Homeಕರ್ನಾಟಕಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

ಚಾಮರಾಜನಗರ ದುರಂತ: ಸಂತ್ರಸ್ತರಿಗೆ ಪರಿಹಾರದ ಚೆಕ್ ವಿತರಿಸಿದ ಡಿ.ಕೆ.ಶಿವಕುಮಾರ್‌

- Advertisement -
- Advertisement -

ಚಾಮರಾಜನಗರ ಆಕ್ಸಿಜನ್ ದುರಂತದ ಸಂತ್ರಸ್ತರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕಾಂಗ್ರೆಸ್ ವತಿಯಿಂದ ಪರಿಹಾರದ ಚೆಕ್ ವಿತರಿಸಿದ್ದಾರೆ. ರಾಜ್ಯ ಸರ್ಕಾರದ ದುರಾಡಳಿತ ಕಂಡು ಜನ ಆಕ್ರೋಶಗೊಂಡಿದ್ದಾರೆ. ಅವರ ಆಕ್ರೋಶಕ್ಕೆ ಹೆದರಿ ಬಿಜೆಪಿ ನಾಯಕರು ಜನರ ಬಳಿಗೆ ಹೋಗುತ್ತಿಲ್ಲ ಎಂದು ಈ ವೇಳೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.

‘ಚಾಮರಾಜನಗರದಲ್ಲಿ ಆಕ್ಸಿಜನ್ ಕೊರತೆಯಿಂದ ಕೇವಲ ಮೂರು ಜನ ಮೃತಪಟ್ಟರು ಎಂದು ಸರ್ಕಾರ ಆರಂಭದಲ್ಲಿ ಹೇಳಿತ್ತು. ಆದರೆ, ನಾವು ಇಲ್ಲಿಗೆ ಭೇಟಿ ನೀಡಿದಾಗ 28 ಮಂದಿ ಮೃತಪಟ್ಟಿದ್ದಾರೆ ಎಂಬುದು ಗೊತ್ತಾಯಿತು. ಇದನ್ನೆಲ್ಲ ಗಮನಿಸಿದ ಹೈಕೋರ್ಟ್ ನಿವೃತ್ತ ನ್ಯಾಯಾಧೀಶರ ತಂಡ ಕಳುಹಿಸಿ ತನಿಖೆ ನಡೆಸಿದಾಗ ಒಟ್ಟು 36 ಮಂದಿ ಸತ್ತಿದ್ದಾರೆ ಎಂಬ ಅಂಶ ಬೆಳಕಿಗೆ ಬಂದಿದೆ’ ಎಂದಿದ್ದಾರೆ.

’ಇಲ್ಲಿನ ಸಾವುಗಳು ಸರ್ಕಾರ ಮಾಡಿರುವ ಕೊಲೆ. ಈ ಕೊಲೆಗೆ ಯಾವುದೇ ಕ್ರಮ ಕೈಗೊಂಡಿಲ್ಲ. ಕೇಂದ್ರ ಸರ್ಕಾರ ವಿಪತ್ತು ನಿರ್ವಹಣಾ ನಿಧಿಯಿಂದ 4 ಲಕ್ಷ ಪರಿಹಾರ ಘೋಷಿಸಿ ನಂತರ ಹಿಂಪಡೆಯಿತು. ಆದರೆ ಸರ್ಕಾರದಿಂದ ಯಾರೂ ಇಲ್ಲಿಗೆ ಬಂದು ಸಂತ್ರಸ್ತ ಕುಟುಂಬಗಳಿಗೆ ಧೈರ್ಯ ತುಂಬಲಿಲ್ಲ. ಅವರ ಕಷ್ಟ ಕೇಳಲಿಲ್ಲ. ಈ ಕೊಲೆಗಳಿಗೆ ಸರ್ಕಾರ ಹಾಗೂ ಚುನಾವಣಾ ಆಯೋಗವೇ ಕಾರಣ ಎಂದು ವಿವಿಧ ನ್ಯಾಯಾಲಯಗಳು ಹೇಳಿವೆ. ಇಷ್ಟಾದರೂ ಸರ್ಕಾರ ಇದಕ್ಕೆ ಕಾರಣರಾದ ಅಧಿಕಾರಿ, ಮಂತ್ರಿಗಳ ಮೇಲೆ ಕ್ರಮ ಕೈಗೊಳ್ಳಲಿಲ್ಲ ಎಂದರೆ ಈ ಸರ್ಕಾರ ಬದುಕಿದೆಯಾ, ಸತ್ತಿದೆಯಾ ಎಂಬುದನ್ನು ಜನರೇ ತೀರ್ಮಾನಿಸಬೇಕು’ ಎಂದು ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಕೊರೊನಾ 2ನೇ ಅಲೆಗೆ 28 ವೈದ್ಯರು ಬಲಿ, ಇನ್ನು ಸಿಗದ ಪರಿಹಾರ

’ವಿರೋಧ ಪಕ್ಷದ ಜವಾಬ್ದಾರಿ ಅರಿತು ನಾವು ಈ ಜನರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದೇವೆ. ಕೆಪಿಸಿಸಿ ಅಧ್ಯಕ್ಷನಾಗಿ ಎಲ್ಲ 36 ಸಂತ್ರಸ್ತರ ಕುಟುಂಬದವರನ್ನು ಭೇಟಿ ಮಾಡುತ್ತಿದ್ದೇನೆ. ಇವರನ್ನು ಸರ್ಕಾರ ಭೇಟಿ ಮಾಡುತ್ತದೆ ಎಂದು ಕಾದುನೋಡಿದೆ. ಆದರೆ ಅವರು ಭೇಟಿ ಮಾಡಲಿಲ್ಲ. ನಮ್ಮ ಮನಸ್ಸು ತಡೆಯಲಾಗದೆ ಇವರ ಕಷ್ಟ ಕೇಳಿ, ಪಕ್ಷದ ಪರವಾಗಿ 1 ಲಕ್ಷ ಪರಿಹಾರ ನೀಡಿ, ಅವರಿಗೆ ಧೈರ್ಯ ತುಂಬಲು ನಾವು ಇಲ್ಲಿಗೆ ಬಂದಿದ್ದೇವೆ’ ಎಂದು ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

’ಮುಖ್ಯಮಂತ್ರಿ ಯಡಿಯೂರಪ್ಪನವರು ಇಲ್ಲಿಗೆ ಬಂದು ಇವರನ್ನು ಭೇಟಿ ಮಾಡಲು ಆಗದಿದ್ದರೆ, ಮಿಕ್ಕ ಸಚಿವರುಗಳಿಗೆ ಏನಾಗಿತ್ತು? ಜಿಲ್ಲಾ ಉಸ್ತುವಾರಿ ಸಚಿವರು, ಆರೋಗ್ಯ ಸಚಿವರು, ಕೋವಿಡ್ ಉಸ್ತುವಾರಿ ಹೊತ್ತವರು ಯಾಕೆ ಬರಲಿಲ್ಲ? ಎಲ್ಲರೂ ಬೆಂಗಳೂರಿನಲ್ಲಿ ಪಾಲು ಬೇಕು ಅಂತಾರೆ. ಜನರ ದುಃಖ-ದುಮ್ಮಾನ ಅವರಿಗೆ ಬೇಕಿಲ್ಲ. ಕೋವಿಡ್ ನಿಂದ ಸತ್ತವರು 30 ಸಾವಿರ ಅಂತಾ ಸರ್ಕಾರ ಹೇಳುತ್ತಿದೆ. ಅದರೆ 3 ಲಕ್ಷ ಜನರ ಮರಣ ಪ್ರಮಾಣ ಪತ್ರ ಪಡೆಯಲಾಗಿದೆ. ಹೀಗಾಗಿ ಡೆತ್ ಆಡಿಟ್ ಆಗಬೇಕಿದೆ. ಈ ವಿಚಾರವಾಗಿ ಕಾಂಗ್ರೆಸ್ ವಿಧಾನಸೌಧದಲ್ಲಿ ಧ್ವನಿ ಎತ್ತಲಿದೆ’ ಎಂದಿದ್ದಾರೆ.

’ಕೊರೊನಾದಿಂದ ಮೃತಪಟ್ಟವರಿಗೆ, ಸಮಸ್ಯೆ ಎದುರಿಸಿದವರಿಗೆ ಧೈರ್ಯ ತುಂಬುವ ಕಾರ್ಯಕ್ರಮವನ್ನು ಕಾಂಗ್ರೆಸ್ ಹಮ್ಮಿಕೊಂಡಿದೆ. ರಾಜ್ಯದ ಉದ್ದಗಲಕ್ಕೂ ನಮ್ಮ ಕಾರ್ಯಕರ್ತರು ಮನೆ, ಮನೆಗೆ ಹೋಗಿ ಕೋವಿಡ್ ನಿಂದ ಮೃತಪಟ್ಟವರು, ಉದ್ಯೋಗ ಕಳೆದುಕೊಂಡವರು, ಸಂಕಷ್ಟಕ್ಕೆ ಸಿಲುಕಿದವರ ಮಾಹಿತಿ ಸಂಗ್ರಹಿಸಲಿದ್ದಾರೆ. ಅವರಿಗೆ ಪರಿಹಾರ ಕೊಡಿಸಲು ತಹಶೀಲ್ದಾರ್ ಹಾಗೂ ಜಿಲ್ಲಾಧಿಕಾರಿಗಳಿಗೆ ಅರ್ಜಿ ಸಲ್ಲಿಸಲಿದ್ದಾರೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.


ಇದನ್ನೂ ಓದಿ: ಭಾರತ ಕ್ರಿಕೆಟ್ ತಂಡವನ್ನು ‘ದಂಡುಪಾಳ್ಯದ ದಂಡಪಿಂಡ’ಗಳು ಎಂದ ದಿಗ್ವಿಜಯ ನ್ಯೂಸ್?: ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...