Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...