Homeಕರೋನಾ ತಲ್ಲಣಮಕ್ಕಳಿಗೂ ಬರಲಿದೆ ವ್ಯಾಕ್ಸಿನ್: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಒಕ್ಕೂಟ ಸರ್ಕಾರ

ಮಕ್ಕಳಿಗೂ ಬರಲಿದೆ ವ್ಯಾಕ್ಸಿನ್: ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದ ಒಕ್ಕೂಟ ಸರ್ಕಾರ

- Advertisement -
- Advertisement -

18 ವರ್ಷ ಮೇಲ್ಪಟ್ಟ ನಾಗರಿಕರಿಗೆಲ್ಲರಿಗೂ ವ್ಯಾಕ್ಸಿನ್ ನೀಡುವ ಪ್ರಕ್ರಿಯೆ ದೇಶದಲ್ಲಿ ನಡೆಯುತ್ತಿದೆ. ಇದುವರೆಗೆ ದೇಶದಲ್ಲಿ 20 ಕೋಟಿಗೂ ಅಧಿಕ ಜನರಿಗೆ ವ್ಯಾಕ್ಸಿನ್ ನೀಡಲಾಗಿದೆ. ವಯಸ್ಕರಿಗೆಲ್ಲರಿಗೂ ಈ ವರ್ಷಾಂತ್ಯದ ಒಳಗೆ ವ್ಯಾಕ್ಸಿನ್ ನೀಡುವ ಗುರಿಯನ್ನು ಸರ್ಕಾರಗಳು ಇಟ್ಟುಕೊಂಡಿವೆ. ಕೊರೋನಾ ಮೂರನೇ ಅಲೆಯು ಶೀಘ್ರದಲ್ಲಿಯೇ ದೇಶದಲ್ಲಿ ಕಾಣಿಸಿಕೊಳ್ಳಲಿದ್ದು ಮಕ್ಕಳಿಗೆ ಹೆಚ್ಚಿನ ಅಪಾಯವಿದೆ ಎಂದು ತಜ್ಞರು ಸತತವಾಗಿ ಎಚ್ಚರಿಕೆಯನ್ನು ನೀಡುತ್ತ ಬಂದಿದ್ದಾರೆ. ಜೊತೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳಲ್ಲಿ ಶಾಲೆ ಕಾಲೇಜುಗಳನ್ನು ತೆರೆಯುವ ಕುರಿತು ಚರ್ಚೆಗಳು ಆರಂಭವಾಗಿದೆ. ಇದೆಲ್ಲದರ ನಡುವೆ ಕೊರೋನಾ 3 ನೇ ಅಲೆಯ ಅಪಾಯದಿಂದ ಮಕ್ಕಳಿಗೆ ರಕ್ಷಣೆ ಹೇಗೆ ಎಂಬ ಚಿಂತೆ ಪೋಷಕರಲ್ಲಿ ಕಾಡುತ್ತಿದೆ.

ರಾಜ್ಯ ಸರ್ಕಾರಗಳು ಮಕ್ಕಳಿಗೆ ಕೊರೋನಾ ಸೋಂಕಿನ ಚಿಕಿತ್ಸೆ ನೀಡಲು ವಿಶೇಷ ಆಸ್ಪತ್ರೆಗಳನ್ನು ಸಿದ್ಧಪಡಿಸುತ್ತಿವೆ. ಚಿಕಿತ್ಸೆ, ಆಸ್ಪತ್ರೆ, ಬೆಡ್‌ಗಳ ನಡುವೆ ಮಕ್ಕಳ ವ್ಯಾಕ್ಸಿನ್ ಯಾವಾಗ ಬರುತ್ತದೆ? ಅಥವಾ ಮಕ್ಕಳಿಗೆ ವ್ಯಾಕ್ಸಿನ್‌ಗಳನ್ನು ನೀಡಲಾಗುವುದಿಲ್ಲವೇ ಎಂಬ ಪ್ರಶ್ನೆ ಪೋಷಕರನ್ನು ಕಾಡುತ್ತಿದೆ. ಪೋಷಕರ ಆತಂಕಕ್ಕೆ ಉತ್ತರ ಸಿಕ್ಕಿದ್ದು ಕೆಲವೇ ದಿನಗಳಲ್ಲಿ ಮಕ್ಕಳ ವ್ಯಾಕ್ಸಿನ್ ದೇಶದಲ್ಲಿ ಲಭ್ಯವಾಗಲಿದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮಾಹಿತಿ ನೀಡಿದೆ.

ಭಾರತ ಬಯೋಟೆಕ್ ಕಂಪನಿ ಸಿದ್ಧಪಡಿಸಿರುವ ಝೈಡೂಸ್ ಕ್ಯಾಂಡಿಲಾ ವ್ಯಾಕ್ಸಿನ್‌ನ 3 ನೇ ಹಂತದ ಕ್ಲಿನಿಕಲ್ ಟ್ರಯಲ್‌ ಕೊನೆಗೊಂಡಿದ್ದು ಸದ್ಯದಲ್ಲಿಯೇ 12-18 ವಯಸ್ಸಿನ ಮಕ್ಕಳಿಗೆ ವ್ಯಾಕ್ಸಿನ್ ಲಭ್ಯವಾಗಲಿದೆ. ಕೆಲವು ಕಾನೂನಿನ ಪ್ರಕ್ರಿಯೆಗಳು ಅಂತ್ಯವಾದ ನಂತದ ದೇಶದಲ್ಲಿ ಮಕ್ಕಳಿಗೂ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಒಕ್ಕೂಟ ಸರ್ಕಾರ ಹೇಳಿದೆ.

ಜೂನ್ ಆರಂಭದಲ್ಲಿ ತಲೆ ದೋರಿದ ವ್ಯಾಕ್ಸಿನ್ ಕೊರತೆ, ಕೇಂದ್ರ ಸರ್ಕಾರದ ವ್ಯಾಕ್ಸಿನೇಶನ್ ನೀತಿ ಕುರಿತು ವಿಚಾರಣೆ ನಡೆಸುತ್ತಿರುವ ಸುಪ್ರೀಂ ಕೋರ್ಟ್ ಮಕ್ಕಳಿಗೆ ಯಾವಾಗ ವ್ಯಾಕ್ಸಿನ್ ಲಭ್ಯವಾಗಲಿದೆ ಎಂದು ಕೇಂದ್ರ ಸರ್ಕಾರವನ್ನು ಕೇಳಿತ್ತು. ಸುಪ್ರೀಂ ಕೋರ್ಟ್ ಪ್ರಶ್ನೆಗೆ ಉತ್ತರಿಸಿದ ಕೇಂದ್ರ ಸರ್ಕಾರ ಕೊರೋನಾ ಮೂರನೇ ಅಲೆಯ ಸಂದರ್ಭದಲ್ಲಿ ಮಕ್ಕಳಿಗೆ ಅಪಾಯವಿರುವುದನ್ನು ಮನಗಂಡು 18 ವರ್ಷದೊಳಗಿನ ವಯೋವರ್ಗಕ್ಕೆ ವ್ಯಾಕ್ಸಿನ್ ನೀಡುವ ಸಿದ್ಧತೆಗಳು ನಡೆಯುತ್ತಿದೆ ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ನಲ್ಲಿ ಅಫಿಡೆವಿಟ್ ಸಲ್ಲಿಸಿದೆ.

ದೇಶದಲ್ಲಿ ವ್ಯಾಕ್ಸಿನ್ ಕೊರತೆ ಇಲ್ಲವೆಂದು ಹೇಳಿರುವ ಕೇಂದ್ರ ಸರ್ಕಾರ ಮೇ 12 ರಂದು ಡ್ರಗ್‌ ಕಂಟ್ರೋಲರ್ ಜನರಲ್ ಅವರು ಭಾರತ್ ಬಯೋಟೆಕ್ ಸಂಸ್ಥೆಯ ಝೈಡೂಸ್ ಕ್ಯಾಂಡಿಲಾ ವ್ಯಾಕ್ಸಿನ್‌ನ ಕ್ಲಿನಿಕಲ್ ಟ್ರಯಲ್‌ಗೆ ಅನುಮತಿ ನೀಡಿದ್ದರು. 12-18 ವರ್ಷದ ಮಕ್ಕಳು ಸ್ವಯಂ ಪ್ರೇರಿತರಾಗಿ ವ್ಯಾಕ್ಸಿನ್ ಟ್ರಯಲ್‌ಗೆ ಒಳಗಾಗಿದ್ದು ಉತ್ತಮ ಫಲಿತಾಂಶ ಬಂದಿದೆ. ಈಗ 3 ನೇ ಹಂತದ ಟ್ರಯಲ್‌ಗಳು ಪೂರ್ಣಗೊಂಡಿದೆ ಎಂದು ಒಕ್ಕೂಟ ಸರ್ಕಾರ ತನ್ನ ಅಫಿಡೆವಿಟ್‌ನಲ್ಲಿ ಸುಪ್ರೀಂ ಕೋರ್ಟ್‌ಗೆ ಹೇಳಿದೆ.

ದೇಶದ ವ್ಯಾಕ್ಸಿನ್ ಉತ್ಪಾದನೆಯಲ್ಲಿ ಹೆಚ್ಚಳವಾಗಿದ್ದು ಮೇ ತಿಂಗಳಿಗಿಂತ ಜೂನ್ ಅವಧಿಯಲ್ಲಿ ವ್ಯಾಕ್ಸಿನ್ ಉತ್ಪಾದನೆ ದುಪ್ಪಟ್ಟಾಗಿದೆ. ಜುಲೈ ಆಗಸ್ಟ್‌ ಹೊತ್ತಿಗೆ ಈಗಿರುವ ವ್ಯಾಕ್ಸಿನ್‌ ಉತ್ಪಾದನೆಯ ಪ್ರಮಾಣದಲ್ಲಿ ಭಾರಿ ಹೆಚ್ಚಳವಾಗಲಿದೆ ಎಂದು ಒಕ್ಕೂಟ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಅಫಿಡೆವಿಟ್ ಸಲ್ಲಿಸಿದೆ.


ಇದನ್ನೂ ಓದಿ : ಜಮ್ಮು ವಿಮಾನ ನಿಲ್ಧಾಣದಲ್ಲಿ ಸಣ್ಣ ಪ್ರಮಾಣದ ಸ್ಪೋಟ : ಡ್ರೋನ್ ದಾಳಿಯ ಸಾಧ್ಯತೆಯ ತನಿಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರೂರ್ ಕಾಲ್ತುಳಿತ : ಸಿಬಿಐ ಮುಂದೆ ವಿಚಾರಣೆಗೆ ಹಾಜರಾದ ನಟ ವಿಜಯ್

ಕರೂರ್ ಕಾಲ್ತುಳಿತ ಘಟನೆಗೆ ಸಂಬಂಧಪಟ್ಟಂತೆ ನಟ ಹಾಗೂ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಮುಖ್ಯಸ್ಥ ವಿಜಯ್ ಸೋಮವಾರ (ಜ.12) ದೆಹಲಿಯ ಕೇಂದ್ರ ತನಿಖಾ ದಳ (ಸಿಬಿಐ) ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದಾರೆ. ಚಾರ್ಟರ್ಡ್ ವಿಮಾನದಲ್ಲಿ...

ಜೂನ್‌ ಅಂತ್ಯದೊಳಗೆ ಜಿಬಿಎ ವ್ಯಾಪ್ತಿಯ ಪಾಲಿಕೆಗಳಿಗೆ ಚುನಾವಣೆ : ಗಡುವು ವಿಧಿಸಿದ ಸುಪ್ರೀಂ ಕೋರ್ಟ್

ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ವ್ಯಾಪ್ತಿಯ ಐದು ನಗರ ಪಾಲಿಕೆಗಳಿಗೆ ಜೂನ್ ಅಂತ್ಯದೊಳಗೆ ಚುನಾವಣೆ ನಡೆಸುವಂತೆ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೋಮವಾರ (ಜ.12) ನಿರ್ದೇಶನ ನೀಡಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್ ಮತ್ತು...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಸುಪ್ರೀಂ ಕೋರ್ಟ್ ನಲ್ಲಿ ಮಮತಾ ವಿರುದ್ಧ ಎಫ್‌ಐಆರ್ ದಾಖಲಿಸಲು ನಿರ್ದೇಶನ ಕೋರಿ ಅರ್ಜಿ ಸಲ್ಲಿಸಿದ ಇಡಿ

ನವದೆಹಲಿ: ಐ-ಪಿಎಸಿ ವಿರುದ್ಧದ ಬಹು-ರಾಜ್ಯ ಹಣ ವರ್ಗಾವಣೆ ಪ್ರಕರಣದಲ್ಲಿ ತನಿಖೆಗೆ ಅಡ್ಡಿಪಡಿಸಿದ, ಸಾಕ್ಷ್ಯಗಳನ್ನು ತಿರುಚಿದ ಮತ್ತು ನಾಶಪಡಿಸಿದ ಆರೋಪದ ಮೇಲೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಡಿಜಿಪಿ ಮತ್ತು ಕೋಲ್ಕತ್ತಾ ಪೊಲೀಸ್...

ಭಾರತಕ್ಕಿಂತ ಯಾವುದೇ ಪಾಲುದಾರ ದೇಶ ಮುಖ್ಯವಲ್ಲ, ವ್ಯಾಪಾರ ಮಾತುಕತೆ ಪುನರಾರಂಭ: ಅಮೆರಿಕ ರಾಯಭಾರಿ ಸೆರ್ಗಿಯೊ ಗೋರ್

"ವಾಷಿಂಗ್ಟನ್‌ಗೆ ಭಾರತಕ್ಕಿಂತ ಅಗತ್ಯವಾದ ದೇಶ ಇನ್ನೊಂದಿಲ್ಲ ಮತ್ತು ಎರಡೂ ಕಡೆಯವರು ವ್ಯಾಪಾರ ಒಪ್ಪಂದವನ್ನು ದೃಢೀಕರಿಸುವಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ" ಎಂದು ಅಮೆರಿಕದ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್ ಸೋಮವಾರ ಹೇಳಿದ್ದಾರೆ. ಅಮೆರಿಕ ರಾಯಭಾರ ಕಚೇರಿಯ ನೌಕರರು...

ಬಿಷಪ್ ಫ್ರಾಂಕೊ ಮುಲಕ್ಕಲ್ ಅತ್ಯಾಚಾರ ಪ್ರಕರಣ : ಒಂಬತ್ತು ವರ್ಷಗಳ ಬಳಿಕ ಮೌನ ಮುರಿದ ಸಂತ್ರಸ್ತೆ, ಕಾನೂನು ಹೋರಾಟ ಮುಂದುವರಿಸುವುದಾಗಿ ಹೇಳಿಕೆ

ಬಿಷಪ್ ಫ್ರಾಂಕೊ ಮುಲಕ್ಕಲ್ ವಿರುದ್ದದ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಕ್ರೈಸ್ತ ಸನ್ಯಾಸಿನಿ ಒಂಬತ್ತು ವರ್ಷಗಳ ನಂತರ ಮೊದಲ ಬಾರಿಗೆ ಸಾರ್ವಜನಿಕವಾಗಿ ಮಾತನಾಡಿದ್ದು, ಫ್ರಾಂಕೊ ಮುಲಕ್ಕಲ್ ಅವರನ್ನು ನ್ಯಾಯಾಲಯ ಖುಲಾಸೆಗೊಳಿಸಿದ್ದಕ್ಕೆ ನಾನು ದಂಗಾಗಿದ್ದೇನೆ. ನ್ಯಾಯಕ್ಕಾಗಿ...

‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ಎಂದು ಘೋಷಿಸಿಕೊಂಡ ಡೊನಾಲ್ಡ್ ಟ್ರಂಪ್ 

ಸೋಮವಾರ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಟ್ರುತ್ ಸೋಶಿಯಲ್‌ನಲ್ಲಿ ತಮ್ಮದೇ ಆದ ವಿಕಿಪೀಡಿಯಾ ಪುಟದ ಫೋಟೋವನ್ನು ಪೋಸ್ಟ್ ಮಾಡಿದ್ದಾರೆ, ಅದರಲ್ಲಿ "ವೆನೆಜುವೆಲಾದ ಹಂಗಾಮಿ ಅಧ್ಯಕ್ಷ" ಎಂಬ ಹುದ್ದೆಯನ್ನು ಹೊಂದಿರುವ ಅವರ ಚಿತ್ರವಿದೆ. ಪೋಸ್ಟ್‌ನಲ್ಲಿ ಟ್ರಂಪ್...

ಪೊಲೀಸ್ ತುರ್ತು ವಾಹನದ ಚಾಲಕ ಸೇರಿ ಐವರಿಂದ ಯುವತಿ ಮೇಲೆ ಅತ್ಯಾಚಾರ!

ಪೊಲೀಸ್ ತುರ್ತು ಸೇವೆ (112) ವಾಹನದ ಚಾಲಕ ಸೇರಿದಂತೆ ಐವರು ಪುರುಷರು 19 ವರ್ಷದ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿರುವ ಘಟನೆ ಛತ್ತೀಸ್‌ಗಢದ ಕೋರ್ಬಾ ಜಿಲ್ಲೆಯ ಬಂಕಿಮೊಂಗ್ರ ಪ್ರದೇಶದಲ್ಲಿ ನಡೆದಿದೆ. ಜನವರಿ...

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...