Homeಅಂತರಾಷ್ಟ್ರೀಯಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

ಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

- Advertisement -
- Advertisement -

ಕಳೆದ ಕೆಲವು ದಶಕಗಳಿಂದ  ನೆರೆಯ ರಾಷ್ಟ್ರಗಳಾದ ಚೀನಾ, ಪಾಕಿಸ್ತಾನ, ನೇಪಾಳಗಳ ಜೊತೆ ಭಾರತದ ಸಂಬಂಧ ಅಷ್ಟಕಷ್ಟೆ ಇದೆ ಎಂದು ಹೇಳಬಹುದು. ಸಿಯಾಚಿನ್, ಕಾಶ್ಮೀರ, ಕಾಲಾಪಾನಿ, ದೋಕ್ಲಾಂ ಸೇರಿದಂತೆ ವಿವಿಧ ಗಡಿ ಭಾಗಗಳಿಗೆ ಸಂಬಂಧಿಸಿದಂತೆ ನೆರೆಯ ರಾಷ್ಟ್ರಗಳ ಜೊತೆ ಭಾರತ ಸಾಕಷ್ಟು ವಿವಾದಗಳಲ್ಲಿ ತೊಡಗಿಕೊಂಡಿದೆ. ಬಾಂಗ್ಲಾದೇಶದ ಜೊತೆ ಭಾರತಕ್ಕೆ ಗಂಗಾ ನದಿ ನೀರಿನ ಹಂಚಿಕೆ ಕುರಿತು ಸಾಕಷ್ಟು ತಕರಾರುಗಳಿವೆ. ಅಕ್ರಮ ವಲಸೆ ಸೇರಿದಂತೆ ಭಾರತ ದಿನನಿತ್ಯ ಅಕ್ಕ ಪಕ್ಕದ ರಾಷ್ಟ್ರಗಳೊಂದಿಗೆ ಕಾದಾಡುತ್ತಲೇ ಇರುವ ಸಂದರ್ಭ ಕಳೆದ ಕೆಲವು ವರ್ಷಗಳಲ್ಲಿ ಸೃಷ್ಟಿಯಾಗಿದೆ. ಈಗ ಭಾರತ ತನ್ನ ವಿದೇಶಾಂಗ ನೀತಿಯನ್ನು ಬದಲಾಯಿಸಿಕೊಳ್ಳಲು ಮುಂದಾಗಿದ್ದು ನೆರೆಯ ರಾಷ್ಟ್ರಗಳ ಜೊತೆ ಸೌಹಾರ್ದ ಸಂಬಂಧವನ್ನು ರೂಪಿಸಿಕೊಳ್ಳಲು ಪ್ರಯತ್ನಿಸುವುದಾಗಿ ನಿನ್ನೆ ವಿದೇಶಾಂಗ ಇಲಾಖೆ ತಿಳಿಸಿದೆ.

ಭಾರತ ನೆರೆಯ ರಾಷ್ಟ್ರಗಳ ಜೊತೆಗಿನ ಬಿಕ್ಕಟ್ಟುಗಳನ್ನು ಬಗೆಹರಿಸಿಕೊಳ್ಳಲು ಬಯಸುತ್ತದೆ. ನೆರೆಯ ಪಾಕಿಸ್ತಾನದ ವಿಷಯದಲ್ಲೂ ಭಾರತ ಇದೇ ನಿಲುವನ್ನು ತಾಳಿದೆ. ಪಾಕಿಸ್ತಾನ ಕೂಡ ಇದೇ ನಿಟ್ಟಿನಲ್ಲಿ ಕಾರ್ಯ ನಿರ್ವಹಿಸಬೇಕು. ವಿದೇಶಿ ಸಂಬಂಧಗಳಿಗೆ ಅಗತ್ಯವಾದ ಪರಸ್ಪರ ವಿಶ್ವಾಸಾರ್ಹತೆಯನ್ನು ಮತ್ತು ಅನುಕೂಲಕರ ವಾತಾವರಣವನ್ನು ನಿರ್ಮಾಣ ಮಾಡಲು ಪಾಕಿಸ್ತಾನ ಬದ್ಧವಾಗಬೇಕು ಎಂದು ಭಾರತದ ವಿದೇಶಾಂಗ ಕಾರ್ಯದರ್ಶಿ ಅರಿಂದಾಮ್ ಬಗ್ಚಿ  ಗುರುವಾರ ಜೂನ್ 24 ರಂದು ಮಾಧ್ಯಮ ಗೋಷ್ಠಿಯಲ್ಲಿ ತಿಳಿಸಿದ್ದಾರೆ.

“ಪಾಕಿಸ್ತಾನ ಗಡಿಯಾಚೆಗಿನ ಭಯೋತ್ಪಾದನೆ ವಿಚಾರದಲ್ಲಿನ ತನ್ನ ಮೃದುಧೋರಣೆಯನ್ನು ಬದಲಿಸಿಕೊಳ್ಳಬೇಕು. ಯಾವುದೇ ದೇಶದ ವಿರುದ್ಧದ ಸಂಚಿಗೆ ಮತ್ತು ಪಿತೂರಿಗೆ ತನ್ನ ನೆಲದಲ್ಲಿ ಅವಕಾಶವನ್ನು ನೀಡಬಾರದು” ಎಂದು ಅರಿಂದಾಮ್ ಬಗ್ಚಿ ಗುರುವಾರದ ತಮ್ಮ ಸುದ್ದಿ ಗೋಷ್ಠಿಯಲ್ಲಿ ಭಾರತದ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.

2016ರ ಭಾರತದ ಪಠಾಣ್ ಕೋಟ್ ವಾಯುನೆಲೆಯ ಮೇಲಿನ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನದ ನಡುವಿನ ವಿದೇಶಾಂಗ ಸಂಬಂಧದಲ್ಲಿ ತೀವ್ರ ಬಿರುಕು ಉಂಟಾಗಿದೆ. ಪಠಾಣ್ ಕೋಟ್ ನಂತರದಲ್ಲಿ ಉರಿ ಮತ್ತು ಪುಲ್ವಾಮಾ ದಾಳಿಗಳು ಭಾರತ ಮತ್ತು ಪಾಕಿಸ್ತಾನದ ನಡುವಿನ ಸಂಬಂಧಕ್ಕೆ ತೀವ್ರ ಧಕ್ಕೆಯನ್ನುಂಟುಮಾಡಿದ್ದವು.

ಜಮ್ಮು ಕಾಶ್ಮೀರದ ವಿಭಜನೆಯ ನಂತರವಂತೂ ಅಂತರಾಷ್ಟ್ರೀಯ ವೇದಿಕೆಯಾದ ವಿಶ್ವಸಂಸ್ಥೆಯಲ್ಲಿ ಕೂಡ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಆರೋಪ ಪ್ರತ್ಯಾರೊಪಗಳಲ್ಲಿ ತೊಡಗಿದ್ದವು.

ಕಳೆದ 4 ವರ್ಷಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ಯಾವುದೇ ದ್ವಿಪಕ್ಷೀಯ ಮಾತುಕತೆ ನಡೆದಿಲ್ಲ. ಬಾಂಧವ್ಯ ಮತ್ತು ಭಯೋತ್ಪಾದನೆ ಒಟ್ಟೊಟ್ಟಿಗೆ ಸಾಗಲು ಸಾಧ್ಯವಿಲ್ಲವೆಂದು ಭಾರತ ಈ ಹಿಂದೆ ಪಾಕಿಸ್ತಾನದ ಜೊತೆ ಮಾತಕತೆಗೆ ಸಿದ್ಧವಾಗಿರಲಿಲ್ಲ. ಈಗ ಭಾರತದ ವಿದೇಶಾಂಗ ನೀತಿಯಲ್ಲಿ ಮಹತ್ವದ ಬದಲಾವಣೆಯ ಸುಳಿವು ದೊರೆತಿದೆ. ನೆರೆಯ ರಾಷ್ಟ್ರಗಳಾದ ಪಾಕಿಸ್ತಾನ, ಚೀನಾ, ನೇಪಾಳಗಳೊಂದಿಗಿನ ಸಂಬಂಧವನ್ನು ಸುಧಾರಿಸುವ ಪ್ರಯತ್ನಕ್ಕೆ ಭಾರತ ವಿದೇಶಾಂಗ ಇಲಾಖೆ ಕೈ ಹಾಕಿರುವುದು ಆಶಾದಾಯಕ ಬೆಳವಣಿಗೆಯಾಗಿದೆ.


ಇದನ್ನೂ ಓದಿ : ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...