Homeಮುಖಪುಟಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹೈದರಾಬಾದ್‌‌ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್‌ ಇಂಡಿಯಾ ಮಜ್ಲಿಸೇ ಇತ್ತಿಹಾದುಲ್ ಮುಸ್ಲಿಮೀನ್‌(ಎಐಎಂಐಎಂ) ಸ್ಪರ್ಧಿಸುತ್ತಿದ್ದು, ಪಕ್ಷದಿಂದ ಕಣಕ್ಕಿಳಿಸಲು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು ಪ್ರಾರಂಭಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಕನಿಷ್ಠ 100 ಸ್ಥಾನಗಳಿಗೆ ಸ್ಪರ್ಧಿಸಲು ಪಕ್ಷ ನಿರ್ಧರಿಸಿದೆ ಎಂದು ಅಸದುದ್ದೀನ್ ಒವೈಸಿ ಅವರು ಭಾನುವಾರ ಹೇಳಿದ್ದಾರೆ. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ, ಪ್ರಮುಖ ಒಬಿಸಿ ಮುಖಂಡ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಸಣ್ಣ ಪಕ್ಷಗಳ ಒಕ್ಕೂಟವಾದ ‘ಭಗಿದಾರಿ ಸಂಕಲ್ಪ ಮೋರ್ಚಾ’ದೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಂಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ಅಸಾದುದ್ದೀನ್ ಓವೈಸಿಯವರ AIMIM ಪಕ್ಷ ಐದು ಸ್ಥಾನ ಗೆದ್ದಿದ್ದು ಹೇಗೆ?

ರಾಜ್‌ಭರ್‌‌ ಅವರ ‘ಭಗಿದಾರಿ ಸಂಕಲ್ಪ ಮೋರ್ಚಾ’ದೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಂಡಿದೆ ಎಂದು ಸ್ವತಃ ಒವೈಸಿ ಹೇಳಿದ್ದು, “ಮುಂಬರುವ ಯುಪಿ ಚುನಾವಣೆಯಲ್ಲಿ ನಾವು 100 ಸ್ಥಾನಗಳಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಪಕ್ಷವು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ” ಎಂದು ಅವರು ತಿಳಿಸಿದ್ದಾರೆ.

“ನಾವು ಓಂ ಪ್ರಕಾಶ್ ರಾಜ್‌ಭರ್‌‌ ಅವರ ‘ಭಗಿದಾರಿ ಸಂಕಲ್ಪ ಮೋರ್ಚಾ’ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಚುನಾವಣೆ ಅಥವಾ ಮೈತ್ರಿಗಳಿಗೆ ಸಂಬಂಧಿಸಿದಂತೆ ನಾವು ಬೇರೆ ಯಾವುದೆ ಪಕ್ಷಗಳ ಜೊತೆಗೆ ಮಾತುಕತೆ ನಡೆಸಿಲ್ಲ” ಎಂದು ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

“ಪೂರ್ವಾಂಚಲ್ ಜಿಲ್ಲೆಯ ಬಹ್ರೇಚ್‌ನಲ್ಲಿ ಉತ್ತರ ಪ್ರದೇಶ ಚುನಾವಣಾ ಕ್ಯಾಂಪ್‌ ಕಚೇರಿ ಸಿದ್ದವಾಗಿದೆ. ಶೀಘ್ರದಲ್ಲೇ ಕಚೇರಿ ಉದ್ಘಾಟನೆಯಾಗಲಿದೆ” ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್‌ ಅಲಿ ಹೇಳಿದ್ದಾರೆ.

ಇದನ್ನೂ ಓದಿ: ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ಎಐಎಂಐಎಂ ಜೊತೆಗೆ, ‘ಭಗಿದಾರಿ ಸಂಕಲ್ಪ ಮೋರ್ಚಾ’ ಮೈತ್ರಿಯಲ್ಲಿ ಕೃಷ್ಣ ಪಟೇಲ್ ಅವರ ಅಪ್ನಾ ದಳ, ಜನ ಅಧಿಕಾರ ಪಕ್ಷ ಮತ್ತು ಚಂದ್ರಶೇಖರ್ ರಾವಣ್‌‌ ಅವರ ‘ಆಜಾದ್ ಸಮಾಜ ಪಕ್ಷ’ದಂತಹ ಎಂಟು ಪಕ್ಷಗಳಿವೆ.

ಕಳೆದ ವರ್ಷದ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಎಐಐಎಂಐಎಂ 20 ಸ್ಥಾನಗಳಲ್ಲಿ ಸ್ಪರ್ಧಿಸಿ ಐದು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇವೆಲ್ಲವೂ ಪಶ್ಚಿಮ ಬಂಗಾಳದ ಗಡಿಯನ್ನು ಹಂಚಿಕೊಂಡಿರುವ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿದೆ.

ಆದರೆ ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಶೂನ್ಯ ಸಾಧನೆ ಮಾಡಿತ್ತು. ಅಲ್ಲಿ ಕ್ರಮವಾಗಿ ಏಳು ಮತ್ತು ಮೂರು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪಕ್ಷವು ಕಣಕ್ಕಿಳಿಸಿತ್ತು.

2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಎರಡು ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...