Homeಅಂತರಾಷ್ಟ್ರೀಯಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

ಜಾರ್ಜ್‌ ಫ್ಲಾಯ್ಡ್‌‌ ಹತ್ಯೆ: ಆರೋಪಿಗೆ 22.5 ವರ್ಷಗಳ ಜೈಲು ಶಿಕ್ಷೆ

- Advertisement -
- Advertisement -

ಜಾರ್ಜ್ ಫ್ಲಾಯ್ಡ್‌ನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಿನ್ನಿಯಾಪೋಲಿಸ್‌ನ ಮಾಜಿ ಪೊಲೀಸ್ ಅಧಿಕಾರಿ ಡೆರೆಕ್ ಚೌವಿನ್‌ಗೆ ಶುಕ್ರವಾರ 22 ವರ್ಷ 6 ತಿಂಗಳು ಜೈಲು ಶಿಕ್ಷೆ ವಿಧಿಸಲಾಗಿದೆ. ಡೆರೆಕ್‌ ಚೌವಿನ್‌ ತನ್ನ ಮೊಣಕಾಲನ್ನು ಜಾರ್ಜ್‌ ಫ್ಲಾಯ್ಡ್‌‌‌ ಅವರ ಕುತ್ತಿಗೆ ಇಟ್ಟು ಹಿಂಸೆ ನೀಡಿ ಕೊಂದಿದ್ದು ವಿಡಿಯೊದಲ್ಲಿ ದಾಖಲಾಗಿತ್ತು. ಈ ಜನಾಂಗೀಯ ಹಿಂಸಾಚಾರದ ವಿರುದ್ದ ವಿಶ್ವದಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗಿತ್ತು.

ಡೆರೆಕ್‌ ಇತ್ತೀಚೆಗಷ್ಟೆ ತನ್ನ ವರ್ಷಗಳ ಮೌನವನ್ನು ಮುರಿದು, ಸಂತ್ರಸ್ತ ಕುಟುಂಬಕ್ಕೆ ಸಂತಾಪ ಸೂಚಿಸಿದ್ದನು. ಪ್ರಸ್ತುತ ಘೋಷಿಸಲ್ಪಟ್ಟ ಶಿಕ್ಷೆಯು, ಕಪ್ಪು ಜನಾಂಗದ ವ್ಯಕ್ತಿಯನ್ನು ಹತ್ಯೆ ಮಾಡಿದ ಪೊಲೀಸ್‌ ಅಧಿಕಾರಿಯೊಬ್ಬನಿಗೆ ವಿಧಿಸಲಾದ ಅತ್ಯಂತ ಸುದೀರ್ಘ‌ ಜೈಲು ಶಿಕ್ಷೆಯಾಗಿದೆ.

ಫ್ಲಾಯ್ಡ್‌‌ ಕುಟುಂಬದ ಸದಸ್ಯರು ಮತ್ತು ಇತರರು ತೀರ್ಪಿನ ಬಗ್ಗೆ ನಿರಾಶೆಗೊಂಡಿದ್ದು, ಅವರ ಪರವಾಗಿದ್ದ ಪ್ರಾಸಿಕ್ಯೂಟರ್‌‌ಗಳು 30 ವರ್ಷಗಳ ಶಿಕ್ಷಯನ್ನು ಕೋರಿದ್ದರು.

ಇದನ್ನೂ ಓದಿ: ಜಾರ್ಜ್ ಫ್ಲಾಯ್ಡ್‌‌ನನ್ನು ಉಳಿಸಲುಲಾಗದೆ ಇದ್ದಿದ್ದಕ್ಕೆ ಹಲವಾರು ರಾತ್ರಿ ಕಣ್ಣೀಟ್ಟಿದ್ದೆ: ಘಟನೆಯ ವಿಡಿಯೋ ಚಿತ್ರಿಸಿದ ಪ್ರತ್ಯಕ್ಷದರ್ಶಿ ಯುವತಿ

ಡೆರೆಕ್‌ ಚೌವಿನ್‌‌ಗೆ ಪ್ರಸ್ತುತ 45 ವರ್ಷ ವಯಸ್ಸಾಗಿದ್ದು, ಜೈಲಿನಲ್ಲಿ ಉತ್ತಮ ನಡವಳಿಕೆ ತೋರಿದರೆ 15 ವರ್ಷಗಳ ನಂತರ ಪೆರೋಲ್‌ನಿಂದ ಹೊರಬರಬಹುದಾಗಿದೆ.

“ಪ್ರಸ್ತುತ ತೀರ್ಪು ಸುಧೀರ್ಘ ಸಮಯವೆ ಆಗಿದ್ದರೂ, ಶಿಕ್ಷೆಯ ಪ್ರಮಾಣ ಕಡಿಯೆ ಆಗಿದೆ” ಎಂದು ಮಿನ್ನಿಯಾಪೋಲಿಸ್‌ನ ಪ್ರತಿಭಟನಾ ನಾಯಕ ನೆಕಿಮಾ ಲೆವಿ ಆರ್ಮ್‌ಸ್ಟ್ರಾಂಗ್ ಹೇಳಿದ್ದಾರೆ.

ಡೆರೆಕ್ ವಿರುದ್ದ ಅಮೆರಿಕಾದ ಫೆಡರಲ್‌ ಸರ್ಕಾರ ಕೂಡಾ ‘ನಾಗರಿಕ ಹಕ್ಕುಗಳ ಉಲ್ಲಂಘನೆ’ಗೆ ಸಂಬಂಧಿಸಿದ ಎರಡು ಪ್ರಕರಣವನ್ನು ದಾಖಲಿಸಿದೆ. ಅದು 2022 ರ ಮಾರ್ಚ್‌ ವೇಳೆಗೆ ವಿಚಾರಣೆಗೆ ಬರಲಿದೆ. ಈ ಸಮಯಲ್ಲಿ ಡೆರೆಕ್‌ ಜೊತೆಗೆ ಫ್ಲಾಯ್ಡ್‌‌ ಹತ್ಯೆ ಸಮಯದಲ್ಲಿ ಇದ್ದ ಇತರ ಮೂವರು ಅಧಿಕಾರಿಗಳು ಕೂಡಾ ವಿಚಾರಣೆಗೆ ಒಳಪಡುತ್ತಾರೆ.

ಪೊಲೀಸ್‌ ಅಧಿಕಾರಿಯಾಗಿದ್ದ ಡೆರೆಕ್‌ ಚೌವಿನ್‌‌ ಮೇ 25, 2020 ರಂದು ಆಫ್ರಿಕನ್-ಅಮೆರಿಕನ್ ಜನಾಂಗದ ಜಾರ್ಜ್ ಫ್ಲಾಯ್ಡ್‌ ಅವರ ಕುತ್ತಿಗೆ ಮೇಲೆ ಒಂಬತ್ತು ನಿಮಿಷಗಳಿಗಿಂತ ಹೆಚ್ಚು ಕಾಲ ತನ್ನ ಮಂಡಿಯನ್ನು ಒತ್ತಿ ಹಿಡಿದಿದ್ದನು. ಜಾರ್ಜ್‌ ಪ್ಲಾಯ್ಡ್‌ ತನಗೆ ಉಸಿರಾಡಲು ಆಗುತ್ತಿಲ್ಲ ಎಂದು ದಯನೀಯವಾಗಿ ಕೂಗಿಕೊಂಡರೂ ಪೊಲೀಸ್ ಅಧಿಕಾರಿ ಅದನ್ನು ಲೆಕ್ಕಿಸದೆ ಅವರ ಹತ್ಯೆಗೆ ಕಾರಣವಾಗುತ್ತಾನೆ.

ಇದನ್ನೂ ಓದಿ: ಮಾನವೀಯತೆಯ ಸಾಕ್ಷಿಪ್ರಜ್ಞೆಯಾಗಿ ಉಳಿದ ಜಾರ್ಜ್‌ ಫ್ಲಾಯ್ಡ್‌ ಹತ್ಯೆಗೆ ಒಂದು ವರ್ಷ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...