Homeಕರೋನಾ ತಲ್ಲಣಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

ಸುರಿವ ಮಳೆ, ಸೋರುವ ಟಾರ್ಪಾಲ್‍ಗಳ ನಡುವೆ ಹೈರಾಣಾದ ಬದುಕು: ಭೀಕರ ಸಂಕಷ್ಟದಲ್ಲಿ ಕೊಡಗಿನ ಆದಿವಾಸಿಗಳು

- Advertisement -
- Advertisement -

ಈಗ ಕೊಡಗಿನಲ್ಲಿ ಎಡೆಬಿಡದೇ ಮಳೆ ಸುರಿಯಲು ಶುರುವಾಗಿದೆ. ವಿರಾಜಪೇಟೆ ತಾಲೂಕಿನ ಬಾಳೆಗೋಡುವಿನ ಸರ್ಕಾರಿ ಭೂಮಿಯಲ್ಲಿ ಟಾರ್ಪಾಲ್‍ ಟೆಂಟ್‍ ಹಾಕಿಕೊಂಡು ಬದುಕುತ್ತಿರುವ 25ಕ್ಕೂ ಹೆಚ್ಚು ಆದಿವಾಸಿಗಳ ಕುಟುಂಬಗಳ 150ಕ್ಕೂ ಹೆಚ್ಚು ಸದಸ್ಯರಿಗೆ ಈಗ ಬದುಕೇ ದುರ್ಬರವಾಗಿದೆ.

ಕಳೆದ ವರ್ಷದಿಂದ ಲಾಕ್‍ಡೌನ್‍ ಅವರ ದುಡಿಮೆ ಕಿತ್ತುಕೊಂಡಿದೆ. ಈಗ ಹಸಿವಿನ ಜೊತೆಗೆ, ಮುಗಿಲಿಂದಲೂ, ನೆಲದಿಂದಲೂ ನೀರು ಅವರ ಟೆಂಟ್‍ಗಳನ್ನು ಪ್ರವೇಶಿಸಲು ಆರಂಭಿಸಿದ ಮೇಲೆ ತಮ್ಮ ಮಕ್ಕಳನ್ನು ತಬ್ಬಿಕೊಂಡು ಚಿಂತಾಕ್ರಾಂತರಾಗಿದ್ದಾರೆ.

ಇದ್ದಬದ್ದ ದಿನಸಿಯಲ್ಲಿ ಅಡುಗೆ ಮಾಡಿಕೊಳ್ಳಲೂ ಒದ್ದೆ ನೆಲ ಬಿಡುತ್ತಿಲ್ಲ. ಇವರಿಗೆ ಕನಿಷ್ಠ ಆಹಾರ, ವಸತಿ ಸೌಲಭ್ಯ ಒದಗಿಸಬೇಕಿದ್ದ ಜಿಲ್ಲಾಡಳಿತ, ತಾಲೂಕು ಆಡಳಿತಗಳು ಸರ್ಕಾರಗಳಷ್ಟೇ ಜಡ್ಡುಗಟ್ಟಿ ಹೋಗಿ ಮಾನವೀಯತೆ ಮತ್ತು ಅದಕ್ಕೂ ಮುಖ್ಯವಾಗಿ ತಮ್ಮ ಕರ್ತವ್ಯ ಮರೆತಿವೆ. ಸಂವಿಧಾನ ಒದಗಿಸಿದ ಬದುಕಿನ ಹಕ್ಕನ್ನೇ ಕಿತ್ತುಕೊಳ್ಳುತ್ತಿವೆ.

‘ಮಳೆಯ ನಡುವೆಯೇ ಮೂರು ಪುಟ್ಟ ಮಕ್ಕಳನ್ನು ತಬ್ಬಿಕೊಂಡ ತಾಯಿಯೊಬ್ಬರು, ‘ಸ್ವಲ್ಪ ದಿನದ ಹಿಂದೆ ಬಂದ ಪೊಲೀಸರು, ಆಹಾರದ ವ್ಯವಸ್ಥೆ ಮಾಡಲು ಪಂಚಾಯತಿಗಳಿಗೆ ಹೇಳುವುದಾಗಿ ತಿಳಿಸಿ ಮಾಯವಾದರು. ರೇಷನ್ನೂ ಇಲ್ಲ, ಮಲಗಲು ಜಾಗವೂ ಇಲ್ಲ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಅವರ ಪಕ್ಕದಲ್ಲಿ ನಿಂತಿದ್ದ ಯುವತಿ, ‘ಇಲ್ಲಿ ನಮ್ಮ ಟೆಂಟ್‍ಗಳ ಪಕ್ಕದ ಜಾಗವನ್ನು ತ್ಯಾಜ್ಯ ಗುಡ್ಡೆ ಹಾಕಲು ಬಳಸಿಕೊಳ್ಳುತ್ತಿದ್ದಾರೆ. ಅಂದರೆ, ಹೇಗಾದರೂ ಇಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸುವ ಯತ್ನ ನಡೆದಿದೆ’ ಎಂದರು.

ಭೂ-ವಸತಿ ರಹಿತರ ಸಮಸ್ಯೆ

‘ಕೊಡಗು ಜಿಲ್ಲೆಯ ಮಡಿಕೇರಿ, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕುಗಳಲ್ಲಿ ಆದಿವಾಸಿಗಳ ಸುಮಾರು 200 ಹಾಡಿಗಳಿವೆ.. ಭೂಮಿ-ವಸತಿ ಇಲ್ಲದ ಈ ಕುಟುಂಬಗಳು ಹೇಗೋ ಗುಡಿಸಲು ಹಾಕಿಕೊಂಡು ಬದುಕಲು ಹೊರಟರೆ, ಭೂಕುಳಗಳ ಬೆಂಬಲ ಹೊಂದಿರುವ ರಾಜಕಾರಣಿಗಳು, ಅಧಿಕಾರಿಗಳು ಅದಕ್ಕೂ ಬಿಡುತ್ತಿಲ್ಲ’ ಎನ್ನುತ್ತಾರೆ ಭೂಮಿ ಮತ್ತು ವಸತಿ ರಹಿತರ ಹೋರಾಟ ವೇದಿಕೆಯ ರಾಜ್ಯ ಸಮಿತಿ ಸದಸ್ಯ ಮತ್ತು ಕೊಡಗು ಜಿಲ್ಲಾ ಕಾರ್ಯದರ್ಶಿ ಹೇಮಂತ್.

“ಬಾಳೆಗೋಡುವಿಮಲ್ಲಿ ಈಗಿರುವ ಕುಟುಂಬಗಳ ಹಿಂದಿನ ತಲೆಮಾರುಗಳನ್ನು ನಾಗರಹೊಳೆ ಕಾಡಿನಿಂದ ಒಕ್ಕಲೆಬ್ಬಿಸಿ ಅವರನ್ನು ಅತಂತ್ರ ಮಾಡಲಾಗಿತು. ಕಾಡಿನಲ್ಲಿನ ಖಾಲಿ ಜಾಗದಲ್ಲಿ ಅಲ್ಪಸ್ವಲ್ಪ ಉಳುಮೆ ಮಾಡಿಕೊಂಡು ಬದುಕುತ್ತಿದ್ದ ಈ ಕುಟುಂಬಗಳನ್ನು ಅತಂತ್ರ ಮಾಡಲಾಗಿತು. ಇವರೆಲ್ಲ ಕಾಫಿ ತೋಟಗಳಲ್ಲಿ ಕೆಲಸ ಮಾಡುತ್ತ ಅತಂತ್ರವಾಗಿ ಬದುಕುತ್ತ ಬಂದರು’ ಎನ್ನುತ್ತಾರೆ ಹೇಮಂತ್‍.

‘ವನ್ಯಜೀವಿ ಕಾಯ್ದೆಗಳ ಹೆಸರಲ್ಲಿ ಪ್ರಭುತ್ವಗಳು ಈ ಕ್ರೌರ್ಯ ಮೆರೆಯುತ್ತ ಬಂದಿವೆ. ಕಾಡಿನ ಮೂಲನಿವಾಸಿಗಳನ್ನು ಅವರ ನೆಲದಿಂದ ಒಕ್ಕಲೆಬ್ಬಿಸುತ್ತ ಬಂದಿವೆ’ ಎನ್ನುವ ಅವರು, ‘ಬಾಳೆಗೋಡುವಿನಲ್ಲಿ ಈಗಿರುವ 25 ಕುಟುಂಬಗಳು ಹೋರಾಟ ನಡೆಸಿದ ನಂತರ ಅವರ ವಸತಿಗೆ 3 ಎಕರೆ ನಿಗದಿ ಮಾಡಿದ್ದ ಆಡಳಿತವು ನಂತರ ಪಟ್ಟಭದ್ರರ ಹಿತಾಸಕ್ತಿಗಾಗಿ ಅದನ್ನೂ ವಾಪಸ್ ಕಿತ್ತುಕೊಂಡಿತು. ವಿರಾಜಪೇಟೆಯಲ್ಲಿನ ಹಲವಾರು ಹಾಡಿಗಳಲ್ಲಿ ಇದೇ ಪರಿಸ್ಥಿತಿಯಿದೆ’ ಎಂದು ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸದ್ಯಕ್ಕೆ ಶಾಶ್ವತ ಪರಿಹಾರದ ಮಾತನ್ನು ಆಮೇಲೆ ನೋಡೋಣ, ಕೂಡಲೇ ಈ ಕುಟುಂಬಗಳಿಗೆ ಕನಿಷ್ಠ ಆಹಾರ ವಸ್ತು ಮತ್ತು ತಾತ್ಕಾಲಿಕ ಸೂರಿನ ವ್ಯವಸ್ಥೆಯನ್ನು ಒದಗಿಸುವುದು ಜಿಲ್ಲಾಡಳಿತ ಮತ್ತು ಸರ್ಕಾರದ ಕನಿಷ್ಠ ಕರ್ತವ್ಯ. ಅಷ್ಟೂ ಆಗದಿದ್ದರೆ ಸರ್ಕಾರ ಸತ್ತಂತೆಯೇ ಲೆಕ್ಕ. ಈ ಸಂಕಷ್ಟ ಕಾಲದಲ್ಲಿ ತಮ್ಮ ಕೈಲಾದಷ್ಟು ನೆರವು ನೀಡುತ್ತಿರುವ ಸಂಘಟನೆಗಳು ಈ ಕುಟುಂಬಗಳನ್ನು ತಲುಪುವಂತಾಗಲಿ ಎಂದು ಆಶಿಸೋಣ.

  • ಪಿ.ಕೆ. ಮಲ್ಲನಗೌಡರ್

ಇದನ್ನೂ ಓದಿ: ಐದು ವರ್ಷದಲ್ಲಿ ಎಲ್ಲಾ ಬಡವರ ಭೂಮಿ ಕಿತ್ತುಕೊಳ್ಳುತ್ತಾರೆ: ಸಸಿಕಾಂತ್ ಸೆಂಥಿಲ್ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...