Homeಕರ್ನಾಟಕಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮುಂದಿನ ಮುಖ್ಯಮಂತ್ರಿ ಎಂಬ ಅಪಾಯಕಾರಿ ಚರ್ಚೆ: ಡಾ.ಹೆಚ್.ಸಿ ಮಹದೇವಪ್ಪ

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

- Advertisement -
- Advertisement -

ಪ್ರಸ್ತುತ ನಮ್ಮ ರಾಜ್ಯ ಮತ್ತು ದೇಶವು ಕೆಲವು ಗಂಭೀರ ಸಮಸ್ಯೆಗಳನ್ನು ಎದುರಿಸುತ್ತಿದೆ.  ಮೊದಲನೆಯದಾಗಿ ತೈಲ ಬೆಲೆ ಏರಿಕೆ ಮತ್ತು ಅದರಿಂದ ಜನ ಸಾಮಾನ್ಯರ ಅಗತ್ಯ ವಸ್ತುಗಳ ಮೇಲೆ ಉಂಟಾದ ಬೆಲೆ ಏರಿಕೆ..

ಎರಡನೆಯದಾಗಿ ಭೂ ಸುಧಾರಣಾ ತಿದ್ದುಪಡಿ ಕಾಯ್ದೆಯಿಂದ ಮುಂದೆ ಭಾರತದ ಕೃಷಿ ಮತ್ತು ರೈತರ ಮೇಲೆ ಉಂಟಾಗುವ ದುಷ್ಪರಿಣಾಮಗಳು..

ಮೂರನೆಯದಾಗಿ ಕರೋನಾ ಸಂದರ್ಭದ ವೈಫಲ್ಯ ಹಾಗೂ ಜನ ಸಾಮಾನ್ಯರಿಗೆ ಆಗುತ್ತಿರುವ ತೊಂದರೆ, ನಾಲ್ಕನೆಯದಾಗಿ ಹೊಸ ರಾಷ್ಟ್ರೀಯ ಶಿಕ್ಷಣ ನೀತಿಯಡಿ ಮನುವಾದ ಮತ್ತು ಕೇಸರೀಕರಣವನ್ನು ಶಿಕ್ಷಣ ವ್ಯವಸ್ಥೆಯಲ್ಲಿ ಅಳವಡಿಸಲು ಹೊರಟಿರುವ ಕೋಮುವಾದಿಗಳ ಹುನ್ನಾರ..

ಕೊನೆಯದಾಗಿ ಶ್ರೇಷ್ಠತೆಯ ಪ್ರಜ್ಞೆಯಿಂದ ಕೆಳ ವರ್ಗಗಳ ಮೇಲೆ ಏನನ್ನಾದರೂ ಮಾಡಬಹುದೆಂಬ ಸರ್ವಾಧಿಕಾರದ ವಿರುದ್ಧ ಹೋರಾಟ ನಡೆಸುವ ಮೂಲಕ ಈ ದೇಶಕ್ಕೆ ಬಾಬಾ ಸಾಹೇಬರು ನೀಡಿದ ಸಂವಿಧಾನ ಮತ್ತು ಸಂವಿಧಾನದ ಆಶಯಗಳನ್ನು ಕಾಪಾಡುವುದು ಈ ಹೊತ್ತಿನ ನಮ್ಮ ಹೋರಾಟದ ವಿಷಯವಾಗಿದೆ.

ಆದರೆ ಪಕ್ಷಾತೀತವಾಗಿ ಎಲ್ಲೆಡೆಯೂ ಸಹ ಜನ ಸಾಮಾನ್ಯರಿಗೆ ಮಗ್ಗುಲ ಮುಳ್ಳಾಗಿ ಕಾಡುತ್ತಿರುವ ಫ್ಯೂಡಲ್‌ಗಳು ಮತ್ತು ಅಕ್ಷರಶಃ ಜನಪರ ಆಡಳಿತದ ಸಂವೇದನೆಯನ್ನು ಕಳೆದುಕೊಂಡಿರುವ ಜಾತಿ ಶ್ರೇಷ್ಠತಾವ್ಯಾಧಿಗಳು ಈ ದಿನ ಜನಪರ ಆಡಳಿತಕ್ಕೆ ಇರಬೇಕಾದ ದೂರದೃಷ್ಟಿಯನ್ನು ಪಕ್ಕಕ್ಕೆ ಇಟ್ಟು “ಕಾಂಗ್ರೆಸ್ ನಲ್ಲಿ ಮುಂದಿನ ಮುಖ್ಯಮಂತ್ರಿ ಯಾರು?” ಎಂಬ ಅಸಂಬದ್ಧವಾದ ಚರ್ಚೆಯನ್ನು ಹುಟ್ಟು ಹಾಕಲು ತಮ್ಮ ನಾಯಕತ್ವವನ್ನು ಬಳಸಿಕೊಳ್ಳುತ್ತಾರೆ ಎಂದರೆ ಇವರಿಗೆ ಸಮಾಜಪರವಾದಂತಹ ಯಾವುದೇ ಕಾಳಜಿಯಾಗಲೀ ಜವಾಬ್ದಾರಿಯಾಗಲೀ ಇಲ್ಲವೆಂಬುದನ್ನು ನಾವು ಸುಲಭವಾಗಿ ಅರ್ಥಮಾಡಿಕೊಳ್ಳಬಹುದು.

ಬಿಜೆಪಿಗರ ಕಳಪೆ ಆಡಳಿತದಿಂದ ಬೇಸತ್ತು ಕಣ್ಣೀರು ಹಾಕುತ್ತಿರುವ ಜನ ಸಾಮಾನ್ಯರ ಬದುಕಿಗೆ ವಿಶ್ವಾಸದ ಶಕ್ತಿಯಾಗಿ, ಉತ್ತಮ ಭವಿಷ್ಯದ ನಂಬಿಕೆಯಾಗಿ ಮೂಡಿ ಬರಬೇಕಿರುವ ನಮ್ಮ ಕಾಂಗ್ರೆಸ್ ಪಕ್ಷದ ಕೆಲ ನಾಯಕರು, ತಮಗೆ ತಾವೇ ಕಚ್ಚಾಡಿಕೊಳ್ಳುವ ಮೂಲಕ ಕೋಮುವಾದಿಗಳ ಎದುರು ದುರ್ಬಲರಾಗಿಯೂ ಜನ ಸಾಮಾನ್ಯರ ಎದುರು ಮತ್ತಷ್ಟು ದುರ್ಬಲರಾಗಿಯೂ ಗೋಚರಿಸುವಂತಹ ಅಪಾಯವನ್ನು ಮೈಮೇಲೆ ಎಳೆದುಕೊಳ್ಳುತ್ತಿದ್ದಾರೆ.

ಜನಪರ ನಾಯಕತ್ವ ಎಂದರೆ ಜನರು ತೊಂದರೆ ಅನುಭವಿಸುವಾಗ ಅವರ ಪರವಾಗಿ ದೃಢವಾಗಿ ನಿಲ್ಲುವುದೇ ಹೊರತು, ದುರ್ಬಲರ ಆಡಳಿತದಲ್ಲಿ, ನಾಯಕತ್ವಕ್ಕಾಗಿ ಕಿತ್ತಾಡುವುದಲ್ಲ.

ಕೊನೆಯದಾಗಿ ಕಲಹಗಳ ಮೂಲಕ ಇಂತಹ ತಪ್ಪು ಸಂದೇಶವನ್ನು ರವಾನಿಸುವುದು ಜನಪರ ಆಡಳಿತವನ್ನು ನೀಡಲು ಎಲ್ಲ ರೀತಿಯಿಂದಲೂ ಶಕ್ತವಾಗಿರುವ ಮತ್ತು ಈಗಾಗಲೇ ಅದನ್ನು ಸಾಧಿಸಿ ತೋರಿಸಿರುವ ಕಾಂಗ್ರೆಸ್ ಪಕ್ಷಕ್ಕೆ ನಿಜಕ್ಕೂ ಒಳ್ಳೆಯದಲ್ಲ!

ಮೊದಲು ಜನಪರವಾಗಿ ಹೋರಾಡೋಣ, ಅಧಿಕಾರ ಕೊಡುವುದು ಬಿಡುವುದನ್ನು ಜನರ ಆಯ್ಕೆ ಮತ್ತು ವಿವೇಚನೆಗೇ ಬಿಡೋಣ!

ಇನ್ನು who is who, what is what ಎಂಬ ಸಂಗತಿಯು ಹೈಕಮಾಂಡ್ ನವರಿಗೇ ಚೆನ್ನಾಗಿ ಗೊತ್ತಿರುವುದರಿಂದ ಸರ್ಕಾರದ ನಾಯಕತ್ವದ ಬಗ್ಗೆ ಅವರೇ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತಾರೆ

ಅಲ್ಲಿಯವರೆಗೂ ಮುಖ್ಯಮಂತ್ರಿ ಯಾರಾಗಬೇಕೆಂಬ ಚರ್ಚೆಯು ಎಷ್ಟು ಅಪ್ರಸ್ತುತವೋ ಅಷ್ಟೇ ಅಪಾಯಕಾರಿ ಕೂಡಾ!

  • ಡಾ.ಹೆಚ್.ಸಿ ಮಹದೇವಪ್ಪ

(ಡಾ.ಹೆಚ್.ಸಿ ಮಹದೇವಪ್ಪನವರು ಮಾಜಿ ಸಚಿವರು. ಕಾಂಗ್ರೆಸ್ ಮುಖಂಡರು. ಲೇಖನದಲ್ಲಿನ ಅಭಿಪ್ರಾಯಗಳು ವಯಕ್ತಿಕವಾದವು)


ಇದನ್ನೂ ಓದಿ: ಮೊದಲು ಚುನಾವಣೆ ಗೆಲ್ಲುವ ಕಡೆ ಗಮನ ಕೊಡಿ, ಮುಖ್ಯಮಂತ್ರಿ ಅಭ್ಯರ್ಥಿ ವಿಚಾರ ನಂತರದ್ದು: ರಣದೀಪ್ ಸಿಂಗ್ ಸುರ್ಜೆವಾಲಾ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...