Homeಕರೋನಾ ತಲ್ಲಣದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಆಕ್ಸಿಜನ್ ಸಮರ ಅರಂಭವಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಕ್ಸಿಜನ್ ಆಡಿಟ್ ಸಮಿತಿ ಸಲ್ಲಿಸಿದ್ದ ಮಧ್ಯಂತರ ವರದಿಯ ಆಧಾರದಲ್ಲಿ ಬಿಜೆಪಿ ನಾಯಕರು ಕೇಜ್ರಿವಾಲ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಕೇಜ್ರಿವಾಲ್ ಸರ್ಕಾರ ಆಕ್ಸಿಜನ್ ಬಳಕೆಯಿಂದ ದೇಶದಲ್ಲಿ ಅನೇಕ ಜನರು ಆಮ್ಲಜನಕದ ಕೊರತೆಯಿಂದ ಮೃತಪಡುವಂತಾಯಿತು ಎಂದು ಪ್ರಚಾರಾಂದೋಲನ ನಡೆಸಿದ್ದರು. ಆದರೆ ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಿಟ್ ಕಮಿಟಿಯ ಮುಖ್ಯಸ್ಥರಾಗಿರುವ ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

“ದೆಹಲಿ ಸರ್ಕಾರ ಅಗತ್ಯಕ್ಕಿಂತ 4 ಪಟ್ಟು ಹೆಚ್ಚು ಪ್ರಮಾಣದ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿತ್ತು ಎಂದು ಹೇಳಲು ಸಾಧ್ಯವಿಲ್ಲ. ಈಗ ಮಧ್ಯಂತರ ವರದಿಯನ್ನಷ್ಟೇ ನೀಡಲಾಗಿದೆ. ಪೈನಲ್ ಆಡಿಟ್ ನಂತರವಷ್ಟೇ ಈ ಕುರಿತು ಹೇಳಲು ಸಾಧ್ಯ. ಕೊರೋನಾ ಎರಡನೇ ಅಲೆಯನ್ನು ಸಾಧಾರಣ ದಿನಗಳಿಗೆ ಹೋಲಿಸಿ ಲೆಕ್ಕ ಹಾಕಿದರೆ ಈ ಅಂದಾಜು ಸಿಗುತ್ತದೆ. ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದರು. ಸಮಗ್ರವಾದ ತನಿಖೆಯಿಂದ ಮಾತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿನ ದೆಹಲಿಯ ಆಕ್ಸಿಜನ್ ಬೇಡಿಕೆಯ ಪ್ರಮಾಣ ತಿಳಿದುಬರಲಿದೆ. ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಈ ವಿಚಾರವನ್ನು ಚರ್ಚಿಸುವದು ಸರಿಯಲ್ಲ” ಎಂದು ಡಾ. ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ  5 ಜನ ಸದಸ್ಯರ ತನಿಖಾ ಸಮಿತಿಯಲ್ಲಿ ಬಿರುಕು ಮೂಡಿದ್ದು ಸಮಿತಿ ಸದಸ್ಯಾರಾದ  ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್‌ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್‌ ಕೇರ್ ನಿರ್ದೇಶಕ ಸಂದೀಪ್ ಬುಧಿರಾಜ ಅವರು ಮಧ್ಯಂತರ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸಲಾಗಿಲ್ಲ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸದಸ್ಯರು ಭಿನ್ನಮತದ ಕಾರಣದಿಂದ ಸಮಿತಿಯ ಅನೇಕ ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್ ಭಲ್ಲಾ ಅವರು ತಮ್ಮ ಆಕ್ಷೇಪದ ಟಿಪ್ಪಣಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಅಧಿಕಾರಿಗಳಾಗಿರುವ ಇಬ್ಬರು ಸದಸ್ಯರು ಉಪಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ಇತರ ಸದಸ್ಯರ ಗಮನಕ್ಕೆ ತರಲಾಗಿಲ್ಲ. ವರದಿಯು ಅತ್ಯಂತ ಉತ್ಪೇಕ್ಷೆಯಿಂದ ಕೂಡಿದ್ದು ಪಾರದರ್ಶಕತೆಯ ಕೊರತೆ ಇದೆ ಎಂದು ತನಿಖಾ ಸಮಿತಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಒಮ್ಮತದ ಅಭಿಪ್ರಾಯಕ್ಕೆ ಬರದೇ ಇರುವುದು ಅತ್ಯಂತ ಬೇಸರ ಮತ್ತು ಅಘಾತಕಾರಿಯಾದ ವಿಷಯವಾಗಿದೆ. ಸಮಿತಿಯು ನಿಜವಾದ ಆಡಿಟ್‌ಅನ್ನು ನಡೆಸದೇ ಬಿಡುಬೀಸಾದ ತೀರ್ಮಾನಕ್ಕೆ ಬಂದಿದೆ” ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಗೆ ತನ್ನ ಆಕ್ಷೇಪವನ್ನು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಕ್ಸಿಜನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, “ನೀವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿದ್ದಾಗ ನಾನಿಲ್ಲಿ ಹಗಲೂ ರಾತ್ರಿ ಆಕ್ಸಿಜನ್ ಹೊಂದಿಸಲು ಕಷ್ಟಪಡುತ್ತಿದ್ದೆ. 2 ಕೋಟಿ ದೆಹಲಿ ನಿವಾಸಿಗಳ ಉಸಿರಿಗಾಗಿ ಹೋರಾಡಿದ್ದೇ ನನ್ನ ಅಪರಾಧ” ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಆಡಿಟ್ ರಿಪೋರ್ಟ್ ಎಂಬುದು ಇಲ್ಲ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ವರದಿಗೆ ಸಹಿ ಮಾಡಿಲ್ಲ. ಬಿಜೆಪಿ ತನ್ನ ಕೇಂದ್ರ ಕಚೇರಿಯಲ್ಲಿ ತಯಾರಾದ ನಕಲಿ ರಿಪೋರ್ಟ್ ಅನ್ನು ಹಂಚುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರ ಮತ್ತು ಕೆಂದ್ರ ಸರ್ಕಾರದ ನಡುವಿನ ರಾಜಕೀಯ ಕಿತ್ತಾಟ ಮತ್ತೊಂದು ಹಂತವನ್ನು ತಲುಪಿದ್ದು ಆಕ್ಸಿಜನ್ ವಿಚಾರದಲ್ಲಿ ಆಮ್‌ ಆದ್ಮಿ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ನಿನ್ನೆ ದೇಶಾದ್ಯಂತ ಸುದ್ದಿಯಾದ ಆಕ್ಸಿಜನ್ ವರದಿ ಕೂಡ ದೆಹಲಿ ಬಿಜೆಪಿ ಮೂಲಗಳಿಂದಲೇ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಮತ್ತು ದೆಹಲಿಯ ನಡುವಿನ ಆಕ್ಸಿಜನ್ ಗಲಾಟೆ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕವಷ್ಟೆ ಸತ್ಯಾಸತ್ಯತೆಗಳು ಹೊರ ಬೀಳಲಿದೆ.


ಇದನ್ನೂ ಓದಿ : ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...