Homeಮುಖಪುಟಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

- Advertisement -
- Advertisement -

ಕಾಂಗ್ರೆಸ್ ಪಾನ್ ಇಂಡಿಯಾ ವ್ಯಾಪ್ತಿಯ ಪಕ್ಷವಾಗಿದ್ದು ಬಿಜೆಪಿ ನೇತೃತ್ವದ ಎನ್‌ಡಿಎ ವಿರುದ್ಧದ ಒಕ್ಕೂಟ ರಚನೆಯಲ್ಲಿ ಕಾಂಗ್ರೆಸ್ ಭಾಗವಹಿಸುವಿಕೆ ಅತ್ಯಂತ ಮಹತ್ವದ್ದಾಗಿದೆ. ರಾಷ್ಟ್ರೀಯ ಪಕ್ಷವಾದ ಕಾಂಗ್ರೆಸ್ ಅನುಪಸ್ಥಿತಿಯಿಂದ ಬಿಜೆಪಿ ವಿರುದ್ಧದ ಒಕ್ಕೂಟಗಳು ದುರ್ಬಲವಾಗಲಿವೆ ಎಂದು ಆರ್‌ಜೆಡಿ ನಾಯಕ ತೇಜಸ್ವಿ ಯಾದವ್ ಅಭಿಪ್ರಾಯಪಟ್ಟಿದ್ದಾರೆ.

ಕಾಂಗ್ರೆಸ್ ದೇಶದಲ್ಲಿ 200 ಕ್ಕಿಂತಲೂ ಹೆಚ್ಚು ಲೋಕಸಭಾ ಕ್ಷೇತ್ರದಲ್ಲಿ ಬಿಜೆಪಿಯೊಂದಿಗೆ ನೇರವಾಗಿ ಸ್ಪರ್ಧಿಸುವ ಶಕ್ತಿಯನ್ನು ಹೊಂದಿದೆ. ಇತರ ಕ್ಷೇತ್ರಗಳಲ್ಲಿ ಸ್ಪರ್ಧಿಸುವ ಸ್ಥಳೀಯ ಪಕ್ಷಗಳು ಈ ವಿಷಯವನ್ನು ಮರೆಯಬಾರದು ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಶರದ್ ಪವಾರ್ ನಿವಾಸದಲ್ಲಿ ನಡೆದ ಸ್ಥಳೀಯ ಪಕ್ಷಗಳ ನಾಯಕರ ಸಭೆಯಲ್ಲಿ ಚರ್ಚೆಯಾದ ವಿಷಯಗಳ ಕುರಿತು ತಮಗೆ ಮಾಹಿತಿಯಿಲ್ಲ ಎಂದು ತೇಜಸ್ವಿ ಯಾದವ್ ತಿಳಿಸಿದ್ದಾರೆ.

ಸಮಾನ ಮನಸ್ಕವಾದ ಎಲ್ಲಾ ಪಕ್ಷಗಳು ಒಂದು ಸಾಮಾನ್ಯ ಪ್ರಣಾಳಿಕೆಯ ಮೂಲಕ ಒಟ್ಟಾಗಿ ಬಿಜೆಪಿಯ ವಿರುದ್ಧ ಹೋರಾಟವನ್ನು ನಡೆಸುವ ಅಗತ್ಯವಿದೆ ಎಂದು ತೇಜಸ್ವಿ ಯಾದವ್ ಇದೇ ಸಂದರ್ಭದಲ್ಲಿ ತಿಳಿಸಿದ್ದಾರೆ.

ವಿರೋಧ ಪಕ್ಷಗಳ ನಾಯಕರ ಸಭೆಯಲ್ಲಿ ಕಾಂಗ್ರೆಸ್‌ ಭಾಗವಹಿಸದೇ ಇರುವುದರಲ್ಲಿ ಆಶ್ಚರ್ಯವೇನಿಲ್ಲ. ಒಂದು ರಾಷ್ಟ್ರೀಯ ಪಕ್ಷವಾಗಿ ಕಾಂಗ್ರೆಸ್‌ ಇತರ ಸ್ಥಳೀಯ ಪಕ್ಷಗಳ ನೇತೃತ್ವದ ಸಭೆಯಲ್ಲಿ ಭಾಗವಹಿಸಬೇಕೆಂದು ಬಯಸುವುದರಲ್ಲಿ ಅರ್ಥವಿಲ್ಲ. ವಿರೋಧ ಪಕ್ಷಗಳ ರಾಷ್ಟ್ರೀಯ ಮಟ್ಟದ ಒಕ್ಕೂಟದಲ್ಲಿ ಕಾಂಗ್ರೆಸ್‌ ಮಹತ್ವದ ಪಾತ್ರವನ್ನು ಹೊಂದಿದೆ. ಇತರ ಸ್ಥಳೀಯ ಪಕ್ಷಗಳು ರಾಷ್ಟ್ರ ರಾಜಕಾರಣದ ಸಂದರ್ಭದಲ್ಲಿ ತಮ್ಮ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಕಾಂಗ್ರೆಸ್‌ ನಾಯಕತ್ವವನ್ನು ಒಪ್ಪಿಕೊಳ್ಳುವುದು ಪ್ರಸ್ತುತ ಸಂದರ್ಭಕ್ಕೆ ಸೂಕ್ತವಾಗಿದೆ ಎಂದು ತೇಜಸ್ವಿ ಯಾದವ್ ಹೇಳಿದ್ದಾರೆ.

2014 ರ ಲೋಕಸಭೆ ಚುನಾವಣೆ ದೇಶ ಒಗ್ಗಟ್ಟಾಗಿ ಉಳಿಯುತ್ತದೆಯೇ ಅಥವಾ ವಿಭಜನೆಯಾಗುತ್ತದೆಯೇ ಎಂದು ನಿರ್ಧರಿಸುವ ಚುನಾವಣೆ ಎಂದು ನಮ್ಮ ನಾಯಕರಾದ ಲಾಲು ಪ್ರಸಾದ್ ಯಾದವ್ 2014 ರಲ್ಲಿ ಹೆಳಿದ್ದರು. ಬಹುತೇಕರಿಗೆ ಇಂದು ಅದು ಅರ್ಥವಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಹಿಂದಿನ ಅನುಭವಗಳ ಪ್ರಕಾರ ತನ್ನ ಪ್ರಾಬಲ್ಯವಿರುವ 200 ಕ್ಷೇತ್ರಗಳ ಕಡೆಗೆ ಮಾತ್ರ ಕಾಂಗ್ರೆಸ್‌ ಗಮನ ಹರಿಸುತ್ತದೆ. ವಿಶಾಲ ಹೃದಯದಿಂದ ಉಳಿದ ಕ್ಷೇತ್ರಗಳನ್ನು ಸ್ಥಳೀಯವಾಗಿ ಪ್ರಬಲವಾಗಿರುವ ಪಕ್ಷಗಳಿಗೆ ಕಾಂಗ್ರೆಸ್‌ ಬಿಟ್ಟುಕೊಡಲು ಮುಂದಾಗಬೇಕು ಎಂದು ಆರ್‌ಜೆಡಿ ನಾಯಕ ತೇಜಸ್ವಿಯಾದವ್ ಮುಂದಿನ ಲೋಕಸಭಾ ಚುನಾವಣಾ ತಂತ್ರಗಳ ಕುರಿತು ಮಾತನಾಡಿದ್ದಾರೆ.

ಶಿವಸೇನೆಯ ಸಂಸದ ಸಂಜಯ್‌ ರಾವತ್ ಕೂಡ ಕಾಂಗ್ರೆಸ್‌ ಪಕ್ಷವನ್ನು ಹೊರತುಪಡಿಸಿ ಬಿಜೆಪಿ ವಿರುದ್ಧದ ಮೈತ್ರಿಕೂಟಕ್ಕೆ ಹೆಚ್ಚಿನ ಮಹತ್ವವಿರುವುದಿಲ್ಲ ಎಂದು ಅಭಿಪ್ರಾಯಪಟ್ಟಿದ್ದರೆ, ಕಾಂಗ್ರೆಸ್ ಹೊರತಾದ ಮೈತ್ರಿಕೂಟದ ರಚನೆಯ ಪ್ರಶ್ನೆ ತಮ್ಮ ಮುಂದಿಲ್ಲ ಎಂದು ಎನ್‌ಸಿಪಿ ಮುಖ್ಯಸ್ಥ ಮತ್ತು ಹಿರಿಯ ರಾಜಕಾರಣಿ ಶರದ್‌ ಪವಾರ್ ಕೂಡ ಸ್ಪಷ್ಟಪಡಿಸಿದ್ದಾರೆ. ತೇಜಸ್ವಿ ಯಾದವ್ ಹೇಳಿಕೆಯಿಂದ ಕಾಂಗ್ರೆಸ್‌ ಜೊತೆಗಿನ ವಿರೋಧ ಪಕ್ಷಗಳ ಒಕ್ಕೂಟದ ರಚನೆಯ ಚರ್ಚೆಗೆ ಮತ್ತೆ ಜೀವ ಬಂದಿದ್ದು ಕಾಂಗ್ರೆಸ್ ಯಾವ ರೀತಿಯಲ್ಲಿ ಈ ಚರ್ಚೆಗಳಿಗೆ ಸ್ಪಂದಿಸುತ್ತದೆ ಎಂಬುದು ರಾಷ್ಟ್ರ ರಾಜಕಾರಣದಲ್ಲಿ ಕುತೂಹಲ ಮೂಡಿಸಿದೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ತೇಜಸ್ವಿ ಯಾದವ್ ಅವರು ಹೇಳಿದ ಮಾತು ನಿಜಕ್ಕೂ ಶ್ಲಾಘನೀಯ ಮತ್ತು ಸತ್ಯವಾಗಿದೆ.ಉಳಿದ ಪಕ್ಷಗಳು ತಮ್ಮ ಸ್ವಾರ್ಥ ಬಿಟ್ಟು ಒಂದಾಗಿ ನಿರ್ಧಾರ ತೆಗೆದುಕೊಂಡರೆ ಒಳ್ಳೆಯದು.ಇಲ್ಲ ಅಂದ್ರೆ ಯಾವುದೇ ಚಿಂತನೆ ಫೇಲ್

  2. ತೇಜಸ್ವಿ ಯಾದವ್ ಅವರ ಅಭಿಪ್ರಾಯ ಸರಿಯಾಗಿದೆ. ಎಲ್ಲಾ ವಿರೋಧ ಪಕ್ಷಗಳೂ ಒಂದಾದಾಗ ಮಾತ್ರ ಮನುವಾದಿಗಳನ್ನು ಸೋಲಿಸಬಹುದು.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...