Homeಮುಖಪುಟ2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಹೆಚ್ಚಳ: ಎನ್‌ಸಿಬಿ ಕಳವಳ

- Advertisement -
- Advertisement -

ಶನಿವಾರ ಮಾದಕದ್ರವ್ಯ ರಹಿತ ದಿನ  ಆಚರಿಸಲಾಗಿತು. ಈ ಸಂದರ್ಭದಲ್ಲಿ ರಾಷ್ಟ್ರೀಯ ಮಾದಕದ್ರವ್ಯ ನಿಯಂತ್ರಂಣ ಮಂಡಳಿ (ಎನ್‍ಸಿಬಿ) ನೀಡಿದ ವರದಿ ಪ್ರಕಾರ, 2020ರಿಂದ ಮಾದಕ ದ್ರವ್ಯ ಸೇವನೆ, ಕಳ್ಳಸಾಗಣೆ ಅನೇಕ ಪಟ್ಟು ಹೆಚ್ಚಾಗಿದೆ ಎಂದು ಹಿಂದೂಸ್ತಾನ್‍ ಟೈಮ್ಸ್  ವರದಿ ಮಾಡಿತ್ತು.

ಅರೆ, ಕೋವಿಡ್‍ ಸಂದರ್ಭಕ್ಕೂ ಇದಕ್ಕೂ ಲಿಂಕ್‍ ಇರಬಹುದಾ? ಎಲ್ಲ ಸ್ಥಗಿತವಾಗಿರುವಾಗ ಇದೆಲ್ಲ ಹೇಗೆ ಸಾಧ್ಯವಾಗಿತು? ಕಳೆದ ವರ್ಷ ಭಾರಿ ಸುದ್ದಿ ಮಾಡಿದ ಬಾಲಿವುಡ್‍ ಮತ್ತು ನಮ್ಮ ಕನ್ನಡ ಚಿತ್ರರಂಗದ ಕೆಲವರ ಡ್ರಗ್ಸ್ ಸುದ್ದಿಗಳು ಇದಕ್ಕೆ ಪೂರಕವಾಗಿವೆಯೇ? ಅದಕ್ಕೂ ಮುಖ್ಯವಾಗಿ ಈ ಎನ್‍ಸಿಬಿ, ಆಗೆಲ್ಲ ದೊಡ್ಡ ಹವಾ ಮಾಡಿ ಈಗೇಕೆ ತಣ್ಣಗಾಗಿದೆ?- ಈ ಎಲ್ಲ ಪ್ರಶ್ನೆಗಳಿಗೆ ಸುಲಭ ಉತ್ತರವಿಲ್ಲ ಅನಿಸುತ್ತದೆ.

ಅದಿರಲಿ, 2020-21ನೆ ಸಾಲಿನಲ್ಲಿ ಕರ್ನಾಟಕದಲ್ಲಿ 50 ಕೋಟಿ ರೂ. ಮೌಲ್ಯದ ಮಾದಕ ವಸ್ತು ವಶಪಡಿಸಿಕೊಂಡು ನಾಶ ಮಾಡಲಾಗಿದೆ ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಶನಿವಾರ ತಿಳಿಸಿದ್ದಾರೆ. ಪೊಲೀಸರಿಗೆ ಸಿಕ್ಕಿದ್ದು 50 ಕೋಟಿ ರೂ. ಮೌಲ್ಯದ ಡ್ರಗ್ಸ್ ಎಂದಾದರೆ, ಸಿಗದೇ ಇರುವುದು ಎಷ್ಟು ಪಟ್ಟು ಇರಬಹುದು?

ಶನಿವಾರ ಮಾದಕದ್ರವ್ಯ ರಹಿತ ದಿನದ ಅಂಗವಾಗಿ ಎಲ್ಲ ಜಿಲ್ಲೆಯ ಪೊಲೀಸರು ಎಸ್‍ಪಿ ನೇತೃತ್ವದಲ್ಲಿ, ಸೀಜ್‍ ಮಾಡಿದ ಮಾದಕ ದ್ರವ್ಯಗಳನ್ನು ಸುಟ್ಟು ಹಾಕಿದರು.

ಪುಟ್ಟ ಗದಗ ಜಿಲ್ಲೆಯಲ್ಲಿ 7.18 ಲಕ್ಷ ರೂ ಮೊತ್ತದ ಗಾಂಜಾವನ್ನು ಸುಟ್ಟು ನಾಶ ಪಡಿಸಿದರು. ಇದು ಒಂದು ವರ್ಷದ ಸಾಮಾಗ್ರಿ ಅಥವಾ ಜನೆವರಿಯಿಂದ ಸೀಜ್‍ ಮಾಡಿದ ಸಾಮಾಗ್ರಿ ಎಂಬುದು ಸ್ಪಷ್ಟವಿಲ್ಲ.

ಕಳೆದ ವರ್ಷ ಕನ್ನಡ ಚಿತ್ರರಂಗದ ಕೆಲವರು ಡ್ರಗ್ಸ್ ಜಾಲದಲ್ಲಿ ಸಿಕ್ಕಿ ಬಿದ್ದಾಗ, ಗೃಹ ಸಚಿವ ಬೊಮ್ಮಾಯಿ ಎಲ್ಲ ಎಸ್‍ಪಿಗಳಿಗೆ ಈ ಜಾಲ ಮೆಟ್ಟಿ ಹಾಕಲು ನಿರ್ದೇಶನ ನೀಡಿದರು.

ಆಗ ಏನಾಯಿತು? ದಿನವೂ ಗಾಂಜಾ ಮಾರುತ್ತಿದ್ದವನ ಬಂಧನ ಎಂಬ ಸುದ್ದಿಗಳು ಹರಿದಾಡಿದವು. ಒಬ್ಬ ವ್ಯಕ್ತಿಯಿಂದ 70 ಗ್ರಾಂ ಗಾಂಜಾ ವಶ ಮಾಡಿಕೊಂಡು, ಆತನಿಂದ 1,147 ರೂ. ವಶಪಡಿಸಿಕೊಳ್ಳಲಾಗಿದೆ’ ಎಂಬ ಎಫ್‍ಐಆರ್‌ಗಳು ಬಿಡುಗಡೆ ಆಗುತ್ತಿದ್ದವು.

ಆದರೆ ಇದರ ಮೂಲಗಳು ಪೊಲೀಸರಿಗೆ ಗೊತ್ತೇ ಇಲ್ಲವೇ? ಗುಡಿ ಹತ್ತಿರ ನಿಂತು ಮಾರಲು ಆತನೇನು ಮೂರ್ಖನೇ? ಯಾವುದೋ ಮನೆ ಅಥವಾ ಅಂಗಡಿಯಲ್ಲಿ ಕುಳಿತೇ ಮಾರಿರುತ್ತಾನೆ ಅಲ್ಲವೇ? ಆತನ ಗಿರಾಕಿಗಳು ಕೂಡ ದಾರಿ ಮಧ್ಯೆ ಗುಡಿ ಪಕ್ಕ ಗಾಂಜಾ ಖರೀದಿಸುತ್ತಾರೆಯೇ? ಈ ಪ್ರಶ್ನೆಗಳು ಆಗ ಜನರನ್ನು ಕಾಡಿಸುತ್ತಿದ್ದವು.

ಯಾವಾಗ ಜಾರಕಿಹೊಳಿ ಕೇಸು ಮುನ್ನೆಲೆಗೆ ಬಂದಿತೋ ಆಗ ಡ್ರಗ್ಸ್ ವಿಷಯ ಹಿನ್ನಲೆಗೆ ಸರಿಯಿತು. ಹಾಗೆಯೇ ಬಿಹಾರ ಚುನಾವಣೆ ಮುಗಿದ ನಂತರ ಬಾಲಿವುಡ್‍ ನಟ ಸುಶಾಂತ್‍  ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದಿದ್ದ ಡ್ರಗ್ಸ್ ತನಿಖೆಯೂ ಹಿನ್ನೆಲೆಗೆ ಸರಿಯಿತು.

ಆ ನಂತರ ‘ಗುಡಿ ಹತ್ತಿರವೋ ಅಥವಾ ರಸ್ತೆಯಲ್ಲೋ ನಿಂತು’ ಗಾಂಜಾ ಮಾರುವವರ ಎಫ್‍ಐಆರ್‌ಗಳು ಕಾಣದಾದವು!

ದೇಶದ ಸ್ಥಿತಿ ಏನು?

ಈ ವರ್ಷ ಇನ್ನೂ ಆರು ತಿಂಗಳುಗಳು ಬಾಕಿ ಇರುವಾಗ, ಎನ್‌ಸಿಬಿ ಈಗಾಗಲೇ 4.82 ಟನ್ ಗಾಂಜಾ, 5.25 ಕೆಜಿ ಅಫೀಮು, 48.8 ಕೆಜಿ ಚರಸ್‍ಗಳನ್ನು ವಶಪಡಿಸಿಕೊಂಡಿದೆ.

ಕೋವಿಡ್‍ ಸಾಂಕ್ರಾಮಿಕದ ಸಂದರ್ಭದಲ್ಲೂ ಮಾದಕ ದ್ರವ್ಯ ಮತ್ತು ಕಳ್ಳಸಾಗಣೆ 2020ರಿಂದ ಅನೇಕ ಪಟ್ಟು ಹೆಚ್ಚಾಗಿದೆ ಮತ್ತು ಇದು ವಿವಿಧ ಮಾದಕವಸ್ತು ನಿಯಂತ್ರಣ ಜಾರಿ ಸಂಸ್ಥೆಗಳ ಚಟುವಟಿಕೆಗಳಿಂದ ಸ್ಪಷ್ಟವಾಗಿದೆ ಎನ್ನಲಾಗಿದೆ.

ಈ ವರ್ಷದ ದಿನಾಚರಣೆಯ ಸಂದರ್ಭದಲ್ಲಿ ‘ಮಾದಕವಸ್ತುಗಳ ಬಗ್ಗೆ ಸತ್ಯಗಳನ್ನು ಹಂಚಿಕೊಳ್ಳಿ, ಜೀವಗಳನ್ನು ಉಳಿಸಿ’ ಎಂದು ವಿಶ್ವಸಂಸ್ಥೆಯು ತಿಳಿಸಿದೆ.

ಆದರೆ, ಪೊಲೀಸರು ಮತ್ತು ಮಾದಕದ್ರವ್ಯಗಳ ತಡೆಗೆ ಸಂಬಂಧಪಟ್ಟ ಇಲಾಖೆಗಳು ಸತ್ಯವನ್ನು ಹಂಚಿಕೊಳ್ಳುತ್ತವಾ? ಜನರಿಗೆ ನಂಬಿಕೆಯಿಲ್ಲ!

  • ಪಿ.ಕೆ ಮಲ್ಲನಗೌಡರ್

ಇದನ್ನೂ ಓದಿ: ಹರಿದ ಜೀನ್ಸ್ ಧರಿಸುವುದು ಮಾದಕ ವಸ್ತು ಸೇವನೆಗೂ ಕಾರಣವಾಗುತ್ತದೆ- ಉತ್ತರಾಖಂಡ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

20 ಬಂಡಾಯ ಸಂಸದರ ಅನರ್ಹತೆಗೆ ಒತ್ತಾಯ: ಶೀಘ್ರ ನಿರ್ಧಾರ ಕೈಗೊಳ್ಳುವಂತೆ ಕೋರಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಟಿಎಂಸಿ ಕಾರ್ಯದರ್ಶಿ ಅಭಿಷೇಕ್ ಬ್ಯಾನರ್ಜಿ

ತಮ್ಮ ಪಕ್ಷದಿಂದ ಪ್ರತ್ಯೇಕಗೊಂಡಿರುವ 20 ಬಂಡಾಯ ಸಂಸದರನ್ನು ಅನರ್ಹಗೊಳಿಸುವಂತೆ ಕೋರಿ ಸಲ್ಲಿಸಲಾದ ಅರ್ಜಿಗಳ ಕುರಿತು ಲೋಕಸಭೆಯ ಸ್ಪೀಕರ್ ಓಂ ಬಿರ್ಲಾ ಅವರು ಶೀಘ್ರ ನಿರ್ಧಾರ ಕೈಗೊಳ್ಳುವಂತೆ ನಿರ್ದೇಶನ ನೀಡಲು ಕೋರಿ ತೃಣಮೂಲ ಕಾಂಗ್ರೆಸ್...

ದೆಹಲಿ, ಬಿಹಾರದಲ್ಲಿ ನೀಟ್ ಪ್ರತಿಭಟನಾಕಾರರ ಮೇಲೆ ಪೆಲೆಟ್, ಅಶ್ರುವಾಯು, ವಿದ್ಯುತ್ ಶಾಕ್ ಲಾಠಿ ಪ್ರಹಾರ ನಡೆದಿರುವುದು ಸತ್ಯ: ಅಮ್ನೆಸ್ಟಿ ವರದಿಯಲ್ಲಿ ಕಳವಳಕಾರಿ ವಿಷಯಗಳು ಬಹಿರಂಗ

ದೆಹಲಿ ಮತ್ತು ಬಿಹಾರದಲ್ಲಿ ವಿದ್ಯಾರ್ಥಿಗಳು ಹಾಗೂ ಯುವಜನರ ನೇತೃತ್ವದಲ್ಲಿ ನಡೆದ ನೀಟ್ (NEET) ಪರೀಕ್ಷಾ ವಿವಾದಕ್ಕೆ ಸಂಬಂಧಿಸಿದ ಪ್ರತಿಭಟನೆಗಳ ಸಂದರ್ಭದಲ್ಲಿ ಭಾರತೀಯ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಕಾನೂನುಬಾಹಿರ ಮತ್ತು ಅತಿಯಾದ ಬಲಪ್ರಯೋಗ ಮಾಡಿದ್ದಾರೆ...

ರಾಜ್ಯ ಚುನಾವಣಾ ಆಯೋಗದಿಂದ ಎಸ್‌ಐಆರ್ ಕರಡು ಪಟ್ಟಿ ಪ್ರಕಟ; ದಾವಣಗೆರೆಯಲ್ಲಿ ಅತಿ ಕಡಿಮೆ- ಬೆಂಗಳೂರು ನಗರದಲ್ಲಿ 9.46 ಲಕ್ಷ ಜನರಿಗೆ ನೋಟಿಸ್‌!

ರಾಜ್ಯ ಚುನಾವಣಾ ಆಯೋಗವು ಇಂದು ಎಸ್‌ಐಆರ್ ಕರಡು ಪಟ್ಟಿ ಪ್ರಕಟಿಸಿದ್ದು, 'ಲಾಜಿಕಲ್ ಡಿಸ್ಕ್ರಿಪೆನ್ಸಿ' ಹೆಸರಿನಲ್ಲಿ ದಾವಣಗೆರೆ ಜಿಲ್ಲೆಯಲ್ಲಿ ಅತಿ ಕಡಿಮೆ, ಅಂದರೆ 7,088 ಜನರಿಗೆ ನೋಟಿಸ್‌ ನೀಡಲು ಸಿದ್ಧತೆ ನಡೆಸಲಾಗಿದೆ. ಬೆಂಗಳೂರು ನಗರದಲ್ಲಿ...

ಮಹಾರಾಷ್ಟ್ರದ ಅಮರಾವತಿಯಲ್ಲಿ ದಾರುಣ ದುರಂತ: ಸರ್ಕಾರಿ ಆಸ್ಪತ್ರೆಯ ವೆಂಟಿಲೇಟರ್ ಸ್ಫೋಟಗೊಂಡು ಮೂವರು ನವಜಾತ ಶಿಶುಗಳ ಸಾವು

ಅಮರಾವತಿ: ಮಹಾರಾಷ್ಟ್ರದ ಅಮರಾವತಿ ಜಿಲ್ಲಾ ಸರ್ಕಾರಿ ಮಹಿಳಾ ಆಸ್ಪತ್ರೆಯ ನವಜಾತ ಶಿಶುಗಳ ತೀವ್ರ ನಿಗಾ ಘಟಕದಲ್ಲಿ ಸೋಮವಾರ ಮುಂಜಾನೆ ಭೀಕರ ಅಗ್ನಿ ಅವಘಡ ಸಂಭವಿಸಿದ್ದು ವೆಂಟಿಲೇಟರ್‌ನಲ್ಲಿ ಉಂಟಾದ ಸ್ಫೋಟದಿಂದಾಗಿ ಬೆಂಕಿ ಮತ್ತು ದಟ್ಟ...

‘ಮೋದಿ ಅವರ ‘ದಿಮಾಗಿ ನಕ್ಸಲ್’ ಹೇಳಿಕೆಯು ಮುಂಬರುವ ಯುವ ಭಿನ್ನಾಭಿಪ್ರಾಯದ ಅಲೆಯನ್ನು ‘ರಾಷ್ಟ್ರವಿರೋಧಿ’ ಎಂದು ಬಿಂಬಿಸುವ ಪ್ರಯತ್ನವಾಗಿದೆ’: ಆನಂದ್ ತೇಲ್ತುಂಬ್ಡೆ

ಜೆನ್ ಝೀ ಅಲೆಯ ಹೊಸ ರೀತಿಯ ಪ್ರತಿಭಟನೆಗೆ ಬೆಚ್ಚಿಬಿದ್ದಿರುವ ಪ್ರಧಾನಿ ಮೋದಿಯವರ 'ದಿಮಾಗಿ ನಕ್ಸಲ್' ಹೇಳಿಕೆಯ ಮುಖವಾಡವನ್ನು 'ದಿ ವೈರ್' ಲೇಖನದಲ್ಲಿ ಪ್ರಸಿದ್ಧ ಚಿಂತಕ ಡಾ. ಆನಂದ್ ತೇಲ್ತುಂಬ್ಡೆ ಬಿಚ್ಚಿಟ್ಟಿದ್ದಾರೆ. ಆಡಳಿತದ ವಿಫಲ...

SIR : ಮೂರು ದೇಶಗಳಿಗೆ ಭಾರತದ ರಾಯಭಾರಿಯಾಗಿದ್ದ ನವದೀಪ್ ಸೂರಿಗೆ ಪೌರತ್ವ ಸಾಬೀತುಪಡಿಸುವ ಸವಾಲು!

ಪಂಜಾಬ್‌ನಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯಲ್ಲಿ ಪೌರತ್ವ ಸಾಬೀತುಪಡಿಸುವ ವಿಧಾನದ ಕುರಿತು ಮಾಜಿ ರಾಜತಾಂತ್ರಿಕ ನವದೀಪ್ ಸೂರಿ ಅವರು ಭಾನುವಾರ (ಆ.23) ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ....

ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣ : 22 ಆರೋಪಿಗಳ ಖುಲಾಸೆ ಪ್ರಶ್ನಿಸಿ ಸುಪ್ರೀಂ ಮೆಟ್ಟಿಲೇರಿದ ಸಹೋದರ

ಸೊಹ್ರಾಬುದ್ದೀನ್ ಶೇಖ್ ಮತ್ತು ಅವರ ಪತ್ನಿ ಕೌಸರ್ ಬಿ ಹಾಗೂ ಆಪ್ತ ತುಳಸಿರಾಮ್ ಪ್ರಜಾಪತಿ ಅವರ 2005ರ ನಕಲಿ ಎನ್‌ಕೌಂಟರ್ ಪ್ರಕರಣದಲ್ಲಿ ಗುಜರಾತ್, ರಾಜಸ್ಥಾನ ಮತ್ತು ಆಂಧ್ರಪ್ರದೇಶದ 21 ಪೊಲೀಸರು ಸೇರಿದಂತೆ ಒಟ್ಟು...

ಉತ್ತರ ಪ್ರದೇಶ| ಚಲಿಸುವ ರೈಲಿನಲ್ಲಿ ಮದರಸಾ ವಿದ್ಯಾರ್ಥಿ ಮೇಲೆ ಹಲ್ಲೆ; ಬಲವಂತವಾಗಿ ಮದ್ಯ ಕುಡಿಸಿದ ದುಷ್ಕರ್ಮಿಗಳು

ಪಶ್ಚಿಮ ಉತ್ತರ ಪ್ರದೇಶದಲ್ಲಿ ಶನಿವಾರ ರಾತ್ರಿ ಚಲಿಸುತ್ತಿದ್ದ ರೈಲಿನಲ್ಲಿ ಮದರಸಾ ವಿದ್ಯಾರ್ಥಿಯೊಬ್ಬನ ಮೇಲೆ ಕುಡಿದ ಮತ್ತಿನಲ್ಲಿದ್ದ ಯುವಕರ ಗುಂಪೊಂದು ಹಲ್ಲೆ ನಡೆಸಿ, ಆತನ ಧಾರ್ಮಿಕ ಗುರುತನ್ನು ನಿಂದಿಸಿ, ಬಲವಂತವಾಗಿ ಮದ್ಯ ಕುಡಿಸಿರುವ ಘಟನೆ...

ಶೈಕ್ಷಣಿಕ ಬೇಡಿಕೆಗಳಿಗಾಗಿ ವಾರ್ಧಾ ಎಂಜಿಎಎಚ್‌ವಿಯಲ್ಲಿ ವಿದ್ಯಾರ್ಥಿಗಳ ಅಹೋರಾತ್ರಿ ಸತ್ಯಾಗ್ರಹ: 47ನೇ ದಿನಕ್ಕೆ ಕಾಲಿಟ್ಟ ಪ್ರತಿಭಟನೆ, 6 ವಿದ್ಯಾರ್ಥಿಗಳ ವಿರುದ್ಧ ಎಫ್‌ಐಆರ್

ವಾರ್ಧಾ (ಮಹಾರಾಷ್ಟ್ರ): ಮಹಾರಾಷ್ಟ್ರದ ವಾರ್ಧಾದಲ್ಲಿರುವ ಪ್ರತಿಷ್ಠಿತ ಮಹಾತ್ಮ ಗಾಂಧಿ ಅಂತರರಾಷ್ಟ್ರೀಯ ಹಿಂದಿ ವಿಶ್ವವಿದ್ಯಾಲಯದಲ್ಲಿ (ಎಂಜಿಎಎಚ್‌ವಿ) ಶೈಕ್ಷಣಿಕ ಹಾಗೂ ವಿದ್ಯಾರ್ಥಿ ಕಲ್ಯಾಣಕ್ಕೆ ಸಂಬಂಧಿಸಿದ ವಿವಿಧ ಮೂಲಭೂತ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ವಿದ್ಯಾರ್ಥಿಗಳು ನಡೆಸುತ್ತಿರುವ ಸತ್ಯಾಗ್ರಹವು...

ಮೀಸಲಾತಿ ವಿರೋಧಿ ಬೇಡಿಕೆಗಳ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸಿ: ಕೇಂದ್ರ ಸಚಿವ ಅಠಾವಳೆ ಆಗ್ರಹ

ಮೀಸಲಾತಿಯನ್ನು ವಿರೋಧಿಸುವ ಅಥವಾ ಅದನ್ನು ರದ್ದುಗೊಳಿಸಲು ಆಗ್ರಹಿಸುವವರ ವಿರುದ್ಧ ದೇಶದ್ರೋಹದ ಪ್ರಕರಣಗಳನ್ನು ದಾಖಲಿಸಬೇಕೆಂದು ಕೇಂದ್ರ ಸಚಿವ ಹಾಗೂ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ (ಅಠಾವಳೆ) ಅಧ್ಯಕ್ಷ ರಾಮದಾಸ್ ಅಠಾವಳೆ ಭಾನುವಾರ ಆಗ್ರಹಿಸಿದ್ದಾರೆ. ಮೀಸಲಾತಿ ವಿರೋಧಿಸಿ...