Homeಮುಖಪುಟಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆ

- Advertisement -
- Advertisement -

ಖ್ಯಾತ ಪತ್ರಕರ್ತ ಪಿ. ಸಾಯಿನಾಥ್‌ ಅವರಿಗೆ ಪ್ರತಿಷ್ಠಿತ ‘ಫುಕುವೋಕಾ ಗ್ರ್ಯಾಂಡ್ ಪ್ರಶಸ್ತಿ-2021’ ಘೋಷಣೆಯಾಗಿದೆ. ‘ಫುಕುವೋಕಾ ಪ್ರಶಸ್ತಿ’ಯು ಜಪಾನಿನ ಫುಕುವೊಕಾ ನಗರ ಮತ್ತು ಫುಕುವೋಕಾ ಸಿಟಿ ಇಂಟರ್ನ್ಯಾಷನಲ್ ಫೌಂಡೇಶನ್ ಸ್ಥಾಪಿಸಿದ ಪ್ರಶಸ್ತಿಯಾಗಿದ್ದು, ಏಷ್ಯನ್ ಸಂಸ್ಕೃತಿಯನ್ನು ಸಂರಕ್ಷಿಸುತ್ತಿರುವ ವ್ಯಕ್ತಿಗಳ ಅಥವಾ ಸಂಸ್ಥೆಗಳ ಮಹೋನ್ನತ ಕಾರ್ಯಗಳನ್ನು ಗೌರವಿಸಿ ನೀಡಲಾಗುತ್ತದೆ.

ಪಿ. ಸಾಯಿನಾಥ್‌ ಅವರು ‘ಪರಿ’ ಎಂಬ ಸಂಸ್ಥೆಯನ್ನು ನಡೆಸುತ್ತಿದ್ದು, ಇದು ಭಾರತದ ಗ್ರಾಮೀಣ ಭಾಗದ ಜನರ ಬದುಕು, ಕೃಷಿ ಇತ್ಯಾದಿಗಳ ಬಗ್ಗೆ ಬೆಳಕು ಚೆಲ್ಲುವ ಕೆಲಸವನ್ನು ಮಾಡುತ್ತಿದೆ. ‘ಬರ ಎಂದರೆ ಎಲ್ಲರಿಗೂ ಇಷ್ಟ’ ಎಂಬ ಪುಸ್ತಕವನ್ನು ಬರೆದಿರುವ ಅವರು ತಮ್ಮ ವೃತ್ತಿಜೀವನದುದ್ದಕ್ಕೂ, ರೈತರ ಪರವಾಗಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಈಗ ದೇಶದಲ್ಲಿ ನಡೆಯುತ್ತಿರುವ ರೈತ ಹೋರಾಟವನ್ನು ಕೂಡಾ ಅವರು ಬೆಂಬಲಿಸಿದ್ದಾರೆ.

ಇದನ್ನೂ ಓದಿ: ಟ್ವಿಟರ್ ಇಂಡಿಯಾದ ಕುಂದುಕೊರತೆ ಅಧಿಕಾರಿ ರಾಜೀನಾಮೆ: ಸರ್ಕಾರ V/s ಟ್ವಿಟರ್ ಸಂಘರ್ಷ ಮುಂದುವರಿಕೆ

“ಪಿ. ಸಾಯಿನಾಥ್‌ ಅವರು ಉತ್ಸಾಹಿ ಪತ್ರಕರ್ತರಾಗಿದ್ದು, ಅವರು ಭಾರತದ ಬಡ ಕೃಷಿ ಗ್ರಾಮಗಳ ಬಗ್ಗೆ ತನಿಖೆ ಮುಂದುವರೆಸಿದ್ದಾರೆ. ಗ್ರಾಮೀಣ ಜನರ ಮಾತುಗಳನ್ನು ಆಲಿಸಿ, ಜನರ ಜೀವನ ಶೈಲಿಯ ವಾಸ್ತವತೆಯನ್ನು ಸೆರೆಹಿಡಿದು ‘ಗ್ರಾಮೀಣ ವರದಿ’ಗಳನ್ನು ವರದಿ ಮಾಡುತ್ತಿದ್ದಾರೆ. ಏಷ್ಯಾವು ಪ್ರಕ್ಷುಬ್ಧ ಬದಲಾವಣೆಗಳ ಮೂಲಕ ಸಾಗುತ್ತಿದ್ದಾಗ ಸಾಯಿನಾಥ್‌‌ ಅವರು ಹೊಸ ‘ಜ್ಞಾನ’ವನ್ನು ಪಡೆಯುವುದಕ್ಕಾಗಿ ನಾಗರಿಕ ಸಹಕಾರವನ್ನು ಉತ್ತೇಜಿಸುತ್ತಿದ್ದಾರೆ. ಈ ಕಾರಣಕ್ಕಾಗಿ, ಅವರು ಫುಕುವೊಕಾ ಬಹುಮಾನದ ಗ್ರ್ಯಾಂಡ್ ಪ್ರಶಸ್ತಿಗೆ ಅರ್ಹರಾಗಿದ್ದಾರೆ” ಪ್ರಶಸ್ತಿಯ ಪ್ರಕಟಣೆ ಹೇಳಿದೆ.

Image

1990 ರಿಂದ ಈ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಪ್ರಶಸ್ತಿಯು ‘ಗ್ರ್ಯಾಂಡ್ ಪ್ರಶಸ್ತಿ’, ‘ಶೈಕ್ಷಣಿಕ ಪ್ರಶಸ್ತಿ’, ಮತ್ತು ‘ಕಲೆ ಮತ್ತು ಸಂಸ್ಕೃತಿ ಪ್ರಶಸ್ತಿ’ ಎಂಬ ಮೂರು ವಿಭಾಗಗಳನ್ನು ಹೊಂದಿದೆ. ಪಿ. ಸಾಯಿನಾಥ್ ಅವರಿಗೆ ಘೋಷಣೆಯಾಗಿರುವ ಗ್ರ್ಯಾಂಡ್ ಪ್ರಶಸ್ತಿಯು 5 ಮಿಲಿಯನ್ ಯೆನ್(33.53 ಲಕ್ಷ) ನಗದು ಬಹುಮಾನವನ್ನು ಹೊಂದಿದೆ. ಉಳಿದ ಎರಡು ವಿಭಾಗದ ಪ್ರಶಸ್ತಿಯು 3 ಮಿಲಿಯನ್ ಯೆನ್ ನಗದು ಬಹುಮಾನ ಹೊಂದಿದೆ.

2015 ರಲ್ಲಿ ಇತಿಹಾಸಗಾರ ರಾಮಚಂದ್ರ ಗುಹಾ ಅವರಿ ಶೈಕ್ಷಣಿಕ ವಿಭಾದಲ್ಲಿ ಪ್ರಶಸ್ತಿ ದಕ್ಕಿತ್ತು. ಪುಕುವೋಕಾ ಗ್ರ್ಯಾಂಡ್ ಪ್ರಶಸ್ತಿಯು 2016 ರಲ್ಲಿ ಸಂಗೀತ ನಿರ್ದೇಶಕ ಎ.ಆರ್‌. ರಹಮಾನ್ ಅವರಿಗೆ ಕೂಡಾ ದಕ್ಕಿತ್ತು. 2018 ರಲ್ಲಿ ‘ಕಲೆ ಮತ್ತು ಸಂಸ್ಕೃತಿ’ ವಿಭಾದಲ್ಲಿ ತೀಜನ್ ಬಾಯಿ ಅವರಿಗೆ ಪ್ರಶಸ್ತಿ ದಕ್ಕಿತ್ತು. ಅವರು ಚತ್ತೀಸ್‌ಘಡದ ‘ಪಾಂಡಾವಾಣಿ’ ಎಂಬ ಸಾಂಪ್ರದಾಯಿಕ ಕಲಾ ಪ್ರದರ್ಶನದ ಕಲಾವಿದರಾಗಿದ್ದಾರೆ.

ಇದನ್ನೂ ಓದಿ: ಕಲ್ಯಾಣ ಕಾರ್ಯಕ್ರಮಗಳ ಮರುವಿನ್ಯಾಸ ಅಗತ್ಯ: ನೊಬೆಲ್‍ ವಿಜೇತ ಅಭಿಜಿತ್ ಬ್ಯಾನರ್ಜಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...