Homeಮುಖಪುಟದಿವಂಗತ ಮುಮ್ತಾಜ್ ಬೇಗಂ ಅವರ 'ಸ್ವಾತಂತ್ರ್ಯದ ಕಹಳೆ' ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

ದಿವಂಗತ ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯದ ಕಹಳೆ’ ಕೃತಿಗೆ ಮುಸ್ಲಿಂ ಸಾಹಿತ್ಯ ಪ್ರಶಸ್ತಿ

- Advertisement -
- Advertisement -

ಕನ್ನಡ ಸಾಹಿತ್ಯದ ಕೆಲವೇ ಕೆಲವು ಖ್ಯಾತ ಮುಸ್ಲಿಂ ಲೇಖಕಿಯರಲ್ಲಿ ಮುಮ್ತಾಜ್ ಬೇಗಂ (73) ಕೂಡ ಒಬ್ಬರು. ದುರದೃಷ್ಟವಶಾತ್ ಕಳೆದ ಏಪ್ರಿಲ್ 06 ರಂದು ಸಾಹಿತ್ಯ ಚಟುವಟಿಕೆಯಲ್ಲಿ ತೊಡಗಿರುವಾಗಲೇ ಅವರು ಕೋವಿಡ್ ಸೋಂಕಿನ ಕಾರಣದಿಂದ ಮೃತಪಟ್ಟಿದ್ದರು. ಅವರ ಮರಣದ ನಂತರ ಈಗ ಅವರ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ. ಕರ್ನಾಟಕ ಮುಸ್ಲಿಂ ಲೇಖಕರ ಸಂಘವು ಮುಮ್ತಾಜ್ ಬೇಗಂ ಅವರ ‘ಸ್ವಾತಂತ್ರ್ಯ ಕಹಳೆ’ ಕೃತಿಯನ್ನು ‘2019 ನೇ ಸಾಲಿನ ಮುಸ್ಲಿಂ ಸಾಹಿತ್ಯ ಪ್ರಶಸ್ತಿಗೆ’ ಆಯ್ಕೆ ಮಾಡಲಾಗಿದೆ. ಪ್ರಶಸ್ತಿಗಾಗಿ 36 ಕೃತಿಗಳು ಬಂದಿದ್ದು ಅದರಲ್ಲಿ ಬೇಗಂ ಅವರ ಸ್ವಾತಂತ್ರ್ಯದ ಕಹಳೆ ಕೃತಿ ಪ್ರಶಸ್ತಿಗೆ ಆಯ್ಕೆಯಾಗಿದೆ.

ಮುಮ್ತಾಜ್ ಬೇಗಂ ಅವರು ಕಳೆದ ಮೂರು ದಶಕಗಳಿಂದ ಸಾಹಿತ್ಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿದ್ದು ಹತ್ತಾರು ಸಾಹಿತ್ಯಿಕ ಕೃತಿಗಳನ್ನು ರಚಿಸಿದ್ದಾರೆ. ಕಥೆ, ಕಾದಂಬರಿ, ಕಾವ್ಯ, ಮಕ್ಕಳ ಸಾಹಿತ್ಯ ಹೀಗೆ ಮುಮ್ತಾಜ್ ಬೇಗಂ ವೈವಿಧ್ಯಮಯ ಸಾಹಿತ್ಯಿಕ ಕೃಷಿಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ಅವ್ಯಕ್ತ ಮತ್ತು ಅಂಕುರ, ಸರ್ವ ಋತುಗಳು ನಿನಗಾಗಿ ಎಂಬ ಕವನ ಸಂಕಲನಗಳನ್ನೂ, ವರ್ತುಲ, ಬಂದಳಿಕೆ ಎಂಬ ಕಾದಂಬರಿಗಳನ್ನು, ಚಿಂಪಿ ಎಂಬ ಮಕ್ಕಳ ಸಾಹಿತ್ಯದ ಕೃತಿಗಳನ್ನು ಹಾಗೂ ‘ಟು ದಿ ಅನ್‌ನೌನ್ ಡೆಸ್ಟಿನೇಶನ್’ ಎಂಬ ಇಂಗ್ಲೀಷ್ ಕಾದಂಬರಿಯನ್ನು ರಚಿಸಿದ್ದಾರೆ.

2021 ರ ಮಾರ್ಚ್‌ ನಲ್ಲಿ ಮುಮ್ತಾಜ್ ಬೇಗಂ ಅವರ ‘ಸೂರ್ಯಾಸ್ತ’ ಕೃತಿ ಅನಾವರಣಗೊಂಡಿತ್ತು. ಇದೇ ಸಂದರ್ಭದಲ್ಲಿ ಅವರಿಗೆ ಕೊರೋನಾ ಸೊಂಕು ತಗುಲಿ ಅದರಿಂದ ಚೇತರಿಸಿಕೊಳ್ಳಲಾಗದೇ ತಮ್ಮ 73 ನೇ ವಯಸ್ಸಿನಲ್ಲಿ ಅವರು ಮೃತಪಟ್ಟಿದ್ದರು. ವಿದ್ಯಾರ್ಥಿ ದೆಸೆಯಲ್ಲೇ ಬರವಣಿಗೆಯ ಹವ್ಯಾಸ ಮೈಗೂಡಿಸಿಕೊಂಡಿದ್ದು, ನಾಡಿನ ಅನೇಕ ಪ್ರಸಿದ್ಧ ಪತ್ರಿಕೆಗಳು ಮತ್ತು ನಿಯತಕಾಲಿಕಗಳಲ್ಲಿ ಇವರ ಬರಹಗಳು ಪ್ರಕಟಗೊಂಡಿವೆ.

ಮುಮ್ತಾಜ್ ಅವರ 5 ದಶಕಗಳ ಸಾಹಿತ್ಯ ಸೇವೆಗೆ ಹಲವು ಪ್ರಶಸ್ತಿಗಳು ಹುಡಕಿಕೊಂಡು ಬಂದಿವೆ.ಇವರ ಸಾಹಿತ್ಯ, ಬರಹ ಕ್ಷೇತ್ರದ ಗಣನೀಯ ಸಾಧನೆಗಾಗಿ ಹಲವು ರಾಷ್ಟ್ರ ಮತ್ತು ರಾಜ್ಯ ಮಟ್ಟದ ಪ್ರತಿಷ್ಠಿತ ಗೌರವ ಮತ್ತು ಸನ್ಮಾನಗಳಿಗೆ ಭಾಜನರಾಗಿದ್ದಾರೆ. ಅತ್ತಿಮಬ್ಬೆ, ಚೆನ್ನಶ್ರೀ, ಜಿಲ್ಲಾ ರಾಜ್ಯೋತ್ಸವ, ಕಿತ್ತೂರ ರಾಣಿ ಚೆನ್ನಮ್ಮ, ಬಸವ ಜ್ಯೋತಿ, ಹಿರಿಯ ನಾಗರಿಕರ ಸಾಹಿತ್ಯ ಸಾಧಕಿ ಮತ್ತು ಕನ್ನಡ ಸಾಹಿತ್ಯ ಪರಿಷತ್ ದತ್ತಿ ಪ್ರಶಸ್ತಿಗಳಿಂದ ಪುರಸ್ಕೃತರಾದ ಇವರಿಗೆ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಗ್ರಂಥ ಬಹುಮಾನ ಮತ್ತು ಮೇವುಂಡಿ ಮಲ್ಲಾರಿ ಮಕ್ಕಳ ಕಥಾ ಪುರಸ್ಕಾರ ಸೇರಿದಂತೆ ಇನ್ನೂ ಅನೇಕ ಪ್ರಶಸ್ತಿಗಳು ಪ್ರಾಪ್ತವಾಗಿವೆ.

ಮುಮ್ತಾಜ್ ಬೇಗಂ ಅವರು ಸಾಹಿತ್ಯ ಮಾತ್ರವಲ್ಲದೇ ರಾಷ್ಟ್ರ ಮತ್ತು ಅಂತರಾಷ್ಟ್ರೀಯ ಸಂಘ ಸಂಸ್ಥೆಗಳಲ್ಲಿ ವಿವಿಧ ಆಡಳಿತಾತ್ಮಕ ಜವಾಬ್ದಾರಿಗಳನ್ನು ನಿರ್ವಹಿಸಿದ್ದರು. ಕತಾರ್‌ನಲ್ಲಿರುವ ಯುನೆಸ್ಕೋ ಸಂಸ್ಥೆಯ ಆರ್ಥಿಕ ಮತ್ತು ಆಡಳಿತ ಸಹಾಯಕರಾಗಿ ಅನೇಕ ವರ್ಷ ಕಾರ್ಯ ನಿರ್ವಹಿಸಿದ್ದ ಮುಮ್ತಾಜ್ ಬೇಗಂ ಅವರು ದುಬೈನ ಅಲ್ ಮೀರ್ ಸಂಸ್ಥೆ ಮತ್ತು ‘ಫ್ಯೂಜಿ ಗಾರ್ಮೆಂಟ್ಸ್’ನ ಕಾರ್ಯದರ್ಶಿಯಾಗಿ ಕೂಡ ಕೆಲವು ವರ್ಷ ಸೇವೆ ಸಲ್ಲಿಸಿದ್ದರು. ಕರ್ನಾಟಕ ಸಾಹಿತ್ಯ ಅಕಾಡೆಮಿ ಮತ್ತು ಕರಾವಳಿ ಲೇಖಕಿ ಮತ್ತು ವಾಚಕಿಯರ ಸಂಘದ ಸಕ್ರಿಯ ಸದಸ್ಯರಾಗಿಯೂ ಅವರು ಕನ್ನಡ ಸಾಹಿತ್ಯವನ್ನು ಕಟ್ಟುವ ಕ್ರಿಯೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದರು.

ತಮ್ಮ ಇಳಿವಯಸ್ಸಿನಲ್ಲಿ ಗುಜರಾತ್‌ನಲ್ಲಿ ವೈದ್ಯೆಯಾಗಿರುವ ಪುತ್ರಿಯ ಮನೆಯಲ್ಲಿ ವಾಸವಾಗಿದ್ದ ಮುಮ್ತಾಜ್ ಬೇಗಂ ಕಳೆದ ಏಪ್ರಿಲ್‌ನಲ್ಲಿ ಇಹಲೋಕವನ್ನು ತ್ಯಜಿಸಿದ್ದರು.

ಮುಸ್ಲಿಂ ಸಾಹಿತ್ಯ ಪ್ರಶಸ್ತಿಯು ಹತ್ತು ಸಾವಿರ ರೂಪಾಯಿ ನಗದು ಮತ್ತು ಪ್ರಶಸ್ತಿ ಫಲಕಗಳನ್ನೊಳಗೊಂಡಿದ್ದು, ಲಾಕ್‌ಡೌನ್ ಸಂಪೂರ್ಣ ತೆರವು ಬಳಿಕ ಮಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮರಣೋತ್ತರವಾಗಿ ಪ್ರಶಸ್ತಿ ಪ್ರದಾನ ಮಾಡಲಾಗುವುದು. ಪ್ರಶಸ್ತಿಗೆ 36 ಕೃತಿಗಳು ಬಂದಿದ್ದು, ಸಾಹಿತಿಗಳಾದ ಡಾ. ಹಸೀನಾ ಖಾದ್ರಿ, ಅಬ್ದುಲ್ ರಹಮಾನ್ ಕುತ್ತೆತ್ತೂರು ಮತ್ತು ಪ್ರಾಧ್ಯಾಪಕ ಅಬ್ದುಲ್ ರಝಾಕ್ ಅನಂತಾಡಿ ತೀರ್ಪುಗಾರರಾಗಿ ಸಹಕರಿಸಿದ್ದರು ಎಂದು ಮುಸ್ಲಿಂ ಲೇಖಕರ ಸಂಘದ ಅಧ್ಯಕ್ಷ ಉಮರ್ ಯು.ಹೆಚ್. ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 


ಇದನ್ನೂ ಓದಿ; ಡಾ. ಹಫೀಜ್ ಕರ್ನಾಟಕಿ: ಸೌಹಾರ್ದತೆಯ ಸಂತನಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...