Homeಕರೋನಾ ತಲ್ಲಣದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎನ್ನಲು ಸಾಧ್ಯವಿಲ್ಲ: ಸುಪ್ರೀಂ ಸಮಿತಿ ಮುಖ್ಯಸ್ಥ

- Advertisement -
- Advertisement -

ಕೇಂದ್ರ ಸರ್ಕಾರ ಮತ್ತು ದೆಹಲಿಯ ಅರವಿಂದ್ ಕೇಜ್ರಿವಾಲ್ ನೇತೃತ್ವದ ಸರ್ಕಾರದ ನಡುವೆ ಆಕ್ಸಿಜನ್ ಸಮರ ಅರಂಭವಾಗಿದೆ. ನಿನ್ನೆ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಕ್ಸಿಜನ್ ಆಡಿಟ್ ಸಮಿತಿ ಸಲ್ಲಿಸಿದ್ದ ಮಧ್ಯಂತರ ವರದಿಯ ಆಧಾರದಲ್ಲಿ ಬಿಜೆಪಿ ನಾಯಕರು ಕೇಜ್ರಿವಾಲ್ ಸರ್ಕಾರದ ವಿರುದ್ಧ ಆರೋಪಗಳ ಸುರಿಮಳೆಗೈದಿದ್ದರು. ಕೇಜ್ರಿವಾಲ್ ಸರ್ಕಾರ ಆಕ್ಸಿಜನ್ ಬಳಕೆಯಿಂದ ದೇಶದಲ್ಲಿ ಅನೇಕ ಜನರು ಆಮ್ಲಜನಕದ ಕೊರತೆಯಿಂದ ಮೃತಪಡುವಂತಾಯಿತು ಎಂದು ಪ್ರಚಾರಾಂದೋಲನ ನಡೆಸಿದ್ದರು. ಆದರೆ ದೆಹಲಿ ಸರ್ಕಾರ ಅಗತ್ಯಕ್ಕಿಂತ ಹೆಚ್ಚಿನ ಆಕ್ಸಿಜನ್ ಬೇಡಿಕೆ ಇಟ್ಟಿದೆ ಎಂದು ಹೇಳಲು ಸಾಧ್ಯವಿಲ್ಲ ಸುಪ್ರೀಂ ಕೋರ್ಟ್ ನೇಮಿಸಿದ್ದ ಆಡಿಟ್ ಕಮಿಟಿಯ ಮುಖ್ಯಸ್ಥರಾಗಿರುವ ದೆಹಲಿಯ ಏಮ್ಸ್‌ ಆಸ್ಪತ್ರೆಯ ನಿರ್ದೇಶಕರಾದ ಡಾ. ರಣದೀಪ್ ಗುಲೇರಿಯಾ ಹೇಳಿದ್ದಾರೆ.

“ದೆಹಲಿ ಸರ್ಕಾರ ಅಗತ್ಯಕ್ಕಿಂತ 4 ಪಟ್ಟು ಹೆಚ್ಚು ಪ್ರಮಾಣದ ಆಕ್ಸಿಜನ್‌ಗೆ ಬೇಡಿಕೆ ಇಟ್ಟಿತ್ತು ಎಂದು ಹೇಳಲು ಸಾಧ್ಯವಿಲ್ಲ. ಈಗ ಮಧ್ಯಂತರ ವರದಿಯನ್ನಷ್ಟೇ ನೀಡಲಾಗಿದೆ. ಪೈನಲ್ ಆಡಿಟ್ ನಂತರವಷ್ಟೇ ಈ ಕುರಿತು ಹೇಳಲು ಸಾಧ್ಯ. ಕೊರೋನಾ ಎರಡನೇ ಅಲೆಯನ್ನು ಸಾಧಾರಣ ದಿನಗಳಿಗೆ ಹೋಲಿಸಿ ಲೆಕ್ಕ ಹಾಕಿದರೆ ಈ ಅಂದಾಜು ಸಿಗುತ್ತದೆ. ಕೊರೋನಾ ಸಂದರ್ಭದಲ್ಲಿ ಹೆಚ್ಚಿನ ಸೋಂಕಿತರು ಆಕ್ಸಿಜನ್ ಕೊರತೆಯಿಂದ ಬಳಲುತ್ತಿದ್ದರು. ಸಮಗ್ರವಾದ ತನಿಖೆಯಿಂದ ಮಾತ್ರ ಕೊರೋನಾ ಎರಡನೇ ಅಲೆಯ ಸಂದರ್ಭದಲ್ಲಿನ ದೆಹಲಿಯ ಆಕ್ಸಿಜನ್ ಬೇಡಿಕೆಯ ಪ್ರಮಾಣ ತಿಳಿದುಬರಲಿದೆ. ವಿಚಾರ ಸುಪ್ರೀಂ ಕೋರ್ಟ್‌ನಲ್ಲಿ ಇರುವಾಗ ಈ ವಿಚಾರವನ್ನು ಚರ್ಚಿಸುವದು ಸರಿಯಲ್ಲ” ಎಂದು ಡಾ. ರಣದೀಪ್ ಗುಲೇರಿಯಾ ಅಭಿಪ್ರಾಯಪಟ್ಟಿದ್ದಾರೆ.

ಸುಪ್ರೀಂ ಕೋರ್ಟ್ ನೇಮಿಸಿದ  5 ಜನ ಸದಸ್ಯರ ತನಿಖಾ ಸಮಿತಿಯಲ್ಲಿ ಬಿರುಕು ಮೂಡಿದ್ದು ಸಮಿತಿ ಸದಸ್ಯಾರಾದ  ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್‌ ಭಲ್ಲಾ ಮತ್ತು ಮ್ಯಾಕ್ಸ್ ಹೆಲ್ತ್‌ ಕೇರ್ ನಿರ್ದೇಶಕ ಸಂದೀಪ್ ಬುಧಿರಾಜ ಅವರು ಮಧ್ಯಂತರ ವರದಿಯಲ್ಲಿ ತಮ್ಮ ಅಭಿಪ್ರಾಯಗಳನ್ನು ಪರಿಗಣಿಸಲಾಗಿಲ್ಲ ಎಂದು ಆಕ್ಷೇಪವನ್ನು ವ್ಯಕ್ತಪಡಿಸಿದ್ದಾರೆ. ಈ ಇಬ್ಬರು ಸದಸ್ಯರು ಭಿನ್ನಮತದ ಕಾರಣದಿಂದ ಸಮಿತಿಯ ಅನೇಕ ಸಭೆಗಳಿಗೆ ಗೈರು ಹಾಜರಾಗಿದ್ದಾರೆ.

ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಬಿಎಸ್ ಭಲ್ಲಾ ಅವರು ತಮ್ಮ ಆಕ್ಷೇಪದ ಟಿಪ್ಪಣಿಯಲ್ಲಿ ಕೇಂದ್ರ ಸರ್ಕಾರದ ಅಧೀನ ಅಧಿಕಾರಿಗಳಾಗಿರುವ ಇಬ್ಬರು ಸದಸ್ಯರು ಉಪಸಮಿತಿಯ ಇತರ ಸದಸ್ಯರನ್ನು ವಿಶ್ವಾಸಕ್ಕೆ ತೆಗೆದುಕೊಂಡಿಲ್ಲ. ಸಮಿತಿಯ ಅಂತಿಮ ವರದಿಯನ್ನು ಸಲ್ಲಿಸುವ ಮೊದಲು ಇತರ ಸದಸ್ಯರ ಗಮನಕ್ಕೆ ತರಲಾಗಿಲ್ಲ. ವರದಿಯು ಅತ್ಯಂತ ಉತ್ಪೇಕ್ಷೆಯಿಂದ ಕೂಡಿದ್ದು ಪಾರದರ್ಶಕತೆಯ ಕೊರತೆ ಇದೆ ಎಂದು ತನಿಖಾ ಸಮಿತಿಯ ಕಾರ್ಯವೈಖರಿ ಕುರಿತು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

“ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಒಮ್ಮತದ ಅಭಿಪ್ರಾಯಕ್ಕೆ ಬರದೇ ಇರುವುದು ಅತ್ಯಂತ ಬೇಸರ ಮತ್ತು ಅಘಾತಕಾರಿಯಾದ ವಿಷಯವಾಗಿದೆ. ಸಮಿತಿಯು ನಿಜವಾದ ಆಡಿಟ್‌ಅನ್ನು ನಡೆಸದೇ ಬಿಡುಬೀಸಾದ ತೀರ್ಮಾನಕ್ಕೆ ಬಂದಿದೆ” ಎಂದು ದೆಹಲಿ ಸರ್ಕಾರ ಸುಪ್ರೀಂ ಕೋರ್ಟ್‌ ನೇಮಿಸಿದ ಸಮಿತಿಗೆ ತನ್ನ ಆಕ್ಷೇಪವನ್ನು ತಿಳಿಸಿದೆ.

ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಆಕ್ಸಿಜನ್ ಪ್ರಕರಣಕ್ಕೆ ಪ್ರತಿಕ್ರಿಯಿಸಿದ್ದು, “ನೀವು ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ತೊಡಗಿದ್ದಾಗ ನಾನಿಲ್ಲಿ ಹಗಲೂ ರಾತ್ರಿ ಆಕ್ಸಿಜನ್ ಹೊಂದಿಸಲು ಕಷ್ಟಪಡುತ್ತಿದ್ದೆ. 2 ಕೋಟಿ ದೆಹಲಿ ನಿವಾಸಿಗಳ ಉಸಿರಿಗಾಗಿ ಹೋರಾಡಿದ್ದೇ ನನ್ನ ಅಪರಾಧ” ಎಂದು ಖಾರವಾಗಿ ಟ್ವೀಟ್ ಮಾಡಿದ್ದಾರೆ.

ಆಕ್ಸಿಜನ್ ಆಡಿಟ್ ರಿಪೋರ್ಟ್ ಎಂಬುದು ಇಲ್ಲ. ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಈ ವರದಿಗೆ ಸಹಿ ಮಾಡಿಲ್ಲ. ಬಿಜೆಪಿ ತನ್ನ ಕೇಂದ್ರ ಕಚೇರಿಯಲ್ಲಿ ತಯಾರಾದ ನಕಲಿ ರಿಪೋರ್ಟ್ ಅನ್ನು ಹಂಚುತ್ತಿದೆ ಎಂದು ದೆಹಲಿ ಉಪಮುಖ್ಯಮಂತ್ರಿ ಮನಿಶ್ ಸಿಸೋಡಿಯಾ ಬಿಜೆಪಿ ಮೇಲೆ ಆರೋಪ ಮಾಡಿದ್ದಾರೆ.

ದೆಹಲಿ ಸರ್ಕಾರ ಮತ್ತು ಕೆಂದ್ರ ಸರ್ಕಾರದ ನಡುವಿನ ರಾಜಕೀಯ ಕಿತ್ತಾಟ ಮತ್ತೊಂದು ಹಂತವನ್ನು ತಲುಪಿದ್ದು ಆಕ್ಸಿಜನ್ ವಿಚಾರದಲ್ಲಿ ಆಮ್‌ ಆದ್ಮಿ ಮತ್ತು ಬಿಜೆಪಿ ನಾಯಕರು ಕಿತ್ತಾಡುತ್ತಿದ್ದಾರೆ. ನಿನ್ನೆ ದೇಶಾದ್ಯಂತ ಸುದ್ದಿಯಾದ ಆಕ್ಸಿಜನ್ ವರದಿ ಕೂಡ ದೆಹಲಿ ಬಿಜೆಪಿ ಮೂಲಗಳಿಂದಲೇ ಹೊರ ಬಿದ್ದಿದೆ ಎಂದು ಹೇಳಲಾಗುತ್ತಿದೆ. ಕೇಂದ್ರ ಮತ್ತು ದೆಹಲಿಯ ನಡುವಿನ ಆಕ್ಸಿಜನ್ ಗಲಾಟೆ ಸದ್ಯಕ್ಕೆ ಕೊನೆಯಾಗುವ ಲಕ್ಷಣ ಕಾಣುತ್ತಿಲ್ಲ. ಸುಪ್ರೀಂ ಕೋರ್ಟ್ ವಿಚಾರಣೆಯ ಬಳಿಕವಷ್ಟೆ ಸತ್ಯಾಸತ್ಯತೆಗಳು ಹೊರ ಬೀಳಲಿದೆ.


ಇದನ್ನೂ ಓದಿ : ಆಯಿಷಾ ಸುಲ್ತಾನಾ ಹೇಳಿಕೆ ರಾಷ್ಟ್ರೀಯ ಹಿತಾಸಕ್ತಿಗೆ ವಿರುದ್ಧವಾಗಿಲ್ಲ: ಕೇರಳ ಹೈಕೋರ್ಟ್

 

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...