Homeಮುಖಪುಟಕೊಲೆ ಆರೋಪಿ ಬಾಕ್ಸರ್ ಸುಶೀಲ್ ಕುಮಾರ್ ಜೊತೆ ದೆಹಲಿ ಪೊಲೀಸರ ಸೆಲ್ಫಿ!: ವಿಚಾರಣೆಗೆ ಆದೇಶ

ಕೊಲೆ ಆರೋಪಿ ಬಾಕ್ಸರ್ ಸುಶೀಲ್ ಕುಮಾರ್ ಜೊತೆ ದೆಹಲಿ ಪೊಲೀಸರ ಸೆಲ್ಫಿ!: ವಿಚಾರಣೆಗೆ ಆದೇಶ

- Advertisement -
- Advertisement -

ಅಂತಾರಾಷ್ಟ್ರೀಯ ಖ್ಯಾತಿಯ ಬಾಕ್ಸರ್ ಸುಶೀಲ್‍ ಕುಮಾರ್ ಜೊತೆಗೆ ದೆಹಲಿ ಪೊಲೀಸರು ಫೋಟೋ-ಸೆಲ್ಫಿ ಸೆಷನ್‍ ನಡೆಸಿದ ಫೋಟೊಗಳು ವೈರಲ್‍ ಆದ ಬಳಿಕ ವಿಚಾರಣೆಗೆ ಆದೇಶ ನೀಡಲಾಗಿದೆ ಎಂದು ಇಂಡಿಯನ್‍ ಎಕ್ಸ್‍ಪ್ರೆಸ್‍ ವರದಿ ಮಾಡಿದೆ.

ಸುಶೀಲ್‍ ಕುಮಾರ್ ಕೊಲೆ ಪ್ರಕರಣವೊಂದರಲ್ಲಿ ಆರೋಪಿಯಾಗಿದ್ದು, ಆತನ ಜೊತೆಗೆ ಕರ್ತ್ಯವಲ್ಲಿದ್ದ ಪೊಲೀಸರು ಸೆಲ್ಫಿ ತೆಗೆದುಕೊಂಡಿರುವುದು ವಿವಾದಕ್ಕೆ ಕಾರಣವಾಗಿದೆ.

ಸೆಲೆಬ್ರಿಟಿ ಬಾಕ್ಸರ್ ಜೊತೆ ಫೋಟೊ-ಸೆಲ್ಫಿ ಹುಚ್ಚಿಗೆ ಬಿದ್ದ ಕರ್ತವ್ಯದಲ್ಲಿದ್ದ ಪೊಲೀಸರು, ತೆಗೆದುಕೊಂಡ ಫೋಟೊಗಳನ್ನು ತಮ್ಮ ವ್ಯಾಟ್ಸಾಪ್‍ ಗುಂಪುಗಳಲ್ಲಿ ಹಂಚಿಕೊಂಡು ಸಂಭ್ರಮಿಸಿದರು. ಇದು ಜಾಲತಾಣದಲ್ಲಿ ಭಾರಿ ಆಕ್ರೋಶಕ್ಕೆ ಕಾರಣವಾಗಿತು. ‘ಸುಶೀಲ್‍ ಅವರನ್ನು ಗಣ್ಯ ಅತಿಥಿ ಎಂಬಂತೆ’ ಹೈಲೈಟ್‍ ಮಾಡಿದ ಈ ಘಟನೆಯನ್ನು ನೂರಾರು ಜನರು ಟೀಕಿಸಿದ ನಂತರ, ಈಗ ಪೊಲೀಸ್‍ ಮುಖ್ಯಸ್ಥರು ವಿಚಾರಣೆಗೆ ಆದೇಶಿಸಿದ್ದಾರೆ.

ದೆಹಲಿ ಪೊಲೀಸರ ವಿಶೇಷ ಘಟಕ ಮತ್ತು 3ನೇ ಬೆಟಾಲಿಯನ್‍ನ ಪೊಲೀಸರು ಸುಶೀಲ್‍ ಕುಮಾರ್ ಅವರನ್ನು ಶುಕ್ರವಾರ ಬೆಳಿಗ್ಗೆ ಮಂಡೋಲಿ ಜೈಲಿನಿಂದ ತಿಹಾರ್ ಜೈಲಿಗೆ ಕರೆದೊಯ್ಯುತ್ತಿದ್ದಾಗ ಅವರೊಂದಿಗೆ ಫೋಟೊಗಳನ್ನು ತೆಗೆದುಕೊಂಡು ಸಂಭ್ರಮಿಸಿದ್ದಾರೆ. ಸೆಲ್ಫಿ ಸೆಷನ್‍ ನಡೆಸಿದ್ದಾರೆ. ನ್ಯಾಯಾಲಯವು ಸುಶೀಲ್‍ ನ್ಯಾಯಾಂಗ ಬಂಧನವನ್ನು ಜುಲೈ 9 ರವರೆಗೆ ವಿಸ್ತರಿಸಿದೆ.

ಚಂತ್ರಾಸಾಲ್‍ ಕ್ರೀಡಾಂಗಣದೊಳಗೆ ಎರಡು ಗುಂಪುಗಳ ನಡುವೆ ನಡೆದ ಘರ್ಷಣೆಯಲ್ಲಿ ಕುಸ್ತಿಪಟು ಸಾಗರ್ ಧನಕರ್ ಕೊಲೆಗೆ ಸಂಬಂಧಿಸಿದಂತೆ ಸುಶೀಲ್‍ ಅವರನ್ನು ಬಂಧಿಸಲಾಗಿದೆ.

ಡಿಜಿ (ತಿಹಾರ್ ಜೈಲ್‍) ಸಂದೀಪ್ ಗೋಯೆಲ್, “ಸುಶೀಲ್ ಅವರನ್ನು ಮಂಡೋಲಿ ಜೈಲಿನಿಂದ ತಿಹಾರ್ ಜೈಲಿಗೆ ಸ್ಥಳಾಂತರಿಸಲಾಗಿದೆ. ಸುಶೀಲ್‌ಗೆ ಸಂಭವನೀಯ ಭದ್ರತಾ ಬೆದರಿಕೆಯನ್ನು ಗಮನದಲ್ಲಿಟ್ಟುಕೊಂಡು, 3ನೇ ಬೆಟಾಲಿಯನ್‌ನ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿತ್ತು” ಎಂದಿದ್ದಾರೆ.

ಮಂಡೋಲಿ ಜೈಲಿಗೆ ತಲುಪಿದ ನಂತರ ಪೊಲೀಸರು ಆರೋಪಿಗಳ ಜೊತೆ ಚಿತ್ರಗಳನ್ನು ಕ್ಲಿಕ್ ಮಾಡಲು ಪ್ರಾರಂಭಿಸಿದರು. 3ನೇ ಬೆಟಾಲಿಯನ್‌ನ ಪೊಲೀಸ್ ಸಿಬ್ಬಂದಿಗೆ ಹೆಚ್ಚಿನ ಅಪಾಯವಿರುವ ಕೈದಿಗಳ ಚಿತ್ರಗಳನ್ನು ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ಹಂಚಿಕೊಳ್ಳಲು ತಿಳಿಸಲಾಗಿತ್ತು. ಆದರೆ, ಶುಕ್ರವಾರ, ತಮ್ಮ ಹಿರಿಯ ಅಧಿಕಾರಿಗಳೊಂದಿಗೆ ಫೋಟೋಗಳನ್ನು ಹಂಚಿಕೊಂಡರು.. ಜೊತೆಗೆ ತಮ್ಮ ಅಧಿಕೃತ ವಾಟ್ಸಾಪ್ ಗುಂಪುಗಳಲ್ಲಿ ಮತ್ತು ಅವರ ಸಂಬಂಧಿಕರೊಂದಿಗೆ ಚಿತ್ರಗಳನ್ನು ಹಂಚಿಕೊಳ್ಳಲು ಪ್ರಾರಂಭಿಸಿದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.


ಇದನ್ನೂ ಓದಿ: ಕೊಲೆ ಪ್ರಕರಣದಲ್ಲಿ ಒಲಿಂಪಿಕ್ ಪದಕ ವಿಜೇತ ಕುಸ್ತಿಪಟು ಸುಶೀಲ್ ಕುಮಾರ್ ಬಂಧನ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...