Homeಚಳವಳಿಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

- Advertisement -
- Advertisement -

ಕೋವಿಡ್ ಸಾಂಕ್ರಾಮಿಕ ರೋಗವು ನಮಗೆ ಹಲವು ಪಾಠಗಳನ್ನು ಕಲಿಸಿದೆ. ದೇಶದ ಆರೋಗ್ಯ ಪರಿಸ್ಥಿತಿ ಮತ್ತು ಕೋವಿಡ್‍ ಅಲ್ಲದ ಸಂದರ್ಭದಲ್ಲೂ ಸಾಮಾನ್ಯ ಸನ್ನದ್ಧತೆಗೆ ಸಂಬಂಧಿಸಿದಂತೆ ಅನೇಕ ಪಾಠಗಳನ್ನು ಕಲಿಯಲು ದಾರಿ ಮಾಡಿಕೊಟ್ಟಿದೆ. ಈಗ ಕಲ್ಯಾಣ ಕಾರ್ಯಕ್ರಮಗಳನ್ನು (welfare system) ಮರು ವಿನ್ಯಾಸಗೊಳಿಸುವ ಅಗತ್ಯ ಇದೆ ಎಂದು ಅಭಿಜಿತ್ ಬ್ಯಾನರ್ಜಿ ಹೇಳಿದ್ದಾರೆ.

ಜೋಧ್‍ಪುರ್‌ನ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಫಾರ್ ಇಂಪ್ಲಿಮೆಂಟೇಶನ್ ರಿಸರ್ಚ್ ಆಯೋಜಿಸಿದ ವೆಬಿನಾರ್ ಅನ್ನು ಉದ್ದೇಶಿಸಿ ಮಾತನಾಡಿದ ಬ್ಯಾನರ್ಜಿ, ದೇಶದ ಆರೋಗ್ಯ ಪರಿಸ್ಥಿತಿ, ಕಲ್ಯಾಣ ಕಾರ್ಯಕ್ರಮ ಮತ್ತು ಆರೋಗ್ಯ ವ್ಯವಸ್ಥೆಗಳ ಆರ್ಥಿಕ ಅಂಶಗಳ ಬಗ್ಗೆ ಬೆಳಕು ಚೆಲ್ಲಿದರು.

ಆರೋಗ್ಯ ಪರಿಸ್ಥಿತಿಯ ಆರ್ಥಿಕ ಅಂಶದ ಕುರಿತು ಮಾತನಾಡುತ್ತ, ‘ಭಾರತವು ಜೀವನಶೈಲಿ (ಲೈಫ್‍ಸ್ಟೈಲ್‍)  ಕಾಯಿಲೆಗಳಿಂದ ಬಳಲುತ್ತಿರುವ ದೊಡ್ಡ ಜನಸಂಖ್ಯೆಯನ್ನು ಹೊಂದಿದೆ. ಅವು ಸಾಂಕ್ರಾಮಿಕವಲ್ಲದ ಕಾಯಿಲೆಗಳು (ಎನ್‌ಸಿಡಿ). ಸಾಂಕ್ರಾಮಿಕ ರೋಗದ ಎರಡನೆಯ ಮತ್ತು ಮೊದಲ ಅಲೆಯಲ್ಲಿ ಅನೇಕ ಯುವಕರು ಸಾವನ್ನಪ್ಪಿದರು. ಆದರೆ ಅವರ ಆಗಿನ ಪರಿಸ್ಥಿತಿಗಳನ್ನು ಪತ್ತೆ ಮಾಡಿಲ್ಲ. ಯುವಕರಲ್ಲಿ ಇಂಥಹದ್ದು ಹೇಗೆ ಸಂಭವಿಸಿತು ಎಂದು ಪ್ರಶ್ನಿಸಿದ ಅವರು, ಸಾಂಕ್ರಾಮಿಕವಲ್ಲದ ಕಾಯಿಲೆಗಳ (ಎನ್‌ಸಿಡಿ) ಬಗ್ಗೆ ಜಾಗೃತಿ ಮೂಡಿಸುವುದು ಒಂದು ಪ್ರಮುಖ ಸವಾಲಾಗಿದೆ ಎಂದರು.

‘ದೇಶದ ಕಲ್ಯಾಣ ವ್ಯವಸ್ಥೆಯನ್ನು (ಸಾಮಾಜಿಕ ಕಲ್ಯಾಣ ಕಾರ್ಯಕ್ರಮ) ಸಾಂಕ್ರಾಮಿಕ ರೋಗ ಎದುರಿಸಲು ವಿನ್ಯಾಸಗೊಳಿಸಲಾಗಿಲ್ಲ ಮತ್ತು ಭವಿಷ್ಯದಲ್ಲಿ ಇಂತಹ ಸಂದರ್ಭಗಳನ್ನು ಎದುರಿಸಲು ಕಲ್ಯಾಣ ಯೋಜನೆಗಳನ್ನು ಮರುವಿನ್ಯಾಸಗೊಳಿಸುವ ಅಗತ್ಯವಿದೆ’ ಎಂದು ಒತ್ತಿ ಹೇಳಿದರು.

ದೇಶದ ಆರೋಗ್ಯ ವ್ಯವಸ್ಥೆಯ ವಿವಿಧ ಆಯಾಮಗಳ ಕುರಿತು ಮಾತನಾಡಿದ ಬ್ಯಾನರ್ಜಿ, ಯಾವುದೇ  ವೈದ್ಯಕೀಯ ಅರ್ಹತೆ ಇಲ್ಲದ ನಕಲಿ ವೈದ್ಯರ ಚಿಕಿತ್ಸೆ ಮತ್ತು ಸ್ಟಿರಾಯ್ಡ್ ಗಳ ವಿವೇಚನೆಯಿಲ್ಲದ ಬಳಕೆ ಬಗ್ಗೆ ಆತಂಕ ವ್ಯಕ್ತಪಡಿಸಿದರು.

ಒಂದು ಅಧ್ಯಯನವನ್ನು ಉಲ್ಲೇಖಿಸಿ, ಪಶ್ಚಿಮ ಬಂಗಾಳದಲ್ಲಿ, ಕಡಿಮೆ ತೂಕದ ಮಹಿಳೆಯರು ಮದುವೆ ಹೊತ್ತಿಗೆ ತೂಕ ಹೆಚ್ಚು ಮಾಡಿಕೊಳ್ಳಲು ಆಗಾಗ್ಗೆ ಸ್ಟಿರಾಯ್ಡ್‌ಗಳನ್ನು ತೆಗೆದುಕೊಳ್ಳುತ್ತಾರೆ ಮತ್ತು ಈ ಸ್ಟಿರಾಯ್ಡ್ ಸ್ಥಳೀಯ ದಿನಸಿಗಳಲ್ಲಿ ಸುಲಭವಾಗಿ ಲಭ್ಯವಿದೆ ಎಂದು ಆತಂಕ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶಗಳಲ್ಲಿ ನಕಲಿ ವೈದ್ಯರ (ಕ್ವಾಕ್) ಪರಿಪಾಠ ಸಂಪೂರ್ಣವಾಗಿ ಮುಕ್ತ ವಿದ್ಯಮಾನವೆಂದು ಹೇಳುವ ಬ್ಯಾನರ್ಜಿ, ಈ ಸಮಸ್ಯೆಯನ್ನು ಪರಿಹರಿಸಲು ಯಾವುದೇ ಕಠಿಣ ಕಾನೂನು ಜಾರಿಗೊಳಿಸಲಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ನಮ್ಮ ಆರೋಗ್ಯ ವ್ಯವಸ್ಥೆಯನ್ನು ಆರೋಗ್ಯ ವ್ಯವಸ್ಥೆಯಿಂದ ಹೊರಗುಳಿದವರು ನಿರ್ವಹಿಸುತ್ತಿದ್ದಾರೆ ಎಂದು ಅವರು ಹೇಳಿದರು.

ಸಾಮಾನ್ಯ ಕಾಯಿಲೆಗಳಿಗೆ ಔಷಧಿಗಳನ್ನು ಅತಿಯಾಗಿ ಶಿಫಾರಸು ಮಾಡುವ ವಿಷಯವನ್ನೂ ಬ್ಯಾನರ್ಜಿ ಎತ್ತಿ ತೋರಿಸಿದರು. ವೈದ್ಯಕೀಯ ಕಡೆಗಿನ ಗ್ರಾಹಕ ಸಂಸ್ಕೃತಿಯನ್ನು ದೂರಿದ ಅವರು, ರೋಗನಿರೋಧಕತೆ ತರುವ ವಿಧಾನದ ಬದಲು, ರೋಗ ತಡೆಗಟ್ಟುವ ಅಭಿವೃದ್ಧಿಯ ಅಗತ್ಯವನ್ನು ಒತ್ತಿ ಹೇಳಿದರು.

ನಾವು ಔಷಧಿಗಳ ಬೇಡಿಕೆಗೆ ಒಡ್ಡಿಕೊಳ್ಳುತ್ತೇವೆ. ನಾವು ವೈದ್ಯರ ಬಳಿಗೆ ಹೋಗಿ ‘ನಮಗೆ ಏನನ್ನಾದರೂ ನೀಡಿ’ ಎಂದು ಕೇಳುತ್ತೇವೆ, ಅವರು ಔಷಧಿಗಳನ್ನು ಶಿಫಾರಸು ಮಾಡಲು ಇಷ್ಟವಿಲ್ಲದಿದ್ದಾಗಲೂ ಕೂಡ ನಾವು, ’ಏನನ್ನಾದರೂ ನೀಡಿ ಎನ್ನುತ್ತೇವೆ’ ಎಂದು ಬ್ಯಾನರ್ಜಿ ತಿಳಿಸಿದರು.

ಕಾಯಿಲೆ ತಡೆಗಟ್ಟುವಿಕೆಗಾಗಿ ಒಂದು ಸರಳ ವ್ಯವಸ್ಥೆಯನ್ನು ನಿರ್ಮಿಸುವ ಅವಶ್ಯಕತೆಯಿದೆ ಮತ್ತು ಅದರ ಬಗ್ಗೆ ಜನರಿಗೆ ಅರಿವು ಮೂಡಿಸಬೇಕು ಎಂದು ಬ್ಯಾನರ್ಜಿ ಹೇಳಿದರು.


ಇದನ್ನೂ ಓದಿ: ಕೊರೊನಾ ಮೊದಲ ಅಲೆಯಿಂದ ಉತ್ತರ ಪ್ರದೇಶ ಪಾಠ ಕಲಿಯಲಿಲ್ಲ: ಆಡಳಿತ ಪಕ್ಷದ ನಾಯಕರಿಂದ ಟೀಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...