Homeಮುಖಪುಟ‘ಆರೆಸ್ಸೆಸ್ ಅಥವಾ ಸಂವಿಧಾನ’ - ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

- Advertisement -
- Advertisement -

ಬಿಹಾರದ ಪ್ರಮುಖ ಪಕ್ಷವಾದ ಲೋಕ ಜನಶಕ್ತಿ ಪಕ್ಷ(ಎಲ್‌ಜೆಪಿ)ವು ಒಡೆದು ಹೋಗಿದ್ದು ಇದರ ಲಾಭವನ್ನು ರಾಜ್ಯದ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಪಡೆಯಲು ಮುಂದಾಗಿದ್ದಾರೆ. ಅವರು ಎಲ್‌ಜೆಪಿಯ ನಾಯಕ ಚಿರಾಗ್‌ ಪಾಸ್ವಾನ್‌ ಅವರನ್ನು ತಮ್ಮತ್ತ ಸೆಳೆದುಕೊಳ್ಳಲು ಯತ್ನಿಸಿದ್ದು, “ಪಾಸ್ವಾನ್‌ ಅವರ ಮುಂದೆ ಎರಡು ಆಯ್ಕೆಗಳಿವೆ, ಅವರು ಆರೆಸ್ಸೆಸ್‌ ಆಯ್ಕೆ ಮಾಡುತ್ತಾರೋ ಅಥವಾ ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವನ್ನು ಆಯ್ಕೆ ಮಾಡುತ್ತಾರೋ ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಲಾಗಿದೆ.

ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು: ಬಿಹಾರದಲ್ಲಿ ಇದು ನಿತ್ಯದ ವಿದ್ಯಮಾನ!

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷದ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಚಿರಾಗ್ ಪಾಸ್ವಾನ್ ಕೂಡಾ ಅಂದೇ ಬಿಹಾರದಲ್ಲಿ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಹಾಜಿಪುರದಿಂದ ರಾಜ್ಯವ್ಯಾಪಿ ರೋಡ್ ಶೋ ಪ್ರಾರಂಭಿಸಲು ಯೋಜಿಸಿದ್ದಾರೆ.

ತಮ್ಮ ತಂದೆಯ ನಿಧನ ನಂತರ, ನಾಯಕತ್ವಕ್ಕಾಗಿ ದಂಗೆ ಎದ್ದಿದ್ದ ಚಿರಾಗ್‌ ಅವರ ಚಿಕ್ಕಪ್ಪ ಪಶುಪತಿ ಪರಾಸ್‌ ಅವರು ಐದು ಸಂಸದರ ಬೆಂಬಲ ಪಡೆದು, ಚಿರಾಗ್‌ ಅವರನ್ನು ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಅಲ್ಲದೆ, ಎಲ್‌ಜೆಪಿಯ ನಾಯಕರಾಗಿ ಅಧಿಕಾರ ಕಸಿದುಕೊಂಡಿದ್ದಾರೆ. ಇದರಿಂದ ವಿಚಲಿತರಾಗಿದರುವ ಚಿರಾಗ್‌ ತಮ್ಮ ವರ್ಚಸ್ಸು ತೋರಿಸಲು ರಾಜ್ಯಾದ್ಯಂತ ರೋಡ್‌ ಶೋ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದಾರೆ.

ಮತ್ತೊಂದೆಡೆ, ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದಾರೆ. ಅಲ್ಲದೆ, ಪಾಸ್ವಾನ್‌ ಅವರು ಎನ್‌ಡಿಎ ಮೇಲಿನ ಏಕಪಕ್ಷೀಯ ಪ್ರೀತಿಯ ಬಗ್ಗೆ ಯೋಚಿಸಬೇಕು. ಅವರು ಯಾರೊಂದಿಗೆ ನಿಲ್ಲಲು ಬಯಸುತ್ತಾರೆ ಎದು ನಿರ್ಧರಿಸುವ ಕಾಲ ಇದಾಗಿದೆ ಎಂದೂ ತೇಜಸ್ವಿ ಯಾದವ್ ಹೇಳಿದ್ದಾರೆ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೇಜಸ್ವಿ ಯಾದವ್ ಮತ್ತು ಚಿರಾಗ್ ಪಾಸ್ವಾನ್ ಒಂದುಗೂಡಿ ಮನುವಾದಿಗಳನ್ನು ಎದುರಿಸಬೇಕು.

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...