Homeಮುಖಪುಟ‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ - ಚಿರಾಗ್‌ ಪಾಸ್ವಾನ್‌

‘ನನ್ನ ತಂದೆ ಮತ್ತು ಲಾಲು ಯಾದವ್‌ ಸ್ನೇಹಿತರು; ತೇಜಸ್ವಿ ನನ್ನ ಸಹೋದರ’ – ಚಿರಾಗ್‌ ಪಾಸ್ವಾನ್‌

ಹೊಸ ತಿರುವಿನತ್ತ ಬಿಹಾರದ ರಾಜ್ಯ ರಾಜಕೀಯ

- Advertisement -
- Advertisement -

ಬಿಹಾರದಲ್ಲಿ ಹೊಸ ರಾಜಕೀಯ ಅಲೆ ಬೀಸುತ್ತಿದೆ. ರಾಜ್ಯದ ಮಾಜಿ ಮುಖ್ಯಮಂತ್ರಿ ಲಾಲು ಪ್ರಸಾದ್‌ ಯಾದವ್ ಅವರ ಮಗ ತೇಜಸ್ವಿ ಯಾದವ್ ರಾಜ್ಯದ ಹೊಸ ಶಕ್ತಿಯಾಗಿ ಬೆಳೆಯುತ್ತಿದ್ದಾರೆ. ಒಕ್ಕೂಟ ಸರ್ಕಾರದ ಮಾಜಿ ಮಂತ್ರಿ ದಿವಂಗತ ರಾಮ ವಿಲಾಸ್ ಪಾಸ್ವಾನ್ ಅವರ ಪಕ್ಷ ಎಲ್‌ಜೆಪಿ ಒಡೆದು ಹೋಗಿದೆ. ಈ ನಡುವೆ ಅವರ ಮಗ ಚಿರಾಗ್‌ ಪಾಸ್ವಾನ್ ಅವರನ್ನು ತೇಜಸ್ವಿ ಯಾದವ್ ಅವರು ಮೈತ್ರಿಕೂಟಕ್ಕೆ ಸೇರಲು ಇತ್ತಿಚೆಗಷ್ಟೆ ಆಹ್ವಾನಿಸಿದ್ದರು. ಇದಾಗಿ ದಿನಗಳ ಅಂತದರಲ್ಲಿ, “ತೇಜಸ್ವಿ ಯಾದವ್‌‌ ನನ್ನ ಕಿರಿಯ ಸಹೋದರ ಇದ್ದಂತೆ, ರಾಜ್ಯದಲ್ಲಿ ಚುನಾವಣೆ ನಡೆಯುವ ಸಂದರ್ಭ ಮೈತ್ರಿಯ ಬಗ್ಗೆ ಪಕ್ಷವು ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಚಿರಾಗ್‌ ಪಾಸ್ವಾನ್ ಹೇಳಿದ್ದಾರೆ.

ಶನಿವಾರ ಮಾಧ್ಯಮದ ಜೊತೆಗೆ ಮಾತನಾಡಿದ ಎಲ್‌ಜೆಪಿ ನಾಯಕ ಚಿರಾಗ್‌ ಪಾಸ್ವಾನ್‌‌, “ನನ್ನ ತಂದೆ ರಾಮ ವಿಲಾಸ್ ಪಾಸ್ವಾನ್‌ ಮತ್ತು ತೇಜಸ್ವಿ ಯಾದವ್‌ ಅವರ ತಂದೆ ಲಾಲು ಪ್ರಸಾದ್ ಯಾದವ್‌‌‌ ಯಾವಾಗಲೂ ಆಪ್ತ ಸ್ನೇಹಿತರಾಗಿದ್ದರು. ತೇಜಸ್ವಿ ಮತ್ತು ನಾನು ಬಾಲ್ಯದಿಂದಲೂ ಒಬ್ಬರಿಗೊಬ್ಬರು ತಿಳಿದಿದ್ದು, ನಮ್ಮಿಬ್ಬರ ನಡುವೆ ನಾವು ನಿಕಟ ಸ್ನೇಹವಿದೆ. ಅವರು ನನ್ನ ಕಿರಿಯ ಸಹೋದರ ಇದ್ದಂತೆ. ಬಿಹಾರದಲ್ಲಿ ಚುನಾವಣಾ ಸಮಯ ಬಂದಾಗ ಪಕ್ಷವು ಮೈತ್ರಿಕೂಟದ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುತ್ತದೆ” ಎಂದು ಹೇಳಿದ್ದಾರೆ.

ಇದನ್ನೂ ಓದಿ: ‘ಆರೆಸ್ಸೆಸ್ ಅಥವಾ ಸಂವಿಧಾನ’ – ಚಿರಾಗ್‌ ಪಾಸ್ವಾನ್‌ಗೆ ಆಯ್ಕೆ ಮುಂದಿಟ್ಟ ತೇಜಸ್ವಿ ಯಾದವ್‌‌!

“ಸಿಎಎ, ಎನ್‌ಆರ್‌ಸಿಯ ವಿಷಯಗಳು ಸೇರಿದಂತೆ ನಾನು ಪ್ರತಿ ಹಂತದಲ್ಲೂ ಬಿಜೆಪಿಯೊಂದಿಗೆ ನಿಂತಿದ್ದೇನೆ. ಆದರೆ, ನಿತೀಶ್‌ ಕುಮಾರ್‌‌ ಇದನ್ನು ಒಪ್ಪಲಿಲ್ಲ. ಮುಂದಿನ ದಿನಗಳಲ್ಲಿ ನನ್ನನ್ನು ಬೆಂಬಲಿಸುತ್ತಾರೆಯೆ ಅಥವಾ ನಿತೀಶ್ ಕುಮಾರ್ ಅವರನ್ನು ಬೆಂಬಲಿಸುತ್ತಾರೆಯೇ ಎಂದು ಬಿಜೆಪಿಯೆ ನಿರ್ಧರಿಸಬೇಕಾಗಿದೆ” ಎಂದು ಅವರು ಹೇಳಿದ್ದಾರೆ.

ಚಿರಾಗ್‌ ಪಾಸ್ವಾನ್‌‌ ತನ್ನ ತಂದೆಯ ಜನ್ಮ ದಿನವಾದ ಜುಲೈ 5 ರಿಂದ ಹಾಜಿಪುರದಿಂದ ಬಿಹಾರ ಯಾತ್ರೆ ಪ್ರಾರಂಭಿಸುವ ಮೂಲಕ ಕಳೆದು ಹೋದ ರಾಜಕೀಯ ನೆಲೆಯನ್ನು ಮರಳಿ ಪಡೆಯಲು ಪ್ರಯತ್ನಿಸುತ್ತಿದ್ದಾರೆ. ಹಾಜಿಪುರ ಲೋಕಸಭಾ ಕ್ಷೇತ್ರವನ್ನು ಚಿರಾಗ್‌ ಪಾಸ್ವಾನ್ ಅವರ ಚಿಕ್ಕಪ್ಪ ಪಶುಪತಿ ಕುಮಾರ್‌ ಪರಾಸ್‌ ಅವರು ಈಗ ಪ್ರತಿನಿಧಿಸುತ್ತಿದ್ದಾರೆ. ಅವರು ಚಿರಾಗ್‌ ವಿರುದ್ಧ ಬಂಡಾಯವೆದ್ದು ಪಕ್ಷದೊಳಗೆ ಬೇರೆಯೆ ಬಣವನ್ನು ಕಟ್ಟಿದ್ದಾರೆ. ಇದು ಬಿಹಾರ ರಾಜಕೀಯ ವಲಯದಲ್ಲಿ ಹೊಸ ಅಲೆಯನ್ನು ಎಬ್ಬಿಸಿದೆ.

ಎಲ್‌ಜೆಪಿಯ ನಡುವಿನಲ್ಲಿ ಉಂಟಾದ ಒಡಕಿನ ಹಿನ್ನಲೆಯಲ್ಲಿ ಚಿರಾಗ್‌ ಪಾಸ್ವಾನ್‌ಗೆ ತಮ್ಮ ಮೈತ್ರಿಕೂಟವನ್ನು ಸೇರಲು ತೇಜಸ್ವಿ ಯಾದವ್‌ ಆಹ್ವಾನಿಸಿದ್ದರು. ಜೊತೆಗೆ ರಾಮ್ ವಿಲಾಸ್ ಪಾಸ್ವಾನ್ ಅವರು ಲೋಕಸಭಾ ಚುನಾವಣೆಯಲ್ಲಿ ಸೋತಾಗ, ಅವರು ರಾಜ್ಯಸಭಾ ಸದಸ್ಯರಾಗಿ ಆಯ್ಕೆಯಾಗಲು ತಮ್ಮ ತಂದೆ ಲಾಲು ಪ್ರಸಾದ್ ಯಾದವ್‌ ಸಹಾಯ ಮಾಡಿದ್ದರು ಎಂದು ನೆನಪಿಸಿದ್ದರು.

ಇದನ್ನೂ ಓದಿ: ‘ಸರ್ಕಾರಕ್ಕೆ ಯಾವುದೇ ಜವಾಬ್ದಾರಿಯ ಪ್ರಜ್ಞೆ ಇಲ್ಲ’ – ತೇಜಸ್ವಿ ಯಾದವ್‌ ಆಕ್ರೋಶ

“ಚಿರಾಗ್‌‌ ಮುಂದೆ ಎರಡು ಆಯ್ಕೆಗಳಿವೆ ಒಂದು ಆರೆಸ್ಸೆಸ್‌ ಮುಖಂಡ ಎಂ.ಎಸ್. ಗೋಲ್ವಾಲ್ಕರ್ ಬರೆದ ಬಂಚ್‌ ಆಫ್‌ ಥಾಟ್‌, ಇನ್ನೊಂದು ಬಾಬಾಸಾಹೇಬ್‌ ಅಂಬೇಡ್ಕರ್‌ ಅವರು ಬರೆದ ಸಂವಿಧಾನ. ಇದರಲ್ಲಿ ಯಾವುದನ್ನು ಆಯ್ಕೆ ಮಾಡಿಕೊಳ್ಳುತ್ತಾರೆ ಎಂದು ಅವರು ನಿರ್ಧರಿಸಬೇಕು” ಎಂದು ತೇಜಸ್ವಿ ಯಾದವ್ ಹೇಳಿದ್ದರು.

ಕಳೆದ ಬಿಹಾರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿಶ್‌ ಕುಮಾರ್‌ ವಿರುದ್ದ ದಂಗೆ ಎದ್ದಿದ್ದ ಚಿರಾಗ್‌ ಪಾಸ್ವಾನ್‌ ಅವರ ಎಲ್‌ಜೆಪಿ ಪಕ್ಷವು ಬಿಜೆಪಿ ನೇತೃತ್ವದ ಎನ್‌ಡಿಎ ಒಕ್ಕೂಟದಿಂದ ಹೊರ ನಡೆದಿತ್ತು. ನಂತರ ವಿಧಾನಸಭಾ ಚುನಾವಣೆಯಲ್ಲಿ ಸ್ವತಂತ್ರವಾಗಿ ಸ್ಪರ್ಧಿಸಿದ್ದ ಎಲ್‌ಜೆಪಿ, ನಿತೀಶ್‌ ಕುಮಾರ್ ನೇತೃತ್ವದ ಜೆಡಿಯುಗೆ ತೀವ್ರ ಹೊಡೆತ ನೀಡಿತ್ತು.

ಇದನ್ನೂ ಓದಿ: ‘ನಾಝಿ ಆಡಳಿತ ಬೇಟೆಯಾಡುತ್ತಿದೆ’ – ಕೇಂದ್ರದ ವಿರುದ್ದ ತೇಜಸ್ವಿ ಯಾದವ್‌ ತೀವ್ರ ವಾಗ್ದಾಳಿ

ಆದರೆ ಇತ್ತೀಚೆಗೆ ಎಲ್‌ಜೆಪಿ ಒಳಗಿನ ಆಂತರಿಕ ದಂಗೆಯಿಂದ ಪಕ್ಷ ಒಡೆದು ವಿಭಜನೆಯಾಗಿದೆ. ಇದಕ್ಕೆ ನಿತೀಶ್‌ ಕುಮಾರ್‌ ಕಾರಣವಾಗಿದ್ದು, ಅವರು ವಿಧಾನಸಭಾ ಚುನಾವಣೆಯ ಸೇಡು ತೀರಿಸಿಕೊಳ್ಳುತ್ತಿದ್ದಾರೆ ಎಂದು ಚಿರಾಗ್‌ ಪಾಸ್ವಾನ್ ಅವರ ಆಪ್ತರು ಆರೋಪಿಸಿದ್ದರು.

ಅಲ್ಲದೆ, ಎಲ್‌ಜೆಪಿಯಲ್ಲಾಗಿರುವ ಎಲ್ಲಾ ಬೆಳವಣಿಗೆಗಳಿಗೆ, ಮುಖ್ಯವಾಗಿ ಎಲ್‌ಜೆಪಿ ವಿಭಜನೆಯ ಹಿಂದೆ ಬಿಹಾರ ಸಿಎಂ ನಿತೀಶ್‌ ಕುಮಾರ್‌ ಮಾಸ್ಟರ್ ಮೈಂಡ್‌ ಕೆಲಸ ಮಾಡಿದೆ. ಈ ಹಿಂದೆ 2005 ಮತ್ತು 2010 ರಲ್ಲಿ ಎಲ್‌ಜೆಪಿ ಇದೇ ರೀತಿ ವಿಭಜನೆಯಾಗಲು ನಿತೀಶ್ ಕುಮಾರ್ ಅವರ ಜೆಡಿಯು ಅನುಕೂಲ ಮಾಡಿಕೊಟ್ಟಿತ್ತು ಎಂಬುದನ್ನು ಚಿರಾಗ್‌ ಪಾಸ್ವಾನ್‌ ಅವರಿಗೆ ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ನೆನಪಿಸಿದ್ದರು.

ಈ ನಡುವೆ, ಚಿರಾಗ್ ಪಾಸ್ವಾನ್ ಅವರ ತಂದೆ, ಮಾಜಿ ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ಜನ್ಮದಿನವಾದ ಜುಲೈ 5 ರಂದು ಗೌರವ ಸಲ್ಲಿಸಲು ತೇಜಸ್ವಿ ಯಾದವ್ ಯೋಜಿಸುತ್ತಿದ್ದಾರೆ. ಅದೇ ದಿನ ತೇಜಸ್ವಿ ಯಾದವ್ ಅವರ ಪಕ್ಷವಾದ ಆರ್‌ಜೆಡಿಯ ಸಂಸ್ಥಾಪನಾ ದಿನವೂ ಆಗಿದ್ದು, ಅಂದಿನ ಕಾರ್ಯಕ್ರಮದಲ್ಲಿ ಕಳೆದ ವರ್ಷ ಅಕ್ಟೋಬರ್‌ನಲ್ಲಿ ನಿಧನರಾದ ರಾಮ್ ವಿಲಾಸ್ ಪಾಸ್ವಾನ್ ಅವರಿಗೆ ಗೌರವ ಸಲ್ಲಿಸಲು ಮುಂದಾಗಿದ್ದಾರೆ.

ಇದನ್ನೂ ಓದಿ: ‘ನಾನು ತೇಜಸ್ವಿ ಯಾದವ್ ಮಾತಾಡುತ್ತಿದ್ದೇನೆ’: ಡಿಸಿಯೊಂದಿಗಿನ ಖಡಕ್ ಸಂಭಾಷಣೆ ವೈರಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...