Homeಮುಖಪುಟಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

- Advertisement -
- Advertisement -

ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿ ಧರ್ಮೇಂದ್ರ ಚತುರ್ ಕಂಪನಿ ತ್ಯಜಿಸಿದ್ದಾರೆ. ಈ ಅವಕಾಶವನ್ನು ಬಳಸಿಕೊಂಡು ಸರ್ಕಾರ ಮತ್ತೆ ಟ್ವಿಟರ್ ವಿರುದ್ಧ ಮುಗಿ ಬೀಳುವ ಸಾಧ್ಯತೆಗಳಿವೆ.

ಹೊಸ ಐಟಿ ನಿಯಮಗಳ ಪ್ರಕಾರ, ಭಾರತೀಯ ಬಳಕೆದಾರರಿಂದ ದೂರುಗಳನ್ನು ಪರಿಹರಿಸಲು ಮೈಕ್ರೊ-ಬ್ಲಾಗಿಂಗ್ ತಾಣಗಳು ಒಬ್ಬ ಕುಂದುಕೊರತೆ ಪರಿಶೀಲನಾ ಅಧಿಕಾರಿಯನ್ನು ಹೊಂದಿರಬೇಕು. ಈಗ  ಟ್ವಿಟರ್‌ನ ಈ ಅಧಿಕಾರಿ ಪದತ್ಯಾಗ ಮಾಡಿದ ಕಾರಣಕ್ಕೆ ಟ್ವಿಟರ್ ಇಂಡಿಯಾದಲ್ಲಿ ಆ ಸ್ಥಾನ ಖಾಲಿ ಉಳಿದಿದೆ ಎಂದು ಮೂಲವೊಂದನ್ನು ಉಲ್ಲೇಖಿಸಿ ದಿ ಟೆಲೆಗ್ರಾಫ್‍ ಇಂಡಿಯಾ ವರದಿ ಮಾಡಿದೆ.

ಇತ್ತೀಚೆಗೆ ಟ್ವಿಟರ್ ಇಂಡಿಯಾದ ಹಂಗಾಮಿ ಕುಂದುಕೊರತೆ ಅಧಿಕಾರಿಯಾಗಿ ನೇಮಕಗೊಂಡಿದ್ದ ಧರ್ಮೇಂದ್ರ ಚತುರ್ ಅವರು ಈ ಹುದ್ದೆ ತ್ಯಜಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮಾಹಿತಿ ತಂತ್ರಜ್ಞಾನ ಮತ್ತು ಡಿಜಿಟಲ್ ಮೀಡಿಯಾ ಎಥಿಕ್ಸ್ ಕೋಡ್ ನಿಯಮಗಳು-2021ರ ಪ್ರಕಾರ ಕಂಪನಿಯ ವೆಬ್‌ಸೈಟ್ ಇನ್ನು ಮುಂದೆ ಅವರ ಹೆಸರನ್ನು ತೋರಿಸುವಂತಿಲ್ಲ.

ಈ ಬೆಳವಣಿಗೆ ಬಗ್ಗೆ ಟ್ವಿಟರ್ ಪ್ರತಿಕ್ರಿಯಿಸಲು ನಿರಾಕರಿಸಿದೆ. ಹೊಸ ಸಾಮಾಜಿಕ ಮಾಧ್ಯಮ ನಿಯಮಗಳ ಕುರಿತಂತೆ ಸರ್ಕಾರ ಮತ್ತು ಟ್ವಿಟರ್  ನಡುವೆ ಸಂಘರ್ಷ ನಡೆಯುತ್ತಿರುವ  ಸಮಯದಲ್ಲಿ ಈ ಬೆಳವಣಿಗೆ ಸಂಭವಿಸಿದೆ.

ಹೊಸ ಐಟಿ ನಿಯಮಗಳನ್ನು ಟ್ವಿಟರ್ ಉದ್ದೇಶಪೂರ್ವಕವಾಗಿ ಧಿಕ್ಕರಿಸುತ್ತಿದೆ ಮತ್ತು ದೇಶದ ಹೊಸ ಐಟಿ ನಿಯಮಗಳನ್ನು ಪಾಲಿಸಲು ವಿಫಲವಾಗಿದೆ ಎಂದು ಸರ್ಕಾರ ಟ್ವಿಟರ್ ವಿರುದ್ಧ ವಾಗ್ದಾಳಿ ನಡೆಸುತ್ತಿದೆ.

ಮೇ 25ರಿಂದ ಜಾರಿಗೆ ಬಂದ ಹೊಸ ನಿಯಮಗಳ ಪ್ರಕಾರ, ಸಾಮಾಜಿಕ ಮಾಧ್ಯಮ ಕಂಪನಿಗಳು  ಬಳಕೆದಾರರಿಂದ ಅಥವಾ ಸಂತ್ರಸ್ತರಿಂದ ದೂರುಗಳನ್ನು ಪರಿಹರಿಸಲು ಕುಂದುಕೊರತೆ ನಿವಾರಣಾ ವ್ಯವಸ್ಥೆಯನ್ನು ಸ್ಥಾಪಿಸಬೇಕಿದೆ.

50 ಲಕ್ಷಕ್ಕೂ ಹೆಚ್ಚು ಬಳಕೆದಾರರನ್ನು ಹೊಂದಿರುವ ಎಲ್ಲಾ ಮಹತ್ವದ ಸಾಮಾಜಿಕ ಮಾಧ್ಯಮ ಕಂಪನಿಗಳು ಬಳಕೆದಾರರ ಅಥವಾ ಸಂತ್ರಸ್ತರ ದೂರುಗಳನ್ನು ಪರಿಹರಿಸಲು ಕುಂದುಕೊರತೆ ಅಧಿಕಾರಿಯನ್ನು ನೇಮಿಸಬೇಕು ಮತ್ತು ಅಂತಹ ಅಧಿಕಾರಿಗಳ ಹೆಸರು ಮತ್ತು ಸಂಪರ್ಕ ವಿವರಗಳನ್ನು ಸಾರ್ವಜನಿಕವಾಗಿ ಹಂಚಿಕೊಳ್ಳಬೇಕು.

ಹೊಸ ಐಟಿ ನಿಯಮ ಪ್ರಕಾರ, ದೊಡ್ಡ ಸಾಮಾಜಿಕ ಮಾಧ್ಯಮ ಕಂಪನಿಗಳು ಮುಖ್ಯ ಅನುಸರಣೆ ಅಧಿಕಾರಿ, ನೋಡಲ್ ಸಂಪರ್ಕ ವ್ಯಕ್ತಿ ಮತ್ತು ಕುಂದುಕೊರತೆ ಅಧಿಕಾರಿಯನ್ನು ನೇಮಿಸುವುದು ಕಡ್ಡಾಯವಾಗಿದ್ದು, ಇವರೆಲ್ಲರೂ ಭಾರತದಲ್ಲಿ ವಾಸವಿರಬೇಕು.

ಜೂನ್ 5ರಂದು ಸರ್ಕಾರ ನೀಡಿರುವ ಅಂತಿಮ ನೋಟಿಸ್‌ಗೆ ಪ್ರತಿಕ್ರಿಯೆಯಾಗಿ ಟ್ವಿಟರ್, ಹೊಸ ಐಟಿ ನಿಯಮಗಳನ್ನು ಪಾಲಿಸಲು ಉದ್ದೇಶಿಸಿದೆ ಮತ್ತು ಮುಖ್ಯ ಅನುಸರಣೆ ಅಧಿಕಾರಿಯ ವಿವರಗಳನ್ನು ಹಂಚಿಕೊಳ್ಳಲಿದೆ ಎಂದು ಹೇಳಿದೆ. ಈ ಮಧ್ಯೆ, ಟ್ವಿಟರ್  ಧರ್ಮೇಂದ್ರ ಚತುರ್‌ರನ್ನು ಭಾರತದ ಹಂಗಾಮಿ ನಿವಾಸಿ (ರೆಸಿಡೆಂಟ್‍) ಕುಂದುಕೊರತೆ ಅಧಿಕಾರಿಯಾಗಿ ನೇಮಿಸಿತ್ತು.

ಈಗ ಅವರ ಪದತ್ಯಾಗದ ನಂತರ ಕಾನೂನು ಸಮಸ್ಯೆಗಳನ್ನು ಟ್ವಿಟರ್ ಎದುರಿಸಬೇಕಾಗಬಹುದು.

ಟ್ವಿಟರ್ ಈಗ ಭಾರತದ ಕುಂದುಕೊರತೆ ಅಧಿಕಾರಿಯ ವಿವರ ತೋರಿಸಬೇಕಾದ ಸ್ಪೇಸ್‍ನಲ್ಲಿ  ಅಮೆರಿಕಾ ವಿಳಾಸ ಮತ್ತು ಇಮೇಲ್ ಐಡಿಯೊಂದಿಗೆ ಕಂಪನಿ ಹೆಸರನ್ನು ಡಿಸ್‍ಪ್ಲೇ ಮಾಡುತ್ತಿದೆ.

ಸರ್ಕಾರಿ ಅಧಿಕಾರಿಯೊಬ್ಬರ ಪ್ರಕಾರ, ಕಂಪನಿಯು ಒಂದು ಹಂತದಲ್ಲಿ ಕಾನೂನು ರಕ್ಷಣೆಯನ್ನು ಕಳೆದುಕೊಂಡಿದೆ ಮತ್ತು ಅದರ ಬಳಕೆದಾರರು ವೇದಿಕೆಯಲ್ಲಿ ಪೋಸ್ಟ್ ಮಾಡಿದ ಎಲ್ಲಾ ವಿಷಯಗಳಿಗೆ ಕಾನೂನುಬದ್ಧವಾಗಿ ಕಂಪನಿಯೇ ಜವಾಬ್ದಾರಿ ಹೊರಬೇಕಾಗುತ್ತದೆ.


ಇದನ್ನೂ ಓದಿ; ಕಾನೂನು ಉಲ್ಲಂಘನೆ: ಸಚಿವ ರವಿಶಂಕರ್‌ ಪ್ರಸಾದ್ ಟ್ವಿಟರ್‌ ಅಕೌಂಟ್‌ಗೆ ಒಂದು ಗಂಟೆ ನಿರ್ಬಂಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...