Homeಚಳವಳಿವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ವೇತನ ಹೆಚ್ಚಳ, ಕೋವಿಡ್‍ ಭತ್ಯೆಗೆ ಒಪ್ಪಿದ ಮಹಾರಾಷ್ಟ್ರ ಸರ್ಕಾರ: ಆಶಾ ಕಾರ್ಯಕರ್ತೆಯರಿಗೊಂದು ದೊಡ್ಡ ಗೆಲುವು

ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

- Advertisement -
- Advertisement -

ತಿಳಿ ಗುಲಾಬಿ ಸೀರೆಯ ಸಹೋದರಿಯರ ಮೊಗದಲ್ಲೊಂದು ಒಂದು ‘ಆಶಾ’ದಾಯಕ ಸಮಾಧಾನ ಕಾಣಿಸಿಕೊಂಡಿದೆ. ಮಹಾರಾಷ್ಟ್ರ ಸರ್ಕಾರ ಆಶಾ ಕಾರ್ಯಕರ್ತೆಯರ ಬೇಡಿಕೆಗಳಲ್ಲಿ ಹಲವನ್ನು ಈಡೇರಿಸಲು ಒಪ್ಪಿಕೊಂಡಿದೆ.

7 ನೇ ವೇತನ ಆಯೋಗದ ಶಿಫಾರಸುಗಳ ಪ್ರಕಾರ ಕಾರ್ಮಿಕ ಹಕ್ಕುಗಳ ರಕ್ಷಣೆ ಮತ್ತು ಕನಿಷ್ಠ ವೇತನವನ್ನು ಕೋರಿ ಮಹಾರಾಷ್ಟ್ರದ 70 ಸಾವಿರ ಆಶಾ ಕಾರ್ಯಕರ್ತೆಯರು ಜೂನ್ 15 ರಿಂದ ಮುಷ್ಕರ ನಡೆಸುತ್ತಿದ್ದರು. ಮಹಾರಾಷ್ಟ್ರ ಸರ್ಕಾರವು ತೀರಾ ಇತ್ತೀಚಿನವರೆಗೂ ಈ ಬೇಡಿಕೆಗಳಿಗೆ ಸ್ಪಂದಿಸಿರಲಿಲ್ಲ.

ಬುಧವಾರ, ಮಹಾರಾಷ್ಟ್ರ ಆರೋಗ್ಯ ಸಚಿವ ರಾಜೇಶ್ ತೋಪೆ ಅವರು ಆಶಾ ಕಾರ್ಯಕರ್ತರ ಬೇಡಿಕೆಗಳನ್ನು ಈಡೇರಿಸಲು ಮುಂದಾಗಿದ್ದಾರೆ. ಮಾಸಿಕ ವೇತನದಲ್ಲಿ 1 ಸಾವಿರ ರೂ ಹೆಚ್ಚಳ ಮತ್ತು ಕೋವಿಡ್ ಪರಿಹಾರವಾಗಿ ಮಾಸಿಕ 500 ರೂ. ನೀಡಲು ಅಲ್ಲಿನ ಸರ್ಕಾರ ಒಪ್ಪಿಕೊಂಡಿದೆ.

ಇದಲ್ಲದೆ ಪ್ರತಿ ಆಶಾ ಕಾರ್ಯಕರ್ತೆಯರಿಗೆ ಸ್ಮಾರ್ಟ್ ಫೋನ್‍ ಕೂಡ ನೀಡಲು ಸರ್ಕಾರ ಒಪ್ಪಿಕೊಂಡಿದೆ. ಆಶಾ ಕಾರ್ಯಕರ್ತೆಯರು ನಡೆಸಿದ ಪ್ರತಿಭಟನೆಯ ನಂತರ ಸರ್ಕಾರದ ಈ ಪ್ರಕಟಣೆ ಬಂದಿದೆ.

ಸದ್ಯದ ಮಟ್ಟಿಗೆ ಆಶಾ ಕಾರ್ಯಕರ್ತೆಯರ ಹೋರಾಟಕ್ಕೆ ಇದು ದೊಡ್ಡ ಗೆಲುವೇ. ಆದರೆ ಹೋರಾಟದ ಹಾದಿ ಇನ್ನೂ ಸುದೀರ್ಘವಾಗಿದೆ.

ಇದನ್ನೂ ಓದಿ: ಕೊರೊನಾ ಕಾಲದಲ್ಲೂ ‘ಆಶಾ’ರೋಧನ..! : ಈಗಲಾದರೂ ಮರುಗುವುದೇ ಸರ್ಕಾರ?

ದೈನಂದಿನ ಕಾರ್ಯಚಟುವಟಿಕೆಯನ್ನು ಮೇಲ್ವಿಚಾರಣೆ ಮಾಡುವ ಆಶಾ ಕಾರ್ಯಕರ್ತೆಯರ ಗುಂಪಿನ ಮುಖ್ಯಸ್ಥರಿಗೆ ಮಾಸಿಕ ಸಂಬಳದಲ್ಲಿ 1,200 ರೂ. ಹೆಚ್ಚಳ, ಜೊತೆಗೆ ಹೆಚ್ಚುವರಿ ಕೋವಿಡ್ ಭತ್ಯೆಯಾಗಿ ತಿಂಗಳಿಗೆ 500 ರೂ.ಗಳನ್ನು, ಲಸಿಕಾ ಕೇಂದ್ರಗಳಲ್ಲಿ ಸ್ವಯಂ ಸೇವಕರಾಗಿ ಕೆಲಸ ಮಾಡುತ್ತಿರುವ ಆಶಾ ಕಾರ್ಯರ್ತೆಯರಿಗೆ ಹೆಚ್ಚುವರಿ ಮಾಸಿಕ 200 ರೂ. ಭತ್ಯೆ ನೀಡಲೂ ಸರ್ಕಾರ ಒಪ್ಪಿದೆ. ಕೋವಿಡ್‍ ಕಾರಣಕ್ಕೆ ಸಾವನ್ನಪ್ಪಿದ ಆಶಾ ಕಾರ್ಯಕರ್ತೆಯರ ರಕ್ತಸಂಬಂಧಿಗಳಿಗೆ ಸಹ 50 ಲಕ್ಷ ರೂ. ಪರಿಹಾರ ನೀಡುವುದಾಗಿ ಆರೋಗ್ಯ ಸಚಿವರು ತಿಳಿಸಿದ್ದಾರೆ.

ಕೋವಿಡ್ ಭತ್ಯೆ ಮತ್ತು ವೇತನ ಪರಿಷ್ಕರಣೆಯಿಂದಾಗಿ ಮಹಾರಾಷ್ಟ್ರದ ಆಶಾ ಕಾರ್ಯಕರ್ತೆಯರು ತಮ್ಮ ಮುಷ್ಕರವನ್ನು ಹಿಂತೆಗೆದುಕೊಂಡಿದ್ದಾರೆ. ದೇಶದ ಸಾರ್ವಜನಿಕ ಆರೋಗ್ಯ ವ್ಯವಸ್ಥೆ ಮತ್ತು ಸಮುದಾಯಗಳ ನಡುವಿನ ಸೇತುವೆಯಾಗಿ ಆಶಾ ಕಾರ್ಯಕರ್ತೆಯರು ಅಮೂಲ್ಯ ಸೇವೆ ಮಾಡುತ್ತಿದ್ದಾರೆ.

ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯವು ಅವರನ್ನು ಇನ್ನೂ “ಆರೋಗ್ಯ ಸ್ವಯಂಸೇವಕರು” ಎಂದು ಗುರುತಿಸುತ್ತಿದೆ. ಮೂಲ ಅಗತ್ಯತೆಗಳು ಮತ್ತು  ಉದ್ಯೋಗ ಭದ್ರತೆಗಾಗಿ ಅವರು ಆಗ್ರಹಿಸುತ್ತಿದ್ದು, ಇದಕ್ಕಾಗಿ ತಮ್ಮನ್ನು ಮುಂಚೂಣಿಯ ಆರೋಗ್ಯ ಕಾರ್ಯಕರ್ತರಾಗಿ ಗುರುತಿಸಬೇಕೆಂದು ನಿರಂತರವಾಗಿ ಒತ್ತಾಯಿಸಿದ್ದಾರೆ. “ಆರೋಗ್ಯ ಸ್ವಯಂಸೇವಕ” ಎಂಬ ಹಣೆಪಟ್ಟಿ ಹಚ್ಚುವ ಮೂಲಕ ಅವರ ಬೇಡಿಕೆಗಳಿಗೆ ಹಿನ್ನಡೆ ಮಾಡುತ್ತ ಬರಲಾಗಿದೆ.

ಸಮುದಾಯಗಳ ಮಹಿಳೆಯರು ಮತ್ತು ಮಕ್ಕಳ ಆರೋಗ್ಯ ವರ್ಧನೆಗೆ ದಿನವೂ ಕೆಲಸ ಮಾಡುವ ಆಶಾ ಕಾರ್ಯಕರ್ತೆಯರು, ಗರ್ಭಿಣಿಯರಿಗೆ ಪ್ರಾಥಮಿಕ ಉಪಚಾರ ಮತ್ತು ಅವರನ್ನು ಹೆರಿಗೆ ಸಮಯದಲ್ಲಿ ಸುರಕ್ಷಿತವಾಗಿ ಆಸ್ಪತ್ರೆಗೆ ಸೇರಿಸುವ ಜವಾಬ್ದಾರಿಗಳನ್ನು ಹೊತ್ತಿದ್ದಾರೆ. ಕೋವಿಡ್‍ ಸಂದರ್ಭದಲ್ಲಿ ಅವರ ಸೇವೆ ಅನುಪಮವಾಗಿದ್ದು ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.

ಈ ಶ್ರಮದ ನಂತರವೂ ಅವರಿಗೆ ಕೇವಲ 1,000 ದಿಂದ 3000 ರೂವರೆಗೆ ವೇತನ ನೀಡುತ್ತ ಬರಲಾಗಿದೆ. ಕಳೆದ ಎರಡು ವರ್ಷಗಳಲ್ಲಿ ಕರ್ನಾಟಕ ಸೇರಿದಂತೆ, ವಿವಿಧ ರಾಜ್ಯಗಳಲ್ಲಿ ಆಶಾ ಒಕ್ಕೂಟಗಳು ಪ್ರತಿಭಟನೆ ಮತ್ತು ಮುಷ್ಕರ ನಡೆಸುತ್ತ ಬಂದಿವೆ. ಈಗ ಮಹಾರಾಷ್ಟ್ರದಲ್ಲಿ ಅವರಿಗೊಂದು ಜಯ ಸಿಕ್ಕಿದ್ದು ಮುಂದಿನ ಹೋರಾಟಕ್ಕೆ ದೊಡ್ಡ ಮೆಟ್ಟಿಲಾಗಿದೆ.


ಇದನ್ನೂ ಓದಿ: ಪ್ರತಿದಿನ ಭಯದಲ್ಲೇ ಮನೆಗೆ ಹೋಗುವ ನಮಗೆ, ನಮ್ಮ ಹಳ್ಳಿಗಳಲ್ಲೇ ಗೌರವವಿಲ್ಲ: ಆಶಾ ಕಾರ್ಯಕರ್ತರ ಅಳಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...