Homeಅಂತರಾಷ್ಟ್ರೀಯಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

ಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

- Advertisement -
- Advertisement -

ಕಳೆದ ಕೆಲವು ದಶಕಗಳಿಂದ  ನೆರೆಯ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ, ನೇಪಾಳಗಳ ಜೊತೆ ಭಾರತದ ಸಂಬಂಧ ಅಷ್ಟಕಷ್ಟೆ ಇದೆ ಎಂದು ಹೇಳಬಹುದು. ಸಿಯಾಚಿನ್, ಕಾಶ್ಮೀರ, ಕಾಲಾಪಾನಿ, ದೋಕ್ಲಾಂ ಸೇರಿದಂತೆ ವಿವಿಧ ಗಡಿ ಭಾಗಗಳಿಗೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರಗಳ ಜೊತೆ ಭಾರತ ಸಾಕಷ್ಟು ವಿವಾದಗಳಲ್ಲಿ ತೊಡಗಿಕೊಂಡಿದೆ. ಬಾಂಗ್ಲಾದೇಶದ ಜೊತೆ ಭಾರತಕ್ಕೆ ಗಂಗಾ ನದಿ ನೀರಿನ ಹಂಚಿಕೆ ಕುರಿತು ಸಾಕಷ್ಟು ತಕರಾರುಗಳಿವೆ. ಅಕ್ರಮ ವಲಸೆ ಸೇರಿದಂತೆ ಭಾರತ ದಿನನಿತ್ಯ ಅಕ್ಕ ಪಕ್ಕದ ರಾಷ್ಟ್ರಗಳೊಂದಿಗೆ ಕಾದಾಡುತ್ತಲೇ ಇರುವ ಸಂದರ್ಭ ಕಳೆದ ಕೆಲವು ವರ್ಷಗಳಲ್ಲಿ ಸೃಷ್ಟಿಯಾಗಿದೆ. ಈಗ ಭಾರತ ತನ್ನ ವಿದೇಶಾಂಗ ನೀತಿಯನ್ನು ಬದಲಾಯಿಸಿಕೊಳ್ಳಲು ಮುಂದಾಗಿದ್ದು ನೆರೆಯ ರಾಷ್ಟ್ರಗಳ ಜೊತೆ ಸೌಹಾರ್ದ ಸಂಬಂಧವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವುದಾಗಿ ನಿನ್ನೆ ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತ ನೆರೆಯ ರಾಷ್ಟ್ರಗಳ ಜೊತೆಗಿನ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳಲು ಬಯಸುತ್ತದೆ. ನೆರೆಯ ಪಾಕಿಸ್ತಾನದ ವಿಷಯದಲ್ಲೂ ಭಾರತ ಇದೇ ನಿಲುವನ್ನು ತಾಳಿದೆ. ಪಾಕಿಸ್ತಾನ ಕೂಡ ಇದೇ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ವಿದೇಶಿ ಸಂಬಂಧಗಳಿಗೆ ಅಗತ್ಯವಾದ ಪರಸ್ಪರ ವಿಶ್ವಾಸಾರ್ಹತೆಯನ್ನು ಮತ್ತು ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಲು ಪಾಕಿಸ್ತಾನ ಬದ್ಧವಾಗಬೇಕು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಅರಿಂದಾಮ್ ಬಗ್ಚಿ  ಗುರುವಾರ ಜೂನ್ 24 ರಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆ ವಿಚಾರದಲ್ಲಿನ ತನ್ನ ಮೃದುಧೋರಣೆಯನ್ನು ಬದಲಿಸಿಕೊಳ್ಳಬೇಕು. ಯಾವುದೇ ದೇಶದ ವಿರುದ್ಧದ ಸಂಚಿಗೆ ಮತ್ತು ಪಿತೂರಿಗೆ ತನ್ನ ನೆಲದಲ್ಲಿ ಅವಕಾಶವನ್ನು ನೀಡಬಾರದು” ಎಂದು ಅರಿಂದಾಮ್ ಬಗ್ಚಿ ಗುರುವಾರದ ತಮ್ಮ ಸುದ್ದಿ ಗೋಷ್ಠಿಯಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

2016ರ ಭಾರತದ ಪಠಾಣ್ ಕೋಟ್ ವಾಯುನೆಲೆಯ ಮೇಲಿನ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿದೇಶಾಂಗ ಸಂಬಂಧದಲ್ಲಿ ತೀವ್ರ ಬಿರುಕು ಉಂಟಾಗಿದೆ. ಪಠಾಣ್ ಕೋಟ್ ನಂತರದಲ್ಲಿ ಉರಿ ಮತ್ತು ಪುಲ್ವಾಮಾ ದಾಳಿಗಳು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಕ್ಕೆ ತೀವ್ರ ಧಕ್ಕೆಯನ್ನುಂಟುಮಾಡಿದ್ದವು.

ಜಮ್ಮು ಕಾಶ್ಮೀರದ ವಿಭಜನೆಯ ನಂತರವಂತೂ ಅಂತರಾಷ್ಟ್ರೀಯ ವೇದಿಕೆಯಾದ ವಿಶ್ವಸಂಸ್ಥೆಯಲ್ಲಿ ಕೂಡ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಆರೋಪ ಪ್ರತ್ಯಾರೊಪಗಳಲ್ಲಿ ತೊಡಗಿದ್ದವು.

ಕಳೆದ 4 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಬಾಂಧವ್ಯ ಮತ್ತು ಭಯೋತ್ಪಾದನೆ ಒಟ್ಟೊಟ್ಟಿಗೆ ಸಾಗಲು ಸಾಧ್ಯವಿಲ್ಲವೆಂದು ಭಾರತ ಈ ಹಿಂದೆ ಪಾಕಿಸ್ತಾನದ ಜೊತೆ ಮಾತಕತೆಗೆ ಸಿದ್ಧವಾಗಿರಲಿಲ್ಲ. ಈಗ ಭಾರತದ ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ದೊರೆತಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಚೀನಾ, ನೇಪಾಳಗಳೊಂದಿಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಕ್ಕೆ ಭಾರತ ವಿದೇಶಾಂಗ ಇಲಾಖೆ ಕೈ ಹಾಕಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ : ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...