Homeಮುಖಪುಟಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

ಯುಪಿ ವಿಧಾನಸಭೆ ಚುನಾವಣೆ-2022: 100 ಕ್ಷೇತ್ರಗಳಲ್ಲಿ ಸ್ಪರ್ಧಿಸಲಿರುವ AIMIM

- Advertisement -
- Advertisement -

ಉತ್ತರ ಪ್ರದೇಶದಲ್ಲಿ ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಹೈದರಾಬಾದ್‌‌ ಸಂಸದ ಅಸಾದುದ್ದೀನ್ ಒವೈಸಿ ನೇತೃತ್ವದ ಆಲ್‌ ಇಂಡಿಯಾ ಮಜ್ಲಿಸೇ ಇತ್ತಿಹಾದುಲ್ ಮುಸ್ಲಿಮೀನ್‌(ಎಐಎಂಐಎಂ) ಸ್ಪರ್ಧಿಸುತ್ತಿದ್ದು, ಪಕ್ಷದಿಂದ ಕಣಕ್ಕಿಳಿಸಲು ಸೂಕ್ತ ಅಭ್ಯರ್ಥಿಗಳನ್ನು ಗುರುತಿಸಲು ಪ್ರಾರಂಭಿಸಿದ್ದಾರೆ.

ಉತ್ತರ ಪ್ರದೇಶ ಚುನಾವಣೆಯಲ್ಲಿ ಕನಿಷ್ಠ 100 ಸ್ಥಾನಗಳಿಗೆ ಸ್ಪರ್ಧಿಸಲು ಪಕ್ಷ ನಿರ್ಧರಿಸಿದೆ ಎಂದು ಅಸದುದ್ದೀನ್ ಒವೈಸಿ ಅವರು ಭಾನುವಾರ ಹೇಳಿದ್ದಾರೆ. ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷದ ಮುಖ್ಯಸ್ಥ, ಪ್ರಮುಖ ಒಬಿಸಿ ಮುಖಂಡ ಓಂ ಪ್ರಕಾಶ್ ರಾಜ್‌ಭರ್ ನೇತೃತ್ವದ ಸಣ್ಣ ಪಕ್ಷಗಳ ಒಕ್ಕೂಟವಾದ ‘ಭಗಿದಾರಿ ಸಂಕಲ್ಪ ಮೋರ್ಚಾ’ದೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಂಡಿದೆ.

ಇದನ್ನೂ ಓದಿ: ಬಿಹಾರದಲ್ಲಿ ಅಸಾದುದ್ದೀನ್ ಓವೈಸಿಯವರ AIMIM ಪಕ್ಷ ಐದು ಸ್ಥಾನ ಗೆದ್ದಿದ್ದು ಹೇಗೆ?

ರಾಜ್‌ಭರ್‌‌ ಅವರ ‘ಭಗಿದಾರಿ ಸಂಕಲ್ಪ ಮೋರ್ಚಾ’ದೊಂದಿಗೆ ಎಐಎಂಐಎಂ ಮೈತ್ರಿ ಮಾಡಿಕೊಂಡಿದೆ ಎಂದು ಸ್ವತಃ ಒವೈಸಿ ಹೇಳಿದ್ದು, “ಮುಂಬರುವ ಯುಪಿ ಚುನಾವಣೆಯಲ್ಲಿ ನಾವು 100 ಸ್ಥಾನಗಳಿಗೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ. ಪಕ್ಷವು ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆಯನ್ನು ಪ್ರಾರಂಭಿಸಿದೆ” ಎಂದು ಅವರು ತಿಳಿಸಿದ್ದಾರೆ.

“ನಾವು ಓಂ ಪ್ರಕಾಶ್ ರಾಜ್‌ಭರ್‌‌ ಅವರ ‘ಭಗಿದಾರಿ ಸಂಕಲ್ಪ ಮೋರ್ಚಾ’ ಜೊತೆ ಮೈತ್ರಿ ಮಾಡಿಕೊಂಡಿದ್ದೇವೆ. ಚುನಾವಣೆ ಅಥವಾ ಮೈತ್ರಿಗಳಿಗೆ ಸಂಬಂಧಿಸಿದಂತೆ ನಾವು ಬೇರೆ ಯಾವುದೆ ಪಕ್ಷಗಳ ಜೊತೆಗೆ ಮಾತುಕತೆ ನಡೆಸಿಲ್ಲ” ಎಂದು ಅವರು ಭಾನುವಾರ ಟ್ವೀಟ್ ಮಾಡಿದ್ದಾರೆ.

“ಪೂರ್ವಾಂಚಲ್ ಜಿಲ್ಲೆಯ ಬಹ್ರೇಚ್‌ನಲ್ಲಿ ಉತ್ತರ ಪ್ರದೇಶ ಚುನಾವಣಾ ಕ್ಯಾಂಪ್‌ ಕಚೇರಿ ಸಿದ್ದವಾಗಿದೆ. ಶೀಘ್ರದಲ್ಲೇ ಕಚೇರಿ ಉದ್ಘಾಟನೆಯಾಗಲಿದೆ” ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್‌ ಅಲಿ ಹೇಳಿದ್ದಾರೆ.

ಇದನ್ನೂ ಓದಿ: ಪಾಲಿಕೆ ಚುನಾವಣಾ ಪ್ರಚಾರಕ್ಕೂ ಪ್ರಧಾನಿ! ಬಿಜೆಪಿಯ ಈ ತಂತ್ರದ ವಾಸ್ತವವೇನು?

ಸುಹೇಲ್ದೇವ್ ಭಾರತೀಯ ಸಮಾಜ ಪಕ್ಷ, ಎಐಎಂಐಎಂ ಜೊತೆಗೆ, ‘ಭಗಿದಾರಿ ಸಂಕಲ್ಪ ಮೋರ್ಚಾ’ ಮೈತ್ರಿಯಲ್ಲಿ ಕೃಷ್ಣ ಪಟೇಲ್ ಅವರ ಅಪ್ನಾ ದಳ, ಜನ ಅಧಿಕಾರ ಪಕ್ಷ ಮತ್ತು ಚಂದ್ರಶೇಖರ್ ರಾವಣ್‌‌ ಅವರ ‘ಆಜಾದ್ ಸಮಾಜ ಪಕ್ಷ’ದಂತಹ ಎಂಟು ಪಕ್ಷಗಳಿವೆ.

ಕಳೆದ ವರ್ಷದ ಬಿಹಾರದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ, ಎಐಐಎಂಐಎಂ 20 ಸ್ಥಾನಗಳಲ್ಲಿ ಸ್ಪರ್ಧಿಸಿ ಐದು ಸ್ಥಾನಗಳನ್ನು ಗೆದ್ದುಕೊಂಡಿತ್ತು. ಇವೆಲ್ಲವೂ ಪಶ್ಚಿಮ ಬಂಗಾಳದ ಗಡಿಯನ್ನು ಹಂಚಿಕೊಂಡಿರುವ ಮುಸ್ಲಿಂ ಪ್ರಾಬಲ್ಯದ ಸೀಮಾಂಚಲ್ ಪ್ರದೇಶದಲ್ಲಿದೆ.

ಆದರೆ ಇತ್ತೀಚೆಗೆ ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಶೂನ್ಯ ಸಾಧನೆ ಮಾಡಿತ್ತು. ಅಲ್ಲಿ ಕ್ರಮವಾಗಿ ಏಳು ಮತ್ತು ಮೂರು ಸ್ಥಾನಗಳಲ್ಲಿ ತನ್ನ ಅಭ್ಯರ್ಥಿಗಳನ್ನು ಪಕ್ಷವು ಕಣಕ್ಕಿಳಿಸಿತ್ತು.

2019 ರ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಪಕ್ಷವು ಎರಡು ವಿಧಾನಸಭಾ ಸ್ಥಾನಗಳನ್ನು ಗೆದ್ದಿತ್ತು.

ಇದನ್ನೂ ಓದಿ: ಗೃಹ ಸಚಿವ ಅಮಿತ್ ಶಾ ಏನು ಮಾಡುತ್ತಿದ್ದಾರೆ? ನಿದ್ದೆ ಮಾಡುತ್ತಿದ್ದಾರೆಯೆ?: ಓವೈಸಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...