ ಸಂಗತಿ ಎಂದು ತಿಳಿಸಬೇಕು” ಎಂದು ಹೇಳಿದ್ದಾರೆ.

ಜಾಗತಿಕ ಸಮಸ್ಯೆಗೆ ಜಾಗತಿಕ ಪರಿಹಾರಗಳೆ ಬೇಕಾಗುತ್ತವೆಯೆ ಹೊರತು ಸ್ಥಳೀಯವಾಗಿ ಪರಿಹಾರ ಕಂಡುಕೊಳ್ಳಲಾಗದು. ಆದ್ದರಿಂದ ವಿಶ್ವ ಸಂಸ್ಥೆ ಮತ್ತು ವಿಶ್ವ ಆರೋಗ್ಯ ಸಂಸ್ಥೆಗಳು ಕ್ರಿಯಾಶೀಲಗೊಂಡು ಸದ್ಯದ ತುರ್ತುಪರಿಸ್ಥಿತಿಯನ್ನು ನಿಭಾಯಿಸುವ ಸಾಮೂಹಿಕ ಪ್ರಯತ್ನಗಳಾಗಬೇಕೆಂದು ಒತ್ತಾಯಿಸಬೇಕು. ಯಾಕೆಂದರೆ ವಿಶ್ವದ ಯಾವುದೋ ಭಾಗದಲ್ಲಿ ರೂಪಾಂತರಗೊಂಡ ವೈರಸ್ಸು ಬೆಂಕಿಯಂತೆ ಜಗತ್ತನ್ನು ಆವರಿಸಿ ಬಿಡಬಹುದು. ಹಾಗಾಗಿ ವಿವೇಕವುಳ್ಳ, ವೈಜ್ಞಾನಿಕ ಮನೋಭಾವವುಳ್ಳ ಮನುಷ್ಯರು ಒತ್ತಾಯಿಸಬೇಕಾದ ಕ್ರಮಗಳಿವು” ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಇವುಗಳ ಜೊತೆಗೆ ಜಗತ್ತಿನ ಅನೇಕ ದೇಶಗಳು ತೆಗೆದುಕೊಂಡಿರುವ ಆರ್ಥಿಕ ಪುನಶ್ಚೇತನದ ಪ್ಯಾಕೇಜುಗಳನ್ನು ಘೋಷಿಸಬೇಕೆಂದು ಒತ್ತಾಯಿಸಿರುವ ಸಿದ್ದರಾಮಯ್ಯ ಅವರು, “ಈ ಸಲಹೆಗಳನ್ನು ಪ್ರಧಾನಿ ಮೋದಿಯವರಿಗೆ ತಿಳಿಸಿ ಅತ್ಯಂತ ತುರ್ತಾಗಿ ಮನುಷ್ಯ ಪರವಾದ ಕ್ರಮಗಳನ್ನು ತೆಗೆದುಕೊಳ್ಳುವಂತೆ ಒತ್ತಾಯಿಸುವ ಜವಾಬ್ಧಾರಿ ರಾಜ್ಯದಿಂದ ಆಯ್ಕೆಯಾದ ಸಂಸದರು ಮತ್ತು ಕೇಂದ್ರದ ಸಚಿವರುಗಳ ಮೇಲೆ ಇದೆ. ರಾಜ್ಯದ ಮುಖ್ಯಮಂತ್ರಿಗಳೂ ಕೂಡ ಈ ಕುರಿತು ಪ್ರಧಾನಿಗಳನ್ನು ಒತ್ತಾಯಿಸಬೇಕು” ಎಂದು ಆಗ್ರಹಿಸಿದ್ದಾರೆ.

ಇದನ್ನೂ ಓದಿ: ಶಾಲಾ ಶುಲ್ಕ ವಿಚಾರ: ಸಮಸ್ಯೆ ಬಗೆಹರಿಸುವಂತೆ ಸಿಎಂ ಯಡಿಯೂರಪ್ಪಗೆ ಸಿದ್ದರಾಮಯ್ಯ ಪತ್ರ

“ಪ್ರತಿಯೊಬ್ಬರಿಗೂ ಲಸಿಕೆ, ಹೊಟ್ಟೆಗೆ ಅನ್ನ, ಒಂದಿಷ್ಟು ಆರ್ಥಿಕ ನೆರವು, ಉಚಿತ ಚಿಕಿತ್ಸೆ ನೀಡದಿದ್ದರೆ ಭಾರತ ವಿಶ್ವ ಗುರುವಾಗುವುದಿರಲಿ ಪಾಕಿಸ್ತಾನ, ಬಾಂಗ್ಲಾ, ಶ್ರೀಲಂಕ ಮತ್ತಿತರ ನೆರೆಯ ದೇಶಗಳ ಎದುರು ತಲೆ ಎತ್ತಿ ನಿಲ್ಲುವಂತೆ ಮಾಡಲಾಗದು ಎಂಬ ತಿಳಿವಳಿಕೆಯನ್ನು ಪ್ರಧಾನಿ ಮೋದಿಯವರಿಗೆ ತಿಳಿಸಬೇಕು” ಎಂದು ರಾಜ್ಯದಿಂದ ಆಯ್ಕೆಯಾದ ಸಂಸದರುಗಳನ್ನು ಮತ್ತು ರಾಜ್ಯದ ಬಿಜೆಪಿ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಗೆ ಬರೆದಿರುವ ಪತ್ರ

ಇದನ್ನೂ ಓದಿ: ಕನ್ನಡ ಭಾಷಾ ವಿಷಯ 2 ಸೆಮಿಸ್ಟರ್‌ಗೆ ಸೀಮಿತ-ಕನ್ನಡಕ್ಕೆ ಮಾಡಿದ ದ್ರೋಹ: ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...