Homeಮುಖಪುಟಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

ಅಯೋಧ್ಯೆ ರಾಮ ಜನ್ಮಭೂಮಿ ಭೂಮಿ ಖರೀದಿ ವಿವಾದ: ಕಾನೂನು ಸಮರಕ್ಕೆ ಸಜ್ಜಾದ ಟ್ರಸ್ಟ್‌

- Advertisement -
- Advertisement -

ಅಯೋಧ್ಯೆ ರಾಮ ಮಂದಿರ ಭೂಮಿ ಖರೀದಿ ವಿವಾದ ಕಳೆದ ವಾರ ದೇಶಾದ್ಯಂತ ಚರ್ಚೆಗೆ ಗ್ರಾಸವಾಗಿತ್ತು. ಅಯೋಧ್ಯೆ ರಾಮ ಮಂದಿರ ನಿರ್ಮಾಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ರಚಿಸಿರುವ ಟ್ರಸ್ಟ್‌ ಹೆಚ್ಚಿನ ದರಕ್ಕೆ ಭೂಮಿಯನ್ನು ಖರೀದಿಸಿದೆ ಎಂದು ವಿರೋಧ ಪಕ್ಷಗಳು ಆರೋಪಿಸುತ್ತಲೇ ಬಂದಿವೆ. ಅಯೋಧ್ಯಾ ರಾಮ ಮಂದಿರ ಟ್ರಸ್ಟ್‌ ಮಾತ್ರ ಎಲ್ಲ ಆರೋಪಗಳನ್ನು ಅಲ್ಲಗಳೆದಿದ್ದು ಆರೋಪ ಮಾಡಿದವರ ವಿರುದ್ಧ ಕಾನೂನು ಸಮರ ಸಾರುವುದಾಗಿ ಹೇಳಿದೆ.

ಸುಮಾರು 2 ಕೋಟಿ ಮೌಲ್ಯದ ಭೂಮಿಯನ್ನು 18 ಕೋಟಿ ಮೊತ್ತಕ್ಕೆ ಟ್ರಸ್ಟ್‌ ಖರೀದಿಸಿದೆ ಎಂದು ವಿರೋಧಪಕ್ಷಗಳು ಆರೋಪಿಸಿವೆ. ವಿರೋಧಪಕ್ಷಗಳ ಆರೋಪಕ್ಕೆ ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್‌ ನೇಮಕಮಾಡಿರುವ ರಾಮಜನ್ಮಭೂಮಿ ದೇವಸ್ಥಾನ ಟ್ರಸ್ಟ್‌ ಭೂ ಖರೀದಿ ಹಗರಣದ ಆರೋಪಗಳನ್ನು ಅಲ್ಲಗಳೆದಿದೆ. ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಕಾರ್ಯದರ್ಶಿ ಚರಪಂತ್ ರಾಯ್ ಅವರು ಭೂ ಖರೀದಿ ಪಾರದರ್ಶಕವಾಗಿ ನಡೆದಿದ್ದು, ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆಗೆ ಜಾಗವನ್ನು ಖರೀದಿಸಲಾಗಿದೆ ಎಂದು ಸಮರ್ಥಿಸಿಕೊಂಡಿದ್ದಾರೆ.

ವಿರೋಧ ಪಕ್ಷಗಳು ರಾಜಕೀಯ ಕಾರಣಕ್ಕೆ ವಿವಾದವನ್ನು ಹುಟ್ಟುಹಾಕುತ್ತಿವೆ. ಆರೋಪಗಳು ಸತ್ಯಕ್ಕೆ ದೂರವಾಗಿವೆ. ಭೂ ಖರೀದಿಯ ಎಲ್ಲಾ ದಾಖಲೆಗಳನ್ನು ಬಹಿರಂಗಗೊಳಿಸಲು ಟ್ರಸ್ಟ್‌ ಸಿದ್ಧವಿದ್ದೇವೆ ಎಂದು ಅವರು ತಿಳಿಸಿದ್ದಾರೆ.

ರಾಮ ಜನ್ಮಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂಬ ಅನುಮಾನವಿರುವವರು ಸುಪ್ರೀಂ ಕೋರ್ಟ್‌ ಮೆಟ್ಟಿಲೇರಲಿ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ  ಟೆಂಪಲ್‌ ಟ್ರಸ್ಟ್‌ ಸುಪ್ರೀಂ ಕೋರ್ಟ್ ನೇಮಕ ಮಾಡಿರುವ ಟ್ರಸ್ಟ್‌ ಆಗಿದ್ದು ಕೋರ್ಟ್‌ಗೆ ಉತ್ತರಿಸಲಿದೆ. ಒಂದು ವೇಳೆ ಆರೋಪ ಮಾಡುವವರಲ್ಲಿ ಸಾಕ್ಷಿಯಿದ್ದರೆ ಕಾನೂನಿನ ಮೂಲಕ ಆರೋಪವನ್ನು ಸಾಬೀತುಪಡಿಸಲಿ ಎಂದು ಟ್ರಸ್ಟ್‌ ವಿರೋಧಪಕ್ಷಗಳಿಗೆ ಸವಾಲು ಹಾಕಿದೆ.

ಕಾಂಗ್ರೆಸ್‌, ಆಮ್ ಆದ್ಮಿ ಪಕ್ಷ , ಸಮಾಜವಾದಿ ಪಕ್ಷ ಸೇರಿದಂತೆ ಇನ್ನೂ ಅನೇಕರು ರಾಮ ಜನ್ಮ ಭೂಮಿ ಭೂ ಖರೀದಿಯಲ್ಲಿ ಹಗರಣ ನಡೆದಿದೆ ಎಂದು ಆರೋಪ ಮಾಡಿದ್ದರು. ಈಗ ರಾಮ ಜನ್ಮಭೂಮಿ ಟ್ರಸ್ಟ್‌ ಇವರೆಲ್ಲರ ವಿರುದ್ಧ ಕಾನೂನು ಸಮರಕ್ಕೆ ಮುಂದಾಗಿದೆ. ಕಾಂಗ್ರೆಸ್‌ನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಪ್ರೀಯಾಂಕಾ ಗಾಂಧಿ, ಆಮ್ ಆದ್ಮಿ ಸಂಸದ ಸಂಜಯ್ ಸಿಂಗ್ ಅವರ ಮೇಲೆ ಮಾನನಷ್ಟ ಮೊಕದ್ದಮೆಯನ್ನು ಹೂಡಲು ನಿರ್ಧರಿಸಿದೆ. ಧಾರ್ಮಿಕ ನಂಬಿಕೆಗಳನ್ನು ಕದಡುವ ಪ್ರಯತ್ನ, ಐಪಿಸಿ ಸೆಕ್ಷನ್ 153B (ಸಮುದಾಯಗಳ ನಡುವೆ ಧಾರ್ಮಿಕ ದ್ವೇಷವನ್ನು ಹರಡುವ ಕೃತ್ಯ), ಸುಳ್ಳು ದಾಖಲೆಗಳ ನೀಡಿಕೆ ಸೇರಿದಂತೆ ವಿವಿಧ ಆರೋಪಗಳಡಿಯಲ್ಲಿ ರಾಮ ಜನ್ಮಭೂಮಿ ಟ್ರಸ್ಟ್‌ ಪ್ರಕರಣಗಳನ್ನು ದಾಖಲಿಸಲು ಮುಂದಾಗಿದೆ.

ವಿಶ್ವ ಹಿಂದು ಪರಿಷತ್ ಕೂಡ ರಾಮ ಮಂದಿರ ಭೂ ಖರೀದಿ ವಿವಾದಕ್ಕೆ ಸಂಬಂಧಿಸಿದಂತೆ ನ್ಯಾಯಾಲಯದ ಮೆಟ್ಟಿಲೇರುವುದಾಗಿ ಹೇಳಿದೆ. ಆರೋಪ ಮಾಡಿದವರು ನ್ಯಾಯಾಲಯದ ಮೆಟ್ಟಿಲೇರದ ಕಾರಣ ಟೆಂಪಲ್ ಟ್ರಸ್ಟ್‌ ಕಾನೂನು ಸಮರಕ್ಕೆ ಸಿದ್ಧವಾಗಿದೆ. ಶ್ರೀ ರಾಮ ಜನ್ಮ ಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ ಕುರಿತು ಅಪನಂಬಿಕೆಯನ್ನು ಸೃಷ್ಟಿಸುವ ಕೆಲಸ ನಡೆಯುತ್ತಿದೆ ಹಾಗಾಗಿ ಕಾನೂನು ಪ್ರಕ್ರಿಯೆಗಳನ್ನು ಕೈಗೊಳ್ಳುವುದಾಗಿ ಟ್ರಸ್ಟ್‌ನ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಎರಡು ಮೂರು ತಿಂಗಳಲ್ಲಿ ನಿತೀಶ್ ಕುಮಾರ್‌ ಸರ್ಕಾರ ಬೀಳಲಿದೆ: ತೇಜಶ್ವಿ ಯಾದವ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...