Homeಮುಖಪುಟಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

- Advertisement -
- Advertisement -

ಜಮ್ಮು ವಿಮಾನ ನಿಲ್ಧಾಣದಲ್ಲಿ ಸ್ಪೋಟ ಸಂಭವಿಸಿದ 24 ಗಂಟೆಯೊಳಗೆ ಜಮ್ಮು ಸೇನಾನೆಲೆಯ ಬಳಿ ಎರಡು ಡ್ರೋಣ್‌ಗಳು ಕಾಣಿಸಿಕೊಂಡಿದ್ದು ಸೇನಾಪಡೆಗಳು ಡ್ರೋಣ್‌ಗಳತ್ತ ಗುಂಡು ಹಾರಿಸಿವೆ. ಗುಂಡಿನ ದಾಳಿಯಲ್ಲಿ ಸೇನಾಪಡೆಗಳು ಡ್ರೋನ್‌ಗಳನ್ನು ಹೊಡೆದುರಳಿಸಿವೆ ಎಂದು ಹೇಳಲಾಗುತ್ತಿದ್ದು, ಅಧಿಕೃತವಾದ ಮಾಹಿತಿ ತಿಳಿದುಬಂದಿಲ್ಲ.

ಶನಿವಾರ ಮಧ್ಯರಾತ್ರಿಯ ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿಯಾಗಿ 24 ಗಂಟೆ ಕಳೆಯುವ ಮುನ್ನ ಜಮ್ಮುವಿನ ಭಾರತೀಯ ಭೂಸೇನೆಯ ನೆಲೆಯ ಸಮೀಪ ಮತ್ತೊಮ್ಮೆ ಡ್ರೋಣ್‌ಗಳನ್ನು ಹಾರಿಬಿಡಲಾಗಿದೆ. ಭಾನುವಾರದ ದಾಳಿಯ ನಂತರ ತೀವ್ರ ಕಟ್ಟೆಚ್ಚರವಹಿಸಿದ್ದ ಸೇನಾ ಪಡೆಗಳು ಸಂಭವನೀಯ ದಾಳಿಯನ್ನು ಸೋಮವಾರ ಬೆಳಗಿನ ಜಾವ ತಡೆದಿದ್ದಾರೆ. ಇಂದು ಕಾಣಿಸಿಕೊಂಡ ಡ್ರೋಣ್‌ಗಳು ಸ್ಫೋಟಕಗಳನ್ನು ಹೊತ್ತಿದ್ದವೇ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ಯಾವ ಭಾಗದಿಂದ ಡ್ರೋಣ್‌ಗಳು ಹಾರಿ ಬಂದಿದ್ದವು ಎಂದು ಸೇನಾಪಡಗಳು ತನಿಖೆ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳ (NIA) ದ ಅಧಿಕಾರಿಗಳು  ಮತ್ತು ಬಾಂಬ್ ನಿಷ್ಕ್ರೀಯ ದಳದ ತಜ್ಞರು ಕೂಡ ಡ್ರೋಣ್‌ಗಳ ತನಿಖೆಯಲ್ಲಿ ತೊಡಗಿದ್ದಾರೆ.

“ಮತ್ತೊಮ್ಮೆ ಡ್ರೋನ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಈ ಬಾರಿ ಉಗ್ರರು ಸೇನಾ ಶಿಬಿರವನ್ನ ಗುರಿಯಾಗಿಸಿಕೊಂಡಿದ್ದರು. ಜಮ್ಮು ಏರ್ ಫೋರ್ಸ್ ಸ್ಟೇಶನ್ ಮೇಲಿನ ಡ್ರೋನ್ ದಾಳಿ ಬಳಿಕ ಇಂದು ಮಿಲಿಟರಿ ಸ್ಟೇಶನ್ ಗುರಿ ಮಾಡಿಕೊಂಡಿದ್ದರು. ಕಡಿಮೆ ತೂಕದ ಸ್ಪೋಟಕಗಳನ್ನು ಹೊತ್ತಿದ್ದ ಡ್ರೋಣ್‌ಗಳಿವು ಎಂದು ಶಂಕಿಸಲಾಗಿದೆ. ಭಾರಿ ಪ್ರಮಾಣದ ಭಯೋತ್ಪಾದಕ ದಾಳಿಯನ್ನು ಕೂದಲೆಳೆಯ ಅಂತರದಲ್ಲಿ ತಡೆಯಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ಕಾಲೂಚಕ್ ಮಿಲಿಟರಿ ಸ್ಟೇಶನ್ ಬಳಿ ಡ್ರೋನ್ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿದ್ದ ಸೇನೆ, 20 ರಿಂದ 25 ಸುತ್ತು ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿ ಬಳಿಕ ಡ್ರೋನ್ ಮಾಯವಾಗಿದ್ದು ಸ್ಥಳೀಯ ನಿವಾಸಿಗಳು ಆತಂಕ ಪಡಬೇಕಾಗಿಲ್ಲ ಎಂದು ಸೇನಾಪಡೆಯ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...