Homeಕರ್ನಾಟಕSSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

- Advertisement -
- Advertisement -

ಕೊರೋನಾ ಸಾಂಕ್ರಾಮಿಕದ ಕಾರಣದಿಂದ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರಾಜ್ಯ ಸರ್ಕಾರ ರದ್ದುಪಡಿಸಿತ್ತು. ಅದೇ ಸಂದರ್ಭದಲ್ಲಿ SSLC ಪರೀಕ್ಷೆಗಳನ್ನು ರದ್ದು ಮಾಡಬೇಕೆಂಬ ಕೂಗು ಕೇಳಿಬಂದಿತ್ತು. ಪರಿಸ್ಥಿತಿಯನ್ನು ನೋಡಿ ನಿರ್ಧಾರ ಕೈಗೊಳ್ಳಲಾಗುವದು ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಂದು ತಿಳಿಸಿದ್ದರು. ಶಿಕ್ಷಣ ಇಲಾಖೆ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಪರೀಕ್ಷೆಗಳನ್ನು ನಡೆಸುವುದಾಗಿ ತಾತ್ಕಾಲಿಕ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿತ್ತು. ಇಂದು ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್‌ ಅವರು SSLC ಪರೀಕ್ಷೆಯ ಕುರಿತಾಗಿನ ಎಲ್ಲಾ ಅನುಮಾನಗಳಿಗೆ ತೆರೆ ಎಳೆದಿದ್ದಾರೆ. 2021 ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ರದ್ದು ಮಾಡುವ, ಮುಂದೂಡುವುದಿಲ್ಲ. ನಿಗಧಿಯಂತೆ ಪರೀಕ್ಷೆ ನಡೆಯಲಿದೆ ಎಂದು ಸರೇಶ್ ಕುಮಾರ್ ತಿಳಿಸಿದ್ದಾರೆ.

ನಿಗದಿತ ವೇಳಾಪಟ್ಟಿಯಂತೆಯೇ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಪರೀಕ್ಷೆಯ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಗಳಿಲ್ಲ. ಪರೀಕ್ಷಾ ವಿಧಾನದಲ್ಲಿಯೂ ಬದಲಾವಣೆಗಳಿಲ್ಲ. ಈ ಹಿಂದೆ ಹೇಳಿದ ರೀತಿಯಲ್ಲಿಯೇ SSLC ಪರೀಕ್ಷೆಗಳನ್ನು ನಡೆಸಲಾಗುವುದು. ವಿದ್ಯಾರ್ಥಿಗಳು ಮತ್ತು ಪೋಷಕರಲ್ಲಿ ಯಾವುದೇ ಆತಂಕಬೇಡ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಎಸ್​ಎಸ್​ಎಲ್​ಸಿ ಜುಲೈ 19 ಮತ್ತು 22 ರಂದು ಎರಡು ದಿನಗಳಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ತೀರ್ಮಾನಿಸಿರುವ ಶಿಕ್ಷಣ ಇಲಾಖೆ ಇಂದು ಮಹತ್ವದ ಸಭೆ ನಡೆಸಿ ನಿರ್ಧಾರ ಕೈಗೊಂಡಿದೆ. ಜುಲೈ ತಿಂಗಳ ಮೂರನೇ ವಾರದಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುವ ಎಸ್​ಎಸ್​ಎಲ್​ಸಿ ಪರೀಕ್ಷೆಯ ಅಧಿಕೃತ ವೇಳಾಪಟ್ಟಿಯನ್ನು ಇಂದು (ಜೂನ್ 28) ನಡೆದ ಸಭೆಯಲ್ಲಿ ಅಂತಿಮಗೊಳಿಸಲಾಗಿದ್ದು, ಜುಲೈ 19 ರಂದು ಗಣಿತ, ವಿಜ್ಞಾನ, ಸಮಾಜ ವಿಜ್ಞಾನ ಪರೀಕ್ಷೆ ಬೆಳಗ್ಗೆ 10.30ರಿಂದ 1.30ರ ತನಕ ಹಾಗೂ ಭಾಷಾ ವಿಷಯಗಳ ಪರೀಕ್ಷೆ 22ರಂದು ಬೆಳಗ್ಗೆ 10.30ರಿಂದ 1.30ರ ಪರೀಕ್ಷೆ ನಡೆಯಲಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಿಸಿದ್ದಾರೆ.

ಸುರಕ್ಷಿತ ವಾತಾವರಣದಲ್ಲಿ ಎಸ್‌ಎಸ್‌ಎಲ್​ಸಿ ಪರೀಕ್ಷೆ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಸುರೇಶ್ ಕುಮಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ, ಜಿಲ್ಲಾಧಿಕಾರಿಗಳು, ಸಿಇಒ, ಎಸ್​ಪಿ, ಡಿಎಚ್‌ಒಗಳು ಸೇರಿದಂತೆ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳು ಮತ್ತು ರಾಜ್ಯದ ಆರೋಗ್ಯ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಪಾಲ್ಗೊಂಡಿದ್ದರು.


ಇದನ್ನೂ ಓದಿ : ಜಮ್ಮು ಸೇನಾನೆಲೆಯ ಬಳಿ ಕಾಣಿಸಿಕೊಂಡ ಡ್ರೋಣ್‌ಗಳು: ಸೇನೆಯಿಂದ ಫೈರಿಂಗ್

ಸೂಕ್ತ ಸುರಕ್ಷತಾ ಕ್ರಮಗಳ ಅಳವಡಿಕೆ 
ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯುವ ಎಲ್ಲಾ ಪರೀಕ್ಷಾ ಕೇಂದ್ರಗಳಲ್ಲಿಯೂ ಆಶಾ ಕಾರ್ಯಕರ್ತೆಯರು ಮತ್ತು ಪ್ಯಾರಾ ಮೆಡಿಕಲ್ ಸಿಬ್ಬಂದಿಯನ್ನು ನೇಮಿಸಲಾಗುವುದು. ಒಂದು ಕೊಠಡಿಯಲ್ಲಿ ಕೇವಲ 12 ಬೆಂಚುಗಳಿಗೆ ಮಾತ್ರ ಅವಕಾಶವನ್ನು ನೀಡಲಾಗಿದ್ದು ಪ್ರತಿ ಬೆಂಚ್‌ಗೆ ಒಬ್ಬ ವಿದ್ಯಾರ್ಥಿಗೆ ಮಾತ್ರ ಅವಕಾಶ ನೀಡಲಾಗುವುದು. ಕೊರೋನಾ ಸೋಂಕಿತ ವಿದ್ಯಾರ್ಥಿಗಳು ಬಯಸಿದರೆ ಅವರಿಗೆ ಪ್ರತ್ಯೇಕ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಶಿಕ್ಷಣ ಸಚಿವರು ತಿಳಿಸಿದ್ದಾರೆ. 8,76,581 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆಯನ್ನು ಬರೆಯಲಿದ್ದು 73,066 ಸೆಂಟರ್‌ಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಸುರಕ್ಷತಾ ಕ್ರಮಗಳ ಕುರಿತು ಆರೋಗ್ಯ ಇಲಾಕೆ SOP ಬಿಡುಗಡೆ ಮಾಡಿದ್ದು ಆರೋಗ್ಯ ಇಲಾಖೆಯ ಮಾರ್ಗಸೂಚಿಗಳ ಅನುಸಾರವೇ ಪರೀಕ್ಷೆ ನಡೆಯಲಿದೆ ಎಂದು ಸಚಿವರು ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆ ಅತ್ಯಂತ ಸುಲಭವಾಗಿರಲಿದ್ದು ಸಂಪೂರ್ಣ ಬಹುಆಯ್ಕೆ ಪ್ರಶ್ನೆಗಳನ್ನೇ ಒಳಗೊಂಡಿರಲಿದೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಭಾಗವಹಿಸುವ ಎಲ್ಲಾ ಶಿಕ್ಷಕರು ಮತ್ತು ಸಿಬ್ಬಂದಿಗೆ ವ್ಯಾಕ್ಸಿನ್ ತೆಗೆದುಕೊಳ್ಳುವುದು ಕಡ್ಡಾಯವಾಗಿದೆ. ಪರೀಕ್ಷಾ ವಲಯದಲ್ಲಿ ಸಾಮಾಜಿಕ ಅಂತರ ಮತ್ತು ಮಾಸ್ಕ್ ಧರಿಸುವುದು ಖಡ್ಡಾಯವಾಗಿರಲಿದ್ದು ನಿಯಮ ಉಲ್ಲಂಘನೆಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು. ವಿದ್ಯಾರ್ಥಿಗಳ ಪೋಷಕರು ಬೆಳಿಗ್ಗೆ 8 ಗಂಟೆ ವೇಳೆಗೆ ಪರೀಕ್ಷಾ ಕೇಂದ್ರಗಳಿಗೆ ಬರಬಹುದು ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.


ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...