Homeಅಂತರಾಷ್ಟ್ರೀಯಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

ಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಜಾರ್ಜ್ ಫ್ಲಾಯ್ಡ್‌ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶುಕ್ರವಾರ 22 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಡೆರೆಕ್‌ ಚೌವಿನ್‌ ತನ್ನ ಮೊಣಕಾಲನ್ನು ಜಾರ್ಜ್‌ ಫ್ಲಾಯ್ಡ್‌‌‌ ಅವರ ಕುತ್ತಿಗೆ ಇಟ್ಟು ಹಿಂಸೆ ನೀಡಿ ಕೊಂದಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಈ ಜನಾಂಗೀಯ ಹಿಂಸಾಚಾರದ ವಿರುದ್ದ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆರೆಕ್‌ ಇತ್ತೀಚೆಗಷ್ಟೆ ತನ್ನ ವರ್ಷಗಳ ಮೌನವನ್ನು ಮುರಿದು, ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದನು. ಪ್ರಸ್ತುತ ಘೋಷಿಸಲ್ಪಟ್ಟ ಶಿಕ್ಷೆಯು, ಕಪ್ಪು ಜನಾಂಗದ ವ್ಯಕ್ತಿಯನ್ನು ಹತ್ಯೆ ಮಾಡಿದ ಪೊಲೀಸ್‌ ಅಧಿಕಾರಿಯೊಬ್ಬನಿಗೆ ವಿಧಿಸಲಾದ ಅತ್ಯಂತ ಸುದೀರ್ಘ‌ ಜೈಲು ಶಿಕ್ಷೆಯಾಗಿದೆ.

ಫ್ಲಾಯ್ಡ್‌‌ ಕುಟುಂಬದ ಸದಸ್ಯರು ಮತ್ತು ಇತರರು ತೀರ್ಪಿನ ಬಗ್ಗೆ ನಿರಾಶೆಗೊಂಡಿದ್ದು, ಅವರ ಪರವಾಗಿದ್ದ ಪ್ರಾಸಿಕ್ಯೂಟರ್‌‌ಗಳು 30 ವರ್ಷಗಳ ಶಿಕ್ಷಯನ್ನು ಕೋರಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಡೆರೆಕ್‌ ಚೌವಿನ್‌‌ಗೆ ಪ್ರಸ್ತುತ 45 ವರ್ಷ ವಯಸ್ಸಾಗಿದ್ದು, ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದರೆ 15 ವರ್ಷಗಳ ನಂತರ ಪೆರೋಲ್‌ನಿಂದ ಹೊರಬರಬಹುದಾಗಿದೆ.

“ಪ್ರಸ್ತುತ ತೀರ್ಪು ಸುಧೀರ್ಘ ಸಮಯವೆ ಆಗಿದ್ದರೂ, ಶಿಕ್ಷೆಯ ಪ್ರಮಾಣ ಕಡಿಯೆ ಆಗಿದೆ” ಎಂದು ಮಿನ್ನಿಯಾಪೋಲಿಸ್‌ನ ಪ್ರತಿಭಟನಾ ನಾಯಕ ನೆಕಿಮಾ ಲೆವಿ ಆರ್ಮ್‌ಸ್ಟ್ರಾಂಗ್ ಹೇಳಿದ್ದಾರೆ.

ಡೆರೆಕ್ ವಿರುದ್ದ ಅಮೆರಿಕಾದ ಫೆಡರಲ್‌ ಸರ್ಕಾರ ಕೂಡಾ ‘ನಾಗರಿಕ ಹಕ್ಕುಗಳ ಉಲ್ಲಂಘನೆ’ಗೆ ಸಂಬಂಧಿಸಿದ ಎರಡು ಪ್ರಕರಣವನ್ನು ದಾಖಲಿಸಿದೆ. ಅದು 2022 ರ ಮಾರ್ಚ್‌ ವೇಳೆಗೆ ವಿಚಾರಣೆಗೆ ಬರಲಿದೆ. ಈ ಸಮಯಲ್ಲಿ ಡೆರೆಕ್‌ ಜೊತೆಗೆ ಫ್ಲಾಯ್ಡ್‌‌ ಹತ್ಯೆ ಸಮಯದಲ್ಲಿ ಇದ್ದ ಇತರ ಮೂವರು ಅಧಿಕಾರಿಗಳು ಕೂಡಾ ವಿಚಾರಣೆಗೆ ಒಳಪಡುತ್ತಾರೆ.

ಪೊಲೀಸ್‌ ಅಧಿಕಾರಿಯಾಗಿದ್ದ ಡೆರೆಕ್‌ ಚೌವಿನ್‌‌ ಮೇ 25, 2020 ರಂದು ಆಫ್ರಿಕನ್-ಅಮೆರಿಕನ್ ಜನಾಂಗದ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ದಯನೀಯವಾಗಿ ಕೂಗಿಕೊಂಡರೂ ಪೊಲೀಸ್ ಅಧಿಕಾರಿ ಅದನ್ನು ಲೆಕ್ಕಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...