Homeಅಂತರಾಷ್ಟ್ರೀಯವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

ವಿಶ್ವಸಂಸ್ಥೆಯಲ್ಲಿ ಪ್ಯಾಲೆಸ್ತೀನನ್ನು ಮತ್ತೆ ಬೆಂಬಲಿಸಿದ ಭಾರತ

- Advertisement -
- Advertisement -

ಭಾರತವು ಪ್ಯಾಲೆಸ್ತೀನ್‌ಗೆ ಮತ್ತೆ ತನ್ನ ಬೆಂಬಲವನ್ನು ವಿಶ್ವಸಂಸ್ಥೆಯಲ್ಲಿ ವ್ಯಕ್ತಪಡಿಸಿದೆ. ಜೂನ್‌‌ 24 ರಂದು ನಡೆದ ವಿಶ್ವಸಂಸ್ಥೆಯ ಭದ್ರತಾ ಮಂಡಳಿ (ಯುಎನ್‌ಎಸ್‌ಸಿ) ಅಧಿವೇಶನದಲ್ಲಿ, ‘ಸ್ವತಂತ್ರ, ಕಾರ್ಯಸಾಧು ಮತ್ತು ಪ್ರಜಾಪ್ರಭುತ್ವವಾದಿ ಪ್ಯಾಲೆಸ್ತೀನ್‌‌’ಗೆ ಭಾರತವು ಬೆಂಬಲ ವ್ಯಕ್ತಪಡಿಸಿದೆ. ಜೊತೆಗೆ ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷವನ್ನು ಕೊನೆಗೊಳಿಸಬೇಕೆಂದು ಕರೆ ನೀಡಿದೆ.

ಅಧಿವೇಶನದಲ್ಲಿ ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌‌ ನಡುವಿನ ಶಾಂತಿ ಮಾತುಕತೆಗಳನ್ನು ಪುನರಾರಂಭಿಸಲು ಭಾರತ ಕರೆ ನೀಡಿದ್ದು, “ಅರ್ಥಪೂರ್ಣ ಮತ್ತು ನಿರಂತರ ಶಾಂತಿಯನ್ನು ಖಾತ್ರಿಪಡಿಸಿಕೊಳ್ಳಲು ಎರಡು ರಾಜ್ಯಗಳ ಪರಿಹಾರವಲ್ಲದೆ ಪರ್ಯಾಯ ಮಾರ್ಗವಿಲ್ಲ” ಎಂದು ಹೇಳಿದೆ.

ಇದನ್ನೂ ಓದಿ: ಪ್ಯಾಲೆಸ್ತೀನ್‌‌: ಗಾಝಾ ಮೇಲೆ ಮತ್ತೆ ವಾಯುದಾಳಿ ನಡೆಸಿದ ಇಸ್ರೇಲ್‌

“ಬಿಕ್ಕಟ್ಟಿನ ಮುಂದುವರಿಕೆಯು ಎರಡು ದೇಶಗಳ ನಡುವೆ ಅವಿಶ್ವಾಸವನ್ನು ಹೆಚ್ಚಿಸುತ್ತದೆ. ಇದು ಹಿಂಸಾಚಾರವು ಮರುಕಳಿಸುವ ಸಾಧ್ಯತೆಗಳನ್ನು ಹೆಚ್ಚಿಸುತ್ತದೆ. ಮಧ್ಯಪ್ರಾಚ್ಯದಲ್ಲಿ ಶಾಂತಿ ಪ್ರಕ್ರಿಯೆಯನ್ನು ತಕ್ಷಣ ಪುನರಾರಂಭಿಸುವ ಅಗತ್ಯವಿದ್ದು, ಇಸ್ರೇಲ್ ಮತ್ತು ಪ್ಯಾಲೆಸ್ತೀನ್‌‌ ನಡುವಿನ ನೇರ ಮಾತುಕತೆಗಳ ಅಗತ್ಯವನ್ನು ನಾನು ಮತ್ತೊಮ್ಮೆ ಒತ್ತಿಹೇಳುತ್ತೇನೆ” ಎಂದು ಯುಎನ್‌ಎಸ್‌ಸಿ ಅಧಿವೇಶನದಲ್ಲಿ ಭಾರತದ ವಿದೇಶಾಂಗ ಸಚಿವಾಲಯದ ಕಾರ್ಯದರ್ಶಿ (ಪಶ್ಚಿಮ) ವಿಕಾಸ್ ಸ್ವರೂಪ್ ಹೇಳಿದ್ದಾರೆ.

ಮೇ ತಿಂಗಳಲ್ಲಿ ಇಸ್ರೇಲ್ ಮತ್ತು ಹಮಾಸ್ 11 ದಿನಗಳ ಕಾಲ ಮುಖಾಮುಖಿಯಾಗಿದ್ದವು. ಈ ಸಮಯದಲ್ಲಿ ಎರಡೂ ಕಡೆಯಿಂದ ಸಾವಿರಾರು ರಾಕೆಟ್‌ಗಳನ್ನು ಉಡಾಯಿಸಲಾಗಿದ್ದು, 250 ಕ್ಕೂ ಹೆಚ್ಚು ಪ್ಯಾಲೆಸ್ತೀನಿಯನ್ನರು ಮೃತಪಟ್ಟಿದ್ದಾರೆ ಎಂದು ಗಾಜಾ ಆರೋಗ್ಯ ಸಚಿವಾಲಯ ತಿಳಿಸಿದೆ.

ಇದರ ನಂತರ ಸಂಘರ್ಷ ಪ್ರಾರಂಭಿಸಿದ್ದ ಇಸ್ರೇಲ್‌‌ ಕದನ ವಿರಾಮಕ್ಕೆ ಒಪ್ಪಿಕೊಂಡು, ಮೇ 21 ರಿಂದ ಅದು ಜಾರಿಯಲ್ಲಿದೆ.

ಮೇ 16 ರಂದು ನಡೆದ ಯುಎನ್‌ಎಸ್‌ಸಿಯ ಮುಕ್ತ ಸಭೆಯಲ್ಲಿ ಮಾತನಾಡಿದ ಭಾರತದ ಖಾಯಂ ಪ್ರತಿನಿಧಿ ಟಿಎಸ್ ತಿರುಮೂರ್ತಿ ಅವರು, “ಭಾರತ ಎಲ್ಲಾ ಹಿಂಸಾಚಾರ ಮತ್ತು ವಿನಾಶವನ್ನು ಖಂಡಿಸುತ್ತದೆ. ಪ್ಯಾಲೆಸ್ತೀನ್‌ನ ನ್ಯಾಯಬದ್ಧ ಉದ್ದೇಶವನ್ನು ಮತ್ತು ದ್ವಿರಾಷ್ಟ್ರ ಪರಿಹಾರವನ್ನು ಬೆಂಬಲಿಸುತ್ತದೆ” ಎಂದು ಹೇಳಿದ್ದರು.

ಇದನ್ನೂ ಓದಿ: ಪ್ಯಾಲೆಸ್ಟೀನೀಯರ ಹೋರಾಟ; ದಬ್ಬಾಳಿಕೆಯ ವಿರೋಧ ಅದು ಜಗಳಗಂಟತನವಲ್ಲ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...