Homeಮುಖಪುಟಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

- Advertisement -
- Advertisement -

ಜಮ್ಮು ವಾಯುಪಡೆ ವಿಮಾನ ನಿಲ್ಧಾಣದಲ್ಲಿ ಭಾನುವಾರ ಮಧ್ಯರಾತ್ರಿ ನಡೆದಿರುವ ಸ್ಫೋಟವು ಭಾರತದಲ್ಲಿ ಮೊಟ್ಟ ಮೊದಲ ಬಾರಿ ನಡೆದಿರುವ ಹೊಸ ಮಾದರಿಯ ಭಯೋತ್ಪಾದಕ ದಾಳಿಯಾಗಿದೆ. ಇದುವರೆಗೆ ದೇಶದ ವಿವಿಧ ಭಾಗಗಳಲ್ಲಿ ಬೇರೆ ಬೇರೆ ರೀತಿಯ ಭಯೋತ್ಪಾದಕ ದಾಳಿಗಳು ನಡೆದಿವೆ. ಸುಧಾರಿತ ಸ್ಫೋಟಕಗಳು, ಗ್ರನೈಡ್ ದಾಳಿ, ಮುಂಬೈ ಮಾದರಿಯ ಅಟ್ಯಾಕ್‌ಗಳು ಕೂಡ ನಡೆದಿವೆ. ಈ ಮಾದರಿಯ ಸಾಕಷ್ಟು ಸಂಭವನೀಯ ಭಯೋತ್ಪಾದಕ ದಾಳಿಯನ್ನು ಭಾರತೀಯ ತನಿಖಾ ಸಂಸ್ಥೆಗಳು ಮತ್ತು ಭದ್ರತಾಪಡೆಗಳು ತಡೆದಿವೆ. ಜಮ್ಮು ವಿಮಾನ ನಿಲ್ಧಾಣದಲ್ಲಿ ಮೊನ್ನೆ ನಡೆದಿರುವ ದಾಳಿ ಭದ್ರತಾ ಸಂಸ್ಥೆಗಳಲ್ಲಿ ಆತಂಕವನ್ನು ಹುಟ್ಟು ಹಾಕಿದೆ. ಡ್ರೋಣ್‌ಗಳನ್ನು ಬಳಸಿ ಇದುವರೆಗೆ ಭಾರತದಲ್ಲಿ ದಾಳಿಗಳು ನಡೆದಿರಲಿಲ್ಲ. ಮೊಟ್ಟಮೊದಲ ಬಾರಿಗೆ ಜಮ್ಮುವಿನ ಇಂಡಿಯನ್ ಏರ್ ಫೋರ್ಸ್ ವಿಮಾನ ನಿಲ್ಧಾಣದಲ್ಲಿ ಉಗ್ರರು ಡ್ರೋಣ್ ಉಪಕರಣವನ್ನು ಬಳಸಿ ವಿಮಾನ ನಿಲ್ಧಾಣದ ಮೇಲೆ ಸ್ಫೋಟಕವನ್ನು ಎಸೆದಿದ್ದಾರೆ.

ಡ್ರೋಣ್ ಮೂಲಕ ದಾಳಿಯನ್ನು ನಡೆಸಲಾಗಿದೆ ಎಂಬುದನ್ನು ಅಂದಾಜಿಸಲಾಗಿದೆಯೇ ಹೊರತು ಖಚಿತವಾಗಿ ಹೇಳಿಲ್ಲ.  ವೈಮಾನಿಕ ವಾಹನದಿಂದ ವಿಮಾನ ನಿಲ್ಧಾಣದ ಮೇಲೆ ಬಾಂಬ್ ಎಸೆದಿರುವುದಂತು ಸ್ಪಷ್ಟವಾಗಿದೆ. ವಿಮಾನ ನಿಲ್ಧಾಣದ ಕಣ್ಗಾವಲು ವ್ಯವಸ್ಥೆಯನ್ನು ತಪ್ಪಿಸಿ ಈ ದಾಳಿ ನಡೆದಿರುವುದು ದೇಶದ ಭದ್ರತಾ ವ್ಯವಸ್ಥೆಗೆ ಎಚ್ಚರಿಕೆಯ ಕರೆಗಂಟೆಯಾಗಿದೆ ಎಂದು ಭಾರತೀಯ ವಾಯುಸೇನೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಜಮ್ಮು ವಿಮಾನ ನಿಲ್ಧಾಣವು ಭಾರತ ಮತ್ತು ಪಾಕಿಸ್ತಾನ ಅಂತರಾಷ್ಟಿಯ ಗಡಿರೇಖೆಯಿಂದ ಕೇವಲ 14  ಕಿಲೋಮಿಟರ್ ದೂರದಲ್ಲಿದೆ. ಪಾಕಿಸ್ತಾನದ ನೆಲದಿಂದಲೂ ಡ್ರೋಣ್ ಮೂಲಕ ದಾಳಿ ನಡೆಸಲಾಗಿದೆಯೇ ಎಂಬುದನ್ನು ತನಿಖೆ ನಡೆಸುತ್ತಿದ್ದೇವೆ. ಪಾಕಿಸ್ತಾನದಿಂದ ಇದುವರೆಗೆ ಭಾರತದ ಗಡಿಯೊಳಗೆ 12 ಕಿಲೋಮೀಟರ್ ದೂರದವರೆಗೆ ಡ್ರೋಣ್‌ಗಳು ಬಂದಿವೆ. ಡ್ರೋಣ್ ಮೂಲಕ ದಾಳಿ ನಡೆದಿರುವುದೇ ಆದರೆ ಭಾರತದ ಭದ್ರತಾ ವ್ಯವಸ್ಥೆಗೆ ಹೊಸ ಆತಂಕವೊಂದು ಎದುರಾಗಲಿದೆ.

ಸ್ಫೋಟಕವೊಂದು ವಿಮಾನ ನಿಲ್ಧಾಣದ ಛಾವಣಿಯ ಮೇಲೆ ಬಿದ್ದು ಸ್ಫೋಟಗೊಂಡಿದ್ದು ಇನ್ನೊಂದು ಸ್ಫೋಟಕ ವಿಮಾನ ನಿಲ್ಧಾಣದ ಖಾಲಿ ಸ್ಥಳದಲ್ಲಿ ಸ್ಫೋಟವಾಗಿದೆ. ಸ್ಫೋಟದ ತೀವೃತೆ ಪ್ರಬಲವಾಗಿದ್ದು ಸುಮಾರು 1 ಕಿಲೋಮೀಟರ್ ದೂರದವರೆಗೂ ಸ್ಫೋಟದ ಶಬ್ಧ ಕೇಳಿಸಿದೆ. ಸ್ಫೋಟದ ಶಬ್ಧ ಕೆಲಹೊತ್ತು ಸ್ಥಳೀಯರಲ್ಲಿ ಆತಂಕವನ್ನು ಸೃಷ್ಟಿಸಿತ್ತು.

ಇದನ್ನೂ ಓದಿ : ಮಧ್ಯಪ್ರದೇಶ: ಅಪ್ರಾಪ್ತ ಮಗಳ ಮೇಲೆ ಅತ್ಯಾಚಾರ ಎಸಗಿದ ಆರ್‌ಎಸ್‌ಎಸ್‌ ಮುಖಂಡ, ಬಂಧನ

ಭಾರತೀಯ ವಾಯುಸೇನೆಯ ಇಬ್ಬರು ಅಧಿಕಾರಿಗಳು ಸ್ಫೋಟದಲ್ಲಿ ಗಾಯಗೊಂಡಿದ್ದು ಗಂಭೀರ ಪ್ರಮಾಣದ ಅನಾಹುತಗಳಾಗಿಲ್ಲ. ವಾಯುಸೇನೆಯ ಯಾವ ಸಿಬ್ಬಂದಿ ಕೂಡ ಸ್ಫೋಟ ಹೇಗಾಯಿತು ಎಂಬುದನ್ನು ನೋಡಿಲ್ಲ ಎಂದು ವಾಯುಸೇನೆಯ ಮೂಲಗಳು ತಿಳಿಸಿವೆ. ಸ್ಫೋಟದ ಶಬ್ಧ ಕೇಳಿ ಹೊರ ಬಂದು ನೋಡಿದ ಸಂದರ್ಭದಲ್ಲಿ ಮತ್ತೊಂದು  ಸ್ಫೋಟ ನಡೆಯಿತು. ಎರಡನೇ ಸ್ಫೋಟದಲ್ಲಿ ಚಿಕ್ಕ ಗಾಯಗಳಾಗಿವೆ ಎಂದು ಸ್ಫೋಟದಲ್ಲಿ ಗಾಯಗೊಂಡ ಭಾರತೀಯ ವಾಯುಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.

ಲಷ್ಕರೆ ತೋಯ್ಬಾ ಉಗ್ರ ಸಂಘಟನೆಗೆ ಸೇರಿದ ವ್ಯಕ್ತಿಯಿಂದ ಐದು ಕೇಜಿ ಸ್ಫೋಟಕಗಳನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ವಶಪಡಿಸಿಕೊಂಡ ಕೆಲವೇ ಗಂಟೆಗಳಲ್ಲಿ ಈ ಸ್ಫೋಟ ನಡೆದಿದೆ. ಪಾಕಿಸ್ತಾನ ಮೂಲದ ಭಯೋತ್ಪಾದಕ ಜಮ್ಮುವಿನ ಜನನಿಬಿಡ ಪ್ರದೇಶದಲ್ಲಿ ಬಾಂಬ್ ದಾಳಿಯನ್ನು ನೆಸಲು ಉದ್ಧೇಶಿಸಿದ್ದ. ಬಂಧಿತ ಶಂಕಿತ ಉಗ್ರನ ವಿಚಾರಣೆ ಮುಂದುವರೆದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಮುಖೇಶ್ ಸಿಂಗ್ ತಿಳಿಸಿದ್ದಾರೆ.

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಜಮ್ಮು ಕಾಶ್ಮೀರದ ಪ್ರಮುಖ ರಾಜಕೀಯ ನಾಯಕರೊಂದಿಗೆ ದೆಹಲಿಯಲ್ಲಿ ಸಭೆ ನಡೆಸಿದ 2 ದಿನಗಳಲ್ಲಿ ಜಮ್ಮು ವಿಮಾನ ನಿಲ್ಧಾಣದ ಮೇಲೆ ಭಯೋತ್ಪಾದಕ ದಾಳಿಗಳು ನಡೆದಿವೆ. 2019ರ  ಆಗಸ್ಟ್ ನಲ್ಲಿ ಕಾಶ್ಮೀರಕ್ಕೆ ನೀಡಿದ್ದ ಸ್ವಾಯತ್ತತೆಯನ್ನು ಕೇಂದ್ರಸರ್ಕಾರ ಹಿಂಪಡೆದ ನಂತರ ಕಾಶ್ಮೀರದ ನಾಯಕರೊಂದಿಗೆ ನಡೆಯುತ್ತಿರುವ ಮೊಟ್ಟ ಮೊದಲ ರಾಜಕೀಯ ಮಾತುಕತೆ ಇದಾಗಿದೆ. ಕಾಶ್ಮೀರದೊಂದಿಗಿನ ಹೃದಯದ ಅಂತರ ಮತ್ತು ದಿಲ್ಲಿಯ ಅಂತರವನ್ನು ದೂರ ಮಾಡುವ ಪ್ರಯತ್ನ ಇದಾಗಿದೆ ಎಂದು ಪ್ರಧಾನಿ ಮೋದಿ ಜಮ್ಮು ಕಾಶ್ಮೀರ ನಾಯಕರೊಂದಿಗಿನ ಶನಿವಾರದ ತಮ್ಮ ಭೇಟಿಯನ್ನು ಬಣ್ಣಿಸಿದ್ದರು.

ಭಾರತೀಯ ವಾಯುಸೇನೆ ಭಾನುವಾರದ ದಾಳಿ ಕುರಿತು ಹೇಳಿಕೆಗಳನ್ನು ಬಿಡುಗಡೆ ಮಾಡಿದ್ದು ಸ್ಫೋಟದ ಹಿನ್ನಲೆ ಕುರಿತು ಯಾವುದೇ ಹೇಳಿಕೆ ನೀಡಿಲ್ಲ. ಏಕ ಮಹಡಿ ಕಟ್ಟಡದ ಪಕ್ಕದಲ್ಲಿ ನಿಲ್ಲಿಸಲಾಗಿದ್ದ ಹೆಲಿಕ್ಯಾಪ್ಟರ್ ಉಗ್ರರ ಟಾರ್ಗೇಟ್ ಆಗಿತ್ತು. ಕೆಲವೇ ಅಡಿಗಳ ಅಂತರದಲ್ಲಿ ದಾಳಿಯ ಗುರಿ ತಪ್ಪಿದೆ ಎಂದು ಇಂಡಿಯನ್ ಏರ್‌ಫೋರ್ಸನ ಹಿರಿಯ ಅಧಿಕಾರಿಯೊಬ್ಬರು ಸ್ಫೋಟದ ಕುರಿತು ಮಾಹಿತಿ ನೀಡಿದ್ದಾರೆ.

2020 ರ ಜೂನ್ 20 ರಂದು ಗಡಿ ಭದ್ರತಾಪಡೆಯು ಭಾರತ ಪಾಕಿಸ್ತಾನ ಗಡಿಯಲ್ಲಿ ಸ್ಫೋಟಕವನ್ನು ಹೊತ್ತ ಡ್ರೋಣ್ ಒಂದನ್ನು ಹೊಡೆದುರುಳಿಸಿತ್ತು. ಆ ಡ್ರೋಣ್ ಭಾರತದ ಗಡಿಯೊಳಗಿರುವ ಅಲಿ ಬಾಯ್ ಪ್ರದೇಶವನ್ನು ಗುರಿಯಾಗಿಸಿಕೊಂಡು ಹಾರಿಸಲಾಗಿತ್ತು. ಕಳೆದ ಕೆಲವು ತಿಂಗಳುಗಳ ಹಿಂದೆ ಪಿಐಎ ಎಂದು ಬರೆಯಲಾದ ಕೆಲವು ಬಲೂನುಗಳು ಜಮ್ಮು ಭಾಗದಲ್ಲಿ ಹಾರುತ್ತಿದ್ದು ಪೊಲೀಸರು ಅದನ್ನು ವಶಪಡಿಸಿಕೊಂಡಿದ್ದಾರೆ. ಪಾಕಿಸ್ತಾನ ಭಾಗದಿಂದ ಹಾರಿಸಲಾದ ಈ ಬಲೂನುಗಳು ಭಾರತದ ಗಡಿ ಪ್ರದೇಶದ ಒಳಗೆ ಯಶಸ್ವಿಯಾಗಿ ಹಾರಾಟ ನಡೆಸಿದ್ದವು ಎಂದು ಜಮ್ಮು ಪೊಲೀಸರು ತಿಳಿಸಿದ್ದಾರೆ.

ಸ್ಫೋಟಕ್ಕೆ ಸಂಬಂಧಿಸಿದಂತೆ UAPA ಕಾಯ್ದೆಯ ಸೆಕ್ಷನ್ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ.  ರಾಷ್ಟ್ರೀಯ ತನಿಖಾ ದಳ ( NIA) ಮತ್ತು NSG ಕಮಾಂಡೋಗಳು ಸ್ಫೋಟ ನಡೆದ ಸ್ಥಳವನ್ನು ತಮ್ಮ ನಿಯಂತ್ರಣಕ್ಕೆ ಪಡೆದು ಹೆಚ್ಚಿನ ತನಿಖೆಯನ್ನು ನಡೆಸುತ್ತಿದ್ದಾರೆ.

ಪಶ್ಮಿಮ ವಿಭಾಗದ ವಾಯುಸೇನೆ ಕಮಾಂಡರ್ ಏರ್ ಮಾರ್ಷಲ್ ವಿ ಆರ್ ಚೌಧರಿ ಅವರು ಘಟನೆಯ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸಿದ್ದಾರೆ. ಜಮ್ಮು ಕಾಶ್ಮೀರ ಗಡಿಯುದ್ದಕ್ಕೂ ಭೂಸೇನೆ ಮತ್ತು ವಾಯುಸೇನೆಗಳು ಕಟ್ಟೆಚ್ಚರವನ್ನು ವಹಿಸಿವೆ. ಬಾಂಬ್ ನಿಷ್ಕ್ರಿಯದಳದ ತಜ್ಞರನ್ನು ಸೂಕ್ಷ್ಮ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ ಎಂದು ಭಾರತ ಭದ್ರತಾಪಡೆಯ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ದಲಿತ ನಾಯಕ ರಾಮ್ ವಿಲಾಸ್ ಪಾಸ್ವನ್ ಜನ್ಮ ದಿನಾಚರಣೆಗೆ ಮುಂದಾದ RJD: ತೇಜಸ್ವಿ ಯಾದವ್ ಹೊಸ ಹೆಜ್ಜೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...