Homeನ್ಯಾಯ ಪಥಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

ಪುಸ್ತಕ ವಿಮರ್ಶೆ; ಆತ್ಮಮರುಕದಾಚೆ ಸಿಡಿಯುವ ಕಾರುಣ್ಯದ ಕಿಡಿಯ ರೂಪಕಗಳು

- Advertisement -
- Advertisement -

ಉರಿಪಾದದ ನೆರಳಲ್ಲಿ
ತೊಡೆಯ ತೊಗಲ ಸುಲಿದು
ಮೆಟ್ಟಲೆಂದೇ ಅಟ್ಟೆಕಟ್ಟಿದ್ದ ಮಾದರ
ಕುಡಿ ಮಕ್ಕಳ ಚರ್ಮವ ಸುಲಿದು
ನಟ್ಟ ನಡುಬೀದಿಯಲ್ಲಿ ಕೆಡವಿ
ಕ್ಯಾಕರಿಸುವವರ ಉಘೇ ಉಘೇಯ
ಜೊಲ್ಲು ಸುರಿದು ನಾರುತ್ತಿದೆ ನಾಡು..

ಒಂದು ಕ್ಷಣ ಮೈಕೊಡವಿ ಕಣ್ಣು ಅಗಲಿಸಿ, ಎದೆ ಉರಿಯುವಂತೆ ಮಾಡುವ ಸಾಲುಗಳಿವು. ಅವಡುಗಚ್ಚಿ ಸಹಿಸಿಕೊಳ್ಳುತ್ತಿದ್ದರೂ, ಕಣ್ಣಲ್ಲಿ ಕಣ್ಣೀರ ಜೊತೆ ಕಿಡಿಯೂ ಸಿಡಿಯುತ್ತಿರುವಂತಿವೆ ಈ ಸಾಲುಗಳು. ‘ಕಾರುಣ್ಯದ ಮೋಹಕ ನವಿಲುಗಳೆ’ ಎಂಬ ರಮ್ಯವೆನಿಸುವ ಶೀರ್ಷೀಕೆಯೊಳಗೆ ಸುಡು ಕೆಂಡಗಳನ್ನೇ ಇಟ್ಟಿದ್ದಾರೆ ಕವಿ ಆರನಕಟ್ಟೆ ರಂಗನಾಥ. ಶತಮಾನಗಳ ಶೋಷಣೆಯಲ್ಲಿ ಬೆಂದ ಕತೆಗಳನ್ನು ನಮ್ಮ ಅಂಗೈಯಲ್ಲಿ ಸುಡುಸುಡುವಂತೆಯೇ ಇಟ್ಟ ಹಾಗೆನಿಸುತ್ತದೆ. ಈ ಕವಿತೆಗಳನ್ನು ಓದಿ ಮರುಗಬೇಕೆನಿಸುವಷ್ಟರಲ್ಲಿ, ಬೆಚ್ಚಿ ಬೀಳಿಸಿ ಜೀವದ ಘನತೆಯನ್ನೇ ಮರೆತ ನಮ್ಮ ಸಮಾಜದ ಶತಮಾನಗಳ ಶೋಷಣೆಯ ಚಿತ್ರಗಳನ್ನು ಕಟ್ಟಿಕೊಡುತ್ತಾ ಎಚ್ಚರಿಸುತ್ತದೆ.

ಮೂವತ್ತೆಂಟು ಕವಿತೆಗಳ ಈ ಸಂಕಲನದಲ್ಲಿ ಕವಿ ರಂಗನಾಥ ಒಂದು ಮಹಾಪಯಣದ ಕತೆಯನ್ನು ಬಿಡಿಬಿಡಿಯಾಗಿ ವಿವರಿಸಿದ್ದಾರೆ. ತನ್ನ ಅಜ್ಜ, ಅಜ್ಜಿ, ಅಪ್ಪ, ತಾನು ಬೆಳೆದ ಊರು, ದಲಿತ ಹೆಣ್ಣು ಜೀವಗಳ ಮೇಲೆ ನಡೆದ ದೌರ್ಜನ್ಯ, ಶೋಷಣೆಯ ವಿರುದ್ಧದ ಸೆಡವು ಎಲ್ಲವೂ ತೀವ್ರವಾದ ರೂಪಕಗಳೊಂದಿಗೆ ಬಿಚ್ಚಿಕೊಳ್ಳುತ್ತವೆ. ಹೀಗೆ ಬಿಚ್ಚಿಕೊಳ್ಳುವ ಚಿತ್ರಗಳು ನಮ್ಮೊಳಗೆ ಮರುಕ ಹುಟ್ಟಿಸುವಷ್ಟು ತೀವ್ರವಾಗಿದ್ದರೂ, ಉರಿಯ ರೂಪಕಗಳ ಆ ಮರುಕವನ್ನು ಸುಟ್ಟುಹಾಕುತ್ತಾ, ಪ್ರತಿರೋಧ ಮತ್ತು ಹೊಸ ಕಾಲದ ಎಚ್ಚರದವನ್ನು ದಾಖಲಿಸುತ್ತವೆ.

ಹಕ್ಕು, ಹೋರಾಟ, ಶೋಷಣೆಯ ವಿರುದ್ಧದ ಘೋಷಣೆಯ ಸಾಲುಗಳಾಗಿ ಬಿಡುತ್ತವೇನೊ ಅನ್ನಿಸುವಷ್ಟರಲ್ಲೇ ನಮ್ಮನ್ನು ತನ್ನ ಕಾವ್ಯ ತೀವ್ರತೆಯಲ್ಲಿ ತಲ್ಲಣಿಸುವಂತೆ ಮಾಡಿಬಿಡುತ್ತವೆ ಇಲ್ಲಿರುವ ಕವನಗಳ ಸಾಲುಗಳು. ಶತಮಾನಗಳಿಂದ ಜಾತಿ ಹೆಸರಿನಲ್ಲಿ ಮನುಷ್ಯ ಸಹಜ ಘನತೆ, ಸಂವೇದನೆಗಳನ್ನು ಮೀರಿದ ಶೋಷಣೆಯನ್ನು ಪ್ರತಿಯೊಬ್ಬನಲ್ಲೂ ಪಾಪಪ್ರಜ್ಞೆಯಾಗಿಸುವಂತೆ ಕಾಡುತ್ತವೆ. ಊರಿನ ಎಲ್ಲ ಕೆಲಸಗಳನ್ನು ಮಾಡಿ ಊರಿನಂಚಿಗೆ ಬದುಕುವಂತೆ ಮಾಡುವ ಕ್ರೌರ್ಯವಿದೆಯಲ್ಲ ಅದು ಅರಗಿಸಿಕೊಳ್ಳಲಾಗದ್ದು. ಅದನ್ನೇ ಕವಿ,

ಊರು ಕಟ್ಟಿದವರಿಗೆ ಕೇರಿಯವರೆಂದು
ಕಾಲೋನಿಗಳ ಪಟ್ಟವ ಕಟ್ಟಿದ ಪ್ರತಿಷ್ಠೆಗೆ
ಊರು ಸಾರಿದವರ ಸಾವು ಕೋರಿ
ಸಂತಾನಗಳಿಗೆ ಶವ ಕೂಡಿಟ್ಟು ಉಣಿಸಿದಿರಿ
ಎನ್ನುತ್ತಾರೆ,

ದೂರದ ತಂಜಾವೂರಿನಿಂದು ಬಂದು ಆರನಕಟ್ಟೆಯಲ್ಲಿ ಬದುಕು ಕಟ್ಟಿಕೊಂಡ ಅಜ್ಜ ಸುಬ್ಬನ್, ಬೀಡಿಯ ಉರಿಯಲ್ಲಿ ತನ್ನೆಲ್ಲಾ ಕೋಪವನ್ನು ಸುಟ್ಟ ಅಯ್ಯನ್, ತಂಬೂರಿ ರಾಜಮ್ಮ ಇಲ್ಲಿ ಆತ್ಮಾಭಿಮಾನದ ಸಂಕೇತಗಳಾಗಿ, ಹೆಮ್ಮೆಯಾಗಿ ಮೆರೆಯುತ್ತವೆ. ಶೋಷಣೆಯ ನೋವು, ಸಂಕಟ ಕಣ್ಣೀರು ಉಕ್ಕಿಸಿದರೂ ತಡೆದುಕೊಳ್ಳುವುದನ್ನು ಹೇಳುವ ಇಲ್ಲಿನ ಸಾಲುಗಳು ಎದೆಯ ಉರಿಯನ್ನು ನಂದಿಸದೇ ಇಟ್ಟುಕೊಳ್ಳುವ ಹಠವನ್ನು ಪ್ರತಿಧ್ವನಿಸುತ್ತವೆ.

ಪೂರ್ವಿಕರ ಅನುಭವಗಳೊಂದಿಗೆ ತನ್ನ ಅನುಭವವನ್ನು ಬೆರೆಸಿ ನೋಡುವ ಕವಿ, ಈ ಎರಡೂ ನೆಲೆಗಳ ಅಸ್ಮಿತೆಯ ಹಿನ್ನೆಲೆಯಲ್ಲಿ, ಎರಡೂ ನೆಲೆಗಳ ಪುರಾಣ, ಚರಿತ್ರೆ, ಸಂಸ್ಕೃತಿ ಮತ್ತು ಭಾಷೆಗಳನ್ನು ತಮ್ಮ ಕಾವ್ಯದಲ್ಲಿ ತಂದಿದ್ದಾರೆ. ಹಾಗಾಗಿ ಇಲ್ಲಿನ ಕವಿತೆಗಳಲ್ಲಿ ವಿಭಿನ್ನ ಪ್ರತಿಮೆ-ರೂಪಕಗಳು, ನುಡಿಗಟ್ಟುಗಳು ತೀವ್ರವಾಗಿ ಮೂಡಿ ಬಂದಿವೆ. ವಚನ ಚಳುವಳಿಯ ಪಿತಾಮಹ, ಆದಿ ವಚನಕಾರ ಚನ್ನಯ್ಯ, ಜಾಂಬವಮುನಿ, ಹೆಪ್ಪುಮುನಿ, ಬೆಪ್ಪುಮುನಿ, ನಂದನ, ರವಿದಾಸ, ಗಲ್ಲೇಬಾನಿ, ಚಮ್ಮಾವುಗೆಯಂತಹ ಪ್ರತಿಮಾ ಸಂಕೇತಗಳು ಸಂಕಲನದುದ್ದಕ್ಕೂ ಕಾಣಿಸುತ್ತವೆ. ಮಾದರ ಚನ್ನಯ್ಯನ ವಚನದ ಅಂಕಿತವನ್ನು ಕವಿ ಕವಿತೆಯೊಂದರ ಸಾಲನ್ನಾಗಿಸಿದ್ದಾರೆ. ಇಲ್ಲಿನ ಕವಿತೆಗಳಲ್ಲಿ ಮತ್ತೆ ಮತ್ತೆ ಕಾಣಿಸುವ ಮೆಟ್ಟಿನ ಸಂಕೇತ ಪರಂಪರೆಗೂ ಸಮುದಾಯಕ್ಕೂ ಇರುವ ಅಂತಃಕರಣವನ್ನು ಹೇಳುತ್ತದೆ.

ಕವಿ ತನ್ನ, ತನ್ನವರ ಒಡಲ ಸಂಕಟವನ್ನು ಬಿಚ್ಚಿಡುವ ಈ ಕವಿತೆಗಳು ಅಷ್ಟಕ್ಕೆ ಸೀಮಿತವಾಗಿದ್ದರೆ, ಕಾವ್ಯ ಸಾರ್ಥಕತೆಯೂ ಸೀಮಿತವಾಗುತ್ತಿತ್ತೆನೊ! ಸಮುದಾಯದ ಶತಮಾನಗಳ ಸಂಕಟವನ್ನು ಕಿಡಿಯಾಗಿ ಸಿಡಿಸುವುದಷ್ಟೇ ಅಲ್ಲ, ಅದನ್ನು ಮೀರುವ ಬೆಳಕಿನ ದಾರಿಯ ಬಗ್ಗೆಯೂ ಮಾತಾಡಿದ್ದಾರೆ. ಸಂಕಲನದ ಮೊದಲ ಕವಿತೆಯೇ ಬಹಳ ಆಪ್ತ ಹಾಗೂ ಬುದ್ಧ ಬೆಳಕಿನ ಸ್ಪರ್ಶದ ಅನುಭವ ನೀಡುತ್ತದೆ. ಅವ್ವನೆದೆಯ ಅಜ್ಜನ ಅರಿವು ಶೀರ್ಷಿಕೆಯ ಈ ಕವಿತೆಯಲ್ಲಿ, ಅವ್ವ, ಕವಿಗೆ ಅಂಬೇಡ್ಕರ್ ಅವರನ್ನು ಅಜ್ಜನೆಂದು ಪರಿಚಯಿಸುತ್ತಾರೆ.

ಮೈಸವರಿದ ಅವ್ವ
ಮನಸ್ಸಿಗೆ ಬಸಿದ ಮಾತು
ಕೈತೋರಿ ಸದಾ ಪುಸ್ತಕ ಹೊತ್ತಿರುವ
ನಿನ್ನಜ್ಜ ಅಂಬೇಡ್ಕರ್ ಓದಿದ್ದು
ಬೀದಿ ಬಲ್ಪಿನ ಕೆಳಗೆ ಎಂದು
ಒಂದೊಂದೇ ಪದವ ಎದೆಗಿಟ್ಟು…

ಶಿಕ್ಷಣ ಸ್ವಾಭಿಮಾನ, ಮಾನವೀಯತೆಯ ಮೌಲ್ಯ ಕವಿಯ ಎಳೆಯ ಎದೆಗೆ ಎರೆಯುವ ತಾಯಿಯನ್ನು ಈ ಕವಿತೆ ಕಟ್ಟಿಕೊಡುತ್ತದೆ. ತಮ್ಮೆಲ್ಲ ಸಂಕಟಗಳ ಬಿಡುಗಡೆಯ ಬೆಳಕಾಗಿ ಹೊಮ್ಮುತ್ತದೆ. ಇದೇ ಪರಂಪರೆಯುದ್ದಕ್ಕೂ ಕಾಡಿದ ಶೋಷಣೆಗೆ ಇದೇ ಪರಿಹಾರ ಮಾರ್ಗವೆಂದು ದಾಖಲಿಸುತ್ತದೆ.

ಗಂಡು ಒಂದು ರೀತಿಯ ಶೋಷಣೆಗೆ ಒಳಗಾಗುತ್ತಿದ್ದರೆ, ಹೆಣ್ಣಿನ ಮೇಲೆ ನಡೆವ ದೌರ್ಜನ್ಯದ ಭೀಕರತೆಯನ್ನು ಕವಿ ರೂಪಕಗಳಲ್ಲಿ ಅಲುಗಾಡಿಸಿಬಿಡುತ್ತಾರೆ. ಅಸಹಾಯಕತೆ ಒಂದೆಡೆ, ಅಂತಹ ಸಂದರ್ಭ ಸೃಷ್ಟಿಸಿ ಶೋಷಿಸುವ ಮನಸ್ಸುಗಳನ್ನು ಇನ್ನೊಂದೆಡೆ. ಅನ್ನಕ್ಕಾಗಿ ಅಂಗಲಾಚುವ ಹೆಣ್ಣಿನ ಮುಂದೆ ಕಾಮತೃಷೆ ತೀರಿಸುವ ಕೋರಿಕೆ ಇಡುವುದು, ಬದುಕು ಕಟ್ಟಿಕೊಳ್ಳುವುದಕ್ಕಾಗಿ ತನ್ನ ದೇಹವನ್ನು ಮಾರಿಕೊಳ್ಳಬೇಕಾದ ಸ್ಥಿತಿ ತಲುಪಿದ ಹೆಣ್ಣು ಎದುರಿಸುವ ಕ್ರೌರ್ಯವನ್ನು ಕವಿತೆಗಳು ಮಾತಾಡುತ್ತವೆ. ಅತ್ಯಾಚಾರ, ಕೊಲೆಗೆ ಗುರಿಯಾದ ಮುಗ್ದ ಜೀವಗಳನ್ನು ಕವಿ ನಮಗೆ ಎದುರಾಗಿಸುವ ರೀತಿ ಹೃದಯವನ್ನು ಕರಗಿಸುತ್ತದೆ, ಕೆಲವೊಮ್ಮೆ ನಡುಗಿಸುತ್ತದೆ ಕೂಡ. ಮನುಷ್ಯ ಘನತೆ, ಮಾನವೀಯತೆಯ ಹಂಬಲವನ್ನು ಧ್ಯಾನಿಸುತ್ತಾ ಅದನ್ನು ಕಾಲದ ಎಲ್ಲ ಶೋಷಣೆಗಳಿಗೆ ಮುಖಾಮುಖಿಯಾಗಿಸುತ್ತಾರೆ ಕವಿ ರಂಗನಾಥ್.

ಪ್ರೀತಿ, ವಿರಹಗಳನ್ನು ಧ್ಯಾನಿಸುವ ರಂಗನಾಥ್ ರಾಜಕೀಯ ಬೆಳವಣಿಗೆಗಳನ್ನೂ ಕಾವ್ಯದ ವಸ್ತುವಾಗಿಸಿಕೊಂಡಿದ್ದಾರೆ. ಜಲದ ಪಾದುಕೆಯ ಹಾಡು, ಈ ಸುದ್ದಿ ಇಂದಿನ ವರದಿಯಾಗಿಯೇ ಉಳಿಯಬೇಕಿಲ್ಲ, ದಲಿತರಾಗುವುದೆಂದರೆ ಎಷ್ಟು ಸಡಗರ, ಅಲೆದಷ್ಟು ಅನಾಥಗೊಂಡ ಪಾದಗಳು, ಅವ್ವನೆದೆಯ ಅಜ್ಜನ ಅರಿವು, ಕರಿಯಜ್ಜನ ಯಶೋಗಾಥೆ, ಉರಿಪಾದದ ನೆರಳಲ್ಲಿ, ಕರಿ ಮೈಯ್ಯ ಕಸುವು ಬಹಳ ಮುಖ್ಯವಾದ ಕವಿತೆಗಳು.

ಪರಂಪರೆಯ ಎಲ್ಲ ನೆನಪುಗಳನ್ನು ಕೆದಕುತ್ತಾ, ತಮ್ಮ ಅಸ್ಮಿತೆಯನ್ನು ಅನಾವರಣ ಮಾಡುತ್ತಲೇ ಅದನ್ನು ಒಡೆದು ನಿಲ್ಲಲು ಯತ್ನಿಸುವ ಇಲ್ಲಿನ ಕವಿತೆಗಳು, ಈ ಮಹಾಪಯಣದಲ್ಲಿ ಎಂದೂ ಹಂಗಿನಲಿ ಬಾಳದ ಉದಾಹರಣೆಗಳನ್ನು ಧ್ಯಾನಿಸುತ್ತಾ, ತನ್ನ ಕಾಲದ ದನಿಯನ್ನು ತೀಕ್ಷ್ಣವಾಗಿಯೂ ತೀವ್ರವಾಗಿಯೂ ಕವಿ ರಂಗನಾಥ್ ದಾಖಲಿಸಿದ್ದಾರೆ.


ಇದನ್ನೂ ಓದಿ: ಪುಸ್ತಕ ವಿಮರ್ಶೆ; ಬದಿಕಿರುವುದೇ ಕಥೆ ಹೇಳಲಿಕ್ಕೆ ಎಂದು ಬರೆದು ಬದುಕಿದ ಲ್ಯಾಟಿನ್ ಅಮೆರಿಕನ್ ಲೇಖಕ ಮಾರ್ಕ್ವೆಜ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ವಿಮರ್ಶೆ ಅದ್ಬುತ ವಾಗಿದೆ ಸರ್
    ಕವಿಯ ಅಂತರಾಳವ ಹೊಕ್ಕು ಪರಿಚಯಿಸಿದಿರಿ ಸರ್

  2. ಕವಿಯ ಹಿನ್ನೆಲೆಯ ಕ್ಯಾನ್ವಾಸಿನಲ್ಲಿ ಕವನದ ಸೊಗಸಾದ ಚಿತ್ರವನ್ನು ಹೇಗೆ ಕವಿ ಅಭಿವ್ಯಕ್ತಿಸಿದ್ದಾರೆಂದು ಸೊಗಸಿನ ವಿಮರ್ಶೆ ಮಾಡಿರುವುದು ಮುದ ನೀಡಿದೆ. ಪ್ರತಿಮೆಯಾದ ಮೆಟ್ಟು ಮೆಟ್ಟುವ ಜನ ಮೆಟ್ಟಸೃಷ್ಟಿಶಿದವರ ಮುಟ್ಟದಿರುವುದು ಈ ಸಮಾಜದ ಕೊಳೆತ ಮನಸಿನ ಘಾಟು ರಾಚಬೇಕಿತ್ತು‌ ಇನ್ನೂ.

    ವಿಮರ್ಶಕರಿಗೆ ಮತ್ತು ಕವಿವರ್ಯರಿಗೆ ಅಭಿನಂದನೆಗಳು

    ಜಯರಾಮ.ಸಿ.ವಿ. ನಾಗಮಂಗಲ.

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...