Homeಮುಖಪುಟಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

ಅಗತ್ಯಕ್ಕಿಂತ ನಾಲ್ಕು ಪಟ್ಟು ಹೆಚ್ಚು ವೈದ್ಯಕೀಯ ಆಮ್ಲಜನಕ ಬಳಸಿಕೊಂಡ ದೆಹಲಿ: ಸುಪ್ರೀಂ ಕೋರ್ಟ್ ಸಮಿತಿ

- Advertisement -
- Advertisement -

ಕಳೆದ ಏಪ್ರಿಲ್ – ಮೇ ಅವಧಿಯಲ್ಲಿ ದೇಶಾದ್ಯಂತ ವೈದ್ಯಕೀಯ ಆಮ್ಲಜನಕದ ಕೊರತೆ ತಲೆದೋರಿತ್ತು. ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿ ಆಕ್ಸಿಜನ್ ಕೊರತೆಯಿಂದ ಸಾವಿರಾರು ಜನರು ದೇಶದಲ್ಲಿ ಮೃತಪಟ್ಟಿದ್ದರು. ಆಮ್ಲಜನಕ ಕೊರತೆಯ ಕುರಿತು ಸಲ್ಲಿಕೆಯಾದ ಅನೇಕ ಅರ್ಜಿಗಳನ್ನು ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ಒಂದು ವಿಶೇಷ ಸಮಿತಿಯನ್ನು ರಚನೆ ಮಾಡಿತ್ತು. ದೆಹಲಿಯಲ್ಲಿ ಲಭ್ಯವಿರುವ ಆಕ್ಸಿಜನ್, ದೆಹಲಿಯ ಅಗತ್ಯತೆಯನ್ನು ಆಡಿಟ್ ಮಾಡುವಂತೆ ಸಮಿತಿಗೆ ಸುಪ್ರೀಂ ಕೋರ್ಟ್‌ ಆದೇಶಿಸಿತ್ತು. ಸುಪ್ರೀಂ ಕೋರ್ಟ್ ಆದೇಶದ ಬೆನ್ನಲ್ಲೇ ಸಮಿತಿಯು ತನಿಖೆ ನಡೆಸಿದ್ದು ದೆಹಲಿ ಸರ್ಕಾರ ತನಗೆ ಅಗತ್ಯವಿರುವುದಕ್ಕಿಂತ ಹೆಚ್ಚು ಆಕ್ಸಿಜನ್ ಬಳಸಿಕೊಂಡಿದೆ. ತನ್ನ ಅಗತ್ಯತೆಗಳನ್ನು ನಾಲ್ಕುಪಟ್ಟು ಹೆಚ್ಚು ಬಿಂಬಿಸಿಕೊಂಡಿದೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

AIIMS ನಿರ್ದೇಶಕ ರಣದೀಪ್ ಗುಲೇರಿಯಾ, ದೆಹಲಿ ಸರ್ಕಾರದ ಗೃಹ ಕಾರ್ಯದರ್ಶಿ ಭೂಪಿಂದರ್ ಭಲ್ಲಾ, ಮಾಕ್ಸ್‌ ಹೆಲ್ತ್‌ಕೇರ್ ನಿರ್ದೇಶಕ  ಸಂದೀಪ್ ಬುದ್ಧಿರಾಜ ಮತ್ತು ಕೇಂದ್ರ ಜಲಶಕ್ತಿ ಸಚಿವಾಲಯದ ಕರ್ಯದರ್ಶಿ ಸುಬೋಧ್ ಯಾದವ್ ಅವರನ್ನೊಳಗೊಂಡ ಸಮಿತಿ ಈ ವರದಿಯನ್ನು ಸುಪ್ರೀಂ ಕೋರ್ಟ್‌ಗೆ ನೀಡಿದೆ.

ದೆಹಲಿ ಸರ್ಕಾರವು 1,140 ಮೆಟ್ರಿಕ್‌ ಟನ್ ಆಕ್ಸಿಜನ್‌ ದೆಹಲಿಗೆ ಅಗತ್ಯವಿದೆ ಎಂದು ಹೇಳಿಕೊಂಡಿತ್ತು. ವಾಸ್ತವದಲ್ಲಿ ದೆಹಲಿಗೆ ಅಗತ್ಯವಿರುವ ಆಕ್ಸಿಜನ್ ಕೇವಲ 289 ಮೆಟ್ರಿಕ್‌ ಟನ್ ಮಾತ್ರ. ದೆಹಲಿ ಸರ್ಕಾರ ಹೇಳಿರುವ ಆಕ್ಸಿಜನ್‌ಗೆ ಸಂಬಂಧಿಸಿದ ಅಂಕಿ ಸಂಖ್ಯೆಗಳು ವಾಸ್ತವಕ್ಕಿಂತ ನಾಲ್ಕುಪಟ್ಟು ಹೆಚ್ಚಾಗಿದೆ ಎಂದು ಸುಪ್ರೀಂ ಕೋರ್ಟ್‌ ಸಮಿತಿ ತನ್ನ ಮಧ್ಯಂತರ ವರದಿಯಲ್ಲಿ ತಿಳಿಸಿದೆ.

ದೆಹಲಿ ನಗರದ ಸರಾಸರಿ ಆಕ್ಸಿಜನ್ ಬಳಕೆ 284 ಮೆಟ್ರಿಕ್‌ ಟನ್‌ ನಿಂದ 372 ಮೆಟ್ರಿಕ್‌ ಟನ್‌ ನಷ್ಟು ಇದೆ. ದೆಹಲಿಯು ಬಳಸಿಕೊಂಡ ಹೆಚ್ಚುವರಿ ಆಕ್ಸಿಜನ್ ಇತರ ರಾಜ್ಯಗಳ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಎಂದು ಸುಪ್ರೀಂ ಕೋರ್ಟ್ ಸಮಿತಿ ತಿಳಿಸಿದೆ.

ಸಿಂಘಾಲ್ ಆಸ್ಪತ್ರೆ, ಅರುಣಾ ಆಸಾಫಲಿ ಆಸ್ಪತ್ರೆ, ಇಎಸ್‌ಐಸಿ ಮೊಡೆಲ್‌ ಆಸ್ಪತ್ರೆ, ಲೈಫ್‌ರೇ ಆಸ್ಪತ್ರೆ ಸೇರಿ ದೆಹಲಿಯ ಕೆಲವು ಆಸ್ಪತ್ರೆಗಳು  ಕಡಿಮೆ ಬೆಡ್‌ಗಳನ್ನು ಹೊಂದಿದ್ದರೂ ಹೆಚ್ಚುವರಿ ಆಕ್ಸಿಜನ್‌ ಬಳಸಿಕೊಂಡಿವೆ. ಇದು ದೆಹಲಿಯಲ್ಲಿನ ಆಕ್ಸಿಜನ್‌ ಪೂರೈಕೆಯಲ್ಲಿನ ಕೊರತೆಗೆ ಕಾರಣವಾಗಿದೆ ಸಮಿತಿ ತಿಳಿಸಿದೆ.

ಏಪ್ರಿಲ್ 29 ರಿಂದ ಮೇ 10 ರ ವರೆಗಿನ ಅವಧಿಯಲ್ಲಿ ದೆಹಲಿಯಲ್ಲಿ ದಿನಕ್ಕೆ 350 ಮೆಟ್ರಿಕ್‌ ಟನ್‌ಗಿಂತ ಹೆಚ್ಚು ಆಕ್ಸಿಜನ್‌ ಬಳಕೆಯಾಗಿಲ್ಲ ಎಂದು ದೆಹಲಿ ಸರ್ಕಾರ ಇದುವರೆಗೆ ಹೇಳುತ್ತ ಬಂದಿದೆ.

ದೆಹಲಿಗೆ 700 ಮೆಟ್ರಿಕ್‌ ಟನ್ ಆಕ್ಸಿಜನ್‌  ಪೂರೈಸುವಂತೆ ಸುಪ್ರೀಂ ಕೋರ್ಟ್‌ ಕೇಂದ್ರ ಸರ್ಕಾರಕ್ಕೆ ಆದೇಶಿಸಿತ್ತು. ದೆಹಲಿ ಸರ್ಕಾರ ತನ್ನ ಅಗತ್ಯತೆಗಿಂತ ಹೆಚ್ಚು ಆಕ್ಸಿಜನ್ ಬೇಡಿಕೆಯನ್ನು ಇಡುತ್ತಿದೆ ಎಂದು ಕೆಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಆದೇಶಿಸಿತ್ತು. ಜೂನ್‌ 30 ರಂದು  ಸುಪ್ರೀಂ ಕೋರ್ಟ್ ಅರ್ಜಿಯ ಮುಂದಿನ ವಿಚಾರಣೆಯನ್ನು ನಡೆಸಲಿದೆ.


ಇದನ್ನು ಓದಿ : Explainer: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಆಯಿಲ್ ಬಾಂಡ್‌ಗಳು ಕಾರಣವೇ? GST ವ್ಯಾಪ್ತಿಗೆ ತರಲು ರಾಜ್ಯಗಳ ವಿರೋಧವೇಕೆ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...

ವಿಮಾನ ಪತನ : ಸಂಸದ ಸೇರಿ 15 ಜನರು ಸಾವು

ಬುಧವಾರ (ಜ.28) ಸರ್ಕಾರಿ ಸ್ವಾಮ್ಯದ ವಿಮಾನಯಾನ ಸಂಸ್ಥೆ ಸಟೇನಾ ನಿರ್ವಹಿಸುತ್ತಿದ್ದ ಸಣ್ಣ ಪ್ರಯಾಣಿಕ ವಿಮಾನವು ಈಶಾನ್ಯ ಕೊಲಂಬಿಯಾದ ಪರ್ವತ ಪ್ರದೇಶದಲ್ಲಿ ಪತನಗೊಂಡು ಎಲ್ಲಾ 15 ಪ್ರಯಾಣಿಕರು ಜನರು ಸಾವಿಗೀಡಾಗಿದ್ದಾರೆ. ದುರಂತದ ಕಾರಣ ಇನ್ನೂ ಸ್ಪಷ್ಟವಾಗಿಲ್ಲ....