Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...

ತಮಿಳುನಾಡಿನಲ್ಲಿ ಮೊದಲ ಬಾರಿಗೆ ಸ್ಪರ್ಧಿಸಿ ಗೆದ್ದ 60 ನೂತನ ಶಾಸಕರು

ತಮಿಳುನಾಡು ರಾಜಕಾರಣ ಎಂದರೆ ಅದು ಐದು ದಶಕಗಳಿಂದ ಕೇವಲ ಡಿಎಂಕೆ ಮತ್ತು ಎಐಎಡಿಎಂಕೆ ನಡುವಿನ ಜಿದ್ದಾಜಿದ್ದಿ. ಆದರೆ 2026ರ ಫಲಿತಾಂಶವು ಈ "ದ್ವಿಪಕ್ಷೀಯ" ಸಂಪ್ರದಾಯವನ್ನು ಮುರಿದುಹಾಕಿದೆ. ನಟ ವಿಜಯ್ ನೇತೃತ್ವದ ತಮಿಳಗ ವೆಟ್ರಿ...

‘ಪ್ರಜಾತಂತ್ರಕ್ಕೆ ಬೆದರಿಕೆ ಒಡ್ಡುತ್ತಿರುವ ಎಸ್ಐಆರ್’: ಬಿಜೆಪಿಯ (ಕು)ತಂತ್ರ ಫಲಿಸಿದರೇ ಭಾರತವೇ ಇರುವುದಿಲ್ಲ..!

ಪಂಚರಾಜ್ಯ ಚುನಾವಣಾ ಫಲಿತಾಂಶಗಳು 2026 ಮೇ 4ರಂದು ಹೊರಬಿದ್ದಿದ್ದು, ಭಾರತೀಯ ಜನತಾ ಪಾರ್ಟಿ ಪಶ್ಚಿಮ ಬಂಗಾಳವನ್ನು ತನ್ನ ತೆಕ್ಕೆಗೆ ತೆಗೆದುಕೊಂಡಿದೆ. ಆದರೆ ಈ ಗೆಲುವು ಕೇವಲ ಜನರ ಆದರ್ಶವಲ್ಲ, ಬದಲಿಗೆ ಚುನಾವಣಾ ವ್ಯವಸ್ಥೆಯೇ...