Homeಕರೋನಾ ತಲ್ಲಣಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಕರೊನಾ ವೈರಸ್‌ನ ಡೆಲ್ಟಾ ಪ್ಲಸ್‌ ರೂಪಾಂತರಿಯು ದೇಶದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದ್ದು ಕರೊನಾ ಮೂರನೇ ಅಲೆಯ ಸಾಧ್ಯತೆಯ ಕುರಿತು ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರ ನಾಲ್ಕು ಕೊರೊನಾ ರೂಪಾಂತರಿಗಳಿವೆ ಎಂದು ತಜ್ಞರು ತಿಳಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನಯಾನವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಮೊದಲು ಜಗತ್ತನ್ನು ಕಾಡುತ್ತಿರುವ ಇತರ ನಾಲ್ಕು ರೂಪಾಂತರಿ ವೈರಸ್‌ಗಳು ದೇಶವನ್ನು ಪ್ರವೇಶಿಸದಂತೆ ವಿಮಾನ ನಿಲ್ಧಾಣಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ. ಹೊಸದಾಗಿ ಕಾಣಿಸಿಕೊಂಡಿರುವ  B.1.617.3, B.1.1.318 ವೇರಿಯಂಟ್‌ಗಳು ಮತ್ತು ಲಾಂಬ್ಡಾ ಮತ್ತು ಕಾಪ್ಪಾ ರೂಪಾಂತರಿಗಳು ಯುರೋಪಿಯನ್ ದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ ಈ ಕುರಿತು ದೇಶ ಮೊದಲೇ ಎಚ್ಚರಿಕೆಯನ್ನು ವಹಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೂಪಾಂತರಿ ತಳಿಗಳು ವೈರಸ್‌ನ ಹರಡುವಿಕೆಯ ಸಾಮರ್ಥ್ಯವನ್ನು ಅಗಾಧಗೊಳಿಸಿವೆ. ಮೂಲ ವೈರಸ್‌ಗಿಂತ ರೂಪಾಂತರಿಗಳು ಹಲವು ಪಟ್ಟು ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯಗಳನ್ನು ಪಡೆದುಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಡಾ. ನಾಯ್ಡು ಎಚ್ಚರಿಕೆ ನೀಡಿದ್ದಾರೆ.

ಭಾರತ ಸೇರಿದಂತೆ 16 ದೇಶಗಳಲ್ಲಿನ 25% ಕರೋನಾ ಪ್ರಕರಣಗಳು ಡೆಲ್ಟಾ ಪ್ಲಸ್‌ಗೆ ಸಂಬಂಧಿಸಿದ್ದಾಗಿದೆ. ಆಸ್ಟ್ರೇಲಿಯಾ, ಬಹರಿನ್, ಬಾಂಗ್ಲಾದೇಶ್, ಭಾರತ, ಇಂಡೊನೇಷಿಯಾ, ಇಸ್ರೇಲ್, ಜಪಾನ್, ಕೀನ್ಯಾ, ಮಯನ್ಮಾರ್, ಪೆರು, ರಷ್ಯಾ, ಪೋರ್ಚುಗಲ್, ಬ್ರಿಟನ್ , ಸಿಂಗಪೋರ್, ಅಮೆರಿಕ ದೇಶಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿಯು ತೀವ್ರವಾಗಿ ಹರಡುತ್ತಿರುವುದು ಪತ್ತೆಯಾಗಿದೆ. ಕೋವಾಕ್ಸಿನ್ ಮತ್ತು ಕೋವಿಶೋಲ್ಡ್‌ ಲಸಿಕೆಗಳು ಅಲ್ಪಾ, ಬೀಟಾ, ಗಾಮಾ ಮತ್ತು ಡೆಲ್ಟಾ ರೂಪಾಂತರಿಗಳ ವಿರುದ್ಧ ಪರಿಣಾಮಕಾರಿಯಾಗಿ ಕೆಲಸಮಾಡುತ್ತವೆ. ಆದರೆ ಡೆಲ್ಟಾ ಪ್ಲಸ್‌ ವೇರಿಯಂಟ್ ವಿರುದ್ಧ ಲಸಿಕೆಗಳ ಪ್ರಭಾವ ಕಡಿಮೆಯಾಗಿರುವುದು ಸಂಶೊಧನೆಯಿಂದ ಬಹಿರಂಗಗೊಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಸಂಸ್ಥೆ ( ICMR)ಯ ಮುಖ್ಯ ನಿರ್ದೇಶಕರಾದ ಡಾ. ಬಲರಾಮ್ ಭಾರ್ಗವ್‌ ತಿಳಿಸಿದ್ದಾರೆ.

ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಡಾ. ಬಲರಾಮ್ ಭಾರ್ಗವ್ ಅವರು ಅಲ್ಪಾ, ಬೀಟಾ, ಗಾಮಾ, ಗಾಮಾ ಮತ್ತು ಡೆಲ್ಟಾ ರೂಪಾಂತರಿಗಳು ಹೆಚ್ಚು ಅಪಾಯಕಾರಿಯಾಗಿವೆ. ಡೆಲ್ಟಾ ರೂಪಾಂತರಿಯ ಉಪ ವೈರಸ್‌ ಡೆಲ್ಟಾ ಪ್ಲಸ್ ಈ ಸಂದರ್ಭದಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...