Homeಮುಖಪುಟಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

ಬಾರಬಂಕಿ ಮಸೀದಿ ಧ್ವಂಸದ ಸಾಕ್ಷ್ಯಚಿತ್ರ: ದಿ ವೈರ್‌ ಮೇಲೆ ಪ್ರಕರಣ ದಾಖಲಿಸಿದ ಯುಪಿ ಪೊಲೀಸ್‌

- Advertisement -
- Advertisement -

ಉತ್ತರ ಪ್ರದೇಶದ ಬಾರಾಬಂಕಿ ಜಿಲ್ಲಾಡಳಿತವು ಇತ್ತೀಚೆಗೆ ಅಕ್ರಮ ಕಟ್ಟಡ ಎಂದು ಮಸೀದಿಯೊಂದನ್ನು ಧ್ವಂಸಗೊಳಿಸಿತ್ತು. ಈ ಕುರಿತು ‘ದಿ ವೈರ್‌’ ಆನ್‌ಲೈನ್‌ ಸುದ್ದಿ ಸಂಸ್ಥೆಯು ಸಾಕ್ಷ್ಯಚಿತ್ರವೊಂದನ್ನು ತಯಾರಿಸಿತ್ತು. ಈ ಸಾಕ್ಷ್ಯಚಿತ್ರವು ಸಮಾಜದಲ್ಲಿ ದ್ವೇಷವನ್ನು ಹರಡುತ್ತಿದೆ ಮತ್ತು ಕೋಮು ಸೌಹಾರ್ದತೆಗೆ ಭಂಗ ತಂದಿದೆ ಎಂದು ಆರೋಪಿಸಿ ‘ದಿ ವೈರ್‌’ ವಿರುದ್ಧ ಬಾರಾಬಂಕಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ.

ದಿ ವೈರ್‌ನ ಇಬ್ಬರು ಪತ್ರಕರ್ತರಾದ ಸಿರಾಜ್ ಅಲಿ, ಮುಕುಲ್ ಎಸ್ ಚೌಹಾಣ್‌‌ ಮತ್ತು ಮೊಹಮ್ಮದ್ ನಯೀಮ್, ಮೊಹಮ್ಮದ್ ಅನೀಸ್ ಎಂದು ಗುರುತಿಸಲ್ಪಟ್ಟ ಇತರ ಇಬ್ಬರ ಹೆಸರನ್ನು ಪೊಲೀಸರು ಎಫ್‌ಐಆರ್‌ನಲ್ಲಿ ಹೆಸರಿಸಿದ್ದಾರೆ.

ಆದರೆ, ಈ ಆರೋಪಗಳನ್ನು ಆಧಾರರಹಿತ ಎಂದು ‘ದಿ ವೈರ್‌’ ಹೇಳಿದೆ. “ಬಿಜೆಪಿ ಸರ್ಕಾರವು ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಆರೋಪಿಸಿದೆ.

ಇದನ್ನೂ ಓದಿ: ದಿ ವೈರ್‌ ಸಂಪಾದಕ ಸಿದ್ಧಾರ್ಥ್ ವರದರಾಜನ್ ವಿರುದ್ಧ ಎಫ್‌ಐಆರ್ : ಯುಪಿ ಸರ್ಕಾರಕ್ಕೆ 3,500ಕ್ಕೂ ಹೆಚ್ಚು ನ್ಯಾಯಶಾಸ್ತ್ರಜ್ಞರು, ಕಲಾವಿದರಿಂದ ಛೀಮಾರಿ

ಕಳೆದ ತಿಂಗಳು, ಬಾರಾಬಂಕಿ ಜಿಲ್ಲಾಡಳಿತವು ರಾಮ್‌ಸ್ನೇಹಿ ಘಾಟ್ ತಹಸಿಲ್ ಆವರಣದೊಳಗಿದ್ದ ಮಸೀದಿಯನ್ನು ನೆಲಸಮ ಮಾಡಿತ್ತು. ಜಿಲ್ಲಾಡಳಿತ ಇದನ್ನು “ಅಕ್ರಮ ಕಟ್ಟಡ” ಎಂದು ಕರೆದಿದೆ. ಉತ್ತರಪ್ರದೇಶ ಸುನ್ನಿ ಸೆಂಟ್ರಲ್ ವಕ್ಫ್ ಮಂಡಳಿಯು ಜಿಲ್ಲಾಡಳಿತದ ಕ್ರಮವನ್ನು ಕಾನೂನುಬಾಹಿರ ಎಂದು ಆಕ್ರೋಶ ವ್ಯಕ್ತಪಡಿಸಿದೆ. ಜಿಲ್ಲಾಡಳಿತದ ಕ್ರಮದ ವಿರುದ್ಧ ವಕ್ಫ್‌ ಮಂಡಳಿಯು ಅಲಹಾಬಾದ್ ಹೈಕೋರ್ಟ್‌ಗೆ ಮೊರೆ ಹೋಗಿದ್ದು, ಪ್ರಕರಣವು ಪ್ರಸ್ತುತ ಹೈಕೋರ್ಟ್‌ನಲ್ಲಿ ಬಾಕಿ ಇದೆ.

“ಜೂನ್ 23 ರಂದು, ಆನ್‌ಲೈನ್ ನ್ಯೂಸ್ ಪೋರ್ಟಲ್ ದಿ ವೈರ್‌, ತಮ್ಮ ಟ್ವಿಟ್ಟರ್ ಹ್ಯಾಂಡಲ್‌ನಲ್ಲಿ ರಾಮ್‌ಸ್ನೆಹಿ ಘಾಟ್ ತಹಸಿಲ್ ಬಗ್ಗೆಗಿನ ವೀಡಿಯೊ ಸಾಕ್ಷ್ಯಚಿತ್ರವನ್ನು ಹಂಚಿಕೊಂಡಿದೆ. ಸಾಕ್ಷ್ಯಚಿತ್ರದಲ್ಲಿ, ಅವರು ಸುಳ್ಳು ಮತ್ತು ಆಧಾರರಹಿತ ಮಾಹಿತಿಯನ್ನು ನೀಡಿದ್ದಾರೆ”ಎಂದು ಬರಾಬಂಕಿ ಜಿಲ್ಲಾಧಿಕಾರಿ ಆದರ್ಶ್ ಸಿಂಗ್ ಗುರುವಾರ ರಾತ್ರಿ ಹೇಳಿಕೆಯಲ್ಲಿ ತಿಳಿಸಿದ್ದಾರೆ.

“ದಿ ವೈರ್‌ ಬಿಡುಗಡೆ ಮಾಡಿರುವ ವೀಡಿಯೊದಲ್ಲಿ, ‘ಜಿಲ್ಲಾಡಳಿತವು ಧಾರ್ಮಿಕ ಗ್ರಂಥಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆದಿದೆ’ ಎಂದು ಹೇಳುವಂತಹ ಹಲವಾರು ತಪ್ಪು ಮತ್ತು ಆಧಾರರಹಿತ ಹೇಳಿಕೆಗಳು ಒಳಗೊಂಡಿದೆ. ಇದು ಸುಳ್ಳಾಗಿದ್ದು, ಈ ರೀತಿಯ ಏನೂ ಸಂಭವಿಸಿಲ್ಲ. ಈ ರೀತಿಯ ತಪ್ಪು ಮಾಹಿತಿಯೊಂದಿಗೆ, ದಿ ವೈರ್‌ ಸಮಾಜದಲ್ಲಿ ದ್ವೇಷವನ್ನು ಹರಡಲು ಪ್ರಯತ್ನಿಸುತ್ತಿದೆ ಹಾಗೂ ಕೋಮು ಸೌಹಾರ್ದತೆಗೆ ಭಂಗ ತರುತ್ತಿದೆ” ಎಂದು ಆದರ್ಶ್ ಸಿಂಗ್ ಹೇಳಿದ್ದಾರೆ.

ಇದನ್ನೂ ಓದಿ: ಯುಪಿ ಮುಸ್ಲಿಂ ವೃದ್ದನ ಮೇಲಿನ ದಾಳಿ ಪ್ರಕರಣ: ಟ್ವಿಟರ್‌‌, ಪತ್ರಕರ್ತರು, ರಾಜಕೀಯ ನಾಯಕರ ವಿರುದ್ದ FIR!

ಎಫ್‌ಐಆರ್‌ನಲ್ಲಿ ಹೆಸರಿಸಲಾದ ಮೊಹಮ್ಮದ್ ನಯೀಮ್ ಸಾಕ್ಷ್ಯಚಿತ್ರದಲ್ಲಿ, ‘ಧಾರ್ಮಿಕ ಪುಸ್ತಕಗಳನ್ನು ಕಾಲುವೆ ಮತ್ತು ನದಿಯಲ್ಲಿ ಎಸೆಯಲಾಗುತ್ತಿದೆ ಎಂದು ಸುಳ್ಳು ಹೇಳಿಕೆಗಳನ್ನು ನೀಡುತ್ತಿದ್ದಾರೆ’ ಎಂದು ಬಾರಾಬಂಕಿ ಪೊಲೀಸ್ ವರಿಷ್ಠಾಧಿಕಾರಿ ಯಮುನಾ ಪ್ರಸಾದ್ ಅವರು ಹೇಳಿದ್ದಾರೆ.

ಬರಾಬಂಕಿಯ ಮಸೀದಿಯಲ್ಲಿ ಮುಸ್ಲಿಮರು ಪ್ರಾರ್ಥಿಸುತ್ತಿರುವ ಚಿತ್ರ (PC: Syed Farooq Ahmad)

“ಪೊಲೀಸ್ ಅಧಿಕಾರಿಯೊಬ್ಬರು ದೂರು ದಾಖಲಿಸಿದ್ದು, ಅದರ ಆಧಾರದ ಮೇಲೆ ಎಫ್‌ಐಆರ್ ದಾಖಲಿಸಲಾಗಿದೆ. ಮುಂದಿನ ಕ್ರಮಗಳು ನಡೆಯುತ್ತಿವೆ ”ಎಂದು ಯಮುನಾ ಪ್ರಸಾದ್ ತಿಳಿಸಿದ್ದಾರೆ.

ದಿ ವೈರ್‌ ಸ್ಥಾಪಕ ಸಂಪಾದಕ ಸಿದ್ಧಾರ್ಥ್ ವರದರಾಜನ್ ಪ್ರತಿಕ್ರಿಯಿಸಿ, “ಇದು ಕಳೆದ 14 ತಿಂಗಳುಗಳಲ್ಲಿ ದಿ ವೈರ್ ಅಥವಾ ಅದರ ಪತ್ರಕರ್ತರ ವಿರುದ್ಧ ಯುಪಿ ಪೊಲೀಸರು ಸಲ್ಲಿಸಿದ ನಾಲ್ಕನೇ ಎಫ್‌ಐಆರ್. ಈ ಪ್ರತಿಯೊಂದು ಪ್ರಕರಣಗಳು ಆಧಾರರಹಿತವಾಗಿವೆ. ಆದಿತ್ಯನಾಥ್ ಸರ್ಕಾರವು ಮಾಧ್ಯಮ ಸ್ವಾತಂತ್ರ್ಯವನ್ನು ನಂಬುವುದಿಲ್ಲ. ರಾಜ್ಯದಲ್ಲಿ ಏನು ನಡೆಯುತ್ತಿದೆ ಎಂದು ವರದಿ ಮಾಡುವ ಪತ್ರಕರ್ತರ ಕೆಲಸವನ್ನು ಅಪರಾಧೀಕರಿಸುತ್ತಿದೆ” ಎಂದು ಹೇಳಿದ್ದಾರೆ.

“ಉತ್ತರಪ್ರದೇಶದಲ್ಲಿ ರಾಜಕಾರಣಿಗಳು ಮತ್ತು ಸಾಮಾಜ ವಿರೋಧಿಗಳು ಬಹಿರಂಗವಾಗಿ ಕೋಮು ದ್ವೇಷವನ್ನು ಹುಟ್ಟುಹಾಕಬಹುದು ಮತ್ತು ಹಿಂಸಾಚಾರವನ್ನು ಸಮರ್ಥಿಸಬಹುದಾಗಿದೆ. ಆದರೆ ಪೊಲೀಸರು ಇವುಗಳನ್ನು ಕೋಮು ಸಾಮರಸ್ಯಕ್ಕೆ ಧಕ್ಕೆ ಮತ್ತು ಕಾನೂನು ಸುವ್ಯವಸ್ಥೆಗೆ ಬೆದರಿಕೆಯಾಗಿ ನೋಡುವುದಿಲ್ಲ. ಆದರೆ ಆಡಳಿತದ ಕಡೆಯಿಂದ ತಪ್ಪು ಎಂದು ಆರೋಪಿಸುವ ಜನರ ಹೇಳಿಕೆಗಳನ್ನು ಪತ್ರಕರ್ತರು ವರದಿ ಮಾಡಿದಾಗ ತಕ್ಷಣವೆ ಎಫ್‌ಐಆರ್‌ಗಳನ್ನು ತಕ್ಷಣ ದಾಖಲಿಸಲಾಗುತ್ತದೆ. ಈ ತಂತ್ರಗಳಿಗೆ ವೈರ್‌ ಬೆದರುವುದಿಲ್ಲ” ಎಂದು ಸಿದ್ದಾರ್ಥ್‌ ವರದರಾಜನ್‌ ಹೇಳಿದ್ದಾರೆ.

ಇದನ್ನೂ ಓದಿ: ಖ್ಯಾತ ಪತ್ರಕರ್ತ ರವೀಶ್ ಕುಮಾರ್‌ಗೆ ಕೊಲೆ ಬೆದರಿಕೆ: ಆರೋಪಿಯ ಹಿಂದಿದೆ ಹಿಂಸಾವಾದಿ ಹಿಂದುತ್ವ ಪರಿವಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಮನುವಾದಿಗಳ ಆಡಳಿತದಲ್ಲಿ ನಿಜ ಹೇಳುವುದೇ ಅಪರಾಧವಾಗುತ್ತಿದೆ.

LEAVE A REPLY

Please enter your comment!
Please enter your name here

- Advertisment -

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...