Homeಕರ್ನಾಟಕಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಬಂಧನ

ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಹತ್ಯೆ ಆರೋಪಿಗಳ ಬಂಧನ

- Advertisement -
- Advertisement -

ನಿನ್ನೆ ಬೆಳ್ಳಂಬೆಳಗ್ಗೆ ಇಡೀ ಬೆಂಗಳೂರನ್ನು ಬೆಚ್ಚಿ ಬೀಳಿಸುವ ಘಟನೆ ನಡೆದಿತ್ತು. ಕಾಟನ್ ಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಫ್ಲವರ್ ಗಾರ್ಡನ್ ಏರಿಯಾದ ತಮ್ಮ ಕಚೇರಿಯ ಮುಂದೆ ಬಿಬಿಎಂಪಿ ಮಾಜಿ ಕಾರ್ಪೊರೇಟರ್ ರೇಖಾ ಕದಿರೇಶ್ ಅವರನ್ನು ಕೆಲ ದುಷ್ಕರ್ಮಿಗಳು ಚಾಕುವಿನಿಂದ ಇರಿದು ಹತ್ಯೆಗೈದಿದ್ದರು.

ಹಾಡುಹಗಲು ನಡೆದ ರೇಖಾ ಕದಿರೇಶ್ ಹತ್ಯೆಯ ನಂತರ ಆರೋಪಿಗಳ ಬಂಧನಕ್ಕೆ ತೀವ್ರ ಒತ್ತಡ ಕೇಳಿಬಂದಿತ್ತು. ರೇಖಾ ಕದಿರೇಶ್ ಬಿಜೆಪಿ ನಾಯಕಿಯಾಗಿದ್ದು, ಸರ್ಕಾರ ತನ್ನ ಪಕ್ಷದ ಮುಖಂಡರನ್ನೇ ರಕ್ಷಿಸಲು ಸಾಧ್ಯವಾಗದಿದ್ದರೆ ಸಾಮಾನ್ಯ ಜನರನ್ನು ಎಲ್ಲಿ ರಕ್ಷಿಸುತ್ತದೆ ಎಂದು ಕೆಲವು ಬಿಜೆಪಿ ಮುಖಂಡರುಗಳೇ ಗೃಹ ಇಲಾಖೆಯ ಕಾರ್ಯವೈಖರಿ ಕುರಿತು ಪ್ರಶ್ನಿಸಿದ್ದರು. ಪಕ್ಷದ ಮುಖಂಡರಿಂದ ಮತ್ತು ಮಾಧ್ಯಮಗಳಿಂದ ವ್ಯಾಪಕ ಒತ್ತಡ ಬರುತ್ತಿದ್ದಂತೆ ಮುಖ್ಯಮಂತ್ರಿ ಬಿಎಸ್‌ ಯಡಿಯೂರಪ್ಪನವರು ರೇಖಾ ಕದಿರೇಶ್ ಹಂತಕರನ್ನು 24 ಗಂಟೆಯ ಒಳಗೆ ಬಂಧಿಸುವ ಆಶ್ವಾಸನೆ ನೀಡಿದ್ದರು. ಅದರಂತೆಯೇ ಬೆಂಗಳೂರು ಪೊಲೀಸರು 24 ಗಂಟೆಯ ಕಾಲಾವಧಿಯಲ್ಲಿ ರೇಖಾ ಕದಿರೇಶ್ ಹತ್ಯೆಯ ಆರೋಪಿಗಳನ್ನು ಬಂಧಿಸಿದ್ದಾರೆ.

ಇಂದು ಬೆಳೆಗ್ಗೆ ಮಾಗಡಿ ರಸ್ತೆಯ ಕಾಮಾಕ್ಷಿಪಾಳ್ಯದ ಸುಮ್ಮನಹಳ್ಳಿಯ ಶನಿ ಮಹಾತ್ಮ ದೇವಸ್ಥಾನದ ಬಳಿ ರೇಖಾ ಕದಿರೇಶ್ ಹತ್ಯೆಯ ಇಬ್ಬರು ಪ್ರಮುಖ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಸುಮ್ಮನಹಳ್ಳಿ ಪ್ರದೇಶದಲ್ಲಿ ಆರೋಪಿಗಳು ಅಡಗಿರುವ ಖಚಿತ ಮಾಹಿತಿಯನ್ನು ಪಡೆದ ಪೊಲೀಸರು ಇಂದು ಮುಂಜಾನೆ ದಾಳಿ ನಡೆಸಿದರು. ಆರಂಭದಲ್ಲಿ ಪೊಲೀಸರು ಅರೋಪಿಗಳಿ ಶರಣಾಗುವಂತೆ ಸೂಚಿಸಿದ್ದಾರೆ. ಆರೋಪಿಗಳು ಪೊಲೀಸರ ಮೇಲೆ ದಾಳಿ ನಡೆಸಲು ಮುಂದಾದ ಪರಿಣಾಮ ಇನ್ಸ್ ಪೆಕ್ಟರ್ ಗಳಾದ ಶಿವಾನಂದ್ ಮತ್ತು ಚಿದಾನಂದ್ ರವರು ಆರೋಪಿಗಳ ಖಾಲಿಗೆ ಗುಂಡು ಹಾರಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಪೀಟರ್ ಮತ್ತು ಸೂರ್ಯ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಪೊಲೀಸರು ಮೂವರು ಪ್ರಮುಖ ಆರೋಪಿಗಳನ್ನು ಈಗಾಗಲೇ ಬಂಧಿಸಿದ್ದಾರೆ. ಹತ್ಯೆಗೆ ಸಹಕರಿಸಿದ ಆರೋಪದಲ್ಲಿ ಇನ್ನೂ 4 ಜನರನ್ನು ಬಂಧಿಸಲಾಗಿದೆ. ಹತ್ಯೆಗೆ ಸಂಬಂಧಿಸಿದಂತೆ 50 ಜನರನ್ನು ಕರೆಸಿ ವಿಚಾರಣೆ ನಡೆಸಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಇಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಹತ್ಯೆಯ ಹಿಂದಿನ ಕಾರಣಗಳು ಇದುವರೆಗೆ ತಿಳಿದು ಬಂದಿಲ್ಲ. ಹಂತಕರು ದೀರ್ಘಕಾಲದಿಂದ ಹತ್ಯೆಯಾದ ರೇಖಾ ಕದಿರೇಶ್ ಅವರ ಜೊತೆಯಿದ್ದರು. ಹೆಚ್ಚಿನ ವಿಚಾರಣೆಯ ನಂತರವಷ್ಟೇ ಹತ್ಯೆಯ ಕಾರಣಗಳು ತಿಳಿಯಲಿದೆ ಎಂದು ಪೊಲೀಸ್ ಕಮಿಷನರ್‌ ಕಮಲ್ ಪಂತ್ ತಿಳಿಸಿದ್ದಾರೆ.


ಇದನ್ನು ಓದಿ : ಪಾಕ್ ಸೇರಿದಂತೆ ಎಲ್ಲಾ ನೆರೆಹೊರೆಯವರೊಂದಿಗೆ ಉತ್ತಮ ಸಂಬಂಧ ಹೊಂದುತ್ತೇವೆ: ವಿದೇಶಾಂಗ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...