Homeಅಂತರಾಷ್ಟ್ರೀಯಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

ಅರುಣಾಚಲ ಗಡಿಯಲ್ಲಿ ಸಂಪೂರ್ಣ‌ ವಿದ್ಯುತ್‌ ಚಾಲಿತ ‘ಬುಲೆಟ್‌‌ ಟ್ರೈನ್‌‌’ ಪ್ರಾರಂಭಿಸಿದ ಚೀನಾ!

- Advertisement -
- Advertisement -

ಟಿಬೆಟ್‌‌‌ ಸ್ವಾಯತ್ತ ಪ್ರದೇಶದ ರಾಜಧಾನಿ ಲಾಸಾ ಮತ್ತು ಗಡಿ ಪಟ್ಟಣ ನಿಯಿಂಗ್ಚಿಯನ್ನು ಸಂಪರ್ಕಿಸುವ, ಮೊಟ್ಟ ಮೊದಲ ಸಂಪೂರ್ಣ ವಿದ್ಯುತ್‌ ಚಾಲಿತ ಬುಲೆಟ್ ಟ್ರೈನನ್ನು ಚೀನಾ ಲೋಕಾರ್ಪಣೆ ಮಾಡಿದೆ. ರೈಲಿನ ಮಾರ್ಗವು 435.5 ಕಿ.ಮೀ. ಇದ್ದು, ರೈಲು ಅರುಣಾಚಲ ಪ್ರದೇಶಕ್ಕೆ ಸಮೀಪದಲ್ಲಿರುವ ಟಿಬೆಟ್‌ನ ಹಿಮಾಲಯ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತದೆ.

ಗಡಿ ಸ್ಥಿರತೆಯನ್ನು ಕಾಪಾಡುವಲ್ಲಿ ಹೊಸ ರೈಲು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಚೀನಾದ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಘೋಷಿಸಿದ್ದಾರೆ ಎಂದು ಸರ್ಕಾರಿ ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ.

ಚೀನಾವು ಅರುಣಾಚಲವನ್ನು ದಕ್ಷಿಣ ಟಿಬೆಟ್‌ ಭಾಗವೆಂದು ಭಾರತದೊಂದಿಗೆ ತಕರಾರು ಮಾಡುತ್ತಲೆ ಇದೆ. ಪ್ರಸ್ತುತ ವಿವಾದವು 3,488 ಕಿ.ಮೀ ಉದ್ದದ ವಾಸ್ತವಿಕ ನಿಯಂತ್ರಣ ರೇಖೆ (ಎಲ್‌ಎಸಿ) ಗೆ ಸಂಬಂಧಿಸಿದೆ. ಆದರೆ ಚೀನಾದ ಪ್ರತಿಪಾದನೆಯನ್ನು ಭಾರತವು ನಿರಾಕರಿಸುತ್ತಲೆ ಬರುತ್ತಿದೆ.

ಇದನ್ನೂ ಓದಿ: 10 ಲಕ್ಷ ಹಣದ ಕಟ್ಟಿನೊಂದಿಗೆ ಪತ್ರಿಕಾಗೋಷ್ಠಿಗೆ ಆಗಮಿಸಿದ ಹೆಚ್‌.ಡಿ ರೇವಣ್ಣ ಆರೋಪ

ಚೀನಾ-ಭಾರತ ಗಡಿಯಲ್ಲಿ ಬಿಕ್ಕಟ್ಟು ಉಂಟಾದರೆ, ಹೊಸ ರೈಲು ಚೀನಾದ ಕಾರ್ಯಾಚರಣೆಗೆ ಸಹಾಯವಾಗುತ್ತದೆ ಎಂದು ಸಿಂಗ್ಹುವಾ ವಿಶ್ವವಿದ್ಯಾಲಯದ ರಾಷ್ಟ್ರೀಯ ಕಾರ್ಯತಂತ್ರ ಸಂಸ್ಥೆಯ ಸಂಶೋಧನಾ ವಿಭಾಗದ ನಿರ್ದೇಶಕ ಕಿಯಾನ್ ಫೆಂಗ್ ತಿಳಿಸಿದ್ದಾರೆಂದು ಗ್ಲೋಬಲ್ ಟೈಮ್ಸ್‌‌ ಉಲ್ಲೇಖಿಸಿದೆ.

ಸಿಚುವಾನ್-ಟಿಬೆಟ್ ರೈಲ್ವೆಯು ಕಿಂಗ್ಹೈ-ಟಿಬೆಟ್ ಪ್ರಸ್ಥಭೂಮಿಯ ಆಗ್ನೇಯ ದಿಕ್ಕಿನಲ್ಲಿ ಹಾದುಹೋಗುತ್ತದೆ. ಇದು ವಿಶ್ವದ ಅತ್ಯಂತ ಭೌಗೋಳಿಕವಾಗಿ ಸಕ್ರಿಯವಾಗಿರುವ ಪ್ರದೇಶಗಳಲ್ಲಿ ಒಂದಾಗಿದೆ. ಹೊಸ ರೈಲ್ವೆಯು ಪ್ರಯಾಣದ ಸಮಯವನ್ನು 48 ಗಂಟೆಗಳಿಂದ 13 ಗಂಟೆಗಳವರೆಗೆ ಕಡಿಮೆ ಮಾಡುತ್ತದೆ. ಇದು ಸಿಚುವಾನ್‌ನ ರಾಜಧಾನಿ ಚೆಂಗ್ಡುವಿನಿಂದ ಪ್ರಾರಂಭವಾಗಿ ಯಾನ್ ಮತ್ತು ಕಾಮ್ಡೋ ಮೂಲಕ ಮೂಲಕ ಟಿಬೆಟ್‌ಗೆ ಪ್ರವೇಶಿಸುತ್ತದೆ.

ನಿಯಿಂಗ್ಚಿ ಪಟ್ಟಣದಲ್ಲಿ ವಿಮಾನ ನಿಲ್ದಾಣವೂ ಇದೆ. ಚೀನಾವು ಹಿಮಾಲಯನ್ ಪ್ರದೇಶದಲ್ಲಿ ನಿರ್ಮಿಸಿದ ಐದು ವಿಮಾನ ನಿಲ್ದಾಣಗಳಲ್ಲಿ ಇದು ಕೂಡಾ ಒಂದು.

ಇದನ್ನೂ ಓದಿ: ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ಹೊಸ ರೈಲ್ವೆ ಮಾರ್ಗವು ಟಿಬೆಟ್ ಅನ್ನು ಚೀನಾದ ಮುಖ್ಯ ಭೂಭಾಗದೊಂದಿಗೆ ಪ್ರಮುಖವಾಗಿ ಸಂಪರ್ಕ ಹೊಂದಲು ಅನುವು ಮಾಡಿಕೊಡುತ್ತದೆ ಎಂದು ಫುಡಾನ್ ವಿಶ್ವವಿದ್ಯಾಲಯದ ದಕ್ಷಿಣ ಏಷ್ಯಾ ಅಧ್ಯಯನ ಕೇಂದ್ರದ ಉಪನಿರ್ದೇಶಕ ಲಿನ್ ಮಿನ್ವಾಂಗ್ ಹೇಳಿದ್ದಾರೆ. ಈ ಪ್ರದೇಶವು ವಸ್ತು ಸಾಗಣೆ ಮತ್ತು ಲಾಜಿಸ್ಟಿಕ್ ಸರಬರಾಜಿನಲ್ಲಿ ಹೆಚ್ಚು ಸಾಮರ್ಥ್ಯಗಳನ್ನು ಹೊಂದಿರುತ್ತದೆ ಎಂದು ಗ್ಲೋಬಲ್ ಟೈಮ್ಸ್ ವರದಿ ಮಾಡಿದೆ.

ಹೊಸ ರೈಲ್ವೆ ಮಾರ್ಗವು ಟಿಬರ್ ಪ್ರದೇಶದ ಆರ್ಥಿಕ ಅಭಿವೃದ್ಧಿಯನ್ನು ಹೆಚ್ಚಿಸುತ್ತದೆ ಎಂದು ಲಾಸಾದ ಟಿಬೆಟ್ ವಿಶ್ವವಿದ್ಯಾಲಯದ ಜನಾಂಗೀಯ ಅಧ್ಯಯನ ಪ್ರಾಧ್ಯಾಪಕ ಕ್ಸಿಯಾಂಗ್ ಕುನ್ಕ್ಸಿನ್ ಗ್ಲೋಬಲ್ ಟೈಮ್ಸ್ಗೆ ತಿಳಿಸಿದ್ದಾರೆ. ಟಿಬೆಟ್ ಖನಿಜ ನಿಕ್ಷೇಪಗಳು ಮತ್ತು ಔಷಧೀಯ ಗಿಡಮೂಲಿಕೆಗಳಿಗೆ ಹೆಸರುವಾಸಿಯಾಗಿದೆ. ಸಿಚುವಾನ್-ಟಿಬೆಟ್ ರೈಲ್ವೆಯು ಸ್ಥಳೀಯ ಪ್ರವಾಸೋದ್ಯಮವನ್ನು ಹೆಚ್ಚಿಸುವ ನಿರೀಕ್ಷೆಯಿದೆ.

ಜುಲೈ 1 ರಂದು ನಡೆಯಲಿರುವ ಆಡಳಿತಾರೂಢ ಕಮ್ಯುನಿಸ್ಟ್ ಪಾರ್ಟಿ ಆಫ್ ಚೀನಾ (ಸಿಪಿಸಿ) ದ ನೂರನೇ ವಾರ್ಷಿಕೋತ್ಸವದ ಮುನ್ನ, ಸಿಚುವಾನ್-ಟಿಬೆಟ್ ರೈಲ್ವೆಯ ಲಾಸಾ-ನಿಯಿಂಗ್ಚಿ ರೈಲ್ವೇ ಮಾರ್ಗವನ್ನು ಇಂದು ಉದ್ಘಾಟಿಸಲಾಯಿತು.

ಇದನ್ನೂ ಓದಿ: ಆರೆಸ್ಸೆಸ್, ಬಿಜೆಪಿ ಎಮರ್ಜೆನ್ಸಿ ಬಗ್ಗೆ ಮಾತನಾಡುವುದು ಸೋಗಲಾಡಿತನದ ಪರಮಾವಧಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...

ತುಳು ನುಡಿಗೆ ಹೆಚ್ಚುವರಿ ಅಧಿಕೃತ ಭಾಷೆಯ ಮಾನ್ಯತೆ ನೀಡಿ: ಕರವೇ ರಾಜ್ಯಾಧ್ಯಕ್ಷ ಟಿ.ಎ.ನಾರಾಯಣಗೌಡ

"ಮಂಗಳೂರಿನಲ್ಲಿ ಶುಕ್ರವಾರ ಕರ್ನಾಟಕ ಸರ್ಕಾರದ ಸಚಿವ ಸಂಪುಟ ಸಭೆ ನಡೆಯಲಿದೆ; ಇದೊಂದು ಐತಿಹಾಸಿಕ ಸಂದರ್ಭ. ರಾಜ್ಯ ಸರ್ಕಾರ ತುಳು ನುಡಿಯನ್ನು ತುಳು ಮಾತನಾಡುವ ಪ್ರದೇಶಗಳಲ್ಲಿ ಹೆಚ್ಚುವರಿ ಅಧಿಕೃತ ಭಾಷೆಯಾಗಿ ಮಾನ್ಯತೆ ನೀಡುವ ನಿರ್ಧಾರವನ್ನು...

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...