Homeಚಳವಳಿಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗವು ನಮಗೆ ಹಲವು ಪಾಠಗಳನ್ನು ಕಲಿಸಿದೆ. ದೇಶದ ಆರೋಗ್ಯ ಪರಿಸ್ಥಿತಿ ಮತ್ತು ಕೋವಿಡ್‍ ಅಲ್ಲದ ಸಂದರ್ಭದಲ್ಲೂ ಸಾಮಾನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಅನೇಕ ಪಾಠಗಳನ್ನು ಕಲಿಯಲು ದಾರಿ ಮಾಡಿಕೊಟ್ಟಿದೆ. ಈಗ ಕಲ್ಯಾಣ ಕಾರ್ಯಕ್ರಮಗಳನ್ನು (welfare system) ಮರು ವಿನ್ಯಾಸಗೊಳಿಸುವ ಅಗತ್ಯ ಇದೆ ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಜೋಧ್‍ಪುರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಪ್ಲಿಮೆಂಟೇಶನ್ ರಿಸರ್ಚ್ ಆಯೋಜಿಸಿದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ದೇಶದ ಆರೋಗ್ಯ ಪರಿಸ್ಥಿತಿ, ಕಲ್ಯಾಣ ಕಾರ್ಯಕ್ರಮ ಮತ್ತು ಆರೋಗ್ಯ ವ್ಯವಸ್ಥೆಗಳ ಆರ್ಥಿಕ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು.

ಆರೋಗ್ಯ ಪರಿಸ್ಥಿತಿಯ ಆರ್ಥಿಕ ಅಂಶದ ಕುರಿತು ಮಾತನಾಡುತ್ತ, ‘ಭಾರತವು ಜೀವನಶೈಲಿ (ಲೈಫ್‍ಸ್ಟೈಲ್‍)  ಕಾಯಿಲೆಗಳಿಂದ ಬಳಲುತ್ತಿರುವ ದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಅವು ಸಾಂಕ್ರಾಮಿಕವಲ್ಲದ ಕಾಯಿಲೆಗಳು (ಎನ್‌ಸಿಡಿ). ಸಾಂಕ್ರಾಮಿಕ ರೋಗದ ಎರಡನೆಯ ಮತ್ತು ಮೊದಲ ಅಲೆಯಲ್ಲಿ ಅನೇಕ ಯುವಕರು ಸಾವನ್ನಪ್ಪಿದರು. ಆದರೆ ಅವರ ಆಗಿನ ಪರಿಸ್ಥಿತಿಗಳನ್ನು ಪತ್ತೆ ಮಾಡಿಲ್ಲ. ಯುವಕರಲ್ಲಿ ಇಂಥಹದ್ದು ಹೇಗೆ ಸಂಭವಿಸಿತು ಎಂದು ಪ್ರಶ್ನಿಸಿದ ಅವರು, ಸಾಂಕ್ರಾಮಿಕವಲ್ಲದ ಕಾಯಿಲೆಗಳ (ಎನ್‌ಸಿಡಿ) ಬಗ್ಗೆ ಜಾಗೃತಿ ಮೂಡಿಸುವುದು ಒಂದು ಪ್ರಮುಖ ಸವಾಲಾಗಿದೆ ಎಂದರು.

‘ದೇಶದ ಕಲ್ಯಾಣ ವ್ಯವಸ್ಥೆಯನ್ನು (ಸಾಮಾಜಿಕ ಕಲ್ಯಾಣ ಕಾರ್ಯಕ್ರಮ) ಸಾಂಕ್ರಾಮಿಕ ರೋಗ ಎದುರಿಸಲು ವಿನ್ಯಾಸಗೊಳಿಸಲಾಗಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಸಂದರ್ಭಗಳನ್ನು ಎದುರಿಸಲು ಕಲ್ಯಾಣ ಯೋಜನೆಗಳನ್ನು ಮರುವಿನ್ಯಾಸಗೊಳಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.

ದೇಶದ ಆರೋಗ್ಯ ವ್ಯವಸ್ಥೆಯ ವಿವಿಧ ಆಯಾಮಗಳ ಕುರಿತು ಮಾತನಾಡಿದ ಬ್ಯಾನರ್ಜಿ, ಯಾವುದೇ  ವೈದ್ಯಕೀಯ ಅರ್ಹತೆ ಇಲ್ಲದ ನಕಲಿ ವೈದ್ಯರ ಚಿಕಿತ್ಸೆ ಮತ್ತು ಸ್ಟಿರಾಯ್ಡ್ ಗಳ ವಿವೇಚನೆಯಿಲ್ಲದ ಬಳಕೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಒಂದು ಅಧ್ಯಯನವನ್ನು ಉಲ್ಲೇಖಿಸಿ, ಪಶ್ಚಿಮ ಬಂಗಾಳದಲ್ಲಿ, ಕಡಿಮೆ ತೂಕದ ಮಹಿಳೆಯರು ಮದುವೆ ಹೊತ್ತಿಗೆ ತೂಕ ಹೆಚ್ಚು ಮಾಡಿಕೊಳ್ಳಲು ಆಗಾಗ್ಗೆ ಸ್ಟಿರಾಯ್ಡ್‌ಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಈ ಸ್ಟಿರಾಯ್ಡ್ ಸ್ಥಳೀಯ ದಿನಸಿಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ (ಕ್ವಾಕ್) ಪರಿಪಾಠ ಸಂಪೂರ್ಣವಾಗಿ ಮುಕ್ತ ವಿದ್ಯಮಾನವೆಂದು ಹೇಳುವ ಬ್ಯಾನರ್ಜಿ, ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕಠಿಣ ಕಾನೂನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಆರೋಗ್ಯ ವ್ಯವಸ್ಥೆಯನ್ನು ಆರೋಗ್ಯ ವ್ಯವಸ್ಥೆಯಿಂದ ಹೊರಗುಳಿದವರು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಾಮಾನ್ಯ ಕಾಯಿಲೆಗಳಿಗೆ ಔಷಧಿಗಳನ್ನು ಅತಿಯಾಗಿ ಶಿಫಾರಸು ಮಾಡುವ ವಿಷಯವನ್ನೂ ಬ್ಯಾನರ್ಜಿ ಎತ್ತಿ ತೋರಿಸಿದರು. ವೈದ್ಯಕೀಯ ಕಡೆಗಿನ ಗ್ರಾಹಕ ಸಂಸ್ಕೃತಿಯನ್ನು ದೂರಿದ ಅವರು, ರೋಗನಿರೋಧಕತೆ ತರುವ ವಿಧಾನದ ಬದಲು, ರೋಗ ತಡೆಗಟ್ಟುವ ಅಭಿವೃದ್ಧಿಯ ಅಗತ್ಯವನ್ನು ಒತ್ತಿ ಹೇಳಿದರು.

ನಾವು ಔಷಧಿಗಳ ಬೇಡಿಕೆಗೆ ಒಡ್ಡಿಕೊಳ್ಳುತ್ತೇವೆ. ನಾವು ವೈದ್ಯರ ಬಳಿಗೆ ಹೋಗಿ ‘ನಮಗೆ ಏನನ್ನಾದರೂ ನೀಡಿ’ ಎಂದು ಕೇಳುತ್ತೇವೆ, ಅವರು ಔಷಧಿಗಳನ್ನು ಶಿಫಾರಸು ಮಾಡಲು ಇಷ್ಟವಿಲ್ಲದಿದ್ದಾಗಲೂ ಕೂಡ ನಾವು, ’ಏನನ್ನಾದರೂ ನೀಡಿ ಎನ್ನುತ್ತೇವೆ’ ಎಂದು ಬ್ಯಾನರ್ಜಿ ತಿಳಿಸಿದರು.

ಕಾಯಿಲೆ ತಡೆಗಟ್ಟುವಿಕೆಗಾಗಿ ಒಂದು ಸರಳ ವ್ಯವಸ್ಥೆಯನ್ನು ನಿರ್ಮಿಸುವ ಅವಶ್ಯಕತೆಯಿದೆ ಮತ್ತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...