Facebook Instagram Telegram Youtube
  • ಮುಖಪುಟ
  • ಕರ್ನಾಟಕ
  • ರಾಷ್ಟ್ರೀಯ
  • ಅಂತಾರಾಷ್ಟ್ರೀಯ
  • ರಾಜಕೀಯ
  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • ಕ್ರೀಡೆ
    • ಒಲಂಪಿಕ್
    • ಕ್ರಿಕೆಟ್
    • ಸಿನಿ ಸುದ್ದಿ
    • ಸಿನಿಮಾ ವಿಮರ್ಶೆ
  • ಚಳವಳಿ
  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Search
Subscribe
Donate
Logo
Logo
Facebook
Instagram
Telegram
Youtube
Subscribe
Donate
Logo
  • ಮುಖಪುಟ
  • ಕರ್ನಾಟಕ
    • ಕರ್ನಾಟಕ

      ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

      ಕರ್ನಾಟಕ

      ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

      ಕರ್ನಾಟಕ

      ‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

      ಕರ್ನಾಟಕ

      ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

      ಕರ್ನಾಟಕ

      ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

  • ರಾಷ್ಟ್ರೀಯ
    • ಮುಖಪುಟ

      ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

      ಮುಖಪುಟ

      ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

      ಮುಖಪುಟ

      ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

      ಮುಖಪುಟ

      ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

      ಮುಖಪುಟ

      ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

  • ಅಂತಾರಾಷ್ಟ್ರೀಯ
  • ರಾಜಕೀಯ
    • ಕರ್ನಾಟಕ

      ಮುಡಾ ಪ್ರಕರಣ: ಸಿದ್ದರಾಮಯ್ಯಗೆ ಬಿಗ್ ರಿಲೀಫ್, ಲೋಕಾಯುಕ್ತ ಬಿ ರಿಪೋರ್ಟ್ ಪುರಸ್ಕರಿಸಿದ ಕೋರ್ಟ್

      ಮುಖಪುಟ

      ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ಸಾವು : ಪಿತೂರಿ ಶಂಕೆ ವ್ಯಕ್ತಪಡಿಸಿದ ಮಮತಾ ಬ್ಯಾನರ್ಜಿ, ಉನ್ನತ ಮಟ್ಟದ ತನಿಖೆಗೆ ಒತ್ತಾಯಿಸಿದ ರಾಜಕೀಯ ನಾಯಕರು

      ಮುಖಪುಟ

      ಬಾರಾಮತಿ ವಿಮಾನ ಅಪಘಾತದಲ್ಲಿ ಅಜಿತ್ ಪವಾರ್ ನಿಧನ; ಸಂತಾಪ ಸೂಚಿಸಿದ ಪ್ರಮುಖರು

      ಮುಖಪುಟ

      ಜಿಲ್ಲಾ ಸಹಕಾರಿ ಬ್ಯಾಂಕ್‌ನಿಂದ ಮಹಾರಾಷ್ಟ್ರ ಡಿಸಿಎಂ ಆಗುವವರೆಗೆ: ಅಜಿತ್ ಪವಾರ್ ರಾಜಕೀಯ ಹೆಜ್ಜೆಗಳು

      ಮುಖಪುಟ

      ಅಸ್ಸಾಂ ಎಸ್‌ಐಆರ್‌ನಲ್ಲಿ 5 ಲಕ್ಷ ‘ಮಿಯಾ’ಗಳ ಹೆಸರು ಅಳಿಸಲಾಗುವುದು, ಅವರಿಗೆ ತೊಂದರೆ ಕೊಡುವುದೇ ನನ್ನ ಕೆಲಸ : ಸಿಎಂ ಹಿಮಂತ ಬಿಸ್ವಾ ಶರ್ಮಾ

  • ಅಂಕಣಗಳು
  • ಫ್ಯಾಕ್ಟ್‌ಚೆಕ್
  • ಸಾಹಿತ್ಯ
  • ಸಿನಿಮಾ
    • Allಕ್ರೀಡೆಒಲಂಪಿಕ್ಕ್ರಿಕೆಟ್ಸಿನಿ ಸುದ್ದಿಸಿನಿಮಾ ವಿಮರ್ಶೆ
      ಮುಖಪುಟ

      ಲ್ಯಾಂಡ್‌ಲಾರ್ಡ್: ಜಮೀನ್ದಾರಿ ವ್ಯವಸ್ಥೆ, ಜಾತಿ ಪ್ರಶ್ನೆ ಮತ್ತು ಸಂವಿಧಾನ – ಕನ್ನಡ ಚಿತ್ರರಂಗದ ಒಂದು ಮಹತ್ವದ ತಿರುವು

      ಮುಖಪುಟ

      17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ : ರಾಯಭಾರಿಯಾಗಿ ನಟ ಪ್ರಕಾಶ್ ರಾಜ್ ಆಯ್ಕೆ

      ಮುಖಪುಟ

      ಮಲಯಾಳಂ ಚಿತ್ರರಂಗದ ಹಿರಿಯ ನಟ, ನಿರ್ದೇಶಕ ಶ್ರೀನಿವಾಸನ್ ನಿಧನ

      ಮುಖಪುಟ

      ಕೇರಳ ಚಲನಚಿತ್ರೋತ್ಸವ : ಪ್ಯಾಲೆಸ್ತೀನ್ ಕುರಿತ 4 ಸಿನಿಮಾಗಳು ಸೇರಿ 19 ಚಲನಚಿತ್ರಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿದ ಕೇಂದ್ರ

      ಮುಖಪುಟ

      ಪರೇಶ್ ರಾವಲ್‌ರ ‘ದಿ ತಾಜ್ ಸ್ಟೋರಿ’ ಪೋಸ್ಟರ್‌ಗೆ ವ್ಯಾಪಕ ಆಕ್ರೋಶ; ಸ್ಪಷ್ಟನೆ ನೀಡಿದ ನಿರ್ಮಾಪಕರು

  • ಚಳವಳಿ
    • ಕರ್ನಾಟಕ

      ಪಿಟಿಸಿಎಲ್‌ ಕಾಯ್ದೆ ತಿದ್ದುಪಡಿ- ಕೋರ್ಟ್‌ಗಳಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ ಖಂಡಿಸಿ ರಾಜ್ಯದಾದ್ಯಂತ ಪ್ರತಿಭಟನೆ

      ಕರ್ನಾಟಕ

      ಬಳ್ಳಾರಿ| ಬಂಡಿಹಟ್ಟಿ-ದಾನಪ್ಪ ಬೀದಿ ಬಡರೈತರ ಮೇಲೆ ದೌರ್ಜನ್ಯ; ಪ್ರತಾಪರೆಡ್ಡಿ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ

      ಚಳವಳಿ

      ಹೋರಾಟಗಾರ್ತಿ ಕಾಮ್ರೇಡ್ ಪದ್ಮಕ್ಕ ಶ್ರದ್ಧಾಂಜಲಿ ಸಭೆ

      ಚಳವಳಿ

      ಸಾವಿರಾರು ದೀಪಗಳನ್ನು ಹಚ್ಚಿದ ಒಂದು ಬುಡ್ಡಿದೀಪವೇ ಸಾವಿತ್ರಿ ಬಾಯಿ ಫುಲೆ

      ಕರ್ನಾಟಕ

      ಕೇಂದ್ರ-ರಾಜ್ಯ ಸರ್ಕಾರಗಳ ಕಾರ್ಮಿಕ ವಿರೋಧಿ ನೀತಿ ವಿರೋಧಿಸಿ ನ.26ರಂದು ‘ಬೃಹತ್ ಬೆಂಗಳೂರು ಚಲೋ’

  • ವಿಡಿಯೋ
  • ರೈತ ಹೋರಾಟ
  • ದಲಿತ್ ಫೈಲ್ಸ್
Homeಮುಖಪುಟಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ
ಮುಖಪುಟರಾಜಕೀಯ

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

By : ನಾನು ಗೌರಿ
28 June 2021, 10:58 AM
Facebook
WhatsApp
Twitter
    - Advertisement -
    - Advertisement -

    ಜಮ್ಮು ವಾಯುಪಡೆ ವಿಮಾನ ನಿಲ್ಧಾಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವ ಸ್ಫೋಟವು ಭಾರತದಲ್ಲಿ ಮೊಟ್ಟ ಮೊದಲ ಬಾರಿ ನಡೆದಿರುವ ಹೊಸ ಮಾದರಿಯ ಭಯೋತ್ಪಾದಕ ದಾಳಿಯಾಗಿದೆ. ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಭಯೋತ್ಪಾದಕ ದಾಳಿಗಳು ನಡೆದಿವೆ. ಸುಧಾರಿತ ಸ್ಫೋಟಕಗಳು, ಗ್ರನೈಡ್ ದಾಳಿ, ಮುಂಬೈ ಮಾದರಿಯ ಅಟ್ಯಾಕ್‌ಗಳು ಕೂಡ ನಡೆದಿವೆ. ಈ ಮಾದರಿಯ ಸಾಕಷ್ಟು ಸಂಭವನೀಯ ಭಯೋತ್ಪಾದಕ ದಾಳಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಮತ್ತು ಭದ್ರತಾಪಡೆಗಳು ತಡೆದಿವೆ. ಜಮ್ಮು ವಿಮಾನ ನಿಲ್ಧಾಣದಲ್ಲಿ ಮೊನ್ನೆ ನಡೆದಿರುವ ದಾಳಿ ಭದ್ರತಾ ಸಂಸ್ಥೆಗಳಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಡ್ರೋಣ್‌ಗಳನ್ನು ಬಳಸಿ ಇದುವರೆಗೆ ಭಾರತದಲ್ಲಿ ದಾಳಿಗಳು ನಡೆದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಜಮ್ಮುವಿನ ಇಂಡಿಯನ್ ಏರ್ ಫೋರ್ಸ್ ವಿಮಾನ ನಿಲ್ಧಾಣದಲ್ಲಿ ಉಗ್ರರು ಡ್ರೋಣ್ ಉಪಕರಣವನ್ನು ಬಳಸಿ ವಿಮಾನ ನಿಲ್ಧಾಣದ ಮೇಲೆ ಸ್ಫೋಟಕವನ್ನು ಎಸೆದಿದ್ದಾರೆ.

    ಡ್ರೋಣ್ ಮೂಲಕ ದಾಳಿಯನ್ನು ನಡೆಸಲಾಗಿದೆ ಎಂಬುದನ್ನು ಅಂದಾಜಿಸಲಾಗಿದೆಯೇ ಹೊರತು ಖಚಿತವಾಗಿ ಹೇಳಿಲ್ಲ.  ವೈಮಾನಿಕ ವಾಹನದಿಂದ ವಿಮಾನ ನಿಲ್ಧಾಣದ ಮೇಲೆ ಬಾಂಬ್ ಎಸೆದಿರುವುದಂತು ಸ್ಪಷ್ಟವಾಗಿದೆ. ವಿಮಾನ ನಿಲ್ಧಾಣದ ಕಣ್ಗಾವಲು ವ್ಯವಸ್ಥೆಯನ್ನು ತಪ್ಪಿಸಿ ಈ ದಾಳಿ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

    ಜಮ್ಮು ವಿಮಾನ ನಿಲ್ಧಾಣವು ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟಿಯ ಗಡಿರೇಖೆಯಿಂದ ಕೇವಲ 14  ಕಿಲೋಮಿಟರ್ ದೂರದಲ್ಲಿದೆ. ಪಾಕಿಸ್ತಾನದ ನೆಲದಿಂದಲೂ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ಪಾಕಿಸ್ತಾನದಿಂದ ಇದುವರೆಗೆ ಭಾರತದ ಗಡಿಯೊಳಗೆ 12 ಕಿಲೋಮೀಟರ್ ದೂರದವರೆಗೆ ಡ್ರೋಣ್‌ಗಳು ಬಂದಿವೆ. ಡ್ರೋಣ್ ಮೂಲಕ ದಾಳಿ ನಡೆದಿರುವುದೇ ಆದರೆ ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಆತಂಕವೊಂದು ಎದುರಾಗಲಿದೆ.

    ಸ್ಫೋಟಕವೊಂದು ವಿಮಾನ ನಿಲ್ಧಾಣದ ಛಾವಣಿಯ ಮೇಲೆ ಬಿದ್ದು ಸ್ಫೋಟಗೊಂಡಿದ್ದು ಇನ್ನೊಂದು ಸ್ಫೋಟಕ ವಿಮಾನ ನಿಲ್ಧಾಣದ ಖಾಲಿ ಸ್ಥಳದಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವೃತೆ ಪ್ರಬಲವಾಗಿದ್ದು ಸುಮಾರು 1 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ. ಸ್ಫೋಟದ ಶಬ್ಧ ಕೆಲಹೊತ್ತು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿತ್ತು.

    ಇದನ್ನೂ ಓದಿ : ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

    ಭಾರತೀಯ ವಾಯುಸೇನೆಯ ಇಬ್ಬರು ಅಧಿಕಾರಿಗಳು ಸ್ಫೋಟದಲ್ಲಿ ಗಾಯಗೊಂಡಿದ್ದು ಗಂಭೀರ ಪ್ರಮಾಣದ ಅನಾಹುತಗಳಾಗಿಲ್ಲ. ವಾಯುಸೇನೆಯ ಯಾವ ಸಿಬ್ಬಂದಿ ಕೂಡ ಸ್ಫೋಟ ಹೇಗಾಯಿತು ಎಂಬುದನ್ನು ನೋಡಿಲ್ಲ ಎಂದು ವಾಯುಸೇನೆಯ ಮೂಲಗಳು ತಿಳಿಸಿವೆ. ಸ್ಫೋಟದ ಶಬ್ಧ ಕೇಳಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಮತ್ತೊಂದು  ಸ್ಫೋಟ ನಡೆಯಿತು. ಎರಡನೇ ಸ್ಫೋಟದಲ್ಲಿ ಚಿಕ್ಕ ಗಾಯಗಳಾಗಿವೆ ಎಂದು ಸ್ಫೋಟದಲ್ಲಿ ಗಾಯಗೊಂಡ ಭಾರತೀಯ ವಾಯುಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

    ಲಷ್ಕರೆ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯಿಂದ ಐದು ಕೇಜಿ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ನಡೆದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಜಮ್ಮುವಿನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ದಾಳಿಯನ್ನು ನೆಸಲು ಉದ್ಧೇಶಿಸಿದ್ದ. ಬಂಧಿತ ಶಂಕಿತ ಉಗ್ರನ ವಿಚಾರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

    ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ 2 ದಿನಗಳಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ  ಆಗಸ್ಟ್ ನಲ್ಲಿ ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ಕೇಂದ್ರಸರ್ಕಾರ ಹಿಂಪಡೆದ ನಂತರ ಕಾಶ್ಮೀರದ ನಾಯಕರೊಂದಿಗೆ ನಡೆಯುತ್ತಿರುವ ಮೊಟ್ಟ ಮೊದಲ ರಾಜಕೀಯ ಮಾತುಕತೆ ಇದಾಗಿದೆ. ಕಾಶ್ಮೀರದೊಂದಿಗಿನ ಹೃದಯದ ಅಂತರ ಮತ್ತು ದಿಲ್ಲಿಯ ಅಂತರವನ್ನು ದೂರ ಮಾಡುವ ಪ್ರಯತ್ನ ಇದಾಗಿದೆ ಎಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ನಾಯಕರೊಂದಿಗಿನ ಶನಿವಾರದ ತಮ್ಮ ಭೇಟಿಯನ್ನು ಬಣ್ಣಿಸಿದ್ದರು.

    ಭಾರತೀಯ ವಾಯುಸೇನೆ ಭಾನುವಾರದ ದಾಳಿ ಕುರಿತು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು ಸ್ಫೋಟದ ಹಿನ್ನಲೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಏಕ ಮಹಡಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹೆಲಿಕ್ಯಾಪ್ಟರ್ ಉಗ್ರರ ಟಾರ್ಗೇಟ್ ಆಗಿತ್ತು. ಕೆಲವೇ ಅಡಿಗಳ ಅಂತರದಲ್ಲಿ ದಾಳಿಯ ಗುರಿ ತಪ್ಪಿದೆ ಎಂದು ಇಂಡಿಯನ್ ಏರ್‌ಫೋರ್ಸನ ಹಿರಿಯ ಅಧಿಕಾರಿಯೊಬ್ಬರು ಸ್ಫೋಟದ ಕುರಿತು ಮಾಹಿತಿ ನೀಡಿದ್ದಾರೆ.

    2020 ರ ಜೂನ್ 20 ರಂದು ಗಡಿ ಭದ್ರತಾಪಡೆಯು ಭಾರತ ಪಾಕಿಸ್ತಾನ ಗಡಿಯಲ್ಲಿ ಸ್ಫೋಟಕವನ್ನು ಹೊತ್ತ ಡ್ರೋಣ್ ಒಂದನ್ನು ಹೊಡೆದುರುಳಿಸಿತ್ತು. ಆ ಡ್ರೋಣ್ ಭಾರತದ ಗಡಿಯೊಳಗಿರುವ ಅಲಿ ಬಾಯ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಪಿಐಎ ಎಂದು ಬರೆಯಲಾದ ಕೆಲವು ಬಲೂನುಗಳು ಜಮ್ಮು ಭಾಗದಲ್ಲಿ ಹಾರುತ್ತಿದ್ದು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನ ಭಾಗದಿಂದ ಹಾರಿಸಲಾದ ಈ ಬಲೂನುಗಳು ಭಾರತದ ಗಡಿ ಪ್ರದೇಶದ ಒಳಗೆ ಯಶಸ್ವಿಯಾಗಿ ಹಾರಾಟ ನಡೆಸಿದ್ದವು ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

    ಸ್ಫೋಟಕ್ಕೆ ಸಂಬಂಧಿಸಿದಂತೆ UAPA ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  ರಾಷ್ಟ್ರೀಯ ತನಿಖಾ ದಳ ( NIA) ಮತ್ತು NSG ಕಮಾಂಡೋಗಳು ಸ್ಫೋಟ ನಡೆದ ಸ್ಥಳವನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

    ಪಶ್ಮಿಮ ವಿಭಾಗದ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ವಿ ಆರ್ ಚೌಧರಿ ಅವರು ಘಟನೆಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಗಡಿಯುದ್ದಕ್ಕೂ ಭೂಸೇನೆ ಮತ್ತು ವಾಯುಸೇನೆಗಳು ಕಟ್ಟೆಚ್ಚರವನ್ನು ವಹಿಸಿವೆ. ಬಾಂಬ್ ನಿಷ್ಕ್ರಿಯದಳದ ತಜ್ಞರನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಭಾರತ ಭದ್ರತಾಪಡೆಯ ಮೂಲಗಳು ತಿಳಿಸಿವೆ.


    ಇದನ್ನೂ ಓದಿ : ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

     
    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
    100
    200
    500
    1000
    Donate

    LEAVE A REPLY Cancel reply

    Please enter your comment!
    Please enter your name here
    You have entered an incorrect email address!
    Please enter your email address here

    Previous article
    ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ
    Next article
    ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ
    ನಾನು ಗೌರಿ
    ನಾನು ಗೌರಿ

    ಇದೇ ಲೇಖಕರ ಬರಹ

    ಮುಖಪುಟ

    ದಲಿತ ಟೆಕ್ಕಿ ಕೆವಿನ್ ಅಮಾನವೀಯ ಹತ್ಯೆ ಪ್ರಕರಣ; ಆರೋಪಿ ಪೊಲೀಸ್‌ ಅಧಿಕಾರಿಗೆ ಜಾಮೀನು ನಿರಾಕರಣೆ

    ಮುಖಪುಟ

    ದೀಪಾವಳಿಯ ನಂತರ ದೆಹಲಿ-ಎನ್‌ಸಿಆರ್‌ನಲ್ಲಿ ಹದಗೆಟ್ಟ ಪರಿಸರ; ವಿಷಕಾರಿ ಗಾಳಿಯಿಂದ ಉಲ್ಬಣಿಸುತ್ತಿರುವ ಆರೋಗ್ಯ ಸಮಸ್ಯೆ

    ಮುಖಪುಟ

    ವಕ್ಫ್ ಕಾಯ್ದೆ ವಿರುದ್ಧ ಜಲಗಾಂವ್‌ನಲ್ಲಿ ಬೃಹತ್ ‘ಜೈಲ್ ಭರೋ’ ಪ್ರತಿಭಟನೆ; ಸಾವಿರಾರು ಜನ ಭಾಗಿ

    - Advertisment -
    ಕರ್ನಾಟಕ

    ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

    Manjula - 30 January 2026, 6:27 PM0
    ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...
    ಮುಖಪುಟ

    ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

    Manjula - 30 January 2026, 5:35 PM0
    ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...
    ಮುಖಪುಟ

    ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

    Manjula - 30 January 2026, 5:08 PM0
    ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...
    ಮುಖಪುಟ

    ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

    ಹಾರಿಸ್ - 30 January 2026, 4:40 PM0
    ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...
    ಮುಖಪುಟ

    ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

    Manjula - 30 January 2026, 2:50 PM0
    2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...
    ಕರ್ನಾಟಕ

    ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

    Manjula - 30 January 2026, 1:19 PM0
    ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...
    ಕರ್ನಾಟಕ

    ‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

    Manjula - 30 January 2026, 12:04 PM0
    ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...
    ಕರ್ನಾಟಕ

    ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

    ಹಾರಿಸ್ - 30 January 2026, 9:47 AM0
    ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...
    ಕರ್ನಾಟಕ

    ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

    ಹಾರಿಸ್ - 30 January 2026, 8:46 AM0
    ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...
    ಮುಖಪುಟ

    ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

    ಹಾರಿಸ್ - 29 January 2026, 2:17 PM0
    ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...
    • English
    • ನಮ್ಮ ಕುರಿತು
    • ನೀವೂ ಬರೆಯಿರಿ
    • ವಂತಿಗೆ- Donate
    © Newspaper WordPress Theme by TagDiv