Homeಮುಖಪುಟಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

- Advertisement -
- Advertisement -

ಲಕ್ಷದ್ವೀಪ ಮೂಲದ ನಟಿ ಮತ್ತು ನಿರ್ಮಾಪಕಿ ಆಯಿಷಾ ಸುಲ್ತಾನಾ ಅವರ ವಿರುದ್ಧದ ರಾಷ್ಟ್ರದ್ರೋಹ ಪ್ರಕರಣದಲ್ಲಿ ಕೇರಳ ಹೈಕೋರ್ಟ್ ಆಯಿಷಾ ಅವರಿಗೆ ನಿನ್ನೆ ನಿರೀಕ್ಷಣಾ ಜಾಮೀನು ನೀಡಿದೆ. ಪ್ರಕರಣದ ವಿಚಾರಣೆ ವೇಳೆ “ಆಯಿಷಾ ಸುಲ್ತಾನ್ ಅವರ ಹೇಳಿಕೆಗಳು ಭಾರತದ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ ಹಾಗೂ ಸಮುದಾಯಗಳ ನಡುವೆ ಯಾವುದೇ ದ್ವೇಷವನ್ನು ಹುಟ್ಟುಹಾಕುವಂತದಲ್ಲ” ಎಂದು ಕೇರಳ ಹೈಕೋರ್ಟ್ ಅಭಿಪ್ರಾಯಪಟ್ಟಿದೆ.

50,000 ಮೊತ್ತದ ಬಾಂಡ್ ಹಾಗೂ ಇಬ್ಬರು ಶ್ಯೂರಿಟಿಗಳನ್ನು ಪಡೆದುಕೊಂಡು ಆಯಿಷಾ ಸುಲ್ತಾನಾ ಅವರಿಗೆ ನಿರೀಕ್ಷಣಾ ಜಾಮೀನು ನೀಡಿದ ನ್ಯಾಯಾಲಯವು ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು. ಕಳೆದ ವಾರ ಆಯಿಷಾ ಸಲ್ತಾನಾ ಅವರ ಬಂಧನಕ್ಕೆ ತಾತ್ಕಾಲಿಕ ತಡೆ ನೀಡಿದ್ದ ಕೇರಳ ಹೈಕೋರ್ಟ್ ನಿನ್ನೆ ಶುಕ್ರವಾರ CrPC ಸೆಕ್ಷನ್ 432 ರ ಅಡಿಯಲ್ಲಿ ಸುಲ್ತಾನಾ ಅವರಿಗೆ ನಿರೀಕ್ಷಿಣಾ ಜಾಮೀನು ನೀಡಿದೆ.

ಕೇರಳ ಹೈಕೋರ್ಟ್‌ನಲ್ಲಿ ಲಕ್ಷದ್ವೀಪ ಆಡಳಿತವು ಗುರುವಾರ ಮತ್ತೊಂದು ಅರ್ಜಿಯನ್ನು ಸಲ್ಲಿಸಿ ಆಯಿಷಾ ಸುಲ್ತಾನಾ ಅವರು ಕೋವಿಡ್ ನಿಯಮಾವಳಿಗಳನ್ನು ಉಲ್ಲಂಘಿಸಿದ್ದಾರೆ ಎಂಬ ಆರೊಪ ಮಾಡಿತ್ತು.

ಕಮರತ್ತಿ ಪೊಲೀಸರು ಬಿಜೆಪಿ ಲಕ್ಷದ್ವೀಪ ಮುಖ್ಯಸ್ಥ ಸಿ. ಅಬ್ದುಲ್ ಖಾದಿರ್ ಹಾಜಿ ಅವರ ದೂರಿನ ಆಧಾರದ ಮೇಲೆ IPC ಸೆಕ್ಷನ್ 124A ( ದೇಶದ್ರೋಹ) ಮತ್ತು ಸೆಕ್ಷನ್ 153B (ಸಮುದಾಯಗಳ ನಡುವೆ ದ್ವೇಷ ಭಿತ್ತುವ ಕೃತ್ಯ) ಅಡಿಯಲ್ಲಿ FIR  ದಾಖಲಿಸಿಕೊಂಡಿತ್ತು.

ಲಕ್ಷದ್ವೀಪದಲ್ಲಿ ಕೋವಿಡ್ ನಿರ್ಬಂಧಗಳನ್ನು ಸಡಿಲಿಸಿದ್ದರಿಂದ ಕೊರೋನಾ ಎರಡನೇ ಅಲೆಯೂ ತೀವ್ರವಾಗಿ ಹರಡಲು ಕಾರಣವಾಯಿತು. ನಿರ್ಬಂಧಗಳನ್ನು ಸಡಿಲಿಸಿದ ಲಕ್ಷದ್ವೀಪ ಆಡಳಿತಾಧಿಕಾರಿಯ ನಿರ್ಧಾರವನ್ನು ಬಯೋ ವೆಪನ್ ಆಗಿ ಪರಿಣಮಿಸಿತು ಎಂದಷ್ಟೇ ಹೇಳಿದ್ದಾರೆ. ರಾಷ್ಟ್ರೀಯ ಹಿತಾಸಕ್ತಿಗೆ ಧಕ್ಕೆ ಮಾಡುವ ಯಾವ ಉದ್ದೇಶವೂ ಇದರಲ್ಲಿ ಇಲ್ಲ ಎಂದು ಆಯಿಷಾ ಸುಲ್ತಾನ್ ಪರ ವಕೀಲರು ಹೈಕೋರ್ಟ್‌ನಲ್ಲಿ ವಾದಿಸಿದ್ದರು.

ಶುಕ್ರವಾರ ಆಯಿಷಾ ಸುಲ್ತಾನಾ ಅವರ ಜಾಮೀನು ಅರ್ಜಿಯ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್ ಪ್ರಕರಣದಲ್ಲಿ ರಾಷ್ಟ್ರದ ಹಿತಾಸಕ್ತಿಗೆ ಧಕ್ಕೆಯಾಗುವಂತಹ ಹೇಳಿಕೆಯನ್ನು ಅರ್ಜಿದಾರರು ನೀಡಿಲ್ಲ. ಸರ್ಕಾರದ ಯೋಜನೆಗಳನ್ನು ಟೀಕಿಸುವುದನ್ನು ದೇಶದ್ರೋಹ ಅಥವಾ ಧರ್ಮ ದ್ವೇಷ ಸೃಷ್ಟಿಸುವ ಕೃತ್ಯವೆಂದು ಪರಿಗಣಿಸಲು ಸಾಧ್ಯವಿಲ್ಲ . ಮೇಲ್ನೋಟಕ್ಕೆ ಅರ್ಜಿದಾರರನ್ನು ಬಂಧಿಸುವ ಅಗತ್ಯವಿಲ್ಲವೆಂಬುದು ಕಂಡು ಬರುತ್ತದೆ ಎನ್ನುವ ಮೂಲಕ ಲಕ್ಷದ್ವೀಪ ಆಡಳಿತದ ವಾದವನ್ನು ತಳ್ಳಿ ಹಾಕಿತು.

ಲಕ್ಷದ್ವೀಪ ಬಿಜೆಪಿಯ 15 ಮುಖಂಡರು ಆಯಿಷಾ ಸುಲ್ತಾನಾ ವಿರುದ್ಧ ಪ್ರಕರಣವನ್ನು ದಾಖಲಿಸಿರವುದನ್ನು ಖಂಡಿಸಿ ಪಕ್ಷಕ್ಕೆ ರಾಜೀನಾಮೆಯನ್ನು ನೀಡಿ ಪ್ರತಿಭಟಿಸಿದ್ದಾರೆ. ಹೊಸ ಆಡಳಿತಾಧಿಕಾರಿ ಪ್ರಪುಲ್ ಖೋಡಾ ಪಟೇಲ್ ಅವರ ಯೋಜನೆಗಳಿಂದ ಲಕ್ಷದ್ವೀಪದ ಜನ ಜೀವನ ಮತ್ತು ಸಂಸ್ಕೃತಿ ಹಾಳಾಗುತ್ತಿರುವುದು ಬಿಜೆಪಿಗೂ ಗೊತ್ತಿದೆ ಎಂದು ಪ್ರತಿಭಟನಾನಿರತ ಬಿಜೆಪಿ ಮುಖಂಡರು ಹೇಳಿದ್ದಾರೆ.


ಇದನ್ನೂ ಓದಿ: ಲಕ್ಷದ್ವೀಪ: ಆಡಳಿತಾಧಿಕಾರಿಯ 2 ವಿವಾದಾತ್ಮಕ ಆದೇಶಗಳಿಗೆ ಕೇರಳ ಹೈಕೋರ್ಟ್ ತಡೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...