Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...