HomeUncategorizedಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಇಕ್ಕಟ್ಟಿನಲ್ಲಿ

- Advertisement -
- Advertisement -

|ನಾನು ಗೌರಿ ಡೆಸ್ಕ್|

ಚುನಾವಣಾ ಆಯೋಗದ ಮಹತ್ವದ ಹೇಳಿಕೆ: ಹೊಸ ಸರ್ಕಾರದ ರಚನೆಯ ಕುರಿತಂತೆ ದೊಡ್ಡ ಸುಳಿವು

ಹೌದು, ಈ ಚುನಾವಣೆಯ ಮಟ್ಟಿಗೆ ಇದು ಬಹಳ ಮಹತ್ವದ ಸುದ್ದಿ. ಬಹುಶಃ ಭಾರತದ ಪ್ರಜಾಪ್ರಭುತ್ವದ ಇತಿಹಾಸದಲ್ಲೇ ಇಂತಹದೊಂದು ಬೆಳವಣಿಗೆ ಈ ಹಿಂದೆ ನಡೆದಿರಲಿಕ್ಕಿಲ್ಲ ಎಂದರೆ ನಿಮಗೆ ಆಶ್ಚರ್ಯವಾಗಬಹುದು.

ಆ ಸುದ್ದಿ ಏನಿರಬಹುದು? ಇದರಿಂದ ಮುಂದಿನ ಸರ್ಕಾರದ ಮೇಲೆ ಬೀರಬಹುದಾದ ಪರಿಣಾಮವೇನು? ಈ ಸುದ್ದಿ ಮೊದಲು ಸಿಕ್ಕಿದ್ದು ಯಾರಿಗೆ? ಒಂದೊಂದಾಗಿ ನೋಡೋಣ.

ಆ ಸುದ್ದಿಯನ್ನು ಮೊದಲು ಬ್ರೇಕ್ ಮಾಡಿದ್ದು ಬೇರಾರೂ ಅಲ್ಲ. ಪ್ರಸಾರ ಭಾರತಿಯ ಅಧ್ಯಕ್ಷರಾಗಿದ್ದ ಜವಹರ್ ಸರ್ಕಾರ್ ಅವರು. ಸುಮಾರು 42 ವರ್ಷಗಳ ಕಾಲ ಐಎಎಸ್ ಅಧಿಕಾರಿಯಾಗಿದ್ದು ವಿವಿಧ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ನಿವೃತ್ತರಾದ ಸರ್ಕಾರ್ ಇದನ್ನು ಮೊದಲ ಬಾರಿಗೆ ಎಲ್ಲಿ ಬ್ರೇಕ್ ಮಾಡಿದರು ಗೊತ್ತೇ?

ಟ್ವಿಟ್ಟರ್ ನಲ್ಲಿ.

ಹೌದು ಸುದ್ದಿ ಇದೇ.

‘ಭಾರತದ ಚುನಾವಣಾ ಆಯೋಗವು ಅಧಿಕೃತವಾಗಿ ಬಿಜೆಪಿಯನ್ನು ಸೇರಿದೆ ಎಂಬುದನ್ನು ನಿರಾಕರಿಸಿ ಹೇಳಿಕೆ ನೀಡಿದೆ. ಬದಲಿಗೆ ಕೇವಲ ಬಾಹ್ಯ ಬೆಂಬಲ ಮಾತ್ರ ನೀಡುವುದಾಗಿ ಹೇಳಿದೆ’

ತಮಾಷೆಯಾಗಿ ಕಾಣುತ್ತದಲ್ಲವೇ?

ಹೌದು ತಮಾಷೆಯೇ. ಆದರೆ, ವಾಸ್ತವದಂತೆ ಕಾಣುತ್ತಿರುವ ತಮಾಷೆ ಅಥವಾ ತಮಾಷೆಯಂತೆ ಕಾಣುತ್ತಿರುವ ವಾಸ್ತವ.

ಚುನಾವಣಾ ಆಯೋಗವು ಹಿಂದೆಂದೂ ಈ ಮಟ್ಟದ ಏಕಪಕ್ಷೀಯ ನಡವಳಿಕೆಯ ಆರೋಪಕ್ಕೆ ಗುರಿಯಾಗಿರಲಿಲ್ಲವೆಂಬುದನ್ನು ಇಲ್ಲಿ ಗಮನಿಸಬೇಕು. ಹಾಗಾಗಿ ಅದನ್ನು ಲೇವಡಿ ಮಾಡುವ ಉದ್ದೇಶದಿಂದ ಈ ಹಿರಿಯ ಅಧಿಕಾರಿ ಮಾಡಿರುವ ಟ್ವೀಟ್ ವೈರಲ್ ಆಗಿದೆ. ಇದನ್ನು ಬರೆಯುವ ಹೊತ್ತಿಗೆ ಮೇಲಿನ ಪೋಸ್ಟ್ 5300 ರೀಟ್ವೀಟ್ ಆಗಿದ್ದು 19,500 ಜನ ಲೈಕ್ ಮಾಡಿದ್ದಾರೆ.

ಇದನ್ನೂ ಓದಿ: ಚುನಾವಣಾ ಆಯೋಗದ ಪಕ್ಷಪಾತ

ಬಿಜೆಪಿ ತನ್ನ ಬಗ್ಗೆ ನಾಚಿಕೆಪಟ್ಟುಕೊಳ್ಳಬೇಕಾದ ಸಂಗತಿ ಇದಾಗಿದೆ.

ಆದರೆ ಇದೇ ಸಂದರ್ಭದಲ್ಲಿ ಇನ್ನೊಂದು ಸಂಗತಿಯನ್ನೂ ಗಮನದಲ್ಲಿರಿಸಿಕೊಳ್ಳಬೇಕಿದೆ. ಟಿ.ಎನ್.ಶೇಷನ್ ಅವರ ನಂತರ ಚುನಾವಣಾ ಆಯೋಗದ ಆಯುಕ್ತರಾಗಿದ್ದ ಎಂ.ಎಸ್.ಗಿಲ್ ಅವರನ್ನು ಕಾಂಗ್ರೆಸ್ ಪಕ್ಷವು ರಾಜ್ಯಸಭಾ ಸದಸ್ಯರನ್ನಾಗಿಸಿದ್ದಲ್ಲದೇ ಮನಮೋಹನ ಸಿಂಗ್ ಅವರ ಸರ್ಕಾರದಲ್ಲಿ ಮಂತ್ರಿಯೂ ಆಗಿಸಿತ್ತು.

ಎಂ.ಎಸ್.ಗಿಲ್

ಹಾಗೆ ನೋಡಿದರೆ ಅದೂ ಸಹಾ ಅಂತಹ ಒಳ್ಳೆಯ ಸಂಪ್ರದಾಯವೇನೂ ಆಗಿರಲಿಲ್ಲ.

ಒಟ್ಟಿನಲ್ಲಿ ಭಾರತದ ಚುನಾವಣಾ ಆಯೋಗವು ತಮಾಷೆಯ ವಸ್ತುವಾಗಿರುವುದಕ್ಕಿಂತ ದುರಂತ ಇನ್ನೇನಿದೆ?

ಇದನ್ನೂ ಓದಿ: ಚುನಾವಣಾ ಆಯೋಗದ ಕುರಿತು ಸ್ವಾತಂತ್ರ್ಯ ಸೇನಾನಿ ದೊರೆಸ್ವಾಮಿ ಏನು ಹೇಳುತ್ತಾರೆ?

ಅಧಿಕಾರದಲ್ಲಿರುವ ರಾಜಕೀಯ ಪಕ್ಷಗಳು ಇಂಥವನ್ನು ಮಾಡುತ್ತವಾದರೂ, ಈಗ ಅಧಿಕಾರದಲ್ಲಿರುವ ಪಕ್ಷವು ಅತ್ಯಂತ ಹೆಚ್ಚು ಸಾಂವಿಧಾನಿಕ ಸಂಸ್ಥೆಗಳನ್ನು ಹಾಳುಮಾಡಿದ  ಆರೋಪ ಹೊತ್ತಿದೆ.

ಹೀಗಾಗಿ ಸಾಮಾಜಿಕ ಜಾಲತಾಣಗಳಲ್ಲಿ ನೂರಾರು ಕಾರ್ಟೂನುಗಳು, ಕಮೆಂಟುಗಳು ಚುನಾವಣಾ ಆಯೋಗದ ಕುರಿತೂ ಬರುತ್ತಿದೆ. ಚುನಾವಣಾ ಆಯೋಗವೇ ಬಿಜೆಪಿಯ ಕಚೇರಿ ಎಂಬ ಮಾತುಗಳು ಕೇಳಿಬಂದಿದ್ದವು. ಆದರೆ ಈಗ ಸರ್ಕಾರ್ ಅವರು ಮಾಡಿರುವ ಲೇವಡಿ ಅತ್ಯಂತ ಹೆಚ್ಚು ಅಪಹಾಸ್ಯ ಮಾಡಿದ ವ್ಯಂಗ್ಯವಾಗಿದೆ. ಈಗಲಾದರೂ ಸಂಬಂಧಪಟ್ಟವರು ಎಚ್ಚೆತ್ತುಕೊಳ್ಳುತ್ತಾರೆಂದು ಆಶಿಸೋಣವೇ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

LEAVE A REPLY

Please enter your comment!
Please enter your name here

- Advertisment -

ಬಾಗಲಕೋಟೆ: ಪತಿಯಿಂದ 23 ವರ್ಷದ ಪತ್ನಿಯ ಕ್ರೂರ ಕೊಲೆ, ಪೋಷಕರಿಗೆ ವೀಡಿಯೊ ಕರೆ ಮಾಡಿ ಮಗಳ ಸಾವು-ಬದುಕಿನ ಹೋರಾಟ ತೋರಿಸಿದ ವಿಕೃತ ಪತಿ

ಬಾಗಲಕೋಟೆ: ಪತಿಯೋರ್ವ ತನ್ನ 23 ವರ್ಷದ ಪತ್ನಿಯ ಮೇಲೆ ವಿವಾಹೇತರ ಅನೈತಿಕ ಸಂಬಂಧದ ಶಂಕೆ ವ್ಯಕ್ತಪಡಿಸಿ, ಆಕೆಯ ಮೇಲೆ ಮರದ ದಿಮ್ಮಿಯಿಂದ ಕ್ರೂರವಾಗಿ ಹಲ್ಲೆ ನಡೆಸಿ, ತದನಂತರ ನೇಣಿಗೆ ಬಿಗಿದು ಅತ್ಯಂತ ಅಮಾನವೀಯವಾಗಿ...

ಕಾನೂನು-ಸುವ್ಯವಸ್ಥೆಗೆ ವಿದ್ಯಾರ್ಥಿಗಳು ಸಮಸ್ಯೆಯಾಗುತ್ತಾರೆ ಎಂದು ಪರಿಗಣಿಸಿದ್ದು ಏಕೆ: ಅಭಿಷೇಕ್ ಬ್ಯಾನರ್ಜಿ

ರಾಷ್ಟ್ರ ರಾಜಧಾನಿ ದೆಹಲಿ ಮತ್ತು ದೆಶದಾದ್ಯಂತ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ನೇತೃತ್ವದಲ್ಲಿ ನಡೆದ ಪ್ರತಿಭಟನೆಗಳ ಸಂದರ್ಭದಲ್ಲಿ ವಿದ್ಯಾರ್ಥಿಗಳ ಮೇಲೆ ನಡೆದ ಭಾರೀ ಪೊಲೀಸ್ ಬಲಪ್ರಯೋವನ್ನು ವಿಪಕ್ಷಗಳು ಇಂದು ಲೋಕಸಭೆಯಲ್ಲಿ ಖಂಡಿಸಿವೆ. ವಿದ್ಯಾರ್ಥಿಗಳ...

ಪಬ್ಲಿಕ್ ಟಿವಿ ನಿರೂಪಕ ಅರುಣ್ ಬಡಿಗೇರ್ ವಿರುದ್ದ ಮೈಸೂರಿನಲ್ಲಿ ದೂರು ದಾಖಲು

ಸಂವಿಧಾನಬದ್ಧ ಮೀಸಲಾತಿಯ ಕುರಿತು ಅತ್ಯಂತ ನಿಂದನಾತ್ಮಕ, ಅವಹೇಳನಕಾರಿ ಹಾಗೂ ಸಮಾಜದಲ್ಲಿ ದ್ವೇಷ ಪ್ರಚೋದಿಸುವ ರೀತಿಯ ಹೇಳಿಕೆ ನೀಡಿರುವ 'ಪಬ್ಲಿಕ್ ಟಿವಿ' ನಿರೂಪಕ ಅರುಣ್ ಬಡಿಗೇರ್ ವಿರುದ್ಧ ಮೈಸೂರಿನಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಪೊಲೀಸ್‌...

ಕೇರಳ: ತಪ್ಪು ಪ್ರಕರಣದಲ್ಲಿ ಪೊಲೀಸರಿಂದ ಚಿತ್ರಹಿಂಸೆ: 29 ವರ್ಷದ ಮುಸ್ಲಿಂ ಯುವಕ ಸಾವು: ಕುಟುಂಬಕ್ಕಿದ್ದ ಒಂದೇ ಆಧಾರ ಕಳೆದುಕೊಂಡ ಪೋಷಕರು

ತಪ್ಪು ಗ್ರಹಿಕೆಯಿಂದ ಪೊಲೀಸ್ ಕಸ್ಟಡಿಗೆ ಪಡೆದ 29 ವರ್ಷದ ಮುಸ್ಲಿಂ ಯುವಕನೋರ್ವ, ಪೊಲೀಸರ ಕಠೋರ ಕಸ್ಟಡಿ ಚಿತ್ರಹಿಂಸೆಯಿಂದಾಗಿ ಪಕ್ಕೆಲುಬು ಮುರಿತಕ್ಕೊಳಗಾಗಿ, ಶ್ವಾಸಕೋಶದ ಸೋಂಕು ತೀವ್ರಗೊಂಡು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಅಮಾನವೀಯ ಹಾಗೂ ಆಘಾತಕಾರಿ...

ಮಾಧ್ಯಮ ತನಿಖಾ ವರದಿಗೆ ಹೆದರಿ ₹ 99 ಲಕ್ಷ ಸಬ್ಸಿಡಿ ವಾಪಸ್ ಮಾಡಿದ ಕೇಂದ್ರ BJP ಸಚಿವ

ತಮ್ಮದೇ ಸಚಿವಾಲಯದ ಯೋಜನೆಯಡಿ ಬರೋಬ್ಬರಿ 99 ಲಕ್ಷ ರೂಪಾಯಿ ಸರ್ಕಾರಿ ಸಬ್ಸಿಡಿ ಪಡೆದು ಸಾರ್ವಜನಿಕರ ಆಕ್ರೋಶಕ್ಕೆ ಗುರಿಯಾಗಿದ್ದ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ರಾಜ್ಯ ಸಚಿವ ಭಾಗೀರಥ್ ಚೌಧರಿ, ಕೊನೆಗೂ ಆ...

ಕಾಮನ್‌ವೆಲ್ತ್ ಕ್ರೀಡಾಕೂಟ: ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಶರ್ಮಿಳಾ ಧನ್ಖರ್

ಎರಡು ವರ್ಷವಿದ್ದಾಗ ಪೋಲಿಯೊದಿಂದ ಅಂಗವಿಕಲಳಾಗಿ, ಬಾಲ್ಯದಲ್ಲಿ ದೌರ್ಜನ್ಯಕ್ಕೊಳಗಾದ, ವಿವಾಹದ ಆಘಾತದಿಂದ ಬದುಕುಳಿದ ಮಹಿಳೆ ಶರ್ಮಿಳಾ ಧನ್ಖರ್, ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಭಾರತದ ಮೊದಲ ಪ್ಯಾರಾ-ಅಥ್ಲೀಟ್ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಗ್ಲ್ಯಾಸ್ಗೋದಲ್ಲಿ...

ಬಿಹಾರ: ವಿದ್ಯಾರ್ಥಿಗಳ ವಿರುದ್ಧ ಎಕೆ-47 ರೈಫಲ್ ಬಳಕೆ: ಗುಂಡು ಹಾರಿಸಲು ಆದೇಶಿಸಿದವರ ವಿರುದ್ಧ ತನಿಖೆಗೆ ಮನೋಜ್ ಝಾ ಆಗ್ರಹ; ಸುಪ್ರೀಂ ಮೆಟ್ಟಿಲೇರಿದ ಪ್ರಕರಣ

ನೀಟ್ (NEET) ಪ್ರಶ್ನೆ ಪತ್ರಿಕೆ ಸೋರಿಕೆ ಆರೋಪವನ್ನು ಖಂಡಿಸಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ, ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಎಕೆ-47 ರೈಫಲ್‌ನಿಂದ ಗಾಳಿಯಲ್ಲಿ ಗುಂಡು ಹಾರಿಸುತ್ತಿದ್ದ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್...

ಧರ್ಮೇಂದ್ರ ಪ್ರಧಾನ್ ಖಾತೆ ಬದಲಾವಣೆ ಪ್ರಸ್ತಾವನೆ ತಿರಸ್ಕರಿಸಿದ್ದ ಸಿಜೆಪಿ: ವರದಿ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಜುಲೈ 25 ರಂದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಮ್ಮ ರಾಜೀನಾಮೆ ಸಲ್ಲಿಸಿದ್ದಾರೆ. ಆದರೆ, ಅದಕ್ಕೂ ಮೊದಲು ಕೇಂದ್ರ ಸರ್ಕಾರವು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ)...

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...