Homeಮುಖಪುಟ‘ಆರೆಸ್ಸೆಸ್ ಅಥವಾ ಸಂವಿಧಾನ’ - ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

- Advertisement -
- Advertisement -

ಬಿಹಾರದ ಪ್ರಮುಖ ಪಕ್ಷವಾದ ಲೋಕ ಜನಶಕ್ತಿ ಪಕ್ಷ(ಎಲ್‌ಜೆಪಿ)ವು ಒಡೆದು ಹೋಗಿದ್ದು ಇದರ ಲಾಭವನ್ನು ರಾಜ್ಯದ ವಿರೋಧ ಪಕ್ಷವಾದ ಆರ್‌ಜೆಡಿ ಮುಖ್ಯಸ್ಥ ತೇಜಸ್ವಿ ಯಾದವ್‌ ಪಡೆಯಲು ಮುಂದಾಗಿದ್ದಾರೆ. ಅವರು ಎಲ್‌ಜೆಪಿಯ ನಾಯಕ ಚಿರಾಗ್‌ ಪಾಸ್ವಾನ್‌ ಅವರನ್ನು ತಮ್ಮತ್ತ ಸೆಳೆದುಕೊಳ್ಳಲು ಯತ್ನಿಸಿದ್ದು, “ಪಾಸ್ವಾನ್‌ ಅವರ ಮುಂದೆ ಎರಡು ಆಯ್ಕೆಗಳಿವೆ, ಅವರು ಆರೆಸ್ಸೆಸ್‌ ಆಯ್ಕೆ ಮಾಡುತ್ತಾರೋ ಅಥವಾ ಅಂಬೇಡ್ಕರ್‌ ರಚಿಸಿದ ಶ್ರೇಷ್ಠ ಸಂವಿಧಾನವನ್ನು ಆಯ್ಕೆ ಮಾಡುತ್ತಾರೋ ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್‌ ಹೇಳಿದ್ದಾರೆ.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಆರೋಪಿಲಾಗಿದೆ.

ಇದನ್ನೂ ಓದಿ: ಕೊರೊನಾ ಟೆಸ್ಟ್ ತಪ್ಪಿಸಿಕೊಳ್ಳಲು ರೈಲು ನಿಲ್ದಾಣಗಳಿಂದ ಎದ್ದು ಬಿದ್ದು ಓಡಿದ ಪ್ರಯಾಣಿಕರು: ಬಿಹಾರದಲ್ಲಿ ಇದು ನಿತ್ಯದ ವಿದ್ಯಮಾನ!

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ರಾಷ್ಟ್ರೀಯ ಜನತಾದಳ (ಆರ್‌ಜೆಡಿ) ಪಕ್ಷದ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಚಿರಾಗ್ ಪಾಸ್ವಾನ್ ಕೂಡಾ ಅಂದೇ ಬಿಹಾರದಲ್ಲಿ ತಮ್ಮ ತಂದೆ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಹಾಜಿಪುರದಿಂದ ರಾಜ್ಯವ್ಯಾಪಿ ರೋಡ್ ಶೋ ಪ್ರಾರಂಭಿಸಲು ಯೋಜಿಸಿದ್ದಾರೆ.

ತಮ್ಮ ತಂದೆಯ ನಿಧನ ನಂತರ, ನಾಯಕತ್ವಕ್ಕಾಗಿ ದಂಗೆ ಎದ್ದಿದ್ದ ಚಿರಾಗ್‌ ಅವರ ಚಿಕ್ಕಪ್ಪ ಪಶುಪತಿ ಪರಾಸ್‌ ಅವರು ಐದು ಸಂಸದರ ಬೆಂಬಲ ಪಡೆದು, ಚಿರಾಗ್‌ ಅವರನ್ನು ಪಕ್ಷದ ಉನ್ನತ ಸ್ಥಾನದಿಂದ ಕೆಳಗಿಳಿಸಿದ್ದಾರೆ. ಅಲ್ಲದೆ, ಎಲ್‌ಜೆಪಿಯ ನಾಯಕರಾಗಿ ಅಧಿಕಾರ ಕಸಿದುಕೊಂಡಿದ್ದಾರೆ. ಇದರಿಂದ ವಿಚಲಿತರಾಗಿದರುವ ಚಿರಾಗ್‌ ತಮ್ಮ ವರ್ಚಸ್ಸು ತೋರಿಸಲು ರಾಜ್ಯಾದ್ಯಂತ ರೋಡ್‌ ಶೋ ನಡೆಸಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನೂ ಓದಿ: ಕೋವಿಡ್‍ ಸಾವುಗಳ ಸಂಖ್ಯೆ ಮುಚ್ಚಿಟ್ಟ ಬಿಹಾರ: ಅತಿ ಹೆಚ್ಚು ಏಕದಿನ ಸಾವುಗಳನ್ನು ದಾಖಲಿಸಿದ ಭಾರತ

ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದಾರೆ.

ಮತ್ತೊಂದೆಡೆ, ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ, ಆರ್‌ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದಾರೆ. ಅಲ್ಲದೆ, ಪಾಸ್ವಾನ್‌ ಅವರು ಎನ್‌ಡಿಎ ಮೇಲಿನ ಏಕಪಕ್ಷೀಯ ಪ್ರೀತಿಯ ಬಗ್ಗೆ ಯೋಚಿಸಬೇಕು. ಅವರು ಯಾರೊಂದಿಗೆ ನಿಲ್ಲಲು ಬಯಸುತ್ತಾರೆ ಎದು ನಿರ್ಧರಿಸುವ ಕಾಲ ಇದಾಗಿದೆ ಎಂದೂ ತೇಜಸ್ವಿ ಯಾದವ್ ಹೇಳಿದ್ದಾರೆ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಇದು ರಾಹುಲ್ ಗಾಂಧಿಯ ವಯನಾಡ್ ಕ್ಷೇತ್ರವಲ್ಲ – ಬಿಹಾರದ ಹಳೆಯ ರಸ್ತೆಯ ಚಿತ್ರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ತೇಜಸ್ವಿ ಯಾದವ್ ಮತ್ತು ಚಿರಾಗ್ ಪಾಸ್ವಾನ್ ಒಂದುಗೂಡಿ ಮನುವಾದಿಗಳನ್ನು ಎದುರಿಸಬೇಕು.

LEAVE A REPLY

Please enter your comment!
Please enter your name here

- Advertisment -

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...