Homeಮುಖಪುಟಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

- Advertisement -
- Advertisement -

ಜಮ್ಮು ವಿಮಾನ ನಿಲ್ಧಾಣದಲ್ಲಿ ಸ್ಪೋಟ ಸಂಭವಿಸಿದ 24 ಗಂಟೆಯೊಳಗೆ ಜಮ್ಮು ಸೇನಾನೆಲೆಯ ಬಳಿ ಎರಡು ಡ್ರೋಣ್‌ಗಳು ಕಾಣಿಸಿಕೊಂಡಿದ್ದು ಸೇನಾಪಡೆಗಳು ಡ್ರೋಣ್‌ಗಳತ್ತ ಗುಂಡು ಹಾರಿಸಿವೆ. ಗುಂಡಿನ ದಾಳಿಯಲ್ಲಿ ಸೇನಾಪಡೆಗಳು ಡ್ರೋನ್‌ಗಳನ್ನು ಹೊಡೆದುರಳಿಸಿವೆ ಎಂದು ಹೇಳಲಾಗುತ್ತಿದ್ದು, ಅಧಿಕೃತವಾದ ಮಾಹಿತಿ ತಿಳಿದುಬಂದಿಲ್ಲ.

ಶನಿವಾರ ಮಧ್ಯರಾತ್ರಿಯ ಜಮ್ಮು ವಿಮಾನ ನಿಲ್ಧಾಣದ ಮೇಲಿನ ದಾಳಿಯಾಗಿ 24 ಗಂಟೆ ಕಳೆಯುವ ಮುನ್ನ ಜಮ್ಮುವಿನ ಭಾರತೀಯ ಭೂಸೇನೆಯ ನೆಲೆಯ ಸಮೀಪ ಮತ್ತೊಮ್ಮೆ ಡ್ರೋಣ್‌ಗಳನ್ನು ಹಾರಿಬಿಡಲಾಗಿದೆ. ಭಾನುವಾರದ ದಾಳಿಯ ನಂತರ ತೀವ್ರ ಕಟ್ಟೆಚ್ಚರವಹಿಸಿದ್ದ ಸೇನಾ ಪಡೆಗಳು ಸಂಭವನೀಯ ದಾಳಿಯನ್ನು ಸೋಮವಾರ ಬೆಳಗಿನ ಜಾವ ತಡೆದಿದ್ದಾರೆ. ಇಂದು ಕಾಣಿಸಿಕೊಂಡ ಡ್ರೋಣ್‌ಗಳು ಸ್ಫೋಟಕಗಳನ್ನು ಹೊತ್ತಿದ್ದವೇ ಎಂದು ಇದುವರೆಗೆ ಸ್ಪಷ್ಟವಾಗಿಲ್ಲ. ಯಾವ ಭಾಗದಿಂದ ಡ್ರೋಣ್‌ಗಳು ಹಾರಿ ಬಂದಿದ್ದವು ಎಂದು ಸೇನಾಪಡಗಳು ತನಿಖೆ ನಡೆಸುತ್ತಿದ್ದು, ರಾಷ್ಟ್ರೀಯ ತನಿಖಾ ದಳ (NIA) ದ ಅಧಿಕಾರಿಗಳು  ಮತ್ತು ಬಾಂಬ್ ನಿಷ್ಕ್ರೀಯ ದಳದ ತಜ್ಞರು ಕೂಡ ಡ್ರೋಣ್‌ಗಳ ತನಿಖೆಯಲ್ಲಿ ತೊಡಗಿದ್ದಾರೆ.

“ಮತ್ತೊಮ್ಮೆ ಡ್ರೋನ್ ದಾಳಿಗೆ ಮುಂದಾಗಿದ್ದ ಉಗ್ರರ ಸಂಚನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಈ ಬಾರಿ ಉಗ್ರರು ಸೇನಾ ಶಿಬಿರವನ್ನ ಗುರಿಯಾಗಿಸಿಕೊಂಡಿದ್ದರು. ಜಮ್ಮು ಏರ್ ಫೋರ್ಸ್ ಸ್ಟೇಶನ್ ಮೇಲಿನ ಡ್ರೋನ್ ದಾಳಿ ಬಳಿಕ ಇಂದು ಮಿಲಿಟರಿ ಸ್ಟೇಶನ್ ಗುರಿ ಮಾಡಿಕೊಂಡಿದ್ದರು. ಕಡಿಮೆ ತೂಕದ ಸ್ಪೋಟಕಗಳನ್ನು ಹೊತ್ತಿದ್ದ ಡ್ರೋಣ್‌ಗಳಿವು ಎಂದು ಶಂಕಿಸಲಾಗಿದೆ. ಭಾರಿ ಪ್ರಮಾಣದ ಭಯೋತ್ಪಾದಕ ದಾಳಿಯನ್ನು ಕೂದಲೆಳೆಯ ಅಂತರದಲ್ಲಿ ತಡೆಯಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಮಹಾ ನಿರ್ದೇಶಕ ದಿಲ್ಬಾಗ್ ಸಿಂಗ್ ತಿಳಿಸಿದ್ದಾರೆ.

ಬೆಳಗಿನ ಜಾವ ಮೂರು ಗಂಟೆಗೆ ಕಾಲೂಚಕ್ ಮಿಲಿಟರಿ ಸ್ಟೇಶನ್ ಬಳಿ ಡ್ರೋನ್ ಕಾಣಿಸಿಕೊಳ್ಳುತ್ತಿದ್ದಂತೆ ಅಲರ್ಟ್ ಆಗಿದ್ದ ಸೇನೆ, 20 ರಿಂದ 25 ಸುತ್ತು ಗುಂಡಿನ ದಾಳಿ ನಡೆಸಿದೆ. ಗುಂಡಿನ ದಾಳಿ ಬಳಿಕ ಡ್ರೋನ್ ಮಾಯವಾಗಿದ್ದು ಸ್ಥಳೀಯ ನಿವಾಸಿಗಳು ಆತಂಕ ಪಡಬೇಕಾಗಿಲ್ಲ ಎಂದು ಸೇನಾಪಡೆಯ ಮೂಲಗಳು ತಿಳಿಸಿವೆ.


ಇದನ್ನೂ ಓದಿ : ಜಮ್ಮು ವಾಯುಪಡೆ ವಿಮಾನ ನಿಲ್ಧಾಣದ ಮೇಲೆ ಡ್ರೋಣ್ ದಾಳಿ: ಭಾರತದ ಭದ್ರತಾ ವ್ಯವಸ್ಥೆಗೆ ಹೆಚ್ಚಿದ ಆತಂಕ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...