Homeಕರೋನಾ ತಲ್ಲಣಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

ಡೆಲ್ಟಾ ಪ್ಲಸ್ ಜೊತೆಗೆ ಇತರ 4 ಅಪಾಯಕಾರಿ ರೂಪಾಂತರಿಗಳಿವೆ: ತಜ್ಞರ ಎಚ್ಚರಿಕೆ

- Advertisement -
- Advertisement -

ಕರೊನಾ ವೈರಸ್‌ನ ಡೆಲ್ಟಾ ಪ್ಲಸ್‌ ರೂಪಾಂತರಿಯು ದೇಶದಲ್ಲಿ ತೀವ್ರ ಆತಂಕವನ್ನು ಸೃಷ್ಟಿಸಿದ್ದು ಕರೊನಾ ಮೂರನೇ ಅಲೆಯ ಸಾಧ್ಯತೆಯ ಕುರಿತು ತಜ್ಞರು ಎಚ್ಚರಿಕೆಯನ್ನು ನೀಡಿದ್ದಾರೆ. ಡೆಲ್ಟಾ ಪ್ಲಸ್ ರೂಪಾಂತರಿಯ ಜೊತೆಗೆ ಇತರ ನಾಲ್ಕು ಕೊರೊನಾ ರೂಪಾಂತರಿಗಳಿವೆ ಎಂದು ತಜ್ಞರು ತಿಳಿಸಿದ್ದಾರೆ. ಅಂತರಾಷ್ಟ್ರೀಯ ವಿಮಾನಯಾನವನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸುವ ಮೊದಲು ಜಗತ್ತನ್ನು ಕಾಡುತ್ತಿರುವ ಇತರ ನಾಲ್ಕು ರೂಪಾಂತರಿ ವೈರಸ್‌ಗಳು ದೇಶವನ್ನು ಪ್ರವೇಶಿಸದಂತೆ ವಿಮಾನ ನಿಲ್ಧಾಣಗಳಲ್ಲಿ ಕಟ್ಟುನಿಟ್ಟಿನ ನಿಗಾ ವಹಿಸುವಂತೆ ತಜ್ಞರು ಸರ್ಕಾರಕ್ಕೆ ಕಠಿಣ ಎಚ್ಚರಿಕೆಯನ್ನು ನೀಡಿದ್ದಾರೆ. ಹೊಸದಾಗಿ ಕಾಣಿಸಿಕೊಂಡಿರುವ  B.1.617.3, B.1.1.318 ವೇರಿಯಂಟ್‌ಗಳು ಮತ್ತು ಲಾಂಬ್ಡಾ ಮತ್ತು ಕಾಪ್ಪಾ ರೂಪಾಂತರಿಗಳು ಯುರೋಪಿಯನ್ ದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿವೆ ಈ ಕುರಿತು ದೇಶ ಮೊದಲೇ ಎಚ್ಚರಿಕೆಯನ್ನು ವಹಿಸಬೇಕು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಹೈದರಾಬಾದ್‌ನ ಯಶೋಧಾ ಆಸ್ಪತ್ರೆಯ ಹಿರಿಯ ವೈದ್ಯ ಡಾ. ವಿಘ್ನೇಶ್ ನಾಯ್ಡು ಒಂದು ರೂಪಾಂತರಿ ತಳಿ ಇನ್ನೂ ಬೇರೆ ಬೇರೆ ರೀತಿಯಲ್ಲಿ ಹೊಸ ರೂಪಾಂತರ ಪಡೆದುಕೊಳ್ಳುತ್ತಿರುವುದು ಆತಂಕಕ್ಕೆ ಕಾರಣವಾಗಿದೆ. ಕರೊನಾ ವೈರಸ್‌ನ ಮೂಲಸ್ವರೂಪವೇ ಬದಲಾಗಿ ಹೊಸ ಸ್ವರೂಪದಲ್ಲಿ ಕಾಣಿಸಿಕೊಳ್ಳುತ್ತಿರುವುದು ಲಸಿಕೆ ಮತ್ತು ಚಿಕಿತ್ಸಾ ವಿಧಾನಗಳ ಪರಿಣಾಮವನ್ನು ಕುಂಠಿತಗೊಳಿಸುತ್ತಿವೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ರೂಪಾಂತರಿ ತಳಿಗಳು ವೈರಸ್‌ನ ಹರಡುವಿಕೆಯ ಸಾಮರ್ಥ್ಯವನ್ನು ಅಗಾಧಗೊಳಿಸಿವೆ. ಮೂಲ ವೈರಸ್‌ಗಿಂತ ರೂಪಾಂತರಿಗಳು ಹಲವು ಪಟ್ಟು ಹೆಚ್ಚು ವೇಗವಾಗಿ ಹರಡುವ ಸಾಮರ್ಥ್ಯಗಳನ್ನು ಪಡೆದುಕೊಂಡಿರುವುದು ಗಮನಕ್ಕೆ ಬಂದಿದೆ ಎಂದು ಡಾ. ನಾಯ್ಡು ಎಚ್ಚರಿಕೆ ನೀಡಿದ್ದಾರೆ.

ಭಾರತ ಸೇರಿದಂತೆ 16 ದೇಶಗಳಲ್ಲಿನ 25% ಕರೋನಾ ಪ್ರಕರಣಗಳು ಡೆಲ್ಟಾ ಪ್ಲಸ್‌ಗೆ ಸಂಬಂಧಿಸಿದ್ದಾಗಿದೆ. ಆಸ್ಟ್ರೇಲಿಯಾ, ಬಹರಿನ್, ಬಾಂಗ್ಲಾದೇಶ್, ಭಾರತ, ಇಂಡೊನೇಷಿಯಾ, ಇಸ್ರೇಲ್, ಜಪಾನ್, ಕೀನ್ಯಾ, ಮಯನ್ಮಾರ್, ಪೆರು, ರಷ್ಯಾ, ಪೋರ್ಚುಗಲ್, ಬ್ರಿಟನ್ , ಸಿಂಗಪೋರ್, ಅಮೆರಿಕ ದೇಶಗಳಲ್ಲಿ ಡೆಲ್ಟಾ ಪ್ಲಸ್‌ ರೂಪಾಂತರಿಯು ತೀವ್ರವಾಗಿ ಹರಡುತ್ತಿರುವುದು ಪತ್ತೆಯಾಗಿದೆ. ಕೋವಾಕ್ಸಿನ್ ಮತ್ತು ಕೋವಿಶೋಲ್ಡ್‌ ಲಸಿಕೆಗಳು ಅಲ್ಪಾ, ಬೀಟಾ, ಗಾಮಾ ಮತ್ತು ಡೆಲ್ಟಾ ರೂಪಾಂತರಿಗಳ ವಿರುದ್ಧ ಪರಿಣಾಮಕಾರಿಯಾಗಿ ಕೆಲಸಮಾಡುತ್ತವೆ. ಆದರೆ ಡೆಲ್ಟಾ ಪ್ಲಸ್‌ ವೇರಿಯಂಟ್ ವಿರುದ್ಧ ಲಸಿಕೆಗಳ ಪ್ರಭಾವ ಕಡಿಮೆಯಾಗಿರುವುದು ಸಂಶೊಧನೆಯಿಂದ ಬಹಿರಂಗಗೊಂಡಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನ ಸಂಸ್ಥೆ ( ICMR)ಯ ಮುಖ್ಯ ನಿರ್ದೇಶಕರಾದ ಡಾ. ಬಲರಾಮ್ ಭಾರ್ಗವ್‌ ತಿಳಿಸಿದ್ದಾರೆ.

ಪತ್ರಿಕಾ ಘೋಷ್ಠಿಯಲ್ಲಿ ಮಾತನಾಡಿದ ಡಾ. ಬಲರಾಮ್ ಭಾರ್ಗವ್ ಅವರು ಅಲ್ಪಾ, ಬೀಟಾ, ಗಾಮಾ, ಗಾಮಾ ಮತ್ತು ಡೆಲ್ಟಾ ರೂಪಾಂತರಿಗಳು ಹೆಚ್ಚು ಅಪಾಯಕಾರಿಯಾಗಿವೆ. ಡೆಲ್ಟಾ ರೂಪಾಂತರಿಯ ಉಪ ವೈರಸ್‌ ಡೆಲ್ಟಾ ಪ್ಲಸ್ ಈ ಸಂದರ್ಭದಲ್ಲಿ ಹೆಚ್ಚು ಆತಂಕವನ್ನು ಸೃಷ್ಟಿಸಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ : ಬಿಜೆಪಿ ವಿರುದ್ಧದ ಮೈತ್ರಿಕೂಟ ರಚನೆಯಲ್ಲಿ ಕಾಂಗ್ರೆಸ್ ಪಾತ್ರ ಮಹತ್ವವಾದುದು: ತೇಜಸ್ವಿ ಯಾದವ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಾರಣಾಸಿ: ಗಂಗಾ ನದಿಯ ದೋಣಿಯಲ್ಲಿ ‘ಇಫ್ತಾರ್’ ಕೂಟ ಆಯೋಜಿಸಿದ್ದಕ್ಕಾಗಿ 14 ಜನರ ಬಂಧನ 

ವಾರಣಾಸಿಯಲ್ಲಿ ಗಂಗಾ ನದಿಯ ಮಧ್ಯದಲ್ಲಿ ದೋಣಿಯಲ್ಲಿ 'ಇಫ್ತಾರ್' (ರಂಜಾನ್ ಸಮಯದಲ್ಲಿ ಸೂರ್ಯಾಸ್ತದ ನಂತರ ತಿನ್ನುವ ಊಟ) ಕೂಟವನ್ನು ಆಯೋಜಿಸಿದ್ದಕ್ಕಾಗಿ ಹದಿನಾಲ್ಕು ಮುಸ್ಲಿಂ ಯುವಕರನ್ನು ಬಂಧಿಸಲಾಗಿದೆ.  ದೈನಂದಿನ ಮುಸ್ಲಿಂ ಜೀವನವನ್ನು ಅಪರಾಧೀಕರಿಸುವ ಮತ್ತೊಂದು ಪ್ರಕರಣ ಇದಾಗಿದ್ದು,...

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ರಾಜೀನಾಮೆ

ಚುನಾವಣೆ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಇಬ್ಬರು ಪ್ರಮುಖ ನಾಯಕರು ತಮ್ಮ ಸ್ಥಾನಗಳಿಗೆ ಮಂಗಳವಾರ (ಮಾ.17) ರಾಜೀನಾಮೆ ಸಲ್ಲಿಸಿದ್ದಾರೆ. ಪಕ್ಷದ ಹಿರಿಯ ನಾಯಕ ಹಾಗೂ ನೌಗಾಂಗ್ ಲೋಕಸಭಾ ಕ್ಷೇತ್ರದ ಹಾಲಿ ಸಂಸದ ಪ್ರದ್ಯುತ್ ಬೋರ್ಡೊಲೊಯ್...

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...