Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...

TMC ತೊರೆದು BJP ಸೇರಿದ ಮಾಜಿ ಸಂಸದರಿಗೆ ಬಿಜೆಪಿಯಿಂದ ರಾಜ್ಯಸಭಾ ಟಿಕೆಟ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ಪಕ್ಷದ ರಾಜ್ಯಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ ಕೆಲವೇ ವಾರಗಳಲ್ಲಿ, ಆ ಮೂವರು ಮಾಜಿ ಸಂಸದರು ಈಗ ಬೇರೆ ಬಣ್ಣದ (BJP) ಶಾಲು ಧರಿಸಿ ಮತ್ತೆ...

ಪಶ್ಚಿಮ ಬಂಗಾಳ: ಟಿಎಂಸಿ ಖಾತೆ ಫ್ರೀಜ್ ಮಾಡಿದ್ದ ಪೊಲೀಸರಿಗೆ ಕಲ್ಕತ್ತಾ ಹೈಕೋರ್ಟ್ ತರಾಟೆ!

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಹಲವು ಬ್ಯಾಂಕ್ ಖಾತೆಗಳನ್ನು ಜಾರಿ ನಿರ್ದೇಶನಾಲಯ (ಇಡಿ) ಮುಟ್ಟುಗೋಲು ಹಾಕಿಕೊಂಡ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು ಮುಟ್ಟುಗೋಲು ಹಾಕಿಕೊಂಡಿದ್ದ ಪಕ್ಷದ ಮೂರು ಬ್ಯಾಂಕ್...

ಬಂಗಾಳದ ಬಿಸಿಯೂಟ ಇಸ್ಕಾನ್‌ಗೆ ಹಸ್ತಾಂತರವಿಲ್ಲ: ಸರ್ಕಾರದ ಸ್ಪಷ್ಟನೆ, ಕಲ್ಕತ್ತಾ ಹೈಕೋರ್ಟ್‌ನಿಂದ ಅಫಿಡವಿಟ್‌ಗೆ ನಿರ್ದೇಶನ 

ಕೋಲ್ಕತ್ತಾ: ರಾಜ್ಯದ ಶಾಲೆಗಳಲ್ಲಿ ಜಾರಿಯಲ್ಲಿರುವ ಪಿಎಂ-ಪೋಷಣ್ (ಮಧ್ಯಾಹ್ನದ ಬಿಸಿಯೂಟ) ಯೋಜನೆಯ ನಿರ್ವಹಣೆಯನ್ನು ಇಸ್ಕಾನ್ ಸಂಸ್ಥೆಗೆ ಹಸ್ತಾಂತರಿಸುವ ಯಾವುದೇ ಅನುಮೋದಿತ ಪ್ರಸ್ತಾಪ ಸರ್ಕಾರಕ್ಕಿಲ್ಲ ಎಂದು ಪಶ್ಚಿಮ ಬಂಗಾಳ ಸರ್ಕಾರ ಸ್ಪಷ್ಟಪಡಿಸಿದೆ. ಈ ಕುರಿತು ಅಫಿಡವಿಟ್...

ಗಾಜಿಯಾಬಾದ್‌| ಗೋಮಾಂಸ ಸಾಗಾಣಿಕೆ ಆರೋಪ; ವ್ಯಕ್ತಿ ಮೇಲೆ ಗುಂಪಿನಿಂದ ಹಲ್ಲೆ

ಉತ್ತರ ಪ್ರದೇಶದ ಗಾಜಿಯಾಬಾದ್‌ ನಗರದ ಶಾಸ್ತ್ರಿ ನಗರದಲ್ಲಿ ಗೋಮಾಂಸ ಸಾಗಿಸುತ್ತಿದ್ದಾರೆ ಎಂಬ ಅನುಮಾನದ ಮೇಲೆ ಸಲೀಂ ಎಂದು ಗುರುತಿಸಲಾದ ವ್ಯಕ್ತಿಯ ಮೇಲೆ ನಕಲಿ ಗೋರಕ್ಷಕರ ಗುಂಪೊಂದು ಹಲ್ಲೆ ನಡೆಸಿದೆ. ಸಾಮಾಜಿಕ ಮಾಧ್ಯಮದಲ್ಲಿ ವೀಡಿಯೊ...