Homeಅಂತರಾಷ್ಟ್ರೀಯ10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

10 ವರ್ಷಗಳಿಂದ ಏಕಾಂತವಾಸದಲ್ಲೇ ಇರುವ ಜಪಾನಿನ ವ್ಯಕ್ತಿ: ಕಾರಣ?

- Advertisement -
- Advertisement -

ಕರೊನಾ ಸಾಂಕ್ರಾಮಿಕ ಜಗತ್ತಿಗೆ ಕಾಲಿಟ್ಟ ಕಳೆದ ಒಂದುವರೆ ವರ್ಷದಲ್ಲಿ ಲಾಕ್‌ಡೌನ್, ಕ್ವಾರಂಟೈನ್, ಏಕಾಂತವಾಸಗಳು ಅತ್ಯಂತ ಸಾಮಾನ್ಯವಾಗಿ ಬಿಟ್ಟಿವೆ. ಜನ ಸಂಪರ್ಕಕ್ಕೆ ಬಾರದೇ ಮನೆಯಲ್ಲಿಯೇ ಉಳಿಯುವುದೂ ಸರ್ವೇ ಸಾಮಾನ್ಯವಾಗಿಬಿಟ್ಟಿದೆ. ಜಪಾನಿನ ವ್ಯಕ್ತಿಯೊಬ್ಬ ಕರೊನಾ ಜಗತ್ತಿಗೆ ಕಾಲಿಡುವ ಹಲವು ವರ್ಷ ಮೊದಲೇ ಏಕಾಂತವಾಸದಲ್ಲಿ ಇದ್ದಾರೆ. ಅದು ಕೂಡ ಬರೋಬ್ಬರಿ 10 ವರ್ಷಗಳ ಕಾಲ. ಜೈಲುವಾಸ ಅಥವಾ ಯಾವುದೋ ಖಾಯಿಲೆಯ ಕಾರಣಕ್ಕಾಗಿ ಸೆಲ್ಪ್ ಐಸೋಲೇಶನ್ ಅಲ್ಲ. ವಿಶ್ವ ಪ್ರಸಿದ್ಧ ಬರಹಗಾರ ಗೇಬ್ರಿಯಲ್ ಗಾರ್ಸಿಯಾ ಮಾರ್ಕ್ವೆಜ್ ನೂರು ವರ್ಷಗಳ ಏಕಾಂತ ಎಂಬ ಕೃತಿ ಬರೆದಿದ್ದರು. ಆದರೆ ಇದು ಕತೆಯಲ್ಲ. ನಿಜಜೀವನದಲ್ಲಿ 10 ವರ್ಷಗಳಿಂದ ಏಕಾಂತದಲ್ಲಿರುವ ವ್ಯಕ್ತಿಯ ಜೀವನ. ನಂಬಲಿಕ್ಕೆ ಆಶ್ಚರ್ಯವಾದರೂ ಸತ್ಯ.

ಜಪಾನಿನಲ್ಲಿ ಜಾಗತಿಕ ಕರೊನಾ ಬಿಕ್ಕಟ್ಟು ಕಾಣಿಸಿಕೊಳ್ಳುವ ಮೊದಲೇ ಏಕಾಂತವಾಸದ ಸಂಸ್ಕೃತಿ ಇದೆ. ಸುಮಾರು 10 ಲಕ್ಷ ಜನ ಈ ರೀತಿ ಏಕಾಂತವಾಸದಲ್ಲಿ ಇದ್ದಾರೆ ಎಂದು ಜಪಾನಿನ ಆರೋಗ್ಯ ಇಲಾಖೆ ಹೇಳಿದೆ. ಹೀಗೆ ಏಕಾಂತವಾಸದಲ್ಲಿ ಇರುವ ಪದ್ಧತಿಗಳನ್ನು ಹಿಕಿಕೊಮೋರಿ ಎಂದು ಕರೆಯಲಾಗುತ್ತದೆ. ಕೆಲವರು ವರ್ಷ ತಿಂಗಳು ಐಸೋಲೇಶನ್‌ನಲ್ಲಿ ಇರುತ್ತಾರೆ. ನಿಟೋ ಸೌಜಿ ಎನ್ನುವ ಕಲಾವಿದ ಬರೋಬ್ಬರಿ 10 ವರ್ಷದಿಂದ ಏಕಾಂತವಾಸವನ್ನು ಅನುಭವಿಸುತ್ತಿದ್ದಾರೆ. ವೃತ್ತಿಯಿಂದ ಗೇಮ್ ಡೆವಲಪರ್ ಆಗಿರುವ ನಿಟೋ ಸೌಜಿ ಮೂಲತಃ ಸಂಗೀತ ಕಲಾವಿದ. ಎರಡು ತಿಂಗಳಿಗೊಮ್ಮೆ ಕ್ಷೌರಕ್ಕಾಗಿ ಮಾತ್ರ ನಿಟೋ ಮನೆ ಬಿಟ್ಟು ಹೊರಬಂದು ಜಗತ್ತನ್ನು ನೋಡುತ್ತಾರೆ.

ನಿಟೋ ಸೌಜಿ ಟೋಕಿಯೋ ವಿಶ್ವ ವಿದ್ಯಾಲಯದ ಪದವೀಧರನಾಗಿ ಹೊರ ಬಂದಾಗ ನಿರುದ್ಯೋಗ ಸಮಸ್ಯೆ ಎದುರಾಯಿತು. ಚಿತ್ರಕಲೆಯನ್ನು ಅಭ್ಯಾಸಿಸುವ ಸಲುವಾಗಿ ನಿಟೋ 3 ವರ್ಷಗಳ ಕಾಲ ಮನೆಯಿಂದ ಆಚೆಗೇ ಬರಲಿಲ್ಲ. ನಂತರ ಅದು ಅವರ ಜೀವನ ಶೈಲಿಯಾಯಿತು. ಆರ್ಥಿಕವಾಗಿ ಸ್ವಾವಲಂಬಿಯಾಗಬೇಕೆಂಬ ಪ್ರಯತ್ನದಲ್ಲಿ ಆತ ತಮ್ಮ ಮನೆಯಲ್ಲಿ ಸತತವಾಗಿ ಕಲೆಯ ಅಭ್ಯಾಸ ನಡೆಸಿದ್ದಾರೆ. ಇವರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಮನೆಗೆ ತಲುಪುವ ವ್ಯವಸ್ಥೆಯನ್ನು ಮಾಡಿಕೊಂಡಿದ್ದಾರೆ. ಸದ್ಯ ತಮ್ಮ ಚಿಕ್ಕಮ್ಮನ ಅಪಾರ್ಟಮೆಂಟ್‌ನಲ್ಲಿ ವಾಸವಿದ್ದು ತಮ್ಮ ಏಕಾಂತವಾಸದ ಅನುಭವವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ನಿಟೋ ಬೆಳಿಗ್ಗೆ 11 ಗಂಟೆಗೆ ತಮ್ಮ ದಿನವನ್ನು ಆರಂಭಿಸಿದರೆ ತಿಂಡಿ ತಿಂದು ಇಮೇಲ್‌ಗಳನ್ನು ಚೆಕ್ ಮಾಡಿ, ಸುದ್ದಿಗಳನ್ನು ನೋಡಿ, ಕೆಲಸಕ್ಕೆ  ಸಂಬಂಧಿಸಿದ  ಸಂದೇಶಗಳಿಗೆ ಪ್ರತಿಕ್ರಿಯಿಸಿ ಮತ್ತೆ ತಮ್ಮ ಕೆಲಸವನ್ನು ಆರಂಭಿಸಿದರೆ ಬಿಡುವಾಗುವುದು ಸಂಜೆ. ಒಂದಷ್ಟು ಕಾಲ ದೈಹಿಕ ವ್ಯಾಯಾಮ, ರಾತ್ರಿಯ ಊಟ ಮತ್ತೆ ಗೇಮ್ ಡೆವಲಪ್‌ಮೆಂಟ್ ಕೆಲಸ. ನಡುವೆ ಹೊರ ಜಗತ್ತಿನೊಂದಿಗೆ ನೇರ ಸಂಪರ್ಕವಿಲ್ಲ. ಹೊರಗಡೆ ಸುತ್ತಾಟವಿಲ್ಲ. ಮತ್ತೆ ರಾತ್ರಿ ತಮ್ಮ ಕಲೆಯ ಅಭ್ಯಾಸಕ್ಕೆ ತೊಡಗಿದರೆ ಬೆಳಗಿನ ಜಾವ 4 ಗಂಟೆಗೆ ನಿದ್ರೆಗೆ ಜಾರುತ್ತಾರೆ.

ಎರಡು ಸಾವಿರದ ಹದಿನೈದರಿಂದ ನಿಟೋ ಸೌಜಿ ಇಂಗ್ಲೀಷ್ ಭಾಷೆಯ ಕಲಿಕೆಯಲ್ಲಿ ತೊಡಗಿದ್ದಾರೆ. ಕಂಪ್ಯೂಟರ್ ಮತ್ತು ಮೊಬೈಲ್ ಗೇಮ್‌ಗಳನ್ನು ಅಭಿವೃದ್ಧಿಪಡಿಸುವುದರಲ್ಲಿ ತೊಡಗಿಸಿಕೊಂಡಿದ್ದಾರೆ. ಸ್ವಂತ ಜೀವನದ ಪ್ರೇರಣೆಯಿಂದ ಅವರು ಪುಲ್ ಸ್ಟೇ ಎಂಬ ಡಿಜಿಟಲ್ ಗೇಮ್ ಅನ್ನು ಅಭಿವೃದ್ಧಿಪಡಿಸಿದ್ದಾರೆ. ಈ ಗೇಮ್ 2020 ಅಕ್ಟೋಬರ್‌ನಲ್ಲಿ ಅಂತರ್ಜಾಲದಲ್ಲಿ ಲಭ್ಯವಿದೆ. ಗೇಮ್ ಮೂಲಕ ನಿಟೋ ತಮ್ಮ ಜೀವನದ ಅನುಭವಗಳನ್ನು ಹಿಡಿದಿಟ್ಟಿದ್ದಾರೆ.

ನಿಟೋ ಸೌಜಿ ಯೂಟ್ಯೂಬ್ ಚಾನೆಲ್ ಒಂದನ್ನು ನಡೆಸುತ್ತಿದ್ದು ಸುಮಾರು 2 ಲಕ್ಷ ಜನರು ಅವರ ಅನುಭವಗಳನ್ನು ಯೂಟ್ಯೂಬ್‌ನಲ್ಲಿ ವೀಕ್ಷಿಸುತ್ತಾರೆ. ಅವರಿಂದ ಕಲೆ, ತಂತ್ರಜ್ಞಾನದ ಮಾಹಿತಿಯನ್ನು ಪಡೆಯುತ್ತಾರೆ.

ನಿಟೋ ಸೌಜಿ ಈಗ ಸಂಪೂರ್ಣ ಜೀವನವನ್ನು ತಮ್ಮ ಪ್ರಾಜೆಕ್ಟ್ಗಾಗಿ ಮೀಸಲಿಟ್ಟಿದ್ದಾರೆ. ದೀರ್ಘಾವಧಿಯಲ್ಲೊ ಕೆಲಸಮಾಡುವುದು ಇದರಿಂದ ಕಷ್ಟವಾಗಿದೆ ಎನ್ನುತ್ತಾರೆ.


ಇದನ್ನೂ ಓದಿ : ಬಂಗಾಳ ರಾಜ್ಯಪಾಲರನ್ನು ಕಿತ್ತು ಹಾಕಲು ಒಕ್ಕೂಟ ಸರ್ಕಾರಕ್ಕೆ ಪತ್ರ ಬರೆದ ಮಮತಾ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...