Homeಚಳವಳಿಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

ಆನ್‌ಲೈನ್ ತರಗತಿ ಮುಂದುವರಿಕೆ: ಸನ್ಮಾನ್ಯ ಶಿಕ್ಷಣ ಸಚಿವ ಸುರೇಶ್ ಕುಮಾರ್‌ರವರಿಗೊಂದು ಬಹಿರಂಗ ಪತ್ರ

- Advertisement -
- Advertisement -

ಸನ್ಮಾನ್ಯ ಸಜ್ಜನ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರೇ,

ನೀವು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದಿರಿ. ಆನ್ ಲೈನ್ ಶಿಕ್ಷಣ ಮುಂದುವರಿಸುವುದಾಗಿ ಹೇಳಿದಿರಿ. ಆನ್ ಲೈನ್ ಕುರಿತು ಎರಡು ಭಿನ್ನ ಅಭಿಪ್ರಾಯಗಳು ಇವೆ. ಆನ್ ಲೈನ್ ಮಾಡಬೇಕು-ಮಾಡಬಾರದೆಂಬ ಎರಡೂ ವಾದಗಳು ಇವೆ. ಇದು ಗೊಂದಲಕ್ಕೆ ಕಾರಣ ಎಂದು ಹೇಳಿದಿರಿ. ಆದರೆ ನೀವು ಸ್ಪಷ್ಟನಿರ್ಧಾರಕ್ಕೆ ಬರಲು ಕ್ರಮ ವಹಿಸಿದಂತೆ ಕಾಣುತ್ತಿಲ್ಲ.

ಆನ್ ಲೈನ್ ಶಿಕ್ಷಣ ಮುಂದುವರಿಸುವ ತೀರ್ಮಾನ ಏಕೆ ಮಾಡಿದ್ದೀರಿ ಎಂಬುದೇ ತಿಳಿಯುತ್ತಿಲ್ಲ. ಸಾಮಾಜಿಕ ಅಂತರದಂತೆ ಶಿಕ್ಷಣದ ಅಂತರ, ತಾರತಮ್ಯ ಹೆಚ್ಚುತ್ತದೆ. ಹೀಗೆ ಸೃಷ್ಟಿಯಾಗುವ ಕಂದಕವನ್ನು ಮುಚ್ಚಲು ಕಷ್ಟಸಾಧ್ಯ. ನಗರ ಮತ್ತು ಗ್ರಾಮೀಣ ಭಾಗದ ನಡುವಿನ ವಿದ್ಯಾರ್ಥಿಗಳ ಜ್ಞಾನ ವಿಸ್ತರಣೆಯಲ್ಲಿ ಸಾಕಷ್ಟು ಅಂತರ ಉಂಟಾಗುತ್ತದೆ ಎಂಬ ಬಗ್ಗೆ ನೀವು ಯಾಕೆ ಯೋಚಿಸುತ್ತಿಲ್ಲ?

ಆನ್ ಲೈನ್ ಶಿಕ್ಷಣ ನೀಡುವುದನ್ನು ಮುಂದುವರಿಸಿದರೆ ಎಲ್ಲರ ಬಳಿ ಮೊಬೈಲ್ ಇರಬೇಕು ಅಲ್ಲವೇ? ಈಗ ನಗರ ಪ್ರದೇಶ ಮತ್ತು ಗ್ರಾಮೀಣ ಪ್ರದೇಶದ ಮಕ್ಕಳು ಮತ್ತು ಪೋಷಕರ ಬಳಿ ಎಷ್ಟು ಆಂಡ್ರಾಯಿಡ್ ಮೊಬೈಲ್ ಗಳು ಇವೆ? ಎಲ್ಲರೂ ಮೊಬೈಲ್ ಹೊಂದಿದ್ದಾರೆಯೇ? ಈ ಬಗ್ಗೆ ಸರ್ವೇ ನಡೆಸಿದ್ದೀರಾ?

ಗ್ರಾಮೀಣ ಭಾಗದಲ್ಲಿ ಶಾಲೆಗೆ ಮಕ್ಕಳು ಬರುವುದೇ ದುಸ್ಥರ. ಪರಿಸ್ಥಿತಿ ಹೀಗಿದ್ದಾಗ ಆ ಮಕ್ಕಳು ಮತ್ತು ಪೋಷಕರು ಮೊಬೈಲ್ ಗಳನ್ನು ಎಲ್ಲಿಂದ ಖರೀದಿಸಬೇಕು. ನಿಮ್ಮದೇ ಪಕ್ಷದ ಸರ್ಕಾರವೇ ಮಾಡಿದ ಅವೈಜ್ಞಾನಿಕ ನೀತಿಗಳು ಗ್ರಾಮೀಣ ಜನರು ಹಣಕ್ಕೆ ಪರದಾಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಅಂಥದ್ದರಲ್ಲಿ ತಮ್ಮ ಮಕ್ಕಳಿಗೆ ಕನಿಷ್ಟ ಏಳೆಂಟು ಸಾವಿರ ರೂಪಾಯಿ ಮೌಲ್ಯದ ಅಂಡ್ರಾಯಿಡ್ ಮೊಬೈಲ್ ಕೊಡಿಸುವ ಶಕ್ತಿ ಎಲ್ಲಿಂದ ಬರುತ್ತದೆ. ಹೋಗಲಿ ಕೆಲವರ ಬಳಿ ಮೊಬೈಲ್ ಗಳು ಇವೆ ಎಂದರೂ ಅದಕ್ಕೆ ಡೇಟಾ, ನೆಟ್ ವರ್ಕ್ ಸಿಗಬೇಕು ಅಲ್ಲವೇ? 5ಜಿ ಯತ್ತ ದೇಶ ಮುಖ ಮಾಡಿದ್ದರೂ ಗ್ರಾಮೀಣ ಭಾಗ ಸಿಗ್ನಲ್, ನೆಟ್ ವೆರ್ಕ್ ಸಿಗದೆ ಬಳಲುತ್ತಿದೆ.
ಸಿಗ್ನಲ್ ಅಥವಾ ನೆಟ್ ವರ್ಕ್ ಸಿಗಬೇಕು ಅಂದರೆ ಮರಗಳನ್ನು ಹತ್ತಿ ಕುಳಿತುಕೊಳ್ಳಬೇಕು. ಮಕ್ಕಳು ಆ ಕೆಲಸವನ್ನು ಮಾಡಬಹುದು. ಅಲ್ಲಿ ಅನಾಹುತ ಸಂಭವಿಸಿದರೆ ಜೀವಹಾನಿ ಆಗುತ್ತದೆ. ಅದಕ್ಕೆ ಹೊಣೆ ಯಾರು? ಆನ್ ಲೈನ್ ಶಿಕ್ಷಣ ಬಡ ವಿದ್ಯಾರ್ಥಿಗಳಿಗೆ ಸುಲಭವಾಗಿ ದೊರೆಯುವುದಿಲ್ಲ. ದುಡ್ಡಿದ್ದವರು ದುಭಾರಿ ಬೆಲೆಯ ಮೊಬೈಲ್ ಖರೀದಿ ಮಾಡಿ ಆನ್ ಲೈನ್ ಶಿಕ್ಷಣಕ್ಕೆ ಹೊಂದಿಕೊಳ್ಳಬಹುದು.

ಆನ್ ಲೈನ್ ಶಿಕ್ಷಣ ಅಂದರೆ ಖಾಸಗಿ ಶಾಲೆಗಳು ದುಡ್ಡು ಸುಲಿಯಲು ಹೆಚ್ಚು ಅವಕಾಶ ಮಾಡಿಕೊಡುತ್ತದೆ. ಮನೆ ಪಾಠದ ನೆಪದಲ್ಲಿ ಕ್ಯಾಪಿಟೇಶನ್ ಶುಲ್ಕ ವಸೂಲಿಗೂ ಅವಕಾಶ ಮಾಡಿಕೊಡುವ ಖಾಸಗಿ ಆಡಳಿತ ಮಂಡಳಿಗಳ ಜೊತೆಗೆ ನೀವು ಶಾಮೀಲಾಗಿದ್ದೀರಿ ಎಂಬ ಅನುಮಾನ ಮೂಡುತ್ತದೆ.

ಗ್ರಾಮೀಣ ಭಾಗದಲ್ಲಿರುವ ಖಾಸಗಿ ಮತ್ತು ಸರ್ಕಾರಿ ಪ್ರೌಢಶಿಕ್ಷಣ ಸಂಸ್ಥೆಗಳಿಗೆ ದಾಖಲಾಗುವ ಮಕ್ಕಳು ಬಡವರೇ ಆಗಿರುತ್ತಾರೆ. ಆ ಮಕ್ಕಳು ಸರ್ಕಾರ ವಿಧಿಸಿರುವ ಶುಲ್ಕ ಕಟ್ಟಲು ಕೂಡ ಕಷ್ಟಪಡುತ್ತಾರೆ. ಇದೇ ಕಾರಣಕ್ಕಾಗಿಯೇ ಗ್ರಾಮಾಂತರ ಪ್ರದೇಶದಲ್ಲಿರುವ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಆನ್ ಲೈನ್ ಶಿಕ್ಷಣ ಬೇಡವೆಂದು ಮನವಿಗಳ ಮೇಲೆ ಮನವಿಗಳನ್ನು ಸಲ್ಲಿಸಿದವು. ನಮ್ಮ ಮಕ್ಕಳಿಗೆ ಆನ್ ಲೈನ್ ಶಿಕ್ಷಣ ಕೊಡಲು ಸಾಧ್ಯವಿಲ್ಲ. ನಮ್ಮ ವಿದ್ಯಾರ್ಥಿಗಳು ಮೊಬೈಲ್ ಕೊಳ್ಳುವಷ್ಟು ಶಕ್ತಿ ಇಲ್ಲ. ಹಾಗಾಗಿ ಆನ್ ಲೈನ್ ಶಿಕ್ಷಣ ಕಡಾಖಂಡಿತವಾಗಿ ಬೇಡವೆಂದರು. ಈ ಮನವಿಗಳು ಸಜ್ಜನ ಶಿಕ್ಷಣ ಸಚಿವರ ಕಿವಿಗೆ ಹೋಗಲೇ ಇಲ್ಲ ಅನ್ನಿಸುತ್ತದೆ.
ನಗರ ಪ್ರದೇಶದಲ್ಲಿ ಖಾಸಗಿ ಶಾಲೆಗಳಲ್ಲಿ ಕಲಿಯುತ್ತಿರುವ ಎಲ್ಲ ಮಕ್ಕಳ ಬಳಿಯೂ ಮೊಬೈಲ್ ಇದೆ ಎಂದು ಭಾವಿಸುವುದೂ ಕೂಡ ತಪ್ಪು. ಯಾಕೆಂದರೆ ಗ್ರಾಮೀಣ ಪ್ರದೇಶದಿಂದ ನಗರಕ್ಕೆ ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸಲು ಬಂದ ಬಡ ಕುಟುಂಬಗಳು ಮನೆ ಬಾಡಿಗೆ, ಕುಟುಂಬ ನಿರ್ವಹಣೆ ಮಾಡುವುದು ದುಸ್ಥರ. ಬಡ ತಂದೆತಾಯಿಗಳು ತಮ್ಮ ಮಕ್ಕಳನ್ನು ಹಗಲಿರುಳು ದುಡಿದು ಗುಣಮಟ್ಟದ ಶಿಕ್ಷಣ ಕೊಡಿಸುವುದಕ್ಕೆ ಪಡಿಪಾಟಲು ಬೀಳುತ್ತಿರುವುದು ಶಿಕ್ಷಣ ಸಚಿವರಿಗೆ ತಿಳಿದಿಲ್ಲವೇ?

ನಿಮ್ಮ ನಿಲುವುಗಳು ಯಾರ ಪರವಾಗಿವೆ ಎಂಬುದು ಆನ್ ಲೈನ್ ಶಿಕ್ಷಣ ಮುಂದುವರಿಸುವುದರಿಂದಲೇ ಗೊತ್ತಾಗುತ್ತದೆ. ನೇರ ಶಿಕ್ಷಣ ಕೊಡುವಾಗಲೇ ಕಲಿಕೆಯಲ್ಲಿ ಹಿಂದೆ ಬೀಳುವ ಮಕ್ಕಳು ಇರುವಾಗ, ತರಗತಿಯಲ್ಲಿ ಕುಳಿತ ಮಕ್ಕಳೇ ಪಾಠ ಮಾಡುವುದನ್ನು ಗಮನ ಕೊಟ್ಟು ಆಲಿಸದೇ ಇರುವಾಗ ಪದೇ ಪದೇ ಮಕ್ಕಳನ್ನು ಪಾಠದ ಕಡೆ ಗಮನ ಸೆಳಯಲು ಉಪ ಕತೆಗಳನ್ನು ಹೇಳುವುದು ನೇರ ಬೋಧನೆಯಲ್ಲಿ ನಾವು ಕಾಣಬಹುದು. ಆದರೂ ಹಲ ಮಕ್ಕಳ ಮನಸ್ಸು ಮರ್ಕಟನಂತೆ. ಹೀಗಿದ್ದಾಗ ಎಲ್ಲೋ ಕುಳಿತು ಪಾಠ ಮಾಡುವ ಶಿಕ್ಷಕರು ಮಕ್ಕಳ ಮನಸ್ಸನ್ನು ಕೇಂದ್ರೀಕರಿಸುವಂತೆ ಮಾಡಲು ಹೇಗೆ ಸಾಧ್ಯ? ಮನೆಯಲ್ಲಿ ಯಾರ ಅಂಕೆಯೂ ಇಲ್ಲದೆ ಒಂದೆಡೆ ಕೂರದ ಸದಾ ಓಡಾಡುತ್ತಲೇ ಇರುವ ಮಕ್ಕಳನ್ನು ಒಂದೆಡೆ ಕೂರಿಸಿ ಪಾಠ ಕೇಳುವಂತೆ ಮಾಡುವುದು ಕಷ್ಟದ ಕೆಲಸ. ತಂದೆತಾಯಿಗಳ ಭಯಕ್ಕೆ ಮೊಬೈಲ್ ನಲ್ಲಿ ಆನ್ ಲೈನ್ ತರಗತಿಗಳನ್ನು ಕೇಳಿದರೂ ಮಕ್ಕಳು ಪಾಠವನ್ನು ಸರಿಯಾಗಿ ಗ್ರಹಿಸಿದ್ದಾರೆಂಬುದನ್ನು ಹೇಗೆ ಹೇಳಲು ಸಾಧ್ಯ.

ಪೋಷಕರು ಮತ್ತು ವಿದ್ಯಾರ್ಥಿಗಳ ಸಂಕಟವನ್ನು ಅರ್ಥ ಮಾಡಿಕೊಳ್ಳದ ಪ್ರಾಥಮಿಕ ಶಿಕ್ಷಣ ಸಚಿವರು ಯಾರೋ ಪ್ರಚಾರಕ್ಕಾಗಿ ಒಬ್ಬ ತರಕಾರಿ, ಹಣ್ಣು ಮಾರುತ್ತಿದ್ದ ವಿದ್ಯಾರ್ಥಿನಿಗೆ ಮೊಬೈಲ್ ಕೊಡಿಸಿದ್ದಾರೆ. ಅದು ಪತ್ರಿಕೆಯಲ್ಲಿ ಬಂದಿದೆ ಎಂದು ಹೆಮ್ಮೆಯಿಂದ ಹೇಳಿದರೆ ಲಕ್ಷಾಂತರ ತಂದೆತಾಯಿಗಳು ಇನ್ನೂ ಬೇಸಿಕ್ ಸೆಟ್ ಗಳನ್ನು ಇಟ್ಟುಕೊಂಡು 50 ರೂಪಾಯಿ ಕರೆನ್ಸಿ ಹಾಕಿಸಿ ತಿಂಗಳವರೆಗೆ ದಿನದೂಡುತ್ತಿರುವುದು ನಿಮ್ಮ ಕಣ್ಣಿಗೆ ಬೀಳುತ್ತಿಲ್ಲವೇ?

  • ಕೆ.ಈ.ಸಿದ್ದಯ್ಯ

ಇದನ್ನೂ ಓದಿ: SSLC ಪರೀಕ್ಷೆಗಳು: ವೇಳಾಪಟ್ಟಿಯಲ್ಲಿ ಬದಲಾವಣೆಯಿಲ್ಲ ಎಂದ ಶಿಕ್ಷಣ ಸಚಿವ ಸುರೇಶ್ ಕುಮಾರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...